ADVERTISEMENT
Friday, February 27, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ರಾಜ್ಯ

ಕುರ್ಚಿ ಬಿಡಲ್ಲ ಎಂಬ ಖಡಕ್ ಸಂದೇಶ ರವಾನಿಸಿದ ಸಿದ್ದರಾಮಯ್ಯ: ಕಾವೇರಿ ನಿವಾಸ ನವೀಕರಣದ ಹಿಂದಿದೆ ರೋಚಕ ರಾಜಕೀಯ ಲೆಕ್ಕಾಚಾರ

Shwetha by Shwetha
February 27, 2026
in ರಾಜ್ಯ, Newsbeat, Politics, State, ರಾಜಕೀಯ
Share on FacebookShare on TwitterShare on WhatsappShare on Telegram

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಅಧಿಕಾರ ಹಂಚಿಕೆಯ ಕಿತ್ತಾಟ ಜೋರಾಗಿರುವ ಹೊತ್ತಿನಲ್ಲೇ, ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ರಾಜಕೀಯ ಎದುರಾಳಿಗಳಿಗೆ ಮತ್ತು ಸ್ವಪಕ್ಷೀಯ ನಾಯಕರಿಗೆ ಪರೋಕ್ಷವಾಗಿ ಪ್ರಬಲ ಸಂದೇಶವೊಂದನ್ನು ರವಾನಿಸಿದ್ದಾರೆ. ಮುಖ್ಯಮಂತ್ರಿ ಬದಲಾವಣೆ ಎಂಬ ಊಹಾಪೋಹಗಳು ದಟ್ಟವಾಗಿ ಹಬ್ಬಿರುವ ಸಂದರ್ಭದಲ್ಲೇ, ಸಿಎಂ ತಮ್ಮ ಅಧಿಕೃತ ನಿವಾಸ ಕಾವೇರಿಯನ್ನು ನವೀಕರಣಗೊಳಿಸುವ ಮೂಲಕ ಪೂರ್ಣಾವಧಿಗೂ ನಾನೇ ಬಾಸ್ ಎಂಬುದನ್ನು ಸಾಬೀತುಪಡಿಸಲು ಮುಂದಾಗಿದ್ದಾರೆ.

ಪವರ್ ಫೈಟ್ ನಡುವೆ ಕಾವೇರಿ ನವೀಕರಣದ ಮರ್ಮವೇನು

Related posts

ಬಾಗಲಕೋಟೆ ಕಲ್ಲು ತೂರಾಟ ಪ್ರಕರಣ: NIA ತನಿಖೆಗೆ ಅಮಿತ್ ಶಾಗೆ ಶ್ರೀರಾಮುಲು ಪತ್ರ

ಬಾಗಲಕೋಟೆ ಕಲ್ಲು ತೂರಾಟ ಪ್ರಕರಣ: NIA ತನಿಖೆಗೆ ಅಮಿತ್ ಶಾಗೆ ಶ್ರೀರಾಮುಲು ಪತ್ರ

February 27, 2026
ಬಿಜೆಪಿ ಅವಧಿಯ ಉರ್ದು ಜಾಹೀರಾತು ನೆನಪಿಸಿದ ಸಿಎಂ : ಅಂದು ತುಷ್ಟೀಕರಣ ಅನ್ನಿಸಲಿಲ್ಲವೇ ಸಾಕ್ಷಿ ಸಮೇತ ಬಿಜೆಪಿಯ ಬಣ್ಣ ಬಯಲು ಮಾಡಿದ ಸಿದ್ದರಾಮಯ್ಯ

ಬಿಜೆಪಿ ಅವಧಿಯ ಉರ್ದು ಜಾಹೀರಾತು ನೆನಪಿಸಿದ ಸಿಎಂ : ಅಂದು ತುಷ್ಟೀಕರಣ ಅನ್ನಿಸಲಿಲ್ಲವೇ ಸಾಕ್ಷಿ ಸಮೇತ ಬಿಜೆಪಿಯ ಬಣ್ಣ ಬಯಲು ಮಾಡಿದ ಸಿದ್ದರಾಮಯ್ಯ

February 27, 2026

ಪ್ರಸ್ತುತ ರಾಜ್ಯ ರಾಜಕೀಯದಲ್ಲಿ ಸಿಎಂ ಬದಲಾವಣೆ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಅಧಿಕಾರ ಹಸ್ತಾಂತರದ ಚರ್ಚೆಗಳು ಮುನ್ನೆಲೆಯಲ್ಲಿವೆ. ಇಂತಹ ಅನಿಶ್ಚಿತತೆಯ ವಾತಾವರಣದಲ್ಲಿ ಮುಖ್ಯಮಂತ್ರಿಗಳು ತಮ್ಮ ಸರ್ಕಾರಿ ನಿವಾಸದ ಗ್ರೌಂಡ್ ಫ್ಲೋರ್ ನವೀಕರಣಕ್ಕೆ ಕೈಹಾಕಿರುವುದು ಅಚ್ಚರಿ ಮೂಡಿಸಿದೆ. ಸಾಮಾನ್ಯವಾಗಿ ಸರ್ಕಾರ ಅಧಿಕಾರಕ್ಕೆ ಬಂದ ಹೊಸದರಲ್ಲಿ ನವೀಕರಣ ಮಾಡುವುದು ವಾಡಿಕೆ. ಸಿದ್ದರಾಮಯ್ಯನವರು ಅಧಿಕಾರ ಸ್ವೀಕರಿಸಿದ ಆರಂಭದಲ್ಲೇ ಒಮ್ಮೆ ನವೀಕರಣ ಮಾಡಿಸಿದ್ದರು. ಆದರೆ ಈಗ ಅಧಿಕಾರ ಹಂಚಿಕೆಯ ಕೂಗು ಜೋರಾಗಿರುವಾಗಲೇ ಮತ್ತೆ ಲಕ್ಷಾಂತರ ರೂಪಾಯಿ ವೆಚ್ಚದಲ್ಲಿ ನವೀಕರಣ ಕಾರ್ಯ ಭರದಿಂದ ಸಾಗುತ್ತಿರುವುದು, ನಾನು ಕುರ್ಚಿ ಬಿಟ್ಟು ಕದಲುವುದಿಲ್ಲ ಎಂಬ ಸಂದೇಶವನ್ನು ರವಾನಿಸಿದಂತಿದೆ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.

ದಲಿತ ಸಿಎಂ ಅಸ್ತ್ರ ಪ್ರಯೋಗಿಸಿದ ಸಿಎಂ ಆಪ್ತ ವಲಯ

ಒಂದೆಡೆ ಸಿದ್ದರಾಮಯ್ಯ ಪೂರ್ಣಾವಧಿಯ ಸಂದೇಶ ನೀಡುತ್ತಿದ್ದರೆ, ಮತ್ತೊಂದೆಡೆ ಕಾಂಗ್ರೆಸ್ ಒಳಾಂಗಣದಲ್ಲಿ ದಲಿತ ಸಿಎಂ ಕೂಗು ಮತ್ತೆ ಪ್ರಬಲವಾಗಿ ಕೇಳಿಬರುತ್ತಿದೆ. ಇದು ಕೇವಲ ಕೂಗಲ್ಲ, ಬದಲಾಗಿ ಸಿಎಂ ಬದಲಾವಣೆಯ ಅನಿವಾರ್ಯತೆ ಎದುರಾದರೆ ಅಧಿಕಾರ ಬೇರೆಯವರ ಪಾಲಾಗಬಾರದು ಎಂಬ ರಣತಂತ್ರದ ಭಾಗವಾಗಿದೆ.

ಮುಖ್ಯಮಂತ್ರಿ ಸ್ಥಾನದಲ್ಲಿ ಸಿದ್ದರಾಮಯ್ಯನವರೇ ಮುಂದುವರಿಯಬೇಕು ಎಂಬುದು ದಲಿತ ನಾಯಕರ ಮೊದಲ ನಿಲುವಾಗಿದೆ. ಒಂದು ವೇಳೆ ಹೈಕಮಾಂಡ್ ಬದಲಾವಣೆಗೆ ಮುಂದಾದರೆ ಅಥವಾ ಕಾನೂನು ಸಂಕಷ್ಟಗಳಿಂದ ಅನಿವಾರ್ಯತೆ ಸೃಷ್ಟಿಯಾದರೆ, ಆ ಸ್ಥಾನ ದಲಿತರಿಗೆ ಸಿಗಬೇಕು ಎಂದು ಹಕ್ಕು ಮಂಡಿಸಲು ಸಿದ್ಧತೆ ನಡೆದಿದೆ. ಈ ಮೂಲಕ ಒಕ್ಕಲಿಗ ಸಮುದಾಯದ ಡಿ.ಕೆ. ಶಿವಕುಮಾರ್ ಅವರ ಸಿಎಂ ಕನಸಿಗೆ ತಡೆ ಒಡ್ಡುವುದು ಈ ತಂತ್ರದ ಹಿಂದಿನ ಉದ್ದೇಶ ಎನ್ನಲಾಗುತ್ತಿದೆ.

ಡಾ ಜಿ ಪರಮೇಶ್ವರ್ ಪರ ನಿಂತ ಪ್ರಭಾವಿ ಸಚಿವರು

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ರಾಜ್ಯ ರಾಜಕಾರಣಕ್ಕೆ ಮರಳದಿದ್ದರೆ, ದಲಿತ ಕೋಟಾದ ಅಡಿಯಲ್ಲಿ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರೇ ಮುಂದಿನ ಮುಖ್ಯಮಂತ್ರಿಯಾಗಬೇಕು ಎಂದು ದಲಿತ ಸಮುದಾಯದ ನಾಯಕರು ನಿರ್ಧರಿಸಿದ್ದಾರೆ. ಸಚಿವರಾದ ಎಚ್.ಸಿ. ಮಹದೇವಪ್ಪ, ಸತೀಶ್ ಜಾರಕಿಹೊಳಿ ಮತ್ತು ಕೆ.ಎನ್. ರಾಜಣ್ಣ ಸೇರಿದಂತೆ ಪ್ರಭಾವಿ ನಾಯಕರು ಪರಮೇಶ್ವರ್ ಅವರಿಗೆ ಬೆಂಬಲ ಸೂಚಿಸಿದ್ದು, ಈ ಕುರಿತು ಹೈಕಮಾಂಡ್ ಮೇಲೆ ಒತ್ತಡ ಹೇರಲು ರಹಸ್ಯ ಸಭೆಗಳನ್ನು ನಡೆಸಿ ಯೋಜನೆ ರೂಪಿಸಿದ್ದಾರೆ ಎನ್ನಲಾಗಿದೆ.

2028ರ ಅಧಿಕಾರದ ಗದ್ದುಗೆ ಮೇಲೆ ಕುಮಾರಸ್ವಾಮಿ ಕಣ್ಣು

ಕಾಂಗ್ರೆಸ್ ಮನೆಯಲ್ಲಿ ಅಧಿಕಾರಕ್ಕಾಗಿ ಕುಸ್ತಿ ನಡೆಯುತ್ತಿದ್ದರೆ, ಇತ್ತ ಎನ್‍ಡಿಎ ಮೈತ್ರಿಕೂಟದಲ್ಲಿಯೂ ಮುಂದಿನ ಮುಖ್ಯಮಂತ್ರಿ ಯಾರು ಎಂಬ ಚರ್ಚೆ ಶುರುವಾಗಿದೆ. ಮುಂಬರುವ 2 ಒ 2 8ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಕೂಟ ಅಧಿಕಾರಕ್ಕೆ ಬರಲಿದ್ದು, ಆಗ ಎಚ್.ಡಿ. ಕುಮಾರಸ್ವಾಮಿ ಅವರೇ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ನಿಖಿಲ್ ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಸ್ವತಃ ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಕೂಡ, ಮುಖ್ಯಮಂತ್ರಿ ರೇಸ್ ನಲ್ಲಿ ಬಹಳ ಜನ ಇದ್ದಾರೆ, ನಾನೂ ಕೂಡ ಆಕಾಂಕ್ಷಿ ಎಂದು ಹೇಳುವ ಮೂಲಕ ತಮ್ಮ ಮನದಾಳದ ಇಚ್ಛೆಯನ್ನು ಬಹಿರಂಗಪಡಿಸಿದ್ದಾರೆ.

ಒಟ್ಟಾರೆಯಾಗಿ, ಕಾವೇರಿ ನಿವಾಸದ ನವೀಕರಣ, ದಲಿತ ಸಿಎಂ ದಾಳ ಮತ್ತು ವಿರೋಧ ಪಕ್ಷದ ಭವಿಷ್ಯದ ಲೆಕ್ಕಾಚಾರಗಳು ರಾಜ್ಯ ರಾಜಕಾರಣವನ್ನು ಕುತೂಹಲದ ಘಟ್ಟಕ್ಕೆ ತಂದು ನಿಲ್ಲಿಸಿವೆ.

ShareTweetSendShare
Join us on:

Related Posts

ಬಾಗಲಕೋಟೆ ಕಲ್ಲು ತೂರಾಟ ಪ್ರಕರಣ: NIA ತನಿಖೆಗೆ ಅಮಿತ್ ಶಾಗೆ ಶ್ರೀರಾಮುಲು ಪತ್ರ

ಬಾಗಲಕೋಟೆ ಕಲ್ಲು ತೂರಾಟ ಪ್ರಕರಣ: NIA ತನಿಖೆಗೆ ಅಮಿತ್ ಶಾಗೆ ಶ್ರೀರಾಮುಲು ಪತ್ರ

by Shwetha
February 27, 2026
0

ಬಾಗಲಕೋಟೆಯಲ್ಲಿ ನಡೆದ ಶಿವಾಜಿ ಜಯಂತಿ ಮೆರವಣಿಗೆಯ ವೇಳೆ ಕಲ್ಲು ತೂರಾಟ ಹಾಗೂ ಚಪ್ಪಲಿ ಎಸೆದಿರುವ ಘಟನೆಗೆ ಸಂಬಂಧಿಸಿದಂತೆ ಮಾಜಿ ಸಚಿವ ಶ್ರೀರಾಮುಲು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ...

ಬಿಜೆಪಿ ಅವಧಿಯ ಉರ್ದು ಜಾಹೀರಾತು ನೆನಪಿಸಿದ ಸಿಎಂ : ಅಂದು ತುಷ್ಟೀಕರಣ ಅನ್ನಿಸಲಿಲ್ಲವೇ ಸಾಕ್ಷಿ ಸಮೇತ ಬಿಜೆಪಿಯ ಬಣ್ಣ ಬಯಲು ಮಾಡಿದ ಸಿದ್ದರಾಮಯ್ಯ

ಬಿಜೆಪಿ ಅವಧಿಯ ಉರ್ದು ಜಾಹೀರಾತು ನೆನಪಿಸಿದ ಸಿಎಂ : ಅಂದು ತುಷ್ಟೀಕರಣ ಅನ್ನಿಸಲಿಲ್ಲವೇ ಸಾಕ್ಷಿ ಸಮೇತ ಬಿಜೆಪಿಯ ಬಣ್ಣ ಬಯಲು ಮಾಡಿದ ಸಿದ್ದರಾಮಯ್ಯ

by Shwetha
February 27, 2026
0

ಬೆಂಗಳೂರು: ರಾಜ್ಯ ಸರ್ಕಾರದ ಉರ್ದು ಜಾಹೀರಾತು ವಿಚಾರವಾಗಿ ವಿರೋಧ ಪಕ್ಷದ ನಾಯಕರು ಎಬ್ಬಿಸಿರುವ ವಿವಾದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಖಡಕ್ ತಿರುಗೇಟು ನೀಡಿದ್ದಾರೆ. ಹಿಂದೆ ಬಿಜೆಪಿ ಅಧಿಕಾರದಲ್ಲಿದ್ದಾಗ...

ದಿನ ಭವಿಷ್ಯ (15-02-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (27-02-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
February 27, 2026
0

ದಿನ ಭವಿಷ್ಯ: 27-02-2026 ಮೇಷ ರಾಶಿ ಇಂದು ನಿಮಗೆ ಮಿಶ್ರ ಫಲಗಳು ದೊರೆಯಲಿವೆ. ಕೆಲಸದ ಒತ್ತಡ ಹೆಚ್ಚಾಗಬಹುದು, ಆದರೆ ನಿಮ್ಮ ಆತ್ಮವಿಶ್ವಾಸದಿಂದ ಎಲ್ಲವನ್ನೂ ನಿಭಾಯಿಸುವಿರಿ. ಹಣಕಾಸಿನ ವಿಷಯದಲ್ಲಿ...

The question of the pronunciation of the word "Brahma" cannot be resolved even by Brahma himself..!

“ಬ್ರಹ್ಮ” ಪದದ ಉಚ್ಚಾರ ಜಿಜ್ಞಾಸೆಯನ್ನು ಸ್ವತಃ ಬ್ರಹ್ಮನಿಂದಲೂ ಬಗೆಹರಿಸಲಾಗದು..!

by admin
February 26, 2026
0

"ಬ್ರಹ್ಮ" ಪದದ ಉಚ್ಚಾರ ಜಿಜ್ಞಾಸೆಯನ್ನು ಸ್ವತಃ ಬ್ರಹ್ಮನಿಂದಲೂ ಬಗೆಹರಿಸಲಾಗದು..! "ಬರೆದಂತೆಯೇ ಉಚ್ಚರಿಸುವುದು, ಉಚ್ಚರಿಸಿದಂತೆಯೇ ಬರೆಯುವುದು ಸಂಸ್ಕೃತ ಮತ್ತು ಕನ್ನಡ ಭಾಷೆ್ಗಳ ಜಾಯಮಾನ". ಹೌದು ತಾನೆ? ಅಂದಮೇಲೆ "ಬ್ರಹ್ಮ"ವನ್ನು...

ಉದ್ಯೋಗ ಹೋರಾಟದಿಂದ ಸರ್ಕಾರಕ್ಕೆ ತಲೆನೋವು: ಕ್ಯಾಬಿನೆಟ್‌ನಲ್ಲಿ ಮಹತ್ವದ ಚರ್ಚೆ?

ಉದ್ಯೋಗ ಹೋರಾಟದಿಂದ ಸರ್ಕಾರಕ್ಕೆ ತಲೆನೋವು: ಕ್ಯಾಬಿನೆಟ್‌ನಲ್ಲಿ ಮಹತ್ವದ ಚರ್ಚೆ?

by Shwetha
February 26, 2026
0

ಧಾರವಾಡದಲ್ಲಿ ಉದ್ಯೋಗಕ್ಕಾಗಿ ಯುವಕರ ಹೋರಾಟ ತೀವ್ರವಾಗಿದ್ದು, ಇದು ರಾಜ್ಯ ಸರ್ಕಾರಕ್ಕೆ ತಲೆನೋವಾಗಿ ಪರಿಣಮಿಸಿದೆ. ನೇಮಕಾತಿ ಪ್ರಕ್ರಿಯೆ ವಿಳಂಬವಾಗಿರುವುದನ್ನು ಖಂಡಿಸಿ ಯುವಕರು ನಡೆಸುತ್ತಿರುವ ಪ್ರತಿಭಟನೆಗೆ ವ್ಯಾಪಕ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ....

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram