ಜಮ್ಮು ಮತ್ತು ಕಾಶ್ಮೀರ ಎಂದೆಂದಿಗೂ ಭಾರತದ ಅವಿಭಾಜ್ಯ ಅಂಗವೆಂದು ಭಾರತದ ವಿದೇಶಾಂಗ ಸಚಿವಾಲಯದ ಕಾರ್ಯದರ್ಶಿ ವಿಕಾಸ್ ಸ್ವರೂಪ್ ಪ್ರತಿಪಾದಿಸಿದ್ದಾರೆ.
ಕಾಶ್ಮೀರ ವಿಚಾರದಲ್ಲಿ ಅಂತರರಾಷ್ಟ್ರೀಯ ಸಮುದಾಯ ಮಧ್ಯಪ್ರವೇಶಿಸಬೇಕು ಎಂದು ಪಾಕಿಸ್ತಾನದ ಮಾನವ ಹಕ್ಕು ಸಚಿವ ವಿಶ್ವಸಂಸ್ಥೆಯ 43ನೇ ಮಾನವಹಕ್ಕುಗಳ ಅಧಿವೇಶನದಲ್ಲಿ ಒತ್ತಾಯಿಸಿದ ಬೆನ್ನಲ್ಲೇ ಭಾರತದ ವಿದೇಶಾಂಗ ಸಚಿವಾಲಯದ ಪಶ್ಚಿಮ ವಿಭಾಗದ ಕಾರ್ಯದರ್ಶಿ ವಿಕಾಸ್ ಸ್ವರೂಪ್ ಜಮ್ಮು-ಕಾಶ್ಮೀರ ಎಂದೆಂದಿಗೂ ಭಾರತದ ಅವಿಭಾಜ್ಯ ಅಂಗವಾಗಿಯೇ ಉಳಿಯಲಿದೆ ಎಂದು ಪ್ರತಿಕ್ರಿಯೆ ನೀಡಿದ್ದಾರೆ.
ಪಾಕಿಸ್ತಾನ ಜಗತ್ತಿನಲ್ಲೇ ಭಯೋತ್ಪಾದನೆ ಮತ್ತು ಹಿಂಸೆಯನ್ನು ರಪ್ತು ಮಾಡುವ ಅಗ್ರ ರಾಷ್ಟ್ರವೆಂದು ಕಿಡಿಕಾರಿದ ವಿಕಾಸ್ ಸ್ವರೂಪ್ ಅದು ಮೊದಲು ಬೇರೆಯವರಿಗೆ ಉಪದೇಶ ಕೊಡುವುದನ್ನು ಬಿಟ್ಟು, ತನ್ನ ಪರಿಸ್ಥಿತಿ ಸುಧಾರಿಸಿಕೊಳ್ಳುವ ಪ್ರಯತ್ನ ಮಾಡಬೇಕು ಎಂದು ಪಾಕಿಸ್ತಾನಕ್ಕೆ ಮಾತಿನ ಚಾವಟಿ ಬೀಸಿದರು.
ಜಮ್ಮು ಕಾಶ್ಮೀರವನ್ನು ವಿಭಜಿಸಿ ಕೇಂದ್ರಾಡಳಿತ ಮಾಡಿರುವುದು ಭಾರತದ ಅಂತರಿಕ ವಿಚಾರವಾಗಿದ್ದು, ಈಗಾಗಲೇ ಪರಿಸ್ಥಿತಿ ಪೂರ್ಣ ನಿಯಂತ್ರಣದಲ್ಲಿದೆ ಎಂದು ಹೇಳಿದರು.
fifa wolrd cup 2026- ಫಿಫಾ ವಿಶ್ವಕಪ್ನ ಮುಕುಟವಿಲ್ಲದ ಫುಟ್ಬಾಲ್ ಜಗತ್ತಿನ ಚಕ್ರವರ್ತಿಕ್ರಿಸ್ಟಿಯಾನೊ ರೊನಾಲ್ಡೊ… 🐍⚽🔥..!
ಫಿಫಾ ವಿಶ್ವಕಪ್ನ ಮುಕುಟವಿಲ್ಲದ ಫುಟ್ಬಾಲ್ ಜಗತ್ತಿನ ಚಕ್ರವರ್ತಿಕ್ರಿಸ್ಟಿಯಾನೊ ರೊನಾಲ್ಡೊ..! ಆ ಒಂದು ಸೋಲು..! ಆ ಒಂದು ಪಂದ್ಯ..! ತನ್ನ ಪಾಲಿನ ಫಿಫಾ ವಿಶ್ವಕಪ್ನ ಕೊನೆಯ ಪಂದ್ಯವಾಗಿರಲಿಲ್ಲ. ಅದು...








