ವ್ಯಕ್ತಿಯರ್ವ ತಾನು ಅನೈತಿಕ ಸಂಬAಧ ಹೊಂದಿದ್ದ ಮಹಿಳೆಯನ್ನು ಕೊಲೆ ಮಾಡಿರುವ ಘಟನೆ ಬಳ್ಳಾರಿಯ ಹೊಸಪೇಟೆಯಲ್ಲಿ ನಡೆದಿದೆ. ೪೫ ವರ್ಷದ ಹುಲಿಗಮ್ಮ ಮೃತದುರ್ದೈವಿಯಾಗಿದ್ದು, ಹಲಗೇರಿ ಸಿದ್ದಲಿಂಗಪ್ಪ ಕೊಲೆಮಾಡಿರುವ ಆರೋಪಿಯಾಗಿದದ್ದಾನೆ. ಮೃತ ಹುಲಿಗಮ್ಮ ಸಿದ್ದಲಿಂಗಪ್ಪನ ಬಳಿ ೨ ಎಕರೆ ಜಮೀನಿಗೆ ಬೇಡಿಕೆಯಿಟ್ಟಿದ್ದಳು. ಆದರೆ ಇದಕ್ಕೆ ಒಪ್ಪದ ಸಿದ್ದಲಿಂಗಪ್ಪ ಆಕೆಯನ್ನ ಕತ್ತು ಹಿಸುಕಿ ಕೊಲೆ ಮಾಡಿ ತನ್ನ ಜಮೀನಿನಲ್ಲೇ ಶವವನ್ನು ಹೂತಿಟ್ಟಿದ್ದ ಎನ್ನಲಾಗಿದೆ. ಇದೀಗ ಈತನ ಕೃತ್ಯ ಬಯಲಾಗಿದ್ದು, ಸದ್ಯ ಪೊಲೀಸರ ಅತಿಥಿಯಾಗಿದ್ದಾನೆ. ಈ ಸಂಬಮಧ ಪ್ರಕರಣ ದಾಖಲಿಸಿಕೊಂಡಿರುವ ತಂಬ್ರಳ್ಳಿ ಪೊಲೀಸರು ವಿಚಾರಣೆ ಮುಂದುವರೆಸಿದ್ದು, ಶವ ಹೊರತೆಗೆಯುವ ಕಾರ್ಯಾಚರಣೆ ನಡೆಸಿದ್ದಾರೆ.
fifaworldcup:2026- ದೈತ್ಯರನ್ನು ಬೆಚ್ಚಿ ಬೀಳಿಸಿದ ಬ್ಲೂ ಬ್ಲೂ ಶಾರ್ಕ್ಸ್..! ಫಿಫಾ ವಿಶ್ವಕಪ್ನಲ್ಲಿ ಇತಿಹಾಸ ಬರೆದ ಕೇಪ್ವರ್ಡ್..!
ಕೆಲವೊಂದು ಸೋಲುಗಳು ಗೆಲುವಿಗಿಂತಲೂ ಹೆಚ್ಚು ಕಾಲ ನೆನಪಿನಲ್ಲಿರುತ್ತವೆ. ಅದು ಭಗ್ನಗೊಂಡ ಮೊದಲ ಪ್ರೀತಿಯ ಹಾಗೇ..! ಫಿಫಾ ವಿಶ್ವಕಪ್ 2026ರ ಟೂರ್ನಿಯ ನಾಕೌಟ್ ಪಂದ್ಯವೊಂದರಲ್ಲಿ ಆಗಿದ್ದು ಕೂಡ ಅದೇ..!...








