ಬಳ್ಳಾರಿ: ಸೇವೆ ಖಾಯಂ ಹಾಗೂ ವೇತನ ತಾರತಮ್ಮ ನಿವಾರಣೆಗೆ ಆಗ್ರಹಿಸಿ ಸರ್ಕಾರಕ್ಕೆ ಬೇಡಿಕೆ ಇಟ್ಟಿದ್ದ ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಕೆಲಸ ಮಾಡುತ್ತಿದ್ದ 2 ಸಾವಿರ ಗುತ್ತಿಗೆ ಆಯುಷ್ ವೈದ್ಯರು ಸಾಮೂಹಿಕ ರಾಜೀನಾಮೆಗೆ ನಿರ್ಧರಿಸಿದ್ದಾರೆ.
ಕೇವಲ ಎಂಬಿಬಿಎಸ್ ಮಾಡಿದ 500 ಗುತ್ತಿಗೆ ವೈದ್ಯರ ಸೇವೆ ಖಾಯಂ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಬೆನ್ನಲ್ಲೇ ತಮ್ಮ ಸೇವೆಯನ್ನು ಖಾಯಂಗೊಳಿಸಬೇಕು ಎಂದು ಆಯುಷ್ ವೈದ್ಯರು ಸರ್ಕಾರವನ್ನು ಆಗ್ರಹಿಸಿದ್ದರು.
ಈ ಸಂಬಂಧ ಸರ್ಕಾರಕ್ಕೆ ಇಂದಿಗೆ(ಜುಲೈ 15)ವರೆಗೆ ಗಡುವು ನೀಡಿದ್ದರು. ಈ ಗಡುವಿಗೆ ಸರ್ಕಾರ ಸ್ಪಂದಿಸದ ಹಿನ್ನೆಲೆಯಲ್ಲಿ ಇಂದು ಚಿತ್ರದುರ್ಗದಲ್ಲಿ ಸಾಮೂಹಿಕ ರಾಜೀನಾಮೆ ನೀಡುವುದಾಗಿ ತಿಳಿಸಿದ್ದಾರೆ.
ಬಳ್ಳಾರಿಯಲ್ಲಿ ಈ ವಿಷಯ ತಿಳಿಸಿದ ಆಯುಷ್ ಫೆಡರೇಶನ್ ಆಫ್ ಕರ್ನಾಟಕ ಸಂಘಟನೆಯ ಖಜಾಂಚಿ ಡಾ.ಅನಂದ್ ಕಿರಿಶಾಳ್, ಸರ್ಕಾರ ನಮ್ಮ ಬೇಡಿಕೆಗಳಿಗೆ ಮಣಿಯದ ಹಿನ್ನೆಲೆಯಲ್ಲಿ ಸಾಮೂಹಿಕ ರಾಜೀನಾಮೆಗೆ ನಿರ್ಧರಿಸಿರುವುದಾಗಿ ತಿಳಿಸಿದ್ದಾರೆ.
‘ಇದಕ್ಕೇ ಭಂಡರು ಅನ್ನೋದು, ‘ಕಳ್ಳ ದುಡ್ಡು ಮುಚ್ಚಿಡಲು RSS ನೋಂದಣಿ ಮಾಡಿಸ್ತಿಲ್ಲ’: ಬಿಎಲ್ ಸಂತೋಷ್ ಹೇಳಿಕೆಗೆ ಸಚಿವ ಕಾಶಪ್ಪನವರ್ ಕೆಂಡ
ಬಾಗಲಕೋಟೆ: ಆರ್ಎಸ್ಎಸ್ ಹಿಂದೆಂದೂ ನೋಂದಣಿಯಾಗಿಲ್ಲ, ಮುಂದೆಯೂ ನೋಂದಣಿ ಆಗುವುದಿಲ್ಲ ಎಂಬ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರ ಸವಾಲಿನ ಹೇಳಿಕೆಗೆ ರಾಜ್ಯ ಕಾಂಗ್ರೆಸ್...








