ADVERTISEMENT
Monday, August 3, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ಕರಾವಳಿ ಕರ್ನಾಟಕ

ಪುತ್ತೂರಿನ ಕಲ್ಯಾಣೋತ್ಸವದಲ್ಲಿ ಬಿಜೆಪಿ ನಾಯಕನಿಗೆ ಫುಲ್ ಅವಮಾನ :ಪುತ್ತಿಲ ಪಡೆಯ ದರ್ಪಕ್ಕೆ ಬೆದರಿದ್ರಾ ಬಿಜೆಪಿ ನಾಯಕ

A complete disgrace to the BJP leader from Puttur.

Shwetha by Shwetha
December 2, 2025
in ಕರಾವಳಿ ಕರ್ನಾಟಕ, Newsbeat, State, ರಾಜ್ಯ
Share on FacebookShare on TwitterShare on WhatsappShare on Telegram

ಪುತ್ತೂರು: ಇಲ್ಲಿನ ರಾಜಕೀಯ ವಲಯದಲ್ಲಿ ಬಿಜೆಪಿ ಮತ್ತು ಪುತ್ತಿಲ ಪರಿವಾರದ ನಡುವಿನ ಜಟಾಪಟಿ ಮುಂದುವರಿದಿದ್ದು, ಇದೀಗ ಅದು ವಿಕೋಪಕ್ಕೆ ತಿರುಗಿದೆ. ಪವಿತ್ರವಾದ ಶ್ರೀನಿವಾಸ ಕಲ್ಯಾಣೋತ್ಸವ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಪ್ರಸನ್ನ ಕುಮಾರ್ ಮಾರ್ತ ಅವರನ್ನು ಪುತ್ತಿಲ ಪರಿವಾರದ ಕಾರ್ಯಕರ್ತರು ಅವಮಾನಿಸಿ, ಹೊರದಬ್ಬಿದ ಆಘಾತಕಾರಿ ಘಟನೆ ನಡೆದಿದೆ.

ಸ್ಥಾಪಕಾಧ್ಯಕ್ಷರಿಗೇ ಗೇಟ್ ಪಾಸ್!

Related posts

jasprit-bumrah-ruled-out-sri-lanka-test-series-auqib-nabi-included

Team india- ಲಂಕಾ ಟೆಸ್ಟ್ ಸರಣಿಯಿಂದ ಬೂಮ್ರಾ ಔಟ್.. ಔಕಿಬ್ ನಬಿ ಇನ್..! 

August 3, 2026
anna-from-mexico-movie-release-date-dhananjay-shankar-guru

film- ಡಿಸೆಂಬರ್‌ 24ಕ್ಕೆ ತೆರೆಗೆ ಬರಲಿದೆ ಧನಂಜಯ್‌ ಅಭಿನಯದ ‘ಅಣ್ಣ ಫ್ರಮ್‌ ಮೆಕ್ಸಿಕೋ’: ಬರ್ತಿದೆ ‘ಬಡವ ರಾಸ್ಕಲ್’ ಹಿಟ್ ಕಾಂಬಿನೇಷನ್ !

August 3, 2026

ವಿಪರ್ಯಾಸವೆಂದರೆ, ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿಯ ಸ್ಥಾಪಕಾಧ್ಯಕ್ಷರೂ ಆಗಿರುವ ಪ್ರಸನ್ನ ಕುಮಾರ್ ಮಾರ್ತ ಅವರನ್ನು ಸ್ವತಃ ಕಾರ್ಯಕ್ರಮದ ಆಯೋಜಕರೇ ಆಮಂತ್ರಣ ನೀಡಿ ಕರೆದಿದ್ದರು. ಆಮಂತ್ರಣದ ಮೇರೆಗೆ ತಮ್ಮ ಕುಟುಂಬ ಸಮೇತ ಕಾರ್ಯಕ್ರಮಕ್ಕೆ ಆಗಮಿಸಿದ ಪ್ರಸನ್ನ ಕುಮಾರ್ ಅವರನ್ನು, ಪುತ್ತಿಲ ಪರಿವಾರದ ಕಾರ್ಯಕರ್ತರು ಗೇಟ್ ಬಳಿಯೇ ತಡೆದು ನಿಲ್ಲಿಸಿದ್ದಾರೆ. ಅಷ್ಟೇ ಅಲ್ಲದೆ, ದೇವರ ಕಾರ್ಯಕ್ರಮವೆಂದೂ ನೋಡದೆ ಸಾರ್ವಜನಿಕವಾಗಿ ಅವರನ್ನು ದೈಹಿಕವಾಗಿ ತಳ್ಳಿ, ಹೊರದಬ್ಬುವ ಮೂಲಕ ಅವಮಾನ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಮಹಾಲಿಂಗೇಶ್ವರನ ನಡೆದಿ ಕಣ್ಣೀರಿಟ್ಟ ಮಾರ್ತ

ತಮಗಾದ ಘೋರ ಅವಮಾನದಿಂದ ಮನನೊಂದ ಪ್ರಸನ್ನ ಕುಮಾರ್ ಮಾರ್ತ, ಪುತ್ತೂರಿನ ಇತಿಹಾಸ ಪ್ರಸಿದ್ಧ ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಿಗೆ ತೆರಳಿ ಕಣ್ಣೀರು ಹಾಕಿದ್ದಾರೆ. ದೇವರ ಎದುರು ನಿಂತು, ತನಗೆ ಮತ್ತು ತನ್ನ ಕುಟುಂಬಕ್ಕೆ ಆದ ಅವಮಾನವನ್ನು ತೋಡಿಕೊಂಡ ಅವರು, ನನಗೆ ಅವಮಾನ ಮಾಡಿದವರಿಗೆ ಶಿಕ್ಷೆ ನೀಡಬೇಡ, ಅವರಿಗೆ ಸಂಸಾರವಿದೆ. ಬದಲಾಗಿ ಅವರಿಗೆ ಒಳ್ಳೆಯ ಬುದ್ಧಿಯನ್ನು ಕೊಡು ಎಂದು ಭಾವುಕರಾಗಿ ಪ್ರಾರ್ಥಿಸಿದ್ದಾರೆ. ಈ ಘಟನೆಯಿಂದ ನೊಂದ ಅವರ ಪತ್ನಿಯೂ ದೇವರ ಮಣ್ಣಿನಲ್ಲಿ ಕಣ್ಣೀರಿಟ್ಟಿದ್ದಾರೆ.

ಮಾಧ್ಯಮಗಳೊಂದಿಗೆ ಕಣ್ಣೀರು ಒರೆಸಿಕೊಳ್ಳುತ್ತಲೇ ಮಾತನಾಡಿದ ಪ್ರಸನ್ನ ಕುಮಾರ್, ನಾನು ಪುತ್ತಿಲ ಪರಿವಾರದಲ್ಲಿದ್ದಾಗಲೂ ಹಿಂದೂ ಸಮಾಜಕ್ಕಾಗಿ ದುಡಿದಿದ್ದೇನೆ. ಈಗ ಬಿಜೆಪಿ ಜಿಲ್ಲಾ ಉಪಾಧ್ಯಕ್ಷನಾದ ಮೇಲೂ ಸಮಾಜವನ್ನು ಒಗ್ಗೂಡಿಸುವ ಕೆಲಸ ಮಾಡುತ್ತಿದ್ದೇನೆ. ಆದರೆ, ಇತ್ತೀಚಿನ ರಾಜಕೀಯ ಬೆಳವಣಿಗೆಗಳ ನಂತರ ನಾನು ಬಿಜೆಪಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಪುತ್ತಿಲ ಪರಿವಾರದ ಕಡೆಯಿಂದ ತೀವ್ರ ಒತ್ತಡ ಬರುತ್ತಿದೆ. ನಿನ್ನೆ ನಡೆದ ಘಟನೆ ಪೂರ್ವನಿಯೋಜಿತವಾಗಿದ್ದು, ಯಾರದ್ದೋ ಪ್ರೇರಣೆಯಿಂದ ಕಾರ್ಯಕರ್ತರು ಈ ರೀತಿ ವರ್ತಿಸಿದ್ದಾರೆ ಎಂದು ದೂರಿದರು.

ಬಿಜೆಪಿ ವರಿಷ್ಠರಿಂದ ಸಾಂತ್ವಾನ

ಕಾರ್ಯಕ್ರಮದಲ್ಲಿ ಬಿಜೆಪಿಯ ಇತರ ಪದಾಧಿಕಾರಿಗಳಿದ್ದರೂ, ಕೇವಲ ನನ್ನನ್ನೇ ಗುರಿಯಾಗಿಸಿ ದಾಳಿ ಮಾಡಲಾಗಿದೆ. ನನ್ನ ರಾಜೀನಾಮೆಗೆ ಒತ್ತಾಯಿಸುತ್ತಿರುವ ವ್ಯಕ್ತಿಯ ಹೆಸರನ್ನು ಮುಂದಿನ ದಿನಗಳಲ್ಲಿ ಬಹಿರಂಗಪಡಿಸುತ್ತೇನೆ ಎಂದು ಪ್ರಸನ್ನ ಕುಮಾರ್ ತಿಳಿಸಿದ್ದಾರೆ. ಇನ್ನು ಈ ಘಟನೆ ತಿಳಿಯುತ್ತಿದ್ದಂತೆಯೇ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಪ್ರಸನ್ನ ಕುಮಾರ್ ಅವರಿಗೆ ಕರೆ ಮಾಡಿ ಸಾಂತ್ವಾನ ಹೇಳಿದ್ದಾರೆ. ಅಲ್ಲದೆ ಜಿಲ್ಲೆಯ ಶಾಸಕರು ಹಾಗೂ ಪ್ರಮುಖ ನಾಯಕರು ಕರೆ ಮಾಡಿ ಧೈರ್ಯ ತುಂಬಿದ್ದಾರೆ.

ಒಟ್ಟಿನಲ್ಲಿ ದೇವರ ಸನ್ನಿಧಿಯಲ್ಲಿ ನಡೆದ ಈ ಹೈಡ್ರಾಮ ಪುತ್ತೂರು ರಾಜಕೀಯದಲ್ಲಿ ಹೊಸ ಸಂಚಲನ ಮೂಡಿಸಿದ್ದು, ಮುಂದಿನ ದಿನಗಳಲ್ಲಿ ಇದು ಯಾವ ತಿರುವು ಪಡೆಯಲಿದೆ ಎಂಬುದನ್ನು ಕಾದು ನೋಡಬೇಕಿದೆ.

ShareTweetSendShare
Join us on:

Related Posts

jasprit-bumrah-ruled-out-sri-lanka-test-series-auqib-nabi-included

Team india- ಲಂಕಾ ಟೆಸ್ಟ್ ಸರಣಿಯಿಂದ ಬೂಮ್ರಾ ಔಟ್.. ಔಕಿಬ್ ನಬಿ ಇನ್..! 

by admin
August 3, 2026
0

  ಟೀಮ್ ಇಂಡಿಯಾದ ಟ್ರಂಪ್ ಕಾರ್ಡ್  ಬೌಲರ್ ಮತ್ತೆ ಗಾಯದಿಂದ ಬಳುತ್ತಿದ್ದಾರೆ. ಮೊಣಕಾಲಿನ ಗಾಯದಿಂದ ಇನ್ನೂ ಚೇತರಿಸಿಕೊಳ್ಳದ ವೇಗಿ ಮುಂಬರುವ ಲಂಕಾ ವಿರುದ್ಧದ ಟೆಸ್ಟ್ ಪಂದ್ಯದಿಂದ ಹೊರಗುಳಿಯಲಿದ್ದಾರೆ....

anna-from-mexico-movie-release-date-dhananjay-shankar-guru

film- ಡಿಸೆಂಬರ್‌ 24ಕ್ಕೆ ತೆರೆಗೆ ಬರಲಿದೆ ಧನಂಜಯ್‌ ಅಭಿನಯದ ‘ಅಣ್ಣ ಫ್ರಮ್‌ ಮೆಕ್ಸಿಕೋ’: ಬರ್ತಿದೆ ‘ಬಡವ ರಾಸ್ಕಲ್’ ಹಿಟ್ ಕಾಂಬಿನೇಷನ್ !

by admin
August 3, 2026
0

ಕನ್ನಡ ಚಿತ್ರರಂಗದ ಖ್ಯಾತ ನಟ, ‘ನಟರಾಕ್ಷಸ’ ಡಾಲಿ ಧನಂಜಯ್ ಅಭಿನಯದ ಬಹುನಿರೀಕ್ಷಿತ ‘ಅಣ್ಣ ಫ್ರಮ್‌ ಮೆಕ್ಸಿಕೋ’ (Anna From Mexico) ಸಿನಿಮಾದ ಬಿಡುಗಡೆ ದಿನಾಂಕ ಅಧಿಕೃತವಾಗಿ ಘೋಷಣೆಯಾಗಿದೆ....

allu-arjun-accident-insurance-1000-fans-aafa-summit-karnataka

film- ಅಭಿಮಾನಿಗಳ ಸುರಕ್ಷತೆಗೆ ಮುಂದಾದ ‘ಐಕಾನ್ ಸ್ಟಾರ್’; ಕರ್ನಾಟಕದ 150 ಮಂದಿ ಸೇರಿ ಸಾವಿರ ಫ್ಯಾನ್ಸ್‌ಗೆ ‘ಅಪಘಾತ ವಿಮೆ’ ಮಾಡಿಸಿದ ಅಲ್ಲು ಅರ್ಜುನ್!

by admin
August 3, 2026
0

ಹೈದರಾಬಾದ್: ತಮ್ಮ ನಟನೆ ಮತ್ತು ಅದ್ಭುತ ಡ್ಯಾನ್ಸ್ ಮೂಲಕ ದೇಶಾದ್ಯಂತ ಕೋಟ್ಯಂತರ ಅಭಿಮಾನಿಗಳನ್ನು ಸಂಪಾದಿಸಿರುವ 'ಐಕಾನ್ ಸ್ಟಾರ್' ಅಲ್ಲು ಅರ್ಜುನ್, ಇದೀಗ ತಮ್ಮ ಮಾನವೀಯ ನಡೆಯಿಂದ ಮತ್ತೊಮ್ಮೆ...

bhavantara-kannada-movie-modamodalidu-song-released-karthik-sharma-hombale-music

film- ಕಾರ್ತಿಕ್ ಶರ್ಮಾ ನಿರ್ದೇಶನದ ‘ಭಾವಾಂತರ’ ಚಿತ್ರದ ‘ಮೊದಮೊದಲಿದು’ ಮೆಲೋಡಿ ಹಾಡು ರಿಲೀಸ್‌

by admin
August 3, 2026
0

ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ಬಾಲನಟನಾಗಿ ಹಾಗೂ ಸಂಗೀತ ನಿರ್ದೇಶಕನಾಗಿ ಗುರುತಿಸಿಕೊಂಡಿರುವ ಬಹುಮುಖ ಪ್ರತಿಭೆ ಕಾರ್ತಿಕ್ ಶರ್ಮಾ ಈಗ ‘ಭಾವಾಂತರ’ ಚಿತ್ರದ ಮೂಲಕ ಸ್ವತಂತ್ರ ನಿರ್ದೇಶಕರಾಗಿ ಬಡ್ತಿ ಪಡೆದಿದ್ದಾರೆ....

jana-nayagan-box-office-collection-thalapathy-vijay-kvn-productions-250-crore

film- ಬಾಕ್ಸ್ ಆಫೀಸ್‌ನಲ್ಲಿ ದಳಪತಿ ವಿಜಯ್ ‘ಜನ ನಾಯಗನ್’ ಅಬ್ಬರ: ₹250 ಕೋಟಿಗೂ ಹೆಚ್ಚು ಕಲೆಕ್ಷನ್!

by admin
August 3, 2026
0

ಚಿತ್ರರಂಗಕ್ಕೆ ಗುಡ್‌ಬೈ ಹೇಳಿ ಪೂರ್ಣಪ್ರಮಾಣದ ರಾಜಕೀಯಕ್ಕೆ ಧುಮುಕಿರುವ ತಮಿಳುನಾಡಿನ ನೂತನ ಮುಖ್ಯಮಂತ್ರಿ, 'ದಳಪತಿ' ವಿಜಯ್ ಅಭಿನಯದ ಕೊನೆಯ ಸಿನಿಮಾ 'ಜನ ನಾಯಗನ್' ಜಾಗತಿಕ ಬಾಕ್ಸ್ ಆಫೀಸ್‌ನಲ್ಲಿ ಧೂಳೆಬ್ಬಿಸುತ್ತಿದೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram