ADVERTISEMENT
Thursday, March 19, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home State

ಕಬ್ಬು ಬೆಳೆಗಾರರ 3500 ರೂ. ಬೇಡಿಕೆ ನ್ಯಾಯಯುತವಾಗಿದೆಯೇ? ಕಾರ್ಖಾನೆ ಮಾಲೀಕರಿಗೆ ನಷ್ಟವಾಗುತ್ತಾ?

Sugarcane farmers demand 3,500 Rs per ton: Is it fair? What it means for sugar factories in India

Saaksha Editor by Saaksha Editor
November 7, 2025
in State, ರಾಜ್ಯ
Sugarcane farmers demand 3,500 Rs per ton: Is it fair? What it means for sugar factories in India

ಸಾಂದರ್ಭಿಕ ಚಿತ್ರ

Share on FacebookShare on TwitterShare on WhatsappShare on Telegram

ಬೆಳಗಾವಿ, ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳ ಕಬ್ಬು ಬೆಳೆಗಾರರು ರಸ್ತೆಗೆ ಇಳಿದಿದ್ದಾರೆ. ಪ್ರತಿ ಟನ್‌ ಕಬ್ಬಿಗೆ 3500 ರೂ. ದರ ನಿಗದಿ ಮಾಡಲೇಬೇಕು ಎಂದು ಆಗ್ರಹಿಸಿ ಕಳೆದ ಹಲವು ದಿನಗಳಿಂದ ಪ್ರತಿಭಟನೆ ನಡೆಸೆತ್ತಿದ್ದಾರೆ. ರಾಜ್ಯದಲ್ಲಿನ ಸಕ್ಕರೆ ಕಾರ್ಖಾನೆ ಮಾಲೀಕರು ಈಗಾಗಲೇ ಕಬ್ಬು ಬೆಳೆಗಾರರಿಗೆ ಪ್ರತಿ ಟನ್‌ಗೆ 2700 ರಿಂದ 3200 ವರೆಗೂ ನೀಡುತ್ತಿವೆ. ರಾಜ್ಯದಲ್ಲಿ ಒಟ್ಟು 73 ಸಕ್ಕರೆ ಕಾರ್ಖಾನೆಗಳಿವೆ. ಬಹತೇಕ ಸಕ್ಕರೆ ಕಾರ್ಖಾನೆಗಳು ಹಾಲಿ ಮತ್ತು ಮಾಜಿ ಶಾಸಕರುಗಳದ್ದೇ ಆಗಿವೆ.

ಪ್ರತಿಭಟನೆ ನಡೆಸುತ್ತಿರುವ ರೈತರ 3-4 ಬೇಡಿಕೆಗಳಲ್ಲಿ ಮೊದಲನೇ ಬೇಡಿಕೆ ಟನ್‌ಗೆ 3500 ರೂ. ನೀಡಬೇಕೆಂದು. ಒಂದು ವೇಳೆ ಸಕ್ಕರೆ ಕಾರ್ಖಾನೆ ಮಾಲೀಕರು 3500 ರೂ. ನೀಡಿದರೇ ಅವರಿಗೆ ನಷ್ಟವಾಗಲಿದೆಯೇ? ನಿಜವಾಗಿಯೂ ಇಲ್ಲಿ ನಷ್ಟವಾಗುತ್ತಿರುವುದು ರೈತರಿಗಾ ಅಥವಾ  ಕಾರ್ಖಾನೆ ಮಾಲೀಕರಿಗಾ? ಎಂಬ ಪ್ರಶ್ನೆಗೆ ಉತ್ತರ ಹುಡುಕುವ ಪ್ರಯತ್ನ ಇದಾಗಿದೆ. ಒಂದು ಎಕರೆಯಲ್ಲಿ ಕಬ್ಬು ಬೆಳೆಯಲು ರೈತರು ಸರಿಸುಮಾರು 30 ರಿಂದ 80 ಸಾವಿರ ರೂಪಾಯಿ ಖರ್ಚು ಮಾಡುತ್ತಾರೆ. ಇಷ್ಟು ಖರ್ಚು ಮಾಡಿದ ಮೇಲೆ ಇಳುವರಿ ಚೆನ್ನಾಗಿ ಬರುತ್ತೆ ಎಂಬ ನಿರೀಕ್ಷೆಯಲ್ಲಿ ರೈತರಿತ್ತಾರೆ. ಆದರೆ, ಒಂದು ವೇಳೆ ಕಬ್ಬು ಪ್ರಕೃತಿಯ ಆಟಕ್ಕೆ ಸಿಲುಕಿದರೆ ಕಥೆ ಮುಗಿದಂತೆ. ಆ ವರ್ಷ ಇಳುವರಿ ಕಡಿಮೆಯಾದಂತೆ ಅಥವಾ ಬೆಳೆ ಮಣ್ಣು ಪಾಲಾದಂತೆ. ಇದು ರೈತರಿಗಾಗುವ ಮೊದಲ ನಷ್ಟ.

Related posts

ಅಂತ್ಯಸಂಸ್ಕಾರಕ್ಕೆ ಜಾಗ ಹುಡುಕಿ ಸುಸ್ತಾದ ಸರ್ಕಾರ: ಖಾಸಗಿ ಭೂಮಿ ಖರೀದಿಯೇ ಏಕೈಕ ದಾರಿ ; ಕಂದಾಯ ಸಚಿವ ಕೃಷ್ಣ ಬೈರೇಗೌಡ ಅಸಹಾಯಕತೆ!

ಅಂತ್ಯಸಂಸ್ಕಾರಕ್ಕೆ ಜಾಗ ಹುಡುಕಿ ಸುಸ್ತಾದ ಸರ್ಕಾರ: ಖಾಸಗಿ ಭೂಮಿ ಖರೀದಿಯೇ ಏಕೈಕ ದಾರಿ ; ಕಂದಾಯ ಸಚಿವ ಕೃಷ್ಣ ಬೈರೇಗೌಡ ಅಸಹಾಯಕತೆ!

March 19, 2026
ಅಂತರ್ಜಾತಿ ವಿವಾಹಕ್ಕೆ ರಕ್ಷಣೆ: ರಾಜ್ಯದಿಂದ ಹೊಸ ಕಾಯ್ದೆ ಸಿದ್ಧತೆ

ಅಂತರ್ಜಾತಿ ವಿವಾಹಕ್ಕೆ ರಕ್ಷಣೆ: ರಾಜ್ಯದಿಂದ ಹೊಸ ಕಾಯ್ದೆ ಸಿದ್ಧತೆ

March 19, 2026

ಇನ್ನು, ಇಳುವರಿ ಚೆನ್ನಾಗಿ ಬಂದಿದ್ದೆ, ಕಟಾವು ಆಗಿ ಕಾರ್ಖಾನೆಯ ಅಂಗಳಕ್ಕೆ ಬಂದಾಗ ಅಲ್ಲಿ ತೂಕದಲ್ಲಿ ಆಗುವ ಮೋಸ ರೈತರಿಗಾಗುವ ಎರಡನೇ ನಷ್ಟ.! ಮುಂದುವರೆದಂತೆ ಕಬ್ಬು ಕಾರ್ಖಾನೆಯ ಮಷಿನಿನ್‌ ಬಾಯಿಗೆ ಸಿಲುಕಿ ನಾನಾ ರೂಪವನ್ನು ತಾಳುತ್ತದೆ. ಸಕ್ಕರೆ, ಬೆಲ್ಲ ಮತ್ತು ಉಪಉಪತ್ಪನ್ನಗಳಾದ ಮೋಲಾಸಿಸ್, ಎಥನಾಲ್, ಬಗಾಸ್, ಸ್ಪಿರಿಟ್, ‌ಫಿಲ್ಟರ್ ಕೇಕ್, ಗೊಬ್ಬರ ಮತ್ತು ವಿದ್ಯುತ್‌ ಅನ್ನು ಕಾರ್ಖಾನೆಗಳು ಉತ್ಪಾದಿಸುತ್ತವೆ.

ಈ ಉತ್ಪಾದನೆಗಳಿಂದ ಕಾರ್ಖಾನೆಗಳಿಗೆ ಆಗುವ ಲಾಭವೆಷ್ಟು? ಇವುಗಳಲ್ಲಿನ ಕೆಲ ಉತ್ಪಾದನೆಗಳ ಮಾರುಕಟ್ಟೆಯ ಬೆಲೆ ನೋಡುವುದಾದರೆ, ಕಬ್ಬಿನ ರಿವಕವರ್‌ ಶೇ. 10 ರಷ್ಟು ಇದ್ದರೆ ಒಂದು ಟನ್‌ ಕಬ್ಬಿನಿಂದ 100 ಕೆಜಿ ಸಕ್ಕರೆ ಉತ್ಪಾದನೆಯಾಗುತ್ತದೆ. ಒಂದು ವೇಳೆ ಸಕ್ಕರೆ ಪ್ರಮಾಣ ಕಡಿಮೆ ಇದ್ದರೇ, ಸಕ್ಕರೆ ಉತ್ಪಾದನೆ ಕೂಡ ಕಡಿಮೆ ಆಗುತ್ತದೆ. ಒಂದು ಕೆಜಿ ಸಕ್ಕರೆ ಮಾರುಕಟ್ಟೆಯಲ್ಲಿ 45 ರೂ.ಗೆ ಮಾರಾಟವಾಗುತ್ತದೆ. ಹಾಗಿದ್ದರೆ 100 ಕೆಜಿ ಸಕ್ಕರೆ 4500 ರೂ.ಗೆ ಮಾರಾಟವಾಗುತ್ತದೆ. ಆದರೆ, ಕೇಂದ್ರ ಸರ್ಕಾರ ನಿಗದಿ ಮಾಡಿರುವ ದರದ ಪ್ರಕಾರ ಸಕ್ಕರೆ ಕಾರ್ಖಾನೆಗಳು ಸಕ್ಕರೆಯನ್ನು ಪ್ರತಿ ಕೆಜಿಗೆ 31 ರೂ. ಮಾರಾಟ ಮಾಡಬೇಕು. 100 ಕೆಜಿ ಸಕ್ಕರೆಯನ್ನು 3100 ರೂ. ಮಾರಾಟ ಮಾಡಬೇಕು.

ಇದನ್ನೂ ಓದಿ: ಆದಷ್ಟು ಬೇಗ ಕಬ್ಬಿಗೆ ಬೆಲೆ ನಿಗದಿ ಮಾಡಿ – ಗೃಹ ಸಚಿವ ಪರಮೇಶ್ವರ್ ಸೂಚನೆ

ಹಾಗಂತ ಸಕ್ಕರೆ ಕಾರ್ಖಾನೆ ಮಾಲೀಕರಿಗೆ ನಷ್ಟ ಎಂದು ಭಾವಿಸಲಾಗದು. ಏಕೆಂದರೆ ಕಬ್ಬಿನಿಂದ ತಯಾರಾಗುವ ಉಪಉಪತ್ಪನ್ನಗಳಿಂದ ಸಕ್ಕರೆಗಿಂತ ಅಧಿಕ ಆದಾಯ ಕಾರ್ಖಾನೆಗಳಿಗೆ ಬರುತ್ತದೆ.

ಉದಾಹರಣೆಗೆ, ಎಥನಾಲ್‌ ಪ್ರತಿ ಲೀಟರ್‌ಗೆ ಸುಮಾರು 65.61 ರೂಪಾಯಿಗೆ ಮಾರಾಟವಾಗುತ್ತದೆ. 1 ಟನ್‌ ಕಬ್ಬಿನಿಂದ ಸುಮಾರು 70 ರಿಂದ 80 ಲೀಟರ್‌ ಎಥನಾಲ್‌ ಅನ್ನು ಉತ್ಪಾದಿಸಲಾಗುತ್ತದೆ. ಅಂದರೆ, 1 ಲೀಟರ್‌ಗೆ 65 ರೂ.ಗೆ ಎಥನಾಲ್‌ ಮಾರಟವಾದರೆ, 70 ಲೀಟರ್‌ಗೆ 4,550 ರೂ. ಆಯ್ತು. ಎಥನಾಲ್‌ ಒಂದರಿಂದಲೇ ಇಷ್ಟೊಂದು ಲಾಭ ಕಾರ್ಖಾನೆ ಮಾಲೀಕರಿಗೆ ಆಗುತ್ತದೆ. ರೈತರಿಗೆ ನೀಡುವ ಹಣ ಎಥನಾಲ್‌ ಒಂದರಿಂದಲೇ ಕಾರ್ಖಾನೆ ಮಾಲೀಕರಿಗೆ ಬರುತ್ತದೆ.

ಮೋಲಾಸಿಸ್‌ನಿಂದ ತಯಾರಾಗುವ distilled spiritನಿಂದ ಏನು ಕಡಿಮೆ ಲಾಭ ಬರುವುದಿಲ್ಲ. ಈ distilled spirit ಅನ್ನು ಮದ್ಯ ತಯಾರಿಕೆ ಸೇರಿದಂತೆ ಅನೇಕ ವಸ್ತುಗಳನ್ನು ಉತ್ಪಾದಿಸಲು ಬಳಸಲಾಗುತ್ತದೆ. distilled spirit ಕೂಡ ಸಕ್ಕರೆ ಕಾರ್ಖಾನೆ ಮಾಲೀಕರ ಕಿಸೆ ತುಂಬಿಸುತ್ತದೆ. ಇನ್ನು, ಕಾರ್ಖಾನೆ ಮಾಲೀಕರು ತಾವು ಉತ್ಪಾದಿಸುವ ವಿದ್ಯುತ್‌ ಅನ್ನು ತಮಗೆ ಎಷ್ಟು ಬೇಕೊ ಅಷ್ಟನ್ನು ಬಳಸಿಕೊಂಡು, ಉಳಿದಿದ್ದನ್ನು ಮಾರಾಟ ಮಾಡುತ್ತಾರೆ. ಇದು ಕೂಡ ಕಾರ್ಖಾನೆ ಮಾಲೀಕರ ಖಜಾನೆ ತುಂಬಿಸುವ ಮಾರ್ಗ. ಹೀಗೆ, ಸಕ್ಕರೆ ಕಾರ್ಖಾನೆಗಳು ಕಬ್ಬಿನಿಂದ ಉತ್ಪಾದಿಸುವ ಪ್ರತಿಯೊಂದು ವಸ್ತುವು ಲಾಭದಾಯಕವೇ. ಇಲ್ಲಿ ಲಾಭ ಯಾರಿಗೆ? ನಷ್ಟ ಯಾರಿಗೆ? ನೀವೆ ಅರ್ಥ ಯೋಚಿಸಿ.  ಪ್ರತಿ ಟನ್‌ಗೆ 3500 ರೂ. ಅನ್ನು ಸಕ್ಕರೆ ಕಾರ್ಖಾನೆ ಮಾಲೀಕರು ಯಾಕೆ ನೀಡುತ್ತಿಲ್ಲ?

ಕೇಂದ್ರದ FRP ಬೆಲೆ ಎಷ್ಟು?

ಕೇಂದ್ರದ ಸರ್ಕಾರ ಕಬ್ಬು ಬೆಳೆಗಾರರಿಗೆ ಪ್ರತಿ ಕ್ವಿಂಟಾಲ್‌ಗೆ 355 ರೂ. ನಿಗದಿ ಮಾಡಿದೆ. ಆದರೆ ಇಲ್ಲಿ ಒಂದು ಟ್ವಿಸ್ಟ್‌ ಇದೆ. 10.25% ಮೂಲ ಇಳುವರಿ ದರವಿದ್ದರೆ (ಅಂದರೆ ಸಕ್ಕರೆ ಉತ್ಪಾದನಾ ಪ್ರಮಾಣ) ಪ್ರತಿ ಕ್ವಿಂಟಾಲ್‌ಗೆ 355 ರೂ.ಗಳಂತೆ ನೀಡಲು ಅನುಮೋದನೆ ನೀಡಿದೆ. ಕ್ವಿಂಟಾಲ್‌ಗೆ 355 ರೂ. ಒಂದು ಟನ್‌ಗೆ 3550 ರೂ. ಆಗುತ್ತದೆ. ಅಂದ್ರೆ, ಕೇಂದ್ರ ಸರ್ಕಾರ ಒಂದು ಟನ್‌ ಕಬ್ಬಿಗೆ 3550 ರೂ. ನಿಗದಿ ಮಾಡಿದೆ. ಹಾ… ಕೇಂದ್ರ ಸರ್ಕಾರ 2015 ರಿಂದ ಪ್ರತಿವರ್ಷ ಕಬ್ಬಿನ ಎಫ್‌ಆರ್‌ಪಿ ಬೆಲೆಯಲ್ಲಿ ಏರಿಸುತ್ತಲೇ ಇದೆ.

ಆದರೂ ಕೂಡ ಸಕ್ಕರೆ ಕಾರ್ಖಾನೆಗಳು, ರಾಜ್ಯ ಸರ್ಕಾರ ಈ ಬೆಲೆ ನೀಡಲು ಹಿಂದೇಟು ಯಾಕೆ ಹಾಕುತ್ತಿವೆ ಆ ದೇವರೇ ಬಲ್ಲ. ಇಲ್ಲಿ ರಾಜ್ಯ ಸರ್ಕಾರ ಮತ್ತು ಸಕ್ಕರೆ ಕಾರ್ಖಾನೆಗಳ ನಡುವೆ ಏನು ಅಡ್ಜೆಸ್ಟಮೆಂಟ್‌ ಇದೆಯೋ ಗೊತ್ತಿಲ್ಲ. ಇವರದ್ದು ಏನೇ ಅಡ್ಜೆಸ್ಟಮೆಂಟ್‌ ಇರಲಿ, ರೈತರಿಗೆ ನ್ಯಾಯಯುತವಾಗಿ ಸಿಗಬೇಕಾದ ಬೆಲೆ ಸಿಗಲೇಬೇಕು.

ವಿವೇಕ ಬಿರಾದಾರ

ಉಪನ್ಯಾಸಕರು, ಪತ್ರಿಕೋದ್ಯಮ ವಿಭಾಗ, ಜೆಟಿ ಮಹಾವಿದ್ಯಾಲಯ ಗದಗ

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್‌ ಮಾಡಿ

Tags: fair remunerative price sugarcaneis ₹3500 per tonne fair for sugarcanesugar mills losses in Indiasugarcane cost of production Indiasugarcane farmers demand ₹3500 per tonnesugarcane farmers minimum support pricesugarcane farmers price demand 2025sugarcane farmers protestsugarcane farmers vs sugar millssugarcane price in India 2025ಸಕ್ಕರೆ ಕಾರ್ಖಾನೆ ನಷ್ಟಸಕ್ಕರೆ ಫ್ಯಾಕ್ಟರಿ ಲಾಭ ನಷ್ಟಸಕ್ಕರೆ ಬೆಳೆಗಾರರ ನ್ಯಾಯಸಮ್ಮತ ಬೆಲೆಸಕ್ಕರೆ ಬೆಳೆಗಾರರ ಬೇಡಿಕೆ ₹3500 ಟನ್ಸಕ್ಕರೆ ಬೆಳೆಗಾರರ ಸಮಸ್ಯೆಸಕ್ಕರೆ ರೇತಿಗಳ ದರ ಭಾರತಸಕ್ಕರೆ ರೈತರ ಆರ್ಥಿಕ ಸ್ಥಿತಿಸಕ್ಕರೆ ರೈತರು ₹3500 ಟನ್ ಬೆಲೆ
ShareTweetSendShare
Join us on:

Related Posts

ಅಂತ್ಯಸಂಸ್ಕಾರಕ್ಕೆ ಜಾಗ ಹುಡುಕಿ ಸುಸ್ತಾದ ಸರ್ಕಾರ: ಖಾಸಗಿ ಭೂಮಿ ಖರೀದಿಯೇ ಏಕೈಕ ದಾರಿ ; ಕಂದಾಯ ಸಚಿವ ಕೃಷ್ಣ ಬೈರೇಗೌಡ ಅಸಹಾಯಕತೆ!

ಅಂತ್ಯಸಂಸ್ಕಾರಕ್ಕೆ ಜಾಗ ಹುಡುಕಿ ಸುಸ್ತಾದ ಸರ್ಕಾರ: ಖಾಸಗಿ ಭೂಮಿ ಖರೀದಿಯೇ ಏಕೈಕ ದಾರಿ ; ಕಂದಾಯ ಸಚಿವ ಕೃಷ್ಣ ಬೈರೇಗೌಡ ಅಸಹಾಯಕತೆ!

by Shwetha
March 19, 2026
0

ಬೆಂಗಳೂರು: ರಾಜ್ಯದಲ್ಲಿ ಬದುಕಿರುವವರಿಗಷ್ಟೇ ಅಲ್ಲ, ಮೃತಪಟ್ಟವರಿಗೂ ಮಣ್ಣಾಗಲು ಜಾಗವಿಲ್ಲದಂತಹ ಗಂಭೀರ ಪರಿಸ್ಥಿತಿ ನಿರ್ಮಾಣವಾಗಿದೆ. ಲಭ್ಯವಿದ್ದ ಸರ್ಕಾರಿ ಜಮೀನ್ನೆಲ್ಲಾ ಇತರೆ ಉದ್ದೇಶಗಳಿಗೆ ಹಂಚಿಕೆ ಮಾಡಿ, ಇದೀಗ ಸ್ಮಶಾನಕ್ಕೆ ಜಾಗವಿಲ್ಲದೆ...

ಅಂತರ್ಜಾತಿ ವಿವಾಹಕ್ಕೆ ರಕ್ಷಣೆ: ರಾಜ್ಯದಿಂದ ಹೊಸ ಕಾಯ್ದೆ ಸಿದ್ಧತೆ

ಅಂತರ್ಜಾತಿ ವಿವಾಹಕ್ಕೆ ರಕ್ಷಣೆ: ರಾಜ್ಯದಿಂದ ಹೊಸ ಕಾಯ್ದೆ ಸಿದ್ಧತೆ

by Shwetha
March 19, 2026
0

ಅಂತರ್ಜಾತಿ ವಿವಾಹವಾಗುವ ಜೋಡಿಗಳಿಗೆ ರಾಜ್ಯ ಸರ್ಕಾರದಿಂದ ಮಹತ್ವದ ನೆರವು ಸಿಗುವ ಸಾಧ್ಯತೆ ಹೆಚ್ಚಿದೆ. ಕುಟುಂಬಸ್ಥರಿಂದ ವಿರೋಧ, ಬಹಿಷ್ಕಾರ ಮತ್ತು ಕೆಲ ಸಂದರ್ಭಗಳಲ್ಲಿ ಹಿಂಸೆ ಅಥವಾ ಕೊಲೆಗಳ ಘಟನೆಗಳ...

ನಟಿ ತಮನ್ನಾಗೆ 5 ಕೋಟಿ ನೀಡಲು ದುಡ್ಡಿದೆ ವಿಧವೆಯರಿಗೆ ವೇತನ ನೀಡಲು ಆಗಲ್ವಾ ಸರ್ಕಾರದ ವಿರುದ್ಧ ಶರಣು ಸಲಗಾರ್ ಆಕ್ರೋಶ

ನಟಿ ತಮನ್ನಾಗೆ 5 ಕೋಟಿ ನೀಡಲು ದುಡ್ಡಿದೆ ವಿಧವೆಯರಿಗೆ ವೇತನ ನೀಡಲು ಆಗಲ್ವಾ ಸರ್ಕಾರದ ವಿರುದ್ಧ ಶರಣು ಸಲಗಾರ್ ಆಕ್ರೋಶ

by Shwetha
March 19, 2026
0

ಬೆಳಗಾವಿ: ರಾಜ್ಯ ಸರ್ಕಾರದ ಆದ್ಯತೆಗಳು ಮತ್ತು ಅನುದಾನ ಹಂಚಿಕೆಯ ತಾರತಮ್ಯದ ಬಗ್ಗೆ ವಿಧಾನಸಭೆಯಲ್ಲಿ ಬಿಸಿಬಿಸಿ ಚರ್ಚೆ ನಡೆದಿದ್ದು, ಬಸವಕಲ್ಯಾಣದ ಬಿಜೆಪಿ ಶಾಸಕ ಶರಣು ಸಲಗಾರ್ ಅವರು ಸರ್ಕಾರದ...

ಲೈಕ್ಸ್ ಆಸೆಗೆ ಅಪ್ಪನ ಪ್ರಾಣದ ಜತೆ ಆಟ ಪ್ರ್ಯಾಂಕ್ ಹೆಸರಲ್ಲಿ ವಿಕೃತಿ :ಬೆಂಗಳೂರಿನ ಕೊರಿಯರ್ ಆಫೀಸ್ ನಲ್ಲಿ ರೀಲ್ಸ್ ಹುಚ್ಚರ ಹೈಡ್ರಾಮಾ

ಲೈಕ್ಸ್ ಆಸೆಗೆ ಅಪ್ಪನ ಪ್ರಾಣದ ಜತೆ ಆಟ ಪ್ರ್ಯಾಂಕ್ ಹೆಸರಲ್ಲಿ ವಿಕೃತಿ :ಬೆಂಗಳೂರಿನ ಕೊರಿಯರ್ ಆಫೀಸ್ ನಲ್ಲಿ ರೀಲ್ಸ್ ಹುಚ್ಚರ ಹೈಡ್ರಾಮಾ

by Shwetha
March 19, 2026
0

ಸಾಮಾಜಿಕ ಜಾಲತಾಣಗಳಲ್ಲಿ ಲೈಕ್ಸ್ ಮತ್ತು ಕಾಮೆಂಟ್ಸ್ ಗಿಟ್ಟಿಸಿಕೊಳ್ಳಲು ಇಂದಿನ ಯುವಪೀಳಿಗೆ ಯಾವ ಹಂತಕ್ಕೆ ಬೇಕಾದರೂ ಇಳಿಯಲು ಸಿದ್ಧರಿದ್ದಾರೆ ಎಂಬುದಕ್ಕೆ ರಾಜಧಾನಿ ಬೆಂಗಳೂರಿನಲ್ಲಿ ನಡೆದ ಈ ಘಟನೆಯೇ ಸಾಕ್ಷಿಯಂತಿದೆ....

ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ಖರೀದಿಗೆ ₹104 ಕೋಟಿ ಬಿಡುಗಡೆ

ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ಖರೀದಿಗೆ ₹104 ಕೋಟಿ ಬಿಡುಗಡೆ

by Shwetha
March 19, 2026
0

ರಾಜ್ಯ ಸರ್ಕಾರ 2026-27ನೇ ಶೈಕ್ಷಣಿಕ ವರ್ಷದ ಆರಂಭದಲ್ಲಿಯೇ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶೂ, ಸಾಕ್ಸ್ ಹಾಗೂ ಪಾದರಕ್ಷೆಗಳನ್ನು ಒದಗಿಸಲು ₹104 ಕೋಟಿ ಬಿಡುಗಡೆ ಮಾಡಿದೆ. ಈ ಕುರಿತು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram