ದಕ್ಷಿಣ ಕರಾವಳಿಯಲ್ಲಿ ಮತ್ತೊಂದು ಚಂಡಮಾರುತ ?
ಹೊಸದಿಲ್ಲಿ, ಜುಲೈ.13: ದೇಶದಲ್ಲಿ ಮುಂಗಾರು ಮಳೆ ಪ್ರಾರಂಭದ ಜೊತೆಗೆ ಮತ್ತೊಂದು ಚಂಡಮಾರುತದ ಆತಂಕವೂ ಎದುರಾಗಿದೆ. ಆಗ್ನೇಯ ಅರೇಬಿಯನ್ ಸಮುದ್ರದಲ್ಲಿನ ಕೇರಳ ಕರಾವಳಿಯಲ್ಲಿ ಸರಾಸರಿ ಸಮುದ್ರ ಮಟ್ಟಕ್ಕಿಂತ 5.8 ಕಿ.ಮೀ.ವರೆಗೆ ಮತ್ತೊಂದು ಚಂಡಮಾರುತದ ಪ್ರಸರಣ ಕಂಡುಬರುತ್ತಿದ್ದು, ಮತ್ತೊಂದು ಚಂಡಮಾರುತದ ಭೀತಿ ಉಂಟಾಗಿದೆ.
ಮುಂದಿನ 24 ಗಂಟೆಗಳ ಅವಧಿಯಲ್ಲಿ ಪಶ್ಚಿಮ ಬಂಗಾಳದಲ್ಲಿ ಅತಿಹೆಚ್ಚು ಮಳೆಯಾಗುವ ನಿರೀಕ್ಷೆಯಿದ್ದು, ಸಿಕ್ಕಿಂ, ಅಸ್ಸಾಂ, ಮೇಘಾಲಯ, ದಕ್ಷಿಣ ಕೊಂಕಣ ಮತ್ತು ಗೋವಾದ ಕೆಲವು ಭಾಗಗಳಲ್ಲಿ ಸಾಧಾರಣ ಮಳೆ ಬೀಳುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಬಿಹಾರ, ವಾಯುವ್ಯ ಉತ್ತರ ಪ್ರದೇಶ, ಉತ್ತರ ಹರಿಯಾಣ, ಉತ್ತರ ಪಂಜಾಬ್, ಕಚ್ ಹಾಗೂ ಕರ್ನಾಟಕದ ಒಳನಾಡು, ತಮಿಳುನಾಡಿನ ಕೆಲವು ಭಾಗ ಮತ್ತು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಸಾಧಾರಣ ಮಳೆಯಾಗ ಬಹುದೆಂದು ಹವಾಮಾನ ಇಲಾಖೆ ಇಲಾಖೆ ತಿಳಿಸಿದ್ದು, ಗುಜರಾತ್, ಕರಾವಳಿ ಕರ್ನಾಟಕ, ಕೇರಳ, ಆಂಧ್ರಪ್ರದೇಶ, ಒಡಿಶಾ, ಛತ್ತೀಸ್ ಗಢ, ಮಧ್ಯಪ್ರದೇಶ, ಜಾರ್ಖಂಡ್, ಮತ್ತು ಲಕ್ಷದ್ವೀಪಗಳ ಉಳಿದ ಭಾಗಗಳಲ್ಲಿ ಮಧ್ಯಮ ಮಳೆಯಾಗಲಿದೆ ಎಂದು ತಿಳಿಸಿದೆ.
ಮುಂದಿನ 24 ಗಂಟೆಗಳಲ್ಲಿ,ಅಸ್ಸಾಂ, ಮೇಘಾಲಯ,
ಉಪ ಹಿಮಾಲಯನ್ ಪಶ್ಚಿಮ ಬಂಗಾಳ, ಸಿಕ್ಕಿಂ, ಹಿಮಾಚಲ ಪ್ರದೇಶದ ಭಾಗ, ಉತ್ತರ ಪ್ರದೇಶದ ತಪ್ಪಲಿನಲ್ಲಿ ಮತ್ತು ಬಿಹಾರದಲ್ಲಿ ಮಧ್ಯಮ ಅಥವಾ ಭಾರೀ ಮಳೆಯಾಗುವ ಸಾಧ್ಯತೆಯನ್ನು ನಿರೀಕ್ಷಿಸಲಾಗಿದೆ.








