ಚಾಮುಂಡಿ ಬೆಟ್ಟ ಹತ್ತಿದ ಶೋಭಾ ಕರಂದ್ಲಾಜೆ : ಇದ್ಯಾವ ನ್ಯಾಯ ಎಂದ ಜನರು.?
ಮೈಸೂರು : ಇಂದು ಆಷಾಢ ಮಾಸದ ಕೊನೆಯ ಶುಕ್ರವಾರ ಹಿನ್ನೆಲೆ ಸಂಸದೆ ಶೋಭಾ ಕರಂದ್ಲಾಜೆ ಅವರು ಬರಿಗಾಲಲ್ಲಿ ಮೈಸೂರಿನ ಚಾಮುಂಡಿ ಬೆಟ್ಟ ಹತ್ತಿ ನಾಡದೇವಿಯ ದರ್ಶನ ಪಡೆದಿದ್ದಾರೆ. ಆದ್ರೆ ಇದು ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದೆ.
ಕೊರೊನಾ ಭೀತಿ ಹಿನ್ನೆಲೆ ಚಾಮುಂಡಿ ಬೆಟ್ಟಕ್ಕೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ಇದರಿಂದ ಮಹಾನಗರ ಪಾಲಿಕೆ ಸದಸ್ಯರು, ಮಾಜಿ ಶಾಸಕರಿಗೂ ಬೆಟ್ಟಕ್ಕೆ ಹೋಗಲು ಅವಕಾಶ ನೀಡುತ್ತಿಲ್ಲ. ಆದ್ರೆ ಸಂಸದೆ ಶೋಭಾ ಕರಂದ್ಲಾಜೆ ಅವರನ್ನು ಬೆಟ್ಟಕ್ಕೆ ಹೋಗಲು ಹೇಗೆ ಅವಕಾಶ ಮಾಡಿಕೊಟ್ಟಿದ್ದೀರಿ ಎಂದು ಎಂದು ಪೊಲೀಸರ ಜೊತೆ ಜನಪ್ರತಿನಿಧಿಗಳು ಮಾತಿನ ಚಕಮಕಿ ನಡೆಸುತ್ತಿದ್ದಾರೆ. ಅಲ್ಲದೇ ಜನಪ್ರತಿನಿಧಿಗಳು ಪೊಲೀಸರ ವಿರುದ್ಧ ಕಿಡಿ ಕಾರಿದ್ದಾರೆ.
ಇನ್ನು ಸಂಸದೆ ಶೋಭಾ ಕರಂದ್ಲಾಜೆ ಅವರು ಪ್ರತಿ
ಆಷಾಢ ಮಾಸದಲ್ಲೂ ಮೈಸೂರಿಗೆ ಬಂದು ಬರಿಗಾಲಲ್ಲಿ ಚಾಮುಂಡಿ ಬೆಟ್ಟ ಹತ್ತಿ ತಾಯಿ ಚಾಮುಂಡಿಯ ದರ್ಶನ ಪಡೆದುಕೊಳ್ಳುತ್ತಾರೆ. ಅದರಂತೆಯೇ ಇಂದು ನಾಲ್ಕನೇ ಆಷಾಢ ಶುಕ್ರವಾರವಾದ ಹಿನ್ನೆಲೆಯಲ್ಲಿ ಈ ಬಾರಿಯೂ ಶೋಭಾ ಕರಂದ್ಲಾಜೆ ಮುಂಜಾನೆಯೇ ಬರಿಗಾಲಲ್ಲಿ ಚಾಮುಂಡಿ ಬೆಟ್ಟ ಹತ್ತಿ, ತಾಯಿಯ ದರ್ಶನ ಪಡೆದುಕೊಂಡಿದ್ದಾರೆ.








