ರಾಜ್ಯ ರಾಜಕಾರಣದಲ್ಲಿ ಇದೀಗ ಶಿಸ್ತಿನ ವಾತಾವರಣ ನಿರ್ಮಾಣವಾಗಿದ್ದು, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಶಾಸಕರಿಗೆ ಕಡ್ಡಾಯ ಎಚ್ಚರಿಕೆಯನ್ನು ನೀಡಿದ್ದಾರೆ. ರಾಮನಗರ ಶಾಸಕ ಇಕ್ಸಾಲ್ ಹುಸೇನ್ ವಿರುದ್ಧ ಶಿಸ್ತು ಉಲ್ಲಂಘನೆಯ ಕುರಿತಂತೆ ಕಾಂಗ್ರೆಸ್ ಪಕ್ಷದಿಂದ ನೋಟಿಸ್ ಜಾರಿಯಾದ ಬೆನ್ನಲ್ಲೇ, ಡಿಸಿಎಂ ಡಿ.ಕೆ.ಶಿವಕುಮಾರ್ ಮಾಧ್ಯಮದೊಂದಿಗೆ ಮಾತನಾಡುತ್ತಾ ಮತ್ತಷ್ಟು ಗಂಭೀರವಾಗಿ ಎಚ್ಚರಿಸಿದ್ದಾರೆ..
ಇಕ್ಸಾಲ್ ಹುಸೇನ್ಗೆ ನೋಟಿಸ್ ಕೊಟ್ಟಿದ್ದೇವೆ. ಅವರೆಲ್ಲರಿಗೂ ನೋಟಿಸ್ ಕೊಡಬೇಕಾಗುತ್ತದೆ. ಪಕ್ಷದಲ್ಲಿ ಶಿಸ್ತು ಅತ್ಯಂತ ಮುಖ್ಯ. ಯಾರೂ ಶಿಸ್ತು ಉಲ್ಲಂಘನೆ ಮಾಡಬಾರದು, ಎಂದು ಅವರು ಹೇಳಿದ್ದಾರೆ.
ಈ ಸಂದರ್ಭದಲ್ಲಿ, ಡಿ.ಕೆ.ಶಿವಕುಮಾರ್ ತಮ್ಮ ವಿರುದ್ಧ ಬರುತ್ತಿರುವ ಮುಖ್ಯಮಂತ್ರಿ ಪದದ ಆಕಾಂಕ್ಷಿ ಬಗ್ಗೆ ಸ್ಫಷ್ಟನೆ ನೀಡಿ, ನಾನು ಯಾರಿಗಾದರೂ ನನ್ನ ಹೆಸರು ಹೇಳಿ ‘CM ಮಾಡಿ’ ಅಂತ ಕೇಳಿಲ್ಲ. ಸಿದ್ದರಾಮಯ್ಯ ಅವರು ಈಗ ಸಿಎಂ ಆಗಿದ್ದಾರೆ. ಅವರ ಸ್ಥಾನದಲ್ಲಿ ಇರುವಾಗ ಯಾರೂ ಬೇರೆ ಹೆಸರು ಎತ್ತಬಾರದು, ಎಂದು ಹೇಳಿದರು.
ಈ ಮೂಲಕ, ಕಾಂಗ್ರೆಸ್ ಪಕ್ಷದಲ್ಲಿ ಉಂಟಾಗುತ್ತಿರುವ ಒಳಸಂಘರ್ಷ ಮತ್ತು ನಾಯಕತ್ವದ ಗೊಂದಲಕ್ಕೆ ಬ್ರೇಕ್ ಹಾಕುವ ಪ್ರಯತ್ನ ಡಿಸಿಎಂ ಡಿ.ಕೆ.ಶಿವಕುಮಾರ್ ಮಾಡಿದಂತಾಗಿದೆ. ಪಕ್ಷದ ಶಿಸ್ತಿಗೆ ಆದ್ಯತೆ ನೀಡಲಾಗುತ್ತಿದ್ದು, ಯಾವುದೇ ಬಂಡಾಯ ಧೋರಣೆಯನ್ನು ಸಹಿಸಲ್ಲ ಎಂಬ ಸಂದೇಶವನ್ನು ಸ್ಪಷ್ಟವಾಗಿ ನೀಡಿದ್ದಾರೆ.








