ADVERTISEMENT
Saturday, April 11, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ರಾಜ್ಯ

ದೆಹಲಿ ಸಂದೇಶ ಬಂತಾ? ರಾಜ್ಯದಲ್ಲಿ ಸಿಎಂ ಬದಲಾವಣೆ ಚರ್ಚೆಗೆ ತುಪ್ಪ ಸುರಿದ ಡಿಕೆ ಸಹೋದರರ ನಡೆ

Did Delhi's message come? DK brothers' move has fueled the debate on CM change in the state

Shwetha by Shwetha
January 15, 2026
in ರಾಜ್ಯ, Newsbeat, Politics, State, ರಾಜಕೀಯ
Share on FacebookShare on TwitterShare on WhatsappShare on Telegram

ಕರ್ನಾಟಕ ಕಾಂಗ್ರೆಸ್ ಸರ್ಕಾರದಲ್ಲಿ ಅಧಿಕಾರ ಹಂಚಿಕೆಯ ಕಿಚ್ಚು ಮತ್ತೆ ಹೊಗೆಯಾಡಲು ಶುರುವಾಗಿದೆ. ಲೋಕಸಭಾ ಚುನಾವಣೆ ಬಳಿಕ ಕೊಂಚ ತಣ್ಣಗಾಗಿದ್ದ ಮುಖ್ಯಮಂತ್ರಿ ಕುರ್ಚಿ ಬದಲಾವಣೆ ಚರ್ಚೆ ಇದೀಗ ಏಕಾಏಕಿ ಮುನ್ನೆಲೆಗೆ ಬಂದಿದೆ. ಇದಕ್ಕೆ ಪ್ರಮುಖ ಕಾರಣ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಅವರ ಸಹೋದರ, ಮಾಜಿ ಸಂಸದ ಡಿ.ಕೆ. ಸುರೇಶ್ ಅವರು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿರುವ ಸಾಲುಗಳು. ರಾಹುಲ್ ಗಾಂಧಿ ರಾಜ್ಯಕ್ಕೆ ಬಂದು ಹೋದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿರುವುದು ರಾಜಕೀಯ ಪಡಸಾಲೆಯಲ್ಲಿ ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

ರಾಹುಲ್ ಗಾಂಧಿ ಭೇಟಿ ಬಳಿಕ ಬದಲಾಯ್ತಾ ಚಿತ್ರಣ

Related posts

ಮೋದಿ ಮಾಡಿದ್ದು ಸಾಲ ಅಲ್ವಾ ಬಜೆಟ್ ಟೀಕಿಸಿದ ಬಿಜೆಪಿಗೆ ಪ್ರಿಯಾಂಕ್ ಖರ್ಗೆ ನೇರ ಪ್ರಶ್ನೆ

ಮೋದಿಗೆ ಸಾಮಾನ್ಯ ಜ್ಞಾನವಿಲ್ಲ ತಿಲಕ ಇಡುವ ಕೇಸರಿ ಬರುವುದೂ ಮುಸ್ಲಿಂ ರಾಷ್ಟ್ರಗಳಿಂದಲೇ ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ

April 11, 2026
ಯುಪಿಐ ಪಾವತಿ ನಿಯಮಗಳಲ್ಲಿ ಮಹತ್ವದ ಬದಲಾವಣೆ ಇನ್ನು ಹತ್ತು ಸಾವಿರಕ್ಕಿಂತ ಹೆಚ್ಚಿನ ಹಣ ಕಳುಹಿಸಿದರೆ ಒಂದು ಗಂಟೆ ಕಾಯಲೇಬೇಕು : ಕಿಲ್ ಸ್ವಿಚ್ ಆಯ್ಕೆ ಬಗ್ಗೆ ನಿಮ್ಗೆ ಗೊತ್ತಾ?

ಯುಪಿಐ ಪಾವತಿ ನಿಯಮಗಳಲ್ಲಿ ಮಹತ್ವದ ಬದಲಾವಣೆ ಇನ್ನು ಹತ್ತು ಸಾವಿರಕ್ಕಿಂತ ಹೆಚ್ಚಿನ ಹಣ ಕಳುಹಿಸಿದರೆ ಒಂದು ಗಂಟೆ ಕಾಯಲೇಬೇಕು : ಕಿಲ್ ಸ್ವಿಚ್ ಆಯ್ಕೆ ಬಗ್ಗೆ ನಿಮ್ಗೆ ಗೊತ್ತಾ?

April 11, 2026

ಇತ್ತೀಚೆಗೆ ರಾಜ್ಯಕ್ಕೆ ಭೇಟಿ ನೀಡಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಮೈಸೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ಒಟ್ಟಿಗೆ ಭೇಟಿಯಾಗಿದ್ದರು. ಅಧಿಕಾರ ಹಂಚಿಕೆ ಗೊಂದಲದ ಬಳಿಕ ಇಬ್ಬರು ನಾಯಕರನ್ನು ರಾಹುಲ್ ಒಟ್ಟಿಗೆ ಭೇಟಿಯಾಗಿದ್ದು ಇದೇ ಮೊದಲು. ಈ ಸಂದರ್ಭದಲ್ಲಿ ನಡೆದ ಐದು ನಿಮಿಷಗಳ ರಹಸ್ಯ ಮಾತುಕತೆ ಮತ್ತು ಡಿಕೆಶಿಯವರನ್ನು ಪ್ರತ್ಯೇಕವಾಗಿ ಕರೆದು ಮಾತನಾಡಿಸಿದ ರೀತಿ ಈಗ ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ರಾಹುಲ್ ಗಾಂಧಿ ಭೇಟಿಯ ನಂತರವಷ್ಟೇ ಡಿಕೆ ಸಹೋದರರ ಬಾಡಿ ಲ್ಯಾಂಗ್ವೇಜ್ ಬದಲಾಗಿದ್ದು, ಹೈಕಮಾಂಡ್ ಮಟ್ಟದಲ್ಲಿ ಮಹತ್ವದ ಚರ್ಚೆಯಾಗಿರುವ ಸುಳಿವು ನೀಡಿದೆ.

ಡಿಕೆ ಸುರೇಶ್ ನೀಡಿದ ಯಶಸ್ಸಿನ ಸುಳಿವು

ತಮ್ಮ ಸಹೋದರ ಡಿ.ಕೆ. ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಸ್ಥಾನದಲ್ಲಿ ನೋಡಬೇಕೆಂಬುದು ಡಿ.ಕೆ. ಸುರೇಶ್ ಅವರ ಬಹುದಿನಗಳ ಕನಸು. ಇದೀಗ ಡಿಕೆಶಿ ಪೋಸ್ಟ್ ಬೆನ್ನಲ್ಲೇ ಸುರೇಶ್ ಕೂಡ ಸಾಮಾಜಿಕ ಜಾಲತಾಣಗಳಲ್ಲಿ ಅರ್ಥಗರ್ಭಿತ ಸಾಲುಗಳನ್ನು ಬರೆದುಕೊಂಡಿದ್ದಾರೆ. ಯಶಸ್ಸಿನ ಮೊದಲ ಹೆಜ್ಜೆಯೇ ಪ್ರಯತ್ನ, ಸತತ ಪ್ರಯತ್ನದ ಫಲವೇ ಯಶಸ್ಸು ಎಂಬ ಸುರೇಶ್ ಅವರ ಮಾತುಗಳು ಬರೀ ತತ್ವದ ಮಾತಾಗಿರದೆ, ರಾಜಕೀಯವಾಗಿ ಗುರಿ ತಲುಪುವ ವಿಶ್ವಾಸದಂತಿದೆ. ಅಣ್ಣನ ಪ್ರಯತ್ನಕ್ಕೆ ತಮ್ಮನ ಬೆಂಬಲ ಸದಾ ಇದೆ ಎಂಬುದನ್ನು ಸಾರುವ ಜೊತೆಗೆ, ಸಿಎಂ ಕುರ್ಚಿಯ ಹೋರಾಟದಲ್ಲಿ ನಾವು ಗೆದ್ದೇ ತೀರುತ್ತೇವೆ ಎಂಬ ಸಂದೇಶವನ್ನು ಅವರು ರವಾನಿಸಿದಂತಿದೆ.

ಪ್ರಯತ್ನ ಮತ್ತು ಪ್ರಾರ್ಥನೆಯ ನಡುವಿನ ಗೊಂದಲ

ಈಗಾಗಲೇ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹಂಚಿಕೊಂಡ ಪೋಸ್ಟ್ ರಾಜ್ಯ ಕಾಂಗ್ರೆಸ್ ವಲಯದಲ್ಲಿ ಸಂಚಲನ ಮೂಡಿಸಿತ್ತು. ಪ್ರಯತ್ನ ವಿಫಲ ಆದ್ರೂ ಪ್ರಾರ್ಥನೆ ವಿಫಲ ಆಗುವುದಿಲ್ಲ ಎಂಬ ಒಕ್ಕಣೆಯೊಂದಿಗೆ ಅವರು ದೇವರ ಮೊರೆ ಹೋಗಿರುವ ಫೋಟೋ ಹಂಚಿಕೊಂಡಿದ್ದರು. ಇದರ ರಾಜಕೀಯ ಅರ್ಥವೇನೆಂಬುದೇ ಈಗಿನ ಚರ್ಚೆಯ ವಿಷಯ. ಇಲ್ಲಿಯವರೆಗೆ ತಾವು ಪಟ್ಟ ಶ್ರಮ ಮತ್ತು ಹೈಕಮಾಂಡ್ ಬಳಿ ಮಾಡಿದ ಪ್ರಯತ್ನಗಳು ಒಂದು ಹಂತಕ್ಕೆ ಬಂದಿದ್ದು, ಇನ್ನುಳಿದದ್ದು ದೈವೇಚ್ಛೆ ಅಥವಾ ಹೈಕಮಾಂಡ್ ಕೃಪೆ ಎಂಬರ್ಥದಲ್ಲಿ ಡಿಕೆಶಿ ಈ ಪೋಸ್ಟ್ ಹಾಕಿರಬಹುದೇ ಎಂಬ ಪ್ರಶ್ನೆ ಮೂಡಿದೆ. ಸಿಎಂ ಕುರ್ಚಿಗಾಗಿ ದೆಹಲಿ ನಾಯಕರ ಮನವೊಲಿಸುವ ಪ್ರಯತ್ನದ ಜೊತೆಗೆ ದೇವರ ಮೊರೆ ಹೋಗಿರುವುದು ತೋರಿಸುತ್ತಿದೆ.

ದೆಹಲಿ ಅಂಗಳಕ್ಕೆ ಶಿಫ್ಟ್ ಆಗಲಿದೆಯೇ ರಾಜಕೀಯದಾಟ

ಸದ್ಯದ ಬೆಳವಣಿಗೆಗಳನ್ನು ಗಮನಿಸಿದರೆ, ಮುಂದಿನ ದಿನಗಳಲ್ಲಿ ರಾಜ್ಯ ರಾಜಕಾರಣದ ಚೆಂಡು ದೆಹಲಿ ಅಂಗಳಕ್ಕೆ ವರ್ಗಾವಣೆಯಾಗುವ ಸಾಧ್ಯತೆ ದಟ್ಟವಾಗಿದೆ. ರಾಹುಲ್ ಗಾಂಧಿ ಅವರು ಡಿಕೆಶಿಯವರನ್ನು ಪ್ರತ್ಯೇಕವಾಗಿ ಮಾತನಾಡಿಸಿರುವುದು ಮತ್ತು ಶೀಘ್ರವೇ ದೆಹಲಿಗೆ ಬರುವಂತೆ ಸೂಚನೆ ನೀಡಿರಬಹುದು ಎಂದು ವಿಶ್ಲೇಷಿಸಲಾಗುತ್ತಿದೆ. ಎರಡೂವರೆ ವರ್ಷಗಳ ಅಧಿಕಾರ ಹಂಚಿಕೆ ಸೂತ್ರದ ಬಗ್ಗೆ ರಾಹುಲ್ ಗಾಂಧಿ ಬಳಿ ಡಿಕೆ ಶಿವಕುಮಾರ್ ಪ್ರಸ್ತಾಪ ಮಾಡಿರಬಹುದು ಎನ್ನಲಾಗಿದ್ದು, ಹೈಕಮಾಂಡ್ ಯಾವ ತೀರ್ಮಾನ ತೆಗೆದುಕೊಳ್ಳಲಿದೆ ಎಂಬುದು ಕುತೂಹಲಕಾರಿಯಾಗಿದೆ.

ಒಟ್ಟಾರೆಯಾಗಿ, ಡಿಕೆ ಬ್ರದರ್ಸ್ ಅವರ ಈ ಮಾರ್ಮಿಕ ಪೋಸ್ಟ್​ಗಳು ಕಾಂಗ್ರೆಸ್ ಪಾಳಯದಲ್ಲಿ ನಿದ್ದೆಗೆಡಿಸಿರುವುದಂತೂ ಸತ್ಯ. ಇದು ಕೇವಲ ಸಾಂದರ್ಭಿಕ ಪೋಸ್ಟ್​ಗಳೋ ಅಥವಾ ನಾಯಕತ್ವ ಬದಲಾವಣೆಯ ಮುನ್ಸೂಚನೆಯೋ ಎಂಬುದು ಕೆಲವೇ ದಿನಗಳಲ್ಲಿ ತಿಳಿಯಲಿದೆ.

ShareTweetSendShare
Join us on:

Related Posts

ಮೋದಿ ಮಾಡಿದ್ದು ಸಾಲ ಅಲ್ವಾ ಬಜೆಟ್ ಟೀಕಿಸಿದ ಬಿಜೆಪಿಗೆ ಪ್ರಿಯಾಂಕ್ ಖರ್ಗೆ ನೇರ ಪ್ರಶ್ನೆ

ಮೋದಿಗೆ ಸಾಮಾನ್ಯ ಜ್ಞಾನವಿಲ್ಲ ತಿಲಕ ಇಡುವ ಕೇಸರಿ ಬರುವುದೂ ಮುಸ್ಲಿಂ ರಾಷ್ಟ್ರಗಳಿಂದಲೇ ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ

by Shwetha
April 11, 2026
0

ಸಚಿವ ಪ್ರಿಯಾಂಕ್ ಖರ್ಗೆ ಅವರು ಕೇಂದ್ರ ಸರ್ಕಾರದ ವಿರುದ್ಧ ಕೆಂಡಾಮಂಡಲವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕನಿಷ್ಠ ಸಾಮಾನ್ಯ ಪ್ರಜ್ಞೆಯೂ ಇಲ್ಲ ಎಂದು ನೇರವಾಗಿ ಟೀಕಿಸಿದ್ದಾರೆ. ಅಲ್ಪಸಂಖ್ಯಾತರ...

ಯುಪಿಐ ಪಾವತಿ ನಿಯಮಗಳಲ್ಲಿ ಮಹತ್ವದ ಬದಲಾವಣೆ ಇನ್ನು ಹತ್ತು ಸಾವಿರಕ್ಕಿಂತ ಹೆಚ್ಚಿನ ಹಣ ಕಳುಹಿಸಿದರೆ ಒಂದು ಗಂಟೆ ಕಾಯಲೇಬೇಕು : ಕಿಲ್ ಸ್ವಿಚ್ ಆಯ್ಕೆ ಬಗ್ಗೆ ನಿಮ್ಗೆ ಗೊತ್ತಾ?

ಯುಪಿಐ ಪಾವತಿ ನಿಯಮಗಳಲ್ಲಿ ಮಹತ್ವದ ಬದಲಾವಣೆ ಇನ್ನು ಹತ್ತು ಸಾವಿರಕ್ಕಿಂತ ಹೆಚ್ಚಿನ ಹಣ ಕಳುಹಿಸಿದರೆ ಒಂದು ಗಂಟೆ ಕಾಯಲೇಬೇಕು : ಕಿಲ್ ಸ್ವಿಚ್ ಆಯ್ಕೆ ಬಗ್ಗೆ ನಿಮ್ಗೆ ಗೊತ್ತಾ?

by Shwetha
April 11, 2026
0

ಡಿಜಿಟಲ್ ಪಾವತಿ ವ್ಯವಸ್ಥೆಯಲ್ಲಿ ದೇಶದಾದ್ಯಂತ ಕ್ರಾಂತಿ ಮಾಡಿರುವ ಯುಪಿಐ ಪಾವತಿ ಕ್ರಮದಲ್ಲಿ ಶೀಘ್ರದಲ್ಲೇ ದೊಡ್ಡ ಮಟ್ಟದ ಬದಲಾವಣೆಯಾಗುವ ಸಾಧ್ಯತೆ ಇದೆ. ನೀವು ಪದೇ ಪದೇ ಹತ್ತು ಸಾವಿರ...

‘ಝೂಂಬಿ ಡ್ರಗ್ಸ್’ ಸುಳ್ಳು ವಿಡಿಯೋ ವೈರಲ್: ಆರೋಪಿಯ ಬಂಧನ

‘ಝೂಂಬಿ ಡ್ರಗ್ಸ್’ ಸುಳ್ಳು ವಿಡಿಯೋ ವೈರಲ್: ಆರೋಪಿಯ ಬಂಧನ

by Shwetha
April 11, 2026
0

‘ಝೂಂಬಿ ಡ್ರಗ್ಸ್’ ಎಂದು ಹೇಳಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿದ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಒಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ತಿಳಿಸಿದ್ದಾರೆ....

ಅಮೆರಿಕ-ಇರಾನ್ ಶಾಂತಿ ಮಾತುಕತೆ ಮುಂದೂಡಿಕೆ; ಉದ್ವಿಗ್ನತೆ ಹೆಚ್ಚಳ

ಅಮೆರಿಕ-ಇರಾನ್ ಶಾಂತಿ ಮಾತುಕತೆ ಮುಂದೂಡಿಕೆ; ಉದ್ವಿಗ್ನತೆ ಹೆಚ್ಚಳ

by Shwetha
April 11, 2026
0

ಪಾಕಿಸ್ತಾನದಲ್ಲಿ ಇಂದು ಅಥವಾ ನಾಳೆ ನಡೆಯಬೇಕಿದ್ದ ಅಮೆರಿಕ ಮತ್ತು ಇರಾನ್ ನಡುವಿನ ಸಂಧಾನ ಸಭೆ ಮುಂದೂಡಿಕೆಯಾಗಿದೆ. ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್‌ನಲ್ಲಿ ಈ ಮಹತ್ವದ ಶಾಂತಿ ಮಾತುಕತೆ ನಡೆಯಬೇಕಾಗಿತ್ತು....

ಆಘಾತಕಾರಿ ಘಟನೆ: ತರಗತಿಯಲ್ಲೇ ಬಾಲಕಿಯ ಮೇಲೆ ಶಿಕ್ಷಕನಿಂದ ದೌರ್ಜನ್ಯ ಆರೋಪ

ಆಘಾತಕಾರಿ ಘಟನೆ: ತರಗತಿಯಲ್ಲೇ ಬಾಲಕಿಯ ಮೇಲೆ ಶಿಕ್ಷಕನಿಂದ ದೌರ್ಜನ್ಯ ಆರೋಪ

by Shwetha
April 11, 2026
0

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಪಟ್ಟಣದಲ್ಲಿ ಅತ್ಯಂತ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. 16 ವರ್ಷದ ಬಾಲಕಿಯ ಮೇಲೆ ಗಣಿತ ಶಿಕ್ಷಕನೊಬ್ಬ ತರಗತಿ ಕೊಠಡಿಯಲ್ಲೇ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram