ADVERTISEMENT
Tuesday, March 24, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ರಾಜ್ಯ

ಡಿಕೆಶಿ ಮನಗೆಲ್ಲಲು ಹೊಸ ಅಸ್ತ್ರ: ‘ಭಾವಿ ಸಿಎಂ’ ಎಂದಾಕ್ಷಣ 50 ಕೋಟಿ ಅನುದಾನ ಮಂಜೂರು! ವಿಧಾನಸಭೆಯಲ್ಲಿ ಬಟಾ ಬಯಲಾಯ್ತು ‘BJP’ ಸೀಕ್ರೆಟ್

Shwetha by Shwetha
March 24, 2026
in ರಾಜ್ಯ, Newsbeat, Politics, State, ರಾಜಕೀಯ
Share on FacebookShare on TwitterShare on WhatsappShare on Telegram

ಬೆಂಗಳೂರು: ರಾಜಕಾರಣದಲ್ಲಿ ಕೆಲಸ ಆಗಬೇಕೆಂದರೆ ಸಾಮ, ದಾನ, ಭೇದ, ದಂಡ ಎಲ್ಲವನ್ನೂ ಬಳಸಬೇಕು ಎಂಬ ಮಾತಿದೆ. ಆದರೆ, ಹಾಲಿ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಂದ ತಮ್ಮ ಕ್ಷೇತ್ರಕ್ಕೆ ಕೋಟ್ಯಂತರ ರೂಪಾಯಿ ಅನುದಾನ ಪಡೆಯಲು ಅದ್ಯಾವುದೂ ಬೇಕಿಲ್ಲ, ಕೇವಲ ಒಂದೇ ಒಂದು ಮಂತ್ರ ಸಾಕು. ಅದುವೇ ‘ಭಾವಿ ಸಿಎಂ’ ಎನ್ನುವ ಸ್ತುತಿ!

ಹೌದು, ಇಂತಹದೊಂದು ಅಚ್ಚರಿಯ ಹಾಗೂ ಸ್ವಾರಸ್ಯಕರ ಗುಟ್ಟನ್ನು ಬಿಜೆಪಿ ಶಾಸಕ ಎಸ್.ಆರ್. ವಿಶ್ವನಾಥ್ ವಿಧಾನಸಭೆಯಲ್ಲಿ ಬಹಿರಂಗಪಡಿಸಿ ಇಡೀ ಸದನವನ್ನು ನಗೆಗಡಲಲ್ಲಿ ತೇಲಿಸಿದರು.

Related posts

ಆನೆ ಮರಿಗೆ ಡಾ. ಸಮೀಕ್ಷಾ ರೆಡ್ಡಿ ಹೆಸರು ನಾಮಕರಣ

ಆನೆ ಮರಿಗೆ ಡಾ. ಸಮೀಕ್ಷಾ ರೆಡ್ಡಿ ಹೆಸರು ನಾಮಕರಣ

March 24, 2026
ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವೇ ಗುರಿ: ವಿಜಯೇಂದ್ರ

ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವೇ ಗುರಿ: ವಿಜಯೇಂದ್ರ

March 24, 2026

ಕೇವಲ 24 ಗಂಟೆಯಲ್ಲಿ 50 ಕೋಟಿ ಗಿಟ್ಟಿಸಿಕೊಂಡ ‘ಸುರೇಶ್’ ತಂತ್ರ

ವಿಧಾನಸಭೆಯ ಕಲಾಪದಲ್ಲಿ ಬೆಂಗಳೂರು ಅಭಿವೃದ್ಧಿ ಕುರಿತ ಚರ್ಚೆ ನಡೆಯುವಾಗ ಯಲಹಂಕ ಶಾಸಕ ಎಸ್.ಆರ್. ವಿಶ್ವನಾಥ್ ಅವರು, ವಿಪಕ್ಷದ ಶಾಸಕರು ಆಡಳಿತ ಪಕ್ಷದಿಂದ ಅನುದಾನ ಪಡೆಯಲು ಪಡುವ ಪಾಡನ್ನು ಎಳೆಎಳೆಯಾಗಿ ಬಿಚ್ಚಿಟ್ಟರು. ಸಾಮಾನ್ಯವಾಗಿ ವಿರೋಧ ಪಕ್ಷದ ಶಾಸಕರು ತಮ್ಮ ಕ್ಷೇತ್ರಗಳ ಅಭಿವೃದ್ಧಿಗೆ ಅನುದಾನ ಬೇಕೆಂದರೆ ಮುಖ್ಯಮಂತ್ರಿ ಅಥವಾ ಉಪಮುಖ್ಯಮಂತ್ರಿಗಳ ಮನೆ ಬಾಗಿಲಿಗೆ ಅಲೆದಾಡಬೇಕು, ಕಾಲಿಗೆ ಬೀಳಬೇಕು, ಗಲಾಟೆ ಮಾಡಬೇಕು. ಇಷ್ಟೆಲ್ಲಾ ಕಸರತ್ತು ಮಾಡಿದರೂ ಅನುದಾನ ಸಿಗುವುದು ಕಷ್ಟ. ಆದರೆ, ಬೇಲೂರು ಕ್ಷೇತ್ರದ ಬಿಜೆಪಿ ಶಾಸಕ ಎಚ್.ಕೆ. ಸುರೇಶ್ ಮಾತ್ರ ಅತ್ಯಂತ ಸುಲಭವಾಗಿ ಬರೋಬ್ಬರಿ 50 ಕೋಟಿ ರೂಪಾಯಿ ಮಂಜೂರು ಮಾಡಿಸಿಕೊಂಡಿದ್ದಾರೆ ಎಂದು ವಿಶ್ವನಾಥ್ ಹೇಳಿದರು.

ವಿಶ್ವನಾಥ್ ಮಾತನ್ನು ಕೇಳಿ ಅಚ್ಚರಿಗೊಂಡ ಸದಸ್ಯರು, ಅದು ಹೇಗೆ ಸಾಧ್ಯ? ಎಂದು ಹುಬ್ಬೇರಿಸಿದರು. ಆಗ ವಿಶ್ವನಾಥ್, ವೆರಿ ಸಿಂಪಲ್, ನಮ್ಮ ಸುರೇಶ್ ಅವರಿಗೆ ಡಿಕೆಶಿ ವೀಕ್ನೆಸ್ ಗೊತ್ತಾಗಿದೆ. ಮೊನ್ನೆ ಎತ್ತಿನಹೊಳೆ ಯೋಜನೆ ಬಗ್ಗೆ ಮಾತನಾಡುವಾಗ ಸುರೇಶ್ ಅವರು ಡಿಕೆಶಿ ಅವರನ್ನು ‘ಭಾವಿ ಸಿಎಂ’ ಎಂದು ಸಂಬೋಧಿಸಿ ಹೊಗಳಿದರು. ಈ ಹೊಗಳಿಕೆಗೆ ಫಿದಾ ಆದ ಡಿಕೆಶಿ, ಮರುದಿನವೇ ಸುರೇಶ್ ಕ್ಷೇತ್ರಕ್ಕೆ 50 ಕೋಟಿ ರೂಪಾಯಿ ಅನುದಾನ ಮಂಜೂರು ಮಾಡಿದ್ದಾರೆ ಎಂದು ರಹಸ್ಯ ಬಿಚ್ಚಿಟ್ಟರು.

ವಿಷಯ ಇಲ್ಲಿಗೇ ನಿಲ್ಲಲಿಲ್ಲ. ಮುಂದುವರಿದು ಮಾತನಾಡಿದ ವಿಶ್ವನಾಥ್, ನಮ್ಮ ಸುರೇಶ್ ಕೂಡ ಬಾರಿ ಬುದ್ಧಿವಂತ. ಅವರು ಡಿಕೆಶಿಯವರನ್ನು ‘ಭಾವಿ ಮುಖ್ಯಮಂತ್ರಿ’ ಎಂದು ಕರೆದರೇ ವಿನಃ, ‘ಯಾವಾಗ ಮುಖ್ಯಮಂತ್ರಿ ಆಗುತ್ತೀರಿ’ ಎಂದು ಹೇಳದೆ ಸೇಫ್ ಆಗಿ ಬಚಾವಾಗಿದ್ದಾರೆ ಎಂದು ಕಾಲೆಳೆದರು. ವಿಶ್ವನಾಥ್ ಅವರ ಈ ಮಾತಿಗೆ ಸ್ವತಃ ಡಿ.ಕೆ. ಶಿವಕುಮಾರ್ ಸೇರಿದಂತೆ ಆಡಳಿತ ಮತ್ತು ವಿಪಕ್ಷದ ಸದಸ್ಯರೆಲ್ಲರೂ ಗೊಳ್ಳೆಂದು ನಕ್ಕರು. ಒಟ್ಟಿನಲ್ಲಿ ಡಿಕೆಶಿ ಬಳಿ ಅನುದಾನ ಪಡೆಯಲು ‘ಭಾವಿ ಸಿಎಂ’ ಎಂಬ ಮಂತ್ರದಂಡವೇ ಸಾಕು ಎಂಬ ಸಂದೇಶ ಸದನದಲ್ಲಿ ರವಾನೆಯಾಯಿತು.

ವಿಧಾನಸಭೆಯಲ್ಲಿ ಅನುದಾನದ ರಹಸ್ಯ ಬಯಲಾದರೆ, ಇತ್ತ ವಿಧಾನ ಪರಿಷತ್ ನಲ್ಲಿ ಹೆಸರಿನ ಗೊಂದಲವೊಂದು ಭಾರೀ ಹಾಸ್ಯ ಪ್ರಸಂಗಕ್ಕೆ ಕಾರಣವಾಯಿತು.

ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅವರು ಸ್ಥಳೀಯ ಸಂಸ್ಥೆಗಳಲ್ಲಿ ಜಾಹೀರಾತು ಶುಲ್ಕ ವಿಧಿಸುವ ವಿಧೇಯಕದ ಮೇಲೆ ಮಾತನಾಡುತ್ತಿದ್ದರು. ಈ ವೇಳೆ ಕಾಂಗ್ರೆಸ್ ಸದಸ್ಯ ಐವಾನ್ ಡಿಸೋಜಾ ಅವರ ಸಲಹೆಗಳನ್ನು ಪ್ರಸ್ತಾಪಿಸುವಾಗ, ಸಚಿವರು ಆತ್ಮೀಯತೆಯಿಂದ ಬರೀ ಐವಾನ್.. ಐವಾನ್.. ಎಂದು ಸಂಬೋಧಿಸುತ್ತಿದ್ದರು.

ತಕ್ಷಣ ಎದ್ದು ನಿಂತ ಜೆಡಿಎಸ್ ಸದಸ್ಯ ಭೋಜೇಗೌಡ, ಸಚಿವರೇ ನಿಮಗೆ ಕೈ ಮುಗಿಯುತ್ತೇನೆ, ದಯಮಾಡಿ ಅವರನ್ನು ಪೂರ್ತಿ ಹೆಸರಿನಿಂದ ಕರೆಯಿರಿ. ಬರೀ ‘ಐವಾನ್’ ಎಂದರೆ ಉರ್ದು ಅಥವಾ ಅರೇಬಿಕ್ ಭಾಷೆಯಲ್ಲಿ ‘ಹೈವಾನ್’ (ಕ್ರೂರ ಪ್ರಾಣಿ ಅಥವಾ ರಾಕ್ಷಸ) ಎಂಬ ಅರ್ಥ ಬರುವ ಸಾಧ್ಯತೆಯಿದೆ. ಇದು ಅಪಾರ್ಥಕ್ಕೆ ಎಡೆಮಾಡಿಕೊಡುತ್ತದೆ. ಆದ್ದರಿಂದ ‘ಐವಾನ್ ಡಿಸೋಜಾ’ ಎಂದೇ ಕರೆಯಿರಿ ಎಂದು ಮನವಿ ಮಾಡಿದರು.

ಭೋಜೇಗೌಡರ ಈ ಸಮಯಪ್ರಜ್ಞೆ ಮತ್ತು ಭಾಷಾ ಚತುರತೆಯನ್ನು ಕಂಡ ಸದನದ ಸದಸ್ಯರು ಜೋರಾಗಿ ನಗಲಾರಂಭಿಸಿದರು. ಸಚಿವ ಬೈರತಿ ಸುರೇಶ್ ಕೂಡ ನಗುನಗುತ್ತಲೇ ತಿದ್ದಿಕೊಂಡು ಮಾತನಾಡಿದರು.

ಒಟ್ಟಾರೆ ಈ ಬಾರಿಯ ಅಧಿವೇಶನವು ಗಂಭೀರ ಚರ್ಚೆಗಳ ನಡುವೆಯೂ ಇಂತಹ ಸ್ವಾರಸ್ಯಕರ, ಹಾಸ್ಯಮಯ ಪ್ರಸಂಗಗಳಿಗೆ ಸಾಕ್ಷಿಯಾಯಿತು.

ShareTweetSendShare
Join us on:

Related Posts

ಆನೆ ಮರಿಗೆ ಡಾ. ಸಮೀಕ್ಷಾ ರೆಡ್ಡಿ ಹೆಸರು ನಾಮಕರಣ

ಆನೆ ಮರಿಗೆ ಡಾ. ಸಮೀಕ್ಷಾ ರೆಡ್ಡಿ ಹೆಸರು ನಾಮಕರಣ

by Shwetha
March 24, 2026
0

ಇತ್ತೀಚೆಗೆ ಶಿವಮೊಗ್ಗ ಮೃಗಾಲಯದಲ್ಲಿ ನೀರಾನೆ ದಾಳಿಯಿಂದ ಟ್ರೈನಿ ಪಶುವೈದ್ಯೆ ಡಾ. ಸಮೀಕ್ಷಾ ರೆಡ್ಡಿ ಮೃತಪಟ್ಟ ಘಟನೆ ರಾಜ್ಯವನ್ನು ಬೆಚ್ಚಿಬೀಳಿಸಿತ್ತು. ಈ ಹಿನ್ನೆಲೆ, ಬನ್ನೇರುಘಟ್ಟ ಬಯೋಲಾಜಿಕಲ್ ಪಾರ್ಕ್ ನಲ್ಲಿ...

ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವೇ ಗುರಿ: ವಿಜಯೇಂದ್ರ

ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವೇ ಗುರಿ: ವಿಜಯೇಂದ್ರ

by Shwetha
March 24, 2026
0

ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸುವುದೇ ಮುಖ್ಯ ಗುರಿ ಎಂದು B. Y. ವಿಜಯೇಂದ್ರ ತಿಳಿಸಿದ್ದಾರೆ. ಬಾಗಲಕೋಟೆಯಲ್ಲಿ ಮಾತನಾಡಿದ ಅವರು, ಈ ಎರಡೂ...

ಚಿನ್ನದ ಮೇಲೆ ಹೂಡಿಕೆ ಮಾಡುವವರೇ ಎಚ್ಚರ! ಚಿನ್ನದ ಮೌಲ್ಯ ಪಾತಾಳಕ್ಕೆ!ಹಳದಿ ಲೋಹದ ದಿಢೀರ್ ಪತನಕ್ಕೆ ಅಸಲಿ ಕಾರಣವೇನು?

ಚಿನ್ನದ ಮೇಲೆ ಹೂಡಿಕೆ ಮಾಡುವವರೇ ಎಚ್ಚರ! ಚಿನ್ನದ ಮೌಲ್ಯ ಪಾತಾಳಕ್ಕೆ!ಹಳದಿ ಲೋಹದ ದಿಢೀರ್ ಪತನಕ್ಕೆ ಅಸಲಿ ಕಾರಣವೇನು?

by Shwetha
March 24, 2026
0

ಜಾಗತಿಕ ಹಣಕಾಸು ಮಾರುಕಟ್ಟೆಯಲ್ಲಿ ಸುರಕ್ಷಿತ ಹೂಡಿಕೆ ಎಂದೇ ಕರೆಯಲ್ಪಡುವ ಚಿನ್ನದ ಸಾಮ್ರಾಜ್ಯದಲ್ಲಿ ಬಲವಾದ ಭೂಕಂಪ ಸಂಭವಿಸಿದೆ. ಯುದ್ಧದ ಭೀತಿ ಇದ್ದಾಗ ಸಾಮಾನ್ಯವಾಗಿ ಚಿನ್ನದ ಬೆಲೆ ಗಗನಕ್ಕೇರುವುದು ವಾಡಿಕೆ....

ಮುಂದಿನ 2 ವರ್ಷವೂ ಸಿದ್ದರಾಮಯ್ಯನವರೇ ಬಜೆಟ್ ಮಂಡಿಸುವುದು ನಿಶ್ಚಿತ‌ : ಜಮೀರ್ ಅಹಮದ್ ಖಾನ್

ಮುಂದಿನ 2 ವರ್ಷವೂ ಸಿದ್ದರಾಮಯ್ಯನವರೇ ಬಜೆಟ್ ಮಂಡಿಸುವುದು ನಿಶ್ಚಿತ‌ : ಜಮೀರ್ ಅಹಮದ್ ಖಾನ್

by Shwetha
March 24, 2026
0

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ನಾಯಕತ್ವ ಬದಲಾವಣೆಯ ಗುಸುಗುಸು, ಎರಡುವರೆ ವರ್ಷದ ಅಧಿಕಾರ ಹಂಚಿಕೆಯ ಸೂತ್ರದ ಕುರಿತು ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ, ಸಚಿವ ಜಮೀರ್ ಅಹಮದ್ ಖಾನ್ ವಿಧಾನಸಭೆಯಲ್ಲಿ...

ಒಂದೇ ತಿಂಗಳಲ್ಲಿ ತೆಂಗಿನಕಾಯಿ ಬೆಲೆ ಭಾರೀ ಕುಸಿತ ವಿದೇಶಗಳಿಗೆ ರಫ್ತು ಸ್ಥಗಿತಗೊಂಡಿರುವ ಹಿನ್ನೆಲೆ

ಒಂದೇ ತಿಂಗಳಲ್ಲಿ ತೆಂಗಿನಕಾಯಿ ಬೆಲೆ ಭಾರೀ ಕುಸಿತ ವಿದೇಶಗಳಿಗೆ ರಫ್ತು ಸ್ಥಗಿತಗೊಂಡಿರುವ ಹಿನ್ನೆಲೆ

by Shwetha
March 24, 2026
0

ತೆಂಗಿನಕಾಯಿ ಬೆಲೆಯಲ್ಲಿ ಭಾರೀ ಕುಸಿತ ಕಂಡಿದೆ. ಒಂದು ತಿಂಗಳ ಹಿಂದೆ 1,000 ತೆಂಗಿನಕಾಯಿಗಳ ಬೆಲೆ ಸುಮಾರು ₹22,000 ಇದ್ದರೆ, ಈಗ ಅದು ₹12,000-₹13,000ಕ್ಕೆ ಇಳಿದಿದೆ. ಕೇವಲ 30...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram