ADVERTISEMENT
Tuesday, April 28, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ಕರಾವಳಿ ಕರ್ನಾಟಕ

ಪುತ್ತೂರಿನ ಕಲ್ಯಾಣೋತ್ಸವದಲ್ಲಿ ಬಿಜೆಪಿ ನಾಯಕನಿಗೆ ಫುಲ್ ಅವಮಾನ :ಪುತ್ತಿಲ ಪಡೆಯ ದರ್ಪಕ್ಕೆ ಬೆದರಿದ್ರಾ ಬಿಜೆಪಿ ನಾಯಕ

A complete disgrace to the BJP leader from Puttur.

Shwetha by Shwetha
December 2, 2025
in ಕರಾವಳಿ ಕರ್ನಾಟಕ, Newsbeat, State, ರಾಜ್ಯ
Share on FacebookShare on TwitterShare on WhatsappShare on Telegram

ಪುತ್ತೂರು: ಇಲ್ಲಿನ ರಾಜಕೀಯ ವಲಯದಲ್ಲಿ ಬಿಜೆಪಿ ಮತ್ತು ಪುತ್ತಿಲ ಪರಿವಾರದ ನಡುವಿನ ಜಟಾಪಟಿ ಮುಂದುವರಿದಿದ್ದು, ಇದೀಗ ಅದು ವಿಕೋಪಕ್ಕೆ ತಿರುಗಿದೆ. ಪವಿತ್ರವಾದ ಶ್ರೀನಿವಾಸ ಕಲ್ಯಾಣೋತ್ಸವ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಪ್ರಸನ್ನ ಕುಮಾರ್ ಮಾರ್ತ ಅವರನ್ನು ಪುತ್ತಿಲ ಪರಿವಾರದ ಕಾರ್ಯಕರ್ತರು ಅವಮಾನಿಸಿ, ಹೊರದಬ್ಬಿದ ಆಘಾತಕಾರಿ ಘಟನೆ ನಡೆದಿದೆ.

ಸ್ಥಾಪಕಾಧ್ಯಕ್ಷರಿಗೇ ಗೇಟ್ ಪಾಸ್!

Related posts

ಮೇ 1ರಿಂದ ಅಡುಗೆ ಅನಿಲ ಬೆಲೆ ಏರಿಕೆ ಫಿಕ್ಸ್? ಜನಸಾಮಾನ್ಯರ ಜೇಬಿಗೆ ಕತ್ತರಿ ಹಾಕಲಿರುವ ಹೊಸ ನಿಯಮಗಳು

ಮೇ 1ರಿಂದ ಅಡುಗೆ ಅನಿಲ ಬೆಲೆ ಏರಿಕೆ ಫಿಕ್ಸ್? ಜನಸಾಮಾನ್ಯರ ಜೇಬಿಗೆ ಕತ್ತರಿ ಹಾಕಲಿರುವ ಹೊಸ ನಿಯಮಗಳು

April 28, 2026
ಗೃಹ ಜ್ಯೋತಿ : ಹೊಸ ಮನೆಯಲ್ಲಿ ಉಚಿತ ವಿದ್ಯುತ್ ಸೌಲಭ್ಯದ ಸರಾಸರಿ ಲೆಕ್ಕಾಚಾರ ಹೇಗಿರುತ್ತದೆ?

ಗೃಹ ಜ್ಯೋತಿ : ಹೊಸ ಮನೆಯಲ್ಲಿ ಉಚಿತ ವಿದ್ಯುತ್ ಸೌಲಭ್ಯದ ಸರಾಸರಿ ಲೆಕ್ಕಾಚಾರ ಹೇಗಿರುತ್ತದೆ?

April 28, 2026

ವಿಪರ್ಯಾಸವೆಂದರೆ, ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿಯ ಸ್ಥಾಪಕಾಧ್ಯಕ್ಷರೂ ಆಗಿರುವ ಪ್ರಸನ್ನ ಕುಮಾರ್ ಮಾರ್ತ ಅವರನ್ನು ಸ್ವತಃ ಕಾರ್ಯಕ್ರಮದ ಆಯೋಜಕರೇ ಆಮಂತ್ರಣ ನೀಡಿ ಕರೆದಿದ್ದರು. ಆಮಂತ್ರಣದ ಮೇರೆಗೆ ತಮ್ಮ ಕುಟುಂಬ ಸಮೇತ ಕಾರ್ಯಕ್ರಮಕ್ಕೆ ಆಗಮಿಸಿದ ಪ್ರಸನ್ನ ಕುಮಾರ್ ಅವರನ್ನು, ಪುತ್ತಿಲ ಪರಿವಾರದ ಕಾರ್ಯಕರ್ತರು ಗೇಟ್ ಬಳಿಯೇ ತಡೆದು ನಿಲ್ಲಿಸಿದ್ದಾರೆ. ಅಷ್ಟೇ ಅಲ್ಲದೆ, ದೇವರ ಕಾರ್ಯಕ್ರಮವೆಂದೂ ನೋಡದೆ ಸಾರ್ವಜನಿಕವಾಗಿ ಅವರನ್ನು ದೈಹಿಕವಾಗಿ ತಳ್ಳಿ, ಹೊರದಬ್ಬುವ ಮೂಲಕ ಅವಮಾನ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಮಹಾಲಿಂಗೇಶ್ವರನ ನಡೆದಿ ಕಣ್ಣೀರಿಟ್ಟ ಮಾರ್ತ

ತಮಗಾದ ಘೋರ ಅವಮಾನದಿಂದ ಮನನೊಂದ ಪ್ರಸನ್ನ ಕುಮಾರ್ ಮಾರ್ತ, ಪುತ್ತೂರಿನ ಇತಿಹಾಸ ಪ್ರಸಿದ್ಧ ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಿಗೆ ತೆರಳಿ ಕಣ್ಣೀರು ಹಾಕಿದ್ದಾರೆ. ದೇವರ ಎದುರು ನಿಂತು, ತನಗೆ ಮತ್ತು ತನ್ನ ಕುಟುಂಬಕ್ಕೆ ಆದ ಅವಮಾನವನ್ನು ತೋಡಿಕೊಂಡ ಅವರು, ನನಗೆ ಅವಮಾನ ಮಾಡಿದವರಿಗೆ ಶಿಕ್ಷೆ ನೀಡಬೇಡ, ಅವರಿಗೆ ಸಂಸಾರವಿದೆ. ಬದಲಾಗಿ ಅವರಿಗೆ ಒಳ್ಳೆಯ ಬುದ್ಧಿಯನ್ನು ಕೊಡು ಎಂದು ಭಾವುಕರಾಗಿ ಪ್ರಾರ್ಥಿಸಿದ್ದಾರೆ. ಈ ಘಟನೆಯಿಂದ ನೊಂದ ಅವರ ಪತ್ನಿಯೂ ದೇವರ ಮಣ್ಣಿನಲ್ಲಿ ಕಣ್ಣೀರಿಟ್ಟಿದ್ದಾರೆ.

ಮಾಧ್ಯಮಗಳೊಂದಿಗೆ ಕಣ್ಣೀರು ಒರೆಸಿಕೊಳ್ಳುತ್ತಲೇ ಮಾತನಾಡಿದ ಪ್ರಸನ್ನ ಕುಮಾರ್, ನಾನು ಪುತ್ತಿಲ ಪರಿವಾರದಲ್ಲಿದ್ದಾಗಲೂ ಹಿಂದೂ ಸಮಾಜಕ್ಕಾಗಿ ದುಡಿದಿದ್ದೇನೆ. ಈಗ ಬಿಜೆಪಿ ಜಿಲ್ಲಾ ಉಪಾಧ್ಯಕ್ಷನಾದ ಮೇಲೂ ಸಮಾಜವನ್ನು ಒಗ್ಗೂಡಿಸುವ ಕೆಲಸ ಮಾಡುತ್ತಿದ್ದೇನೆ. ಆದರೆ, ಇತ್ತೀಚಿನ ರಾಜಕೀಯ ಬೆಳವಣಿಗೆಗಳ ನಂತರ ನಾನು ಬಿಜೆಪಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಪುತ್ತಿಲ ಪರಿವಾರದ ಕಡೆಯಿಂದ ತೀವ್ರ ಒತ್ತಡ ಬರುತ್ತಿದೆ. ನಿನ್ನೆ ನಡೆದ ಘಟನೆ ಪೂರ್ವನಿಯೋಜಿತವಾಗಿದ್ದು, ಯಾರದ್ದೋ ಪ್ರೇರಣೆಯಿಂದ ಕಾರ್ಯಕರ್ತರು ಈ ರೀತಿ ವರ್ತಿಸಿದ್ದಾರೆ ಎಂದು ದೂರಿದರು.

ಬಿಜೆಪಿ ವರಿಷ್ಠರಿಂದ ಸಾಂತ್ವಾನ

ಕಾರ್ಯಕ್ರಮದಲ್ಲಿ ಬಿಜೆಪಿಯ ಇತರ ಪದಾಧಿಕಾರಿಗಳಿದ್ದರೂ, ಕೇವಲ ನನ್ನನ್ನೇ ಗುರಿಯಾಗಿಸಿ ದಾಳಿ ಮಾಡಲಾಗಿದೆ. ನನ್ನ ರಾಜೀನಾಮೆಗೆ ಒತ್ತಾಯಿಸುತ್ತಿರುವ ವ್ಯಕ್ತಿಯ ಹೆಸರನ್ನು ಮುಂದಿನ ದಿನಗಳಲ್ಲಿ ಬಹಿರಂಗಪಡಿಸುತ್ತೇನೆ ಎಂದು ಪ್ರಸನ್ನ ಕುಮಾರ್ ತಿಳಿಸಿದ್ದಾರೆ. ಇನ್ನು ಈ ಘಟನೆ ತಿಳಿಯುತ್ತಿದ್ದಂತೆಯೇ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಪ್ರಸನ್ನ ಕುಮಾರ್ ಅವರಿಗೆ ಕರೆ ಮಾಡಿ ಸಾಂತ್ವಾನ ಹೇಳಿದ್ದಾರೆ. ಅಲ್ಲದೆ ಜಿಲ್ಲೆಯ ಶಾಸಕರು ಹಾಗೂ ಪ್ರಮುಖ ನಾಯಕರು ಕರೆ ಮಾಡಿ ಧೈರ್ಯ ತುಂಬಿದ್ದಾರೆ.

ಒಟ್ಟಿನಲ್ಲಿ ದೇವರ ಸನ್ನಿಧಿಯಲ್ಲಿ ನಡೆದ ಈ ಹೈಡ್ರಾಮ ಪುತ್ತೂರು ರಾಜಕೀಯದಲ್ಲಿ ಹೊಸ ಸಂಚಲನ ಮೂಡಿಸಿದ್ದು, ಮುಂದಿನ ದಿನಗಳಲ್ಲಿ ಇದು ಯಾವ ತಿರುವು ಪಡೆಯಲಿದೆ ಎಂಬುದನ್ನು ಕಾದು ನೋಡಬೇಕಿದೆ.

ShareTweetSendShare
Join us on:

Related Posts

ಮೇ 1ರಿಂದ ಅಡುಗೆ ಅನಿಲ ಬೆಲೆ ಏರಿಕೆ ಫಿಕ್ಸ್? ಜನಸಾಮಾನ್ಯರ ಜೇಬಿಗೆ ಕತ್ತರಿ ಹಾಕಲಿರುವ ಹೊಸ ನಿಯಮಗಳು

ಮೇ 1ರಿಂದ ಅಡುಗೆ ಅನಿಲ ಬೆಲೆ ಏರಿಕೆ ಫಿಕ್ಸ್? ಜನಸಾಮಾನ್ಯರ ಜೇಬಿಗೆ ಕತ್ತರಿ ಹಾಕಲಿರುವ ಹೊಸ ನಿಯಮಗಳು

by Shwetha
April 28, 2026
0

ದೇಶದ ಜನತೆಗೆ ಮೇ ತಿಂಗಳ ಆರಂಭದಲ್ಲೇ ಬೆಲೆ ಏರಿಕೆಯ ಬಿಸಿ ತಟ್ಟುವ ಸಾಧ್ಯತೆ ದಟ್ಟವಾಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿನ ಏರಿಳಿತ ಹಾಗೂ ಯುದ್ಧದ ಪರಿಣಾಮವಾಗಿ ತೈಲ ಕಂಪನಿಗಳು ಮೇ...

ಗೃಹ ಜ್ಯೋತಿ : ಹೊಸ ಮನೆಯಲ್ಲಿ ಉಚಿತ ವಿದ್ಯುತ್ ಸೌಲಭ್ಯದ ಸರಾಸರಿ ಲೆಕ್ಕಾಚಾರ ಹೇಗಿರುತ್ತದೆ?

ಗೃಹ ಜ್ಯೋತಿ : ಹೊಸ ಮನೆಯಲ್ಲಿ ಉಚಿತ ವಿದ್ಯುತ್ ಸೌಲಭ್ಯದ ಸರಾಸರಿ ಲೆಕ್ಕಾಚಾರ ಹೇಗಿರುತ್ತದೆ?

by Shwetha
April 28, 2026
0

ರಾಜ್ಯ ಸರ್ಕಾರದ ಅತ್ಯಂತ ಜನಪ್ರಿಯ ಮತ್ತು ಮಹತ್ವಾಕಾಂಕ್ಷೆಯ ಯೋಜನೆಗಳಲ್ಲಿ ಒಂದಾದ ಗೃಹ ಜ್ಯೋತಿ ಯೋಜನೆಯು ಲಕ್ಷಾಂತರ ಕುಟುಂಬಗಳಿಗೆ ತಿಂಗಳಿಗೆ 200 ಯೂನಿಟ್‌ವರೆಗೆ ಉಚಿತ ವಿದ್ಯುತ್ ಒದಗಿಸುತ್ತಿದೆ. ಆದರೆ...

7 ಆಪ್ ಸಂಸದರ ಬಿಜೆಪಿ ಸೇರ್ಪಡೆಗೆ ಅನುಮೋದನೆ

7 ಆಪ್ ಸಂಸದರ ಬಿಜೆಪಿ ಸೇರ್ಪಡೆಗೆ ಅನುಮೋದನೆ

by Shwetha
April 28, 2026
0

ದೇಶದ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯಾಗಿ, ರಾಜ್ಯಸಭಾ ಅಧ್ಯಕ್ಷರು ಆಮ್ ಆದ್ಮಿ ಪಕ್ಷದ 7 ಸಂಸದರನ್ನು ಬಿಜೆಪಿ ಜೊತೆ ವಿಲೀನಗೊಳಿಸಲು ಅನುಮೋದನೆ ನೀಡಿದ್ದಾರೆ. ರಾಜ್ಯಸಭಾ ಸಚಿವಾಲಯ ಈ ಕುರಿತು...

ಮೈತ್ರಿಕೂಟದಲ್ಲಿ ಮಹಾ ಸ್ಫೋಟ: ಭ್ರಷ್ಟಾಚಾರದ ವಿಚಾರದಲ್ಲಿ ಮಮತಾ ಬ್ಯಾನರ್ಜಿ ಮೋದಿಗಿಂತ ಕಮ್ಮಿಯಿಲ್ಲ ಎಂದು ಗುಡುಗಿದ ರಾಹುಲ್ ಗಾಂಧಿ

ಮೈತ್ರಿಕೂಟದಲ್ಲಿ ಮಹಾ ಸ್ಫೋಟ: ಭ್ರಷ್ಟಾಚಾರದ ವಿಚಾರದಲ್ಲಿ ಮಮತಾ ಬ್ಯಾನರ್ಜಿ ಮೋದಿಗಿಂತ ಕಮ್ಮಿಯಿಲ್ಲ ಎಂದು ಗುಡುಗಿದ ರಾಹುಲ್ ಗಾಂಧಿ

by Shwetha
April 28, 2026
0

ಪಶ್ಚಿಮ ಬಂಗಾಳದ ಚುನಾವಣಾ ಕಣದಲ್ಲಿ ಈಗ ರಾಜಕೀಯ ಹೈಡ್ರಾಮಾ ಶುರುವಾಗಿದೆ. ರಾಷ್ಟ್ರಮಟ್ಟದಲ್ಲಿ ಬಿಜೆಪಿ ವಿರುದ್ಧ ಒಂದಾಗಿರುವ ಇಂಡಿಯಾ ಮೈತ್ರಿಕೂಟಕ್ಕೆ ಈಗ ರಾಜ್ಯಮಟ್ಟದಲ್ಲಿ ಬಹುದೊಡ್ಡ ಹೊಡೆತ ಬಿದ್ದಿದೆ. ಕಾಂಗ್ರೆಸ್...

ಸಚಿವ ಡಿ. ಸುಧಾಕರ್ ಆರೋಗ್ಯ ವಿಚಾರಿಸಿದ ಗೃಹ ಸಚಿವ

ಸಚಿವ ಡಿ. ಸುಧಾಕರ್ ಆರೋಗ್ಯ ವಿಚಾರಿಸಿದ ಗೃಹ ಸಚಿವ

by Shwetha
April 28, 2026
0

ಎಲೆಕ್ಟ್ರಾನಿಕ್ ಸಿಟಿ ಸಮೀಪದ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಚಿವ ಡಿ. ಸುಧಾಕರ್ ಅವರ ಆರೋಗ್ಯ ವಿಚಾರಿಸಲು ಗೃಹ ಸಚಿವ ಜಿ. ಪರಮೇಶ್ವರ್ ಇಂದು ಭೇಟಿ ನೀಡಿದರು....

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram