ADVERTISEMENT
Monday, May 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Politics

Bihar Election: ಏಕಿಷ್ಟು ಗಮನ ಸೆಳೆಯಿತು ಬಿಹಾರ ಚುನಾವಣೆ? ಇಲ್ಲಿದೆ ಕೆಲವು ಪ್ರಮುಖ ಅಂಶಗಳು

Bihar Election 2025: Key Highlights, Full Result Analysis and Who Will Be the Next CM?

Saaksha Editor by Saaksha Editor
November 15, 2025
in Politics, National, Newsbeat, Opinion, ರಾಜಕೀಯ
Key Highlights, Full Result Analysis and Who Will Be the Next CM?

ಎನ್‌ಡಿಎ

Share on FacebookShare on TwitterShare on WhatsappShare on Telegram

ಬಿಹಾರ ವಿಧಾನಸಭೆ ಚುನಾವಣೆ ಫಲಿತಾಂಶ (Bihar Assembly Election Result)  ಹೊರಬಿದ್ದಿದೆ. ಎನ್‌ಡಿಎಗೆ ಸ್ಪಷ್ಟ ಬಹುಮತ ಬಂದಿದ್ದು, ಅಧಿಕಾರದ ಗದ್ದುಗೆ ಹಿಡಿಯಲು ಸರ್ವಸನ್ನದ್ದವಾಗಿದೆ. ಆದರೆ, ಸಿಎಂ ಯಾರಾಗುತ್ತಾರೆ ಕಾದುನೋಡಬೇಕು. ಅರೆ.. ಯಾಕೆ ಈ ಪ್ರಶ್ನೆ ಉದ್ಭವಿಸಿತು ಎಂಬುವುದಕ್ಕೆ ಉತ್ತರ ಕೊನೆಯಲ್ಲಿ ನೀಡುವೆ. ಅದಕ್ಕೂ ಮೊದಲು ಈ ವಿಧಾನಸಭಾ ಚುನಾವಣೆ 3-4 ಕಾರಣಕ್ಕೆ ವಿಶೇಷವೆನ್ನಿಸುತ್ತಿದೆ. ಮೊದಲನೇಯದ್ದು “ಸರ್‌”, ಎರಡನೇಯದ್ದು “ಮಹಿಳಾ ಮತ್ತು ಯುವ ಮತದಾರರು”, ಮೂರನೇಯದ್ದು ಜನ್ ಸುರಾಜ್ ಪಕ್ಷದ ಸ್ಥಾಪಕ‌ ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ಮತ್ತು ಕೊನೆಯದಾಗಿ “ಬಿಜೆಪಿ 89 ಕ್ಷೇತ್ರಗಳಲ್ಲಿ ವಿಜಯಶಾಲಿ”ಯಾಗಿದ್ದು.

ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಎನ್‌ಡಿಎ ದಾಖಲೆಯ 202 ಕ್ಷೇತ್ರಗಳಲ್ಲಿ ಗೆಲವು ಸಾಧಿಸುವ ಮೂಲಕ ಪ್ರತಿ ಪಕ್ಷಗಳನ್ನು ಕ್ಲೀನ್‌ಸ್ವೀಪ್‌ ಮಾಡಿದೆ. ಎನ್‌ಡಿಎ ಮಿತ್ರಕೂಟ (ಬಿಜೆಪಿ 89, ಜೆಡಿಯು 85, ಎಲ್‌ಜೆಪಿ (ಆರ್‌ವಿ) 19, ಹೆಚ್‌ಎಎಮ್‌ (ಎಸ್‌) 5 ಮತ್ತು ಆರ್‌ಎಲ್‌ಎಮ್‌ 4) ಸ್ಥಾನಗಳಲ್ಲಿ ಗೆಲುವು ಕಂಡಿದೆ. ಇನ್ನು, ಮಹಾಘಟಬಂದನ್‌ 35 ಕ್ಷೇತ್ರಗಳಲ್ಲಿ ಗೆಲ್ಲುವ ಮೂಲಕ ಹೀನಾಯ ಸೋಲು ಕಂಡಿದೆ. (ಕಾಂಗ್ರೆಸ್‌ 6, ಆರ್‌ಜೆಡಿ 25, ಸಿಪಿಐ (ಎಮ್‌ಎಲ್‌) (ಎಲ್‌) 2, ಸಿಪಿಐ (ಎಮ್‌) 1, ಐಐಪಿ 1) ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ.

Related posts

ಹೈಕಮಾಂಡ್ ನಾಯಕನಿಗೆ ಸಿಎಂ ಪಟ್ಟದ ಆಫರ್: ರಾಯರೆಡ್ಡಿ ಮಾಸ್ಟರ್ ಪ್ಲಾನ್ ಹಿಂದೆ ಅಡಗಿದೆ ದೊಡ್ಡ ರಹಸ್ಯ

ಹೈಕಮಾಂಡ್ ನಾಯಕನಿಗೆ ಸಿಎಂ ಪಟ್ಟದ ಆಫರ್: ರಾಯರೆಡ್ಡಿ ಮಾಸ್ಟರ್ ಪ್ಲಾನ್ ಹಿಂದೆ ಅಡಗಿದೆ ದೊಡ್ಡ ರಹಸ್ಯ

May 4, 2026
ಭಾರತದ ಮೂಲ ಗುರುತು ಉಳಿಸಿದ್ದು ಆದಿವಾಸಿ ಮತ್ತು ದಲಿತ ಸಮುದಾಯಗಳು: ಮೋಹನ್ ಭಾಗವತ್

ಭಾರತದ ಮೂಲ ಗುರುತು ಉಳಿಸಿದ್ದು ಆದಿವಾಸಿ ಮತ್ತು ದಲಿತ ಸಮುದಾಯಗಳು: ಮೋಹನ್ ಭಾಗವತ್

May 4, 2026

ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR)

ಬಿಹಾರ ವಿಧಾನಸಭೆ ಚುನಾವಣೆ ಆರಂಭಕ್ಕೂ ಮುನ್ನ ಚುನಾವಣಾ ಆಯೋಗ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ನಡೆಸಿತು (SIR). ಆಗ, ಕಾಂಗ್ರೆಸ್‌ ಅಧಿನಾಯಕ ರಾಹುಲ್‌ ಗಾಂಧಿಯವರು ಬಿಜೆಪಿ ಮತ್ತು ಚುನಾವಣಾ ಆಯೋಗದ ವಿರುದ್ಧ ವೋಟ್‌ ಚೋರಿ ಆರೋಪಗಳನ್ನು ಮಾಡಿದ್ದರು. ಮತಪಟ್ಟಿ ಪರಿಷ್ಕರಣೆ ಮೂಲಕ 65 ಲಕ್ಷ ಮತದಾರರ ಹೆಸರನ್ನು ತೆಗೆದುಹಾಕಲಾಗಿದೆ. ಚುನಾವಣಾ ಆಯೋಗವನ್ನು ಬಳಸಿಕೊಂಡು ಬಿಜೆಪಿ ಈ ರೀತಿ ಮತಗಳವು ಮಾಡುತ್ತಿದೆ ಎಂದು ಗಂಭೀರ ಆರೋಪ ಮಾಡಿತ್ತು.

ಅಲ್ಲದೇ, ಚುನಾವಣಾ ಆಯೋಗ ಮತ್ತು ಬಿಜೆಪಿ ವಿರುದ್ಧ ಮತಗಳವು ಆರೋಪದ ಮೂಲಕ ರಾಹುಲ್‌ ಗಾಂಧಿ ಮತ್ತು ಆರ್‌ಜೆಡಿ ಮುಖಂಡ ತೇಜಸ್ವಿ ಯಾದವ್‌ ಸೇರಿಕೊಂಡು 16 ದಿನಗಳ ವೋಟ್‌ ಅಧಿಕಾರ್‌ ಯಾತ್ರೆ ಕೈಗೊಂಡಿದ್ದರು. ಆದರೆ, ಈ ಯಾತ್ರೆ ಫಲ ಕೊಡಲಿಲ್ಲ ಎನ್ನಬಹುದು. ಮತಪಟ್ಟಿ ಪರಿಷ್ಕರಣೆ ಬಳಿಕ ಈ ಬಾರಿ ಬಿಹಾರದಲ್ಲಿ ದಾಖಲೆಯ ಶೇ 65.40 ರಷ್ಟು ಪ್ರಮಾಣದಲ್ಲಿ ಮತದಾನವಾಗಿದೆ. ಇದು ಐತಿಹಾಸಿಕ ದಾಖಲೆಯಾಗಿದೆ.

ಮಹಿಳಾ ಮತ್ತು ಯುವ ಮತದಾರರು (Women and youth voters )

ಈ ಬಾರಿ ಬಿಹಾರದ ಮಹಿಳಾ ಮತ್ತು ಯುವ ಮತದಾರರು ಎನ್‌ಡಿಎನ ಕೈ ಹಿಡಿದಿದ್ದಾರೆ. ಇದಕ್ಕೆ ಕಾರಣವೂ ಇದೆ. ಮೊದಲನೇಯದಾಗಿ ಚುನಾವಣೆ ಪೂರ್ವದಲ್ಲಿ ಮುಖ್ಯಮಂತ್ರಿ ಮಹಿಳಾ ರೋಜಗಾರ್‌ ಯೋಜನೆಯಡಿ 1.25 ಕೋಟಿ ಮಹಿಳೆಯರಿಗೆ ತಲಾ 10 ಸಾವಿರ ರೂ. ವರ್ಗ ಮಾಡಿದ್ದರು. ಇದು ಮಾತ್ರವಲ್ಲದೆ ನಿತೀಶ್‌ ಕುಮಾರ್‌ ನೇತೃತ್ವದ ಸರ್ಕಾರ ಮದ್ಯದ ಮೇಲೆ ಹೇರಿದ್ದ ನಿರ್ಬಂಧಕ್ಕೆ ಈಗಲೂ ಮಹಿಳೆಯರು ಬೆಂಬಲ ಸೂಚಿಸಿದ್ದಾರೆ. ಈ ಕಾರಣಗಳಿಂದ ಮಹಿಳೆಯರು ಎನ್‌ಡಿಎಗೆ ಬೆಂಬಲ ನೀಡಿದ್ದಾರೆ ಎನ್ನಲಾಗುತ್ತಿದೆ.  ಬಿಹಾರ ಚುನಾವಣೆ ಇತಿಹಾಸದಲ್ಲೇ ಮೊದಲ ಬಾರಿಗೆ ಶೇ 71. 6 ರಷ್ಟು ಮಹಿಳೆಯರು ಮತದಾನ ಮಾಡಿದ್ದಾರೆ. ಇದು ಎನ್‌ಡಿಎಗೆ ವರದಾನವಾಗಿದೆ.

ಮಹಿಳೆಯರ ಜೊತೆಗೆ ಜೆನ್‌ Z ಕೂಡ ಈ ಬಾರಿ ಎನ್‌ಡಿಎ ಪರ ನಿಂತಿದೆ. ಚುನಾವಣಾ ರ್ಯಾಲಿ ಸಂದರ್ಭದಲ್ಲಿ ಪ್ರಧಾನಿ ಮೋದಿಯವರು ಸೇನೆಯಲ್ಲಿ ಹೆಚ್ಚಾಗಿರುವ ಬಿಹಾರದ ಯೋಧರ ಕೂರಿತು ಗುಣಗಾನ ಮಾಡಿದರು. ಇದು ಯುವಕರ ಮೇಲೆ ಪ್ರಭಾವ ಬೀರಿದೆ. ಅಲ್ಲದೇ, ಚುನಾವಣಾ ಆಯೋಗವು ಜೀವಿಕಾ ದೀದಿಯರನ್ನು ಬಳಸಿಕೊಂಡು ಮಾಡಿದ ಮತದಾನ ಬಗ್ಗೆ ಜಾಗೃತಿ ಫಲ ನೀಡಿದೆ ಎನ್ನಬಹುದು. ಒಟ್ಟಿನಲ್ಲಿ ಈ ಬಾರಿ ಬಿಹಾರದಲ್ಲಿ ಸುಮಾರು 14 ಲಕ್ಷ ಯುವ ಮತದಾರರು ಮೊದಲ ಬಾರಿ ಮತದಾನ ಮಾಡಿದ್ದಾರೆ. ಇದು ಎನ್‌ಡಿಗೆ ಪ್ಲಸ್‌ ಆಗಿದೆ.

ಜನ್ ಸುರಾಜ್ ಪಕ್ಷದ ಸ್ಥಾಪಕ‌ ಪ್ರಶಾಂತ್ ಕಿಶೋರ್  (Prashant Kishor )

ಇದೇ ನರೇಂದ್ರ ಮೋದಿ, ನಿತೀಶ್‌ ಕುಮಾರ್‌ ಅಧಿಕಾರದ ಗದ್ದುಗೆ ಏರಿಸುವಲ್ಲಿ ಸಫಲರಾಗಿದ್ದ ಚುನಾವಣಾ ರಣತಂತ್ರಗಾರ ಪ್ರಶಾಂತ್‌ ಕಿಶೋರ್‌, ಬಿಹಾರದಲ್ಲಿ ಗೆಲುವನ್ನು ಹುಡುಕಿಕೊಳ್ಳಲು ವಿಫಲರಾದರು. ಪ್ರಶಾಂತ್‌ ಕಿಶೋರ್‌ 2024ರಲ್ಲಿ ಜನ್‌ ಸುರಾಜ್‌ ಪಕ್ಷವನ್ನು ಸ್ಥಾಪಿಸಿ ರಾಜ್ಯವ್ಯಾಪಿ 3000 ಕಿಮೀ ಪಾದಯಾತ್ರೆ ಮಾಡಿ ಪಕ್ಷ ಸಂಘಟನೆ ಯತ್ನ ಮಾಡಿ, 200ಕ್ಕೂ ಹೆಚ್ಚು ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಿದ್ದರು. ಆದರೆ, ಒಬ್ಬೇ ಒಬ್ಬ ಅಭ್ಯರ್ಥಿ ಕೂಡ ಗೆಲ್ಲಲಿಲ್ಲ.

ಇದನ್ನೂ ಓದಿ: ಬಿಹಾರ ಚುನಾವಣಾ ಫಲಿತಾಂಶ: ಜೆಡಿಎಸ್ -ಬಿಜೆಪಿ ಮೈತ್ರಿ ಮತ್ತಷ್ಟು ಬಲಿಷ್ಠ ಕುಮಾರಣ್ಣ ದಿಲ್ ಖುಷ್

ಬಿಜೆಪಿ 89 ಕ್ಷೇತ್ರಗಳಲ್ಲಿ ವಿಜಯಶಾಲಿ (BJP 89 seats)

2020ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 74 ಕ್ಷೇತ್ರಗಳಲ್ಲಿ ಗೆದ್ದಿತ್ತು. 19. 46 ರಷ್ಟು ಮತ ಪಡೆದುಕೊಂಡಿತ್ತು. ಈ ಬಾರಿ 101 ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದ ಬಿಜೆಪಿ 89 ಸ್ಥಾನಗಳಲ್ಲಿ ವಿಜಯ ಸಾಧಿಸಿದೆ. 20. 08 % ಮತಗಳನ್ನು ಪಡೆದುಕೊಂಡಿದೆ. ಇದು ಮಿತ್ರ ಪಕ್ಷಗಳಿಗೆ ಎಚ್ಚರಿಕೆ ಗಂಟೆಯಾಗಿದೆ. ಹೌದು, ಮುಂದಿನ ದಿನಗಳಲ್ಲಿ ಜೆಡಿಯು, ಆರ್‌ಜೆಡಿ ಪಕ್ಷಗಳಿಂತಲೂ ಅತ್ಯಂತ ದೊಡ್ಡ ಪರ್ಯಾಯ ಪಕ್ಷವಾಗುವ ಸಂದೇಶ ರವಾನಿಸಿದೆ.

ಯಾರಾಗುತ್ತಾರೆ ಬಿಹಾರ ಸಿಎಂ (Chirag Paswan CM race)

ಈ ಪ್ರಶ್ನೆ ರಾಜಕೀಯ ವಲಯದಲ್ಲಿ ಸಾಕಷ್ಟು ಚರ್ಚೆಯಾಗುತ್ತಿದೆ. ಬಿಜೆಪಿ ಮಹರಾಷ್ಟ್ರ ರೀತಿ ಮಾಡುತ್ತಾ ಕಾದುನೋಡಬೇಕು. ಹೌದು, ಮಹಾರಾಷ್ಟ್ರದಲ್ಲಿ ಚುನಾವಣೆ ಸಂದರ್ಭದಲ್ಲಿ ಏಕನಾಥ್‌ ಶಿಂದೆ ಅವರೇ ಮುಂದಿನ ಮುಖ್ಯಮಂತ್ರಿ ಅಂತ ಬಿಜೆಪಿ ಪರೋಕ್ಷವಾಗಿ ಹೇಳಿತ್ತು. ಆದರೆ, ಗೆದ್ದ ಮೇಲೆ ದೇವೇಂದ್ರ ಫಡ್ನವಿಸ್‌ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಿತು. ಇದೇ ರೀತಿ ಬಿಹಾರದಲ್ಲೂ ನಡೆಯುತ್ತಾ ಗೊತ್ತಿಲ್ಲ.

ಪ್ರಧಾನಿ ಮೋದಿ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಸುಶಾಸನ ಮತ್ತೆ ಬರಲಿದೆ ಎಂದು ಪ್ರಚಾರ ಮಾಡುವ ಮೂಲಕ ಪರೋಕ್ಷವಾಗಿ ಸುಶಾಸನ ಬಾಬು ಎಂದೇ ಖ್ಯಾತರಾಗಿರುವ ನಿತೀಶ್‌ ಕುಮಾರ್‌ ಪುನಃ ಸಿಎಂ ಆಗಲಿದ್ದಾರೆ ಎಂಬ ಸಂದೇಶ ನೀಡಿದ್ದರು. ಆದರೆ, ಅತ್ತಸಿಎಂ ಕುರ್ಚಿಗೆ ಏರಲು ಕೇಂದ್ರ ಸಚಿವ ಚಿರಾಗ್‌ ಪಾಸ್ವಾನ್‌ ಪೈಪೋಟಿಯಲ್ಲಿದ್ದಾರೆ.

ಒಟ್ಟಿನಲ್ಲಿ ಈ ಬಾರಿಯ ಬಿಹಾರ ಚುನಾವಣೆ ಹಲವು ಕಾರಣಗಳಿಂದ ರಾಜಕೀಯ ಪ್ರಿಯರಲ್ಲಿ ಕುತೂಹಲ ಮೂಡಿಸಿದ್ದಂತು ಸುಳ್ಳಲ್ಲ.

ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್‌ ಮಾಡಿ

Tags: 65 lakh voters removedBihar CM 2025Bihar election results 2025BJP 89 seatsBJP Bihar victoryNDA supportNitish Kumar CMPK Bihar electionsRahul Gandhi allegationsWomen voters Biharಎನ್‌ಡಿಎನರೇಂದ್ರ ಮೋದಿಬಿಹಾರ ಚುನಾವಣೆಬಿಹಾರ ವಿಧಾನಸಭೆ ಚುನಾವಣೆ 2025
ShareTweetSendShare
Join us on:

Related Posts

ಹೈಕಮಾಂಡ್ ನಾಯಕನಿಗೆ ಸಿಎಂ ಪಟ್ಟದ ಆಫರ್: ರಾಯರೆಡ್ಡಿ ಮಾಸ್ಟರ್ ಪ್ಲಾನ್ ಹಿಂದೆ ಅಡಗಿದೆ ದೊಡ್ಡ ರಹಸ್ಯ

ಹೈಕಮಾಂಡ್ ನಾಯಕನಿಗೆ ಸಿಎಂ ಪಟ್ಟದ ಆಫರ್: ರಾಯರೆಡ್ಡಿ ಮಾಸ್ಟರ್ ಪ್ಲಾನ್ ಹಿಂದೆ ಅಡಗಿದೆ ದೊಡ್ಡ ರಹಸ್ಯ

by Shwetha
May 4, 2026
0

ಕರ್ನಾಟಕ ರಾಜಕಾರಣದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಚರ್ಚೆಗಳು ದಿನಕ್ಕೊಂದು ಹೊಸ ತಿರುವು ಪಡೆಯುತ್ತಿವೆ. ಸದ್ಯ ಹಿರಿಯ ಶಾಸಕ ಹಾಗೂ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾದ ಬಸವರಾಜ್ ರಾಯರೆಡ್ಡಿ ನೀಡಿರುವ ಹೇಳಿಕೆ...

ಭಾರತದ ಮೂಲ ಗುರುತು ಉಳಿಸಿದ್ದು ಆದಿವಾಸಿ ಮತ್ತು ದಲಿತ ಸಮುದಾಯಗಳು: ಮೋಹನ್ ಭಾಗವತ್

ಭಾರತದ ಮೂಲ ಗುರುತು ಉಳಿಸಿದ್ದು ಆದಿವಾಸಿ ಮತ್ತು ದಲಿತ ಸಮುದಾಯಗಳು: ಮೋಹನ್ ಭಾಗವತ್

by Shwetha
May 4, 2026
0

ಮುಂಬೈ: ಭಾರತದ ಮೇಲೆ ನಡೆದ ಸರಣಿ ವಿದೇಶಿ ಆಕ್ರಮಣಗಳು ಮತ್ತು ನೂರಾರು ವರ್ಷಗಳ ಸಂಕಷ್ಟದ ಕಾಲದಲ್ಲೂ ದೇಶದ ಮೂಲ ಗುರುತು ಹಾಗೂ ಸಾಂಸ್ಕೃತಿಕ ಆತ್ಮವನ್ನು ಸಂರಕ್ಷಿಸಿರುವುದು ಆದಿವಾಸಿ...

ಬ್ರಿಜ್ ಭೂಷಣ್ ನಿಂದ ಲೈಂಗಿಕ ಕಿರುಕುಳಕ್ಕೊಳಗಾದ ಆರು ಸಂತ್ರಸ್ತರಲ್ಲಿ ನಾನೂ ಒಬ್ಬಳು! : ವಿನೇಶ್ ಫೋಗಟ್

ಬ್ರಿಜ್ ಭೂಷಣ್ ನಿಂದ ಲೈಂಗಿಕ ಕಿರುಕುಳಕ್ಕೊಳಗಾದ ಆರು ಸಂತ್ರಸ್ತರಲ್ಲಿ ನಾನೂ ಒಬ್ಬಳು! : ವಿನೇಶ್ ಫೋಗಟ್

by Shwetha
May 4, 2026
0

ಕುಸ್ತಿ ಲೋಕದಲ್ಲಿ ಮತ್ತು ದೇಶದ ಕ್ರೀಡಾ ವಲಯದಲ್ಲಿ ಬೆಚ್ಚಿಬೀಳಿಸುವಂತಹ ಬೆಳವಣಿಗೆಯೊಂದು ನಡೆದಿದೆ. ಖ್ಯಾತ ಒಲಿಂಪಿಯನ್ ಕುಸ್ತಿಪಟು ವಿನೇಶ್ ಫೋಗಟ್ ಅವರು ತಮಗೆ ಎದುರಾದ ಕಹಿ ಘಟನೆಯನ್ನು ಸಾರ್ವಜನಿಕವಾಗಿ...

ಮೊಬೈಲ್ ನಲ್ಲೇ ಸಿಗಲಿದೆ ಆಸ್ತಿ ಪತ್ರ: ಕಂದಾಯ ಸಚಿವರಿಂದ ಭೂ ಸುರಕ್ಷಾ ಯೋಜನೆ ಜಾರಿ

ಮೊಬೈಲ್ ನಲ್ಲೇ ಸಿಗಲಿದೆ ಆಸ್ತಿ ಪತ್ರ: ಕಂದಾಯ ಸಚಿವರಿಂದ ಭೂ ಸುರಕ್ಷಾ ಯೋಜನೆ ಜಾರಿ

by Shwetha
May 4, 2026
0

ಬೆಂಗಳೂರು: ರಾಜ್ಯದ ಜನತೆಗೆ ಕಂದಾಯ ಇಲಾಖೆಯು ಬಹುದೊಡ್ಡ ಸಿಹಿ ಸುದ್ದಿಯೊಂದನ್ನು ನೀಡಿದೆ. ಇನ್ನು ಮುಂದೆ ಆಸ್ತಿ ದಾಖಲೆಗಳಿಗಾಗಿ ಸಾರ್ವಜನಿಕರು ಸರ್ಕಾರಿ ಕಚೇರಿಗಳಿಗೆ ಅಲೆದಾಡುವ ಸಂಕಷ್ಟ ತಪ್ಪಲಿದ್ದು, ನೇರವಾಗಿ...

ಜೈಲಿನಲ್ಲಿ ನರಕಯಾತನೆ ಅನುಭವಿಸುತ್ತಿದ್ದಾರಾ ನಟ ದರ್ಶನ್? ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಡಿ ಬಾಸ್ ಕಷ್ಟದ ಸರಮಾಲೆ

ಜೈಲಿನಲ್ಲಿ ನರಕಯಾತನೆ ಅನುಭವಿಸುತ್ತಿದ್ದಾರಾ ನಟ ದರ್ಶನ್? ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಡಿ ಬಾಸ್ ಕಷ್ಟದ ಸರಮಾಲೆ

by Shwetha
May 4, 2026
0

ನಟ ದರ್ಶನ್ ಅವರು ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿ ತಿಂಗಳುಗಳೇ ಕಳೆದಿವೆ. ಇದೀಗ ಜಾಮೀನು ಕೋರಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿರುವ ದರ್ಶನ್, ಅಲ್ಲಿ ಸಲ್ಲಿಸಿರುವ ಅರ್ಜಿಯಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram