ಗಾಜಿಯಾಬಾದ್ : ರಾಜಸ್ಥಾನ ರಾಜಕೀಯ ಬಿಕ್ಕಟ್ಟು ಹಿನ್ನೆಲೆ ಅಶೋಕ್ ಗೆಹ್ಲೋಟ್ ನೇತೃತ್ವದ ಕಾಂಗ್ರೆಸ್ ಸರ್ಕಾರವನ್ನು ವಜಾಗೊಳಿಸುವಂತೆ ಉತ್ತರಪ್ರದೇಶದ ಬಿಜೆಪಿ ಶಾಸಕ ಮನವಿ ಮಾಡಿದ್ದಾರೆ.
ಈ ಕುರಿತು ರಾಜಸ್ಥಾನದ ರಾಜ್ಯಪಾಲರಿಗೆ ಯುಪಿ ಬಿಜೆಪಿ ಶಾಸಕ ನಂದ್ ಕಿಶೋರ್ ಗುರ್ಜಾರ್, ಪತ್ರ ಬರೆದಿದ್ದು, ರಾಜ್ಯದಲ್ಲಿ ತನ್ನ ಸರ್ಕಾರವನ್ನು ಭದ್ರಪಡಿಸಿಕೊಳ್ಳಲು ಕಾಂಗ್ರೆಸ್ ಶಾಸಕರನ್ನು ಅಪಹರಿಸಿದೆ ಎಂದು ಆರೋಪಿಸಿದ್ದಾರೆ.
ಪ್ರಸ್ತುತ ಸರ್ಕಾರದಲ್ಲಿ ಬಹುಮತ ಇಲ್ಲದಿರುವುದರಿಂದ ಅಧಿಕಾರದಲ್ಲಿರಲು ಯಾವುದೇ ಹಕ್ಕಿಲ್ಲ. ಈ ಕಾರಣಕ್ಕಾಗಿ ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಲು ಆದೇಶಿಸುವಂತೆ ನಂದಕಿಶೋರ್ ರಾಜ್ಯಪಾಲರನ್ನ ಒತ್ತಾಯಿಸಿದ್ದಾರೆ.
ಇದೇ ವೇಳೆ ಕಾಂಗ್ರೆಸ್ ವಿರುದ್ಧ ಕಿಡಿಕಾರಿರುವ ನಂದ ಕಿಶೋರ್, ಕಾಂಗ್ರೆಸ್ ನ ಕೇಂದ್ರ ನಾಯಕತ್ವದ ವಿರುದ್ಧ ಯಾರಾದರೂ ಮಾತನಾಡಿದರೆ ಅವರ ರಾಜಕೀಯ ಜೀವನ ಕೊನೆಗಾಣುತ್ತದೆ. ಅದೇ ರೀತಿ ಸರ್ಕಾರದ “ಭ್ರಷ್ಟಾಚಾರದ ವಿರುದ್ಧ ಧ್ವನಿ ಎತ್ತುತ್ತಿರುವ ಸಚಿನ್ ಪೈಲಟ್ ಅವರಂತಹ ನಾಯಕರ ರಾಜಕೀಯ ಜೀವನವನ್ನು ಕಾಂಗ್ರೆಸ್ ಕೊನೆಗಾಣಿಸಬಹುದು” ಎಂದು ಆತಂಕ ವ್ಯಕ್ತಪಡಿಸಿದ್ದಾರೆ.








