ADVERTISEMENT
Tuesday, March 24, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ರಾಜ್ಯ

ಮುಂದಿನ 2 ವರ್ಷವೂ ಸಿದ್ದರಾಮಯ್ಯನವರೇ ಬಜೆಟ್ ಮಂಡಿಸುವುದು ನಿಶ್ಚಿತ‌ : ಜಮೀರ್ ಅಹಮದ್ ಖಾನ್

Shwetha by Shwetha
March 24, 2026
in ರಾಜ್ಯ, Newsbeat, Politics, State, ರಾಜಕೀಯ
Share on FacebookShare on TwitterShare on WhatsappShare on Telegram

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ನಾಯಕತ್ವ ಬದಲಾವಣೆಯ ಗುಸುಗುಸು, ಎರಡುವರೆ ವರ್ಷದ ಅಧಿಕಾರ ಹಂಚಿಕೆಯ ಸೂತ್ರದ ಕುರಿತು ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ, ಸಚಿವ ಜಮೀರ್ ಅಹಮದ್ ಖಾನ್ ವಿಧಾನಸಭೆಯಲ್ಲಿ ಮಹತ್ವದ ರಾಜಕೀಯ ಹೇಳಿಕೆ ನೀಡಿದ್ದಾರೆ. ವಿರೋಧ ಪಕ್ಷಗಳ ಟೀಕೆ ಮತ್ತು ವ್ಯಂಗ್ಯದ ನಡುವೆಯೇ ಎದ್ದು ನಿಂತ ಸಚಿವರು, ಮುಂದಿನ ಎರಡು ವರ್ಷಗಳ ಕಾಲ ಸಿದ್ದರಾಮಯ್ಯ ಅವರೇ ಬಜೆಟ್ ಮಂಡಿಸಲಿದ್ದಾರೆ ಎಂದು ಹೇಳುವ ಮೂಲಕ ಸಿಎಂ ಬದಲಾವಣೆಯ ಊಹಾಪೋಹಗಳಿಗೆ ಬ್ರೇಕ್ ಹಾಕುವ ಪ್ರಯತ್ನ ಮಾಡಿದ್ದಾರೆ.

ಬಜೆಟ್ ಪದಗಳೇ ಅಸ್ತ್ರವಾದಾಗ
ವಿಧಾನಸಭೆಯಲ್ಲಿ 2024-25ನೇ ಸಾಲಿನ ಬಜೆಟ್ ಮೇಲಿನ ಚರ್ಚೆಯಲ್ಲಿ ಮಾತನಾಡಿದ ಬಿಜೆಪಿ ಶಾಸಕ ವಿ. ಸುನೀಲ್ ಕುಮಾರ್, ಮುಖ್ಯಮಂತ್ರಿಗಳ ಕನ್ನಡ ಪ್ರೇಮ ಮತ್ತು ಕ್ಲಿಷ್ಟಕರ ಪದಬಳಕೆಯನ್ನು ಪ್ರಸ್ತಾಪಿಸಿ ಆಡಳಿತ ಪಕ್ಷವನ್ನು ಇಕ್ಕಟ್ಟಿಗೆ ಸಿಲುಕಿಸಲು ಯತ್ನಿಸಿದರು. ಸಿದ್ದರಾಮಯ್ಯ ಕೇವಲ ವಿತ್ತ ತಜ್ಞರಲ್ಲ, ಅವರೊಬ್ಬ ಭಾಷಾ ತಜ್ಞರೂ ಹೌದು. ಈ ಬಾರಿಯ ಬಜೆಟ್ ಪ್ರತಿಯಲ್ಲಿ ಟ್ರೋಟಿಂಗ್ ಎಕನಾಮಿ, 11ಜಿ, ಫಲಧಾರೆ, ಭಿಷತತ್ವ, ಬೆಂಕಿಯನ್ನು ಬೆಳಕಾಗಿಸುವುದು ಸೇರಿದಂತೆ ಹತ್ತಾರು ಹೊಸ ಹೊಸ ಪದಗಳನ್ನು ಬಳಸಿದ್ದಾರೆ. ಇವು ಜನಸಾಮಾನ್ಯರಿಗೆ ಹೋಗಲಿ, ಶಾಸಕರಾದ ನಮಗೇ ಅರ್ಥವಾಗುತ್ತಿಲ್ಲ. ಹಾಗಾಗಿ ಮುಂದಿನ ಬಾರಿ ಬಜೆಟ್ ಮಂಡನೆ ವೇಳೆ ಪ್ರತಿಯೊಬ್ಬರಿಗೂ ಒಂದೊಂದು ಶಬ್ದಕೋಶವನ್ನೂ (ಡಿಕ್ಷನರಿ) ನೀಡಿಬಿಡಿ ಎಂದು ವ್ಯಂಗ್ಯವಾಡಿದರು.

Related posts

ಚಿನ್ನದ ಮೇಲೆ ಹೂಡಿಕೆ ಮಾಡುವವರೇ ಎಚ್ಚರ! ಚಿನ್ನದ ಮೌಲ್ಯ ಪಾತಾಳಕ್ಕೆ!ಹಳದಿ ಲೋಹದ ದಿಢೀರ್ ಪತನಕ್ಕೆ ಅಸಲಿ ಕಾರಣವೇನು?

ಚಿನ್ನದ ಮೇಲೆ ಹೂಡಿಕೆ ಮಾಡುವವರೇ ಎಚ್ಚರ! ಚಿನ್ನದ ಮೌಲ್ಯ ಪಾತಾಳಕ್ಕೆ!ಹಳದಿ ಲೋಹದ ದಿಢೀರ್ ಪತನಕ್ಕೆ ಅಸಲಿ ಕಾರಣವೇನು?

March 24, 2026
ಒಂದೇ ತಿಂಗಳಲ್ಲಿ ತೆಂಗಿನಕಾಯಿ ಬೆಲೆ ಭಾರೀ ಕುಸಿತ ವಿದೇಶಗಳಿಗೆ ರಫ್ತು ಸ್ಥಗಿತಗೊಂಡಿರುವ ಹಿನ್ನೆಲೆ

ಒಂದೇ ತಿಂಗಳಲ್ಲಿ ತೆಂಗಿನಕಾಯಿ ಬೆಲೆ ಭಾರೀ ಕುಸಿತ ವಿದೇಶಗಳಿಗೆ ರಫ್ತು ಸ್ಥಗಿತಗೊಂಡಿರುವ ಹಿನ್ನೆಲೆ

March 24, 2026

ಇದಕ್ಕೆ ಧ್ವನಿಗೂಡಿಸಿದ ಸಭಾಧ್ಯಕ್ಷರು, ಸದ್ಯಕ್ಕೆ ಶಬ್ದಕೋಶದ ಅಗತ್ಯವಿದೆ ಎಂದು ಒಪ್ಪಿಕೊಂಡರು. ಆಗ ಮಾತು ಮುಂದುವರಿಸಿದ ಸುನೀಲ್ ಕುಮಾರ್, ಸಭಾಧ್ಯಕ್ಷರ ಕಚೇರಿಯ ಸಹಾಯದಿಂದ ನಾನು ಈ ಪದಗಳ ಅರ್ಥ ತಿಳಿದುಕೊಂಡಿದ್ದೇನೆ. ಆದರೆ ಮುಂದಿನ ಬಾರಿಯೂ ಸಿದ್ದರಾಮಯ್ಯನವರೇ ಬಜೆಟ್ ಮಂಡಿಸಿದರೆ ಖಂಡಿತವಾಗಿಯೂ ಶಬ್ದಕೋಶ ಬೇಕಾಗುತ್ತದೆ ಎಂದು ಮಾರ್ಮಿಕವಾಗಿ ನುಡಿದರು.

ಅಶೋಕ್ ಎಸೆದ ಪ್ರಶ್ನೆ ಮತ್ತು ಜಮೀರ್ ಕೊಟ್ಟ ಖಡಕ್ ಉತ್ತರ

ಸುನೀಲ್ ಕುಮಾರ್ ಅವರ ಮಾತುಗಳನ್ನು ಆಲಿಸುತ್ತಿದ್ದ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಮಧ್ಯಪ್ರವೇಶಿಸಿ ಹಾಸ್ಯ ಚಟಾಕಿ ಹಾರಿಸಿದರು. ಈ ಕಠಿಣ ಪದಗಳಿಗೆ ಸಚಿವ ಜಮೀರ್ ಅಹಮದ್ ಅವರಿಂದಲೇ ಅರ್ಥ ಹೇಳಿಸಿ ಎಂದು ಕಾಲೆಳೆದರು. ಆ ಸಮಯದಲ್ಲಿ ಬೇರೆಡೆ ಗಮನವಿದ್ದ ಜಮೀರ್, ತಮ್ಮ ಹೆಸರು ಪ್ರಸ್ತಾಪವಾಗಿದ್ದನ್ನು ಕೇಳಿ ಏನದು ಎಂದು ಪ್ರಶ್ನಾರ್ಥಕವಾಗಿ ಅಶೋಕ್ ಅವರತ್ತ ನೋಡಿದರು.

ತಕ್ಷಣ ವಿಷಯ ಬದಲಿಸಿದ ಆರ್. ಅಶೋಕ್, ಸುನೀಲ್ ಕುಮಾರ್ ಅವರು ಒಂದು ಮೂಲಭೂತ ಪ್ರಶ್ನೆ ಕೇಳುತ್ತಿದ್ದಾರೆ. ಮುಂದಿನ ಬಜೆಟ್ ಅನ್ನು ಸಿದ್ದರಾಮಯ್ಯನವರೇ ಮಂಡಿಸುತ್ತಾರೆಯೇ ಎಂಬ ಅನುಮಾನ ಅವರಿಗೆ ಕಾಡುತ್ತಿದೆ ಎಂದು ನಾಯಕತ್ವ ಬದಲಾವಣೆಯ ವಿಷಯವನ್ನು ಪರೋಕ್ಷವಾಗಿ ಕೆದಕಿದರು.

ಇದನ್ನೇ ಕಾಯುತ್ತಿದ್ದವರಂತೆ ತಕ್ಷಣವೇ ಎದ್ದು ನಿಂತು ಖಡಕ್ ಆಗಿ ಉತ್ತರಿಸಿದ ಸಚಿವ ಜಮೀರ್ ಅಹಮದ್ ಖಾನ್, ವಿರೋಧ ಪಕ್ಷದ ನಾಯಕರಿಗೆ ಮತ್ತು ಬಿಜೆಪಿಯವರಿಗೆ ಸ್ಪಷ್ಟವಾಗಿ ಹೇಳುತ್ತಿದ್ದೇನೆ ಕೇಳಿಸಿಕೊಳ್ಳಿ. ಕೇವಲ ಮುಂದಿನ ಬಜೆಟ್ ಮಾತ್ರವಲ್ಲ, ಇನ್ನು ಎರಡು ಬಜೆಟ್ ಗಳನ್ನು ಸಿದ್ದರಾಮಯ್ಯನವರೇ ಮಂಡಿಸುತ್ತಾರೆ ಎಂದು ಗುಡುಗಿದರು.

2028ರವರೆಗೂ ಸಿದ್ದರಾಮಯ್ಯನವರೇ ಸಿಎಂ ಎಂಬ ಸಂದೇಶ?

ಜಮೀರ್ ಅಹಮದ್ ಖಾನ್ ಅವರ ಈ ಹೇಳಿಕೆ ಕೇವಲ ಸದನದ ಚರ್ಚೆಗೆ ಸೀಮಿತವಾಗಿಲ್ಲ. ಇದು ರಾಜ್ಯ ಕಾಂಗ್ರೆಸ್ ವಲಯದಲ್ಲಿ ಸಂಚಲನ ಮೂಡಿಸಿದೆ. ಮುಂದಿನ ಎರಡು ಬಜೆಟ್ ಅಂದರೆ 2026 ಮತ್ತು 2027ರ ಬಜೆಟ್ ಅನ್ನು ಸಿದ್ದರಾಮಯ್ಯನವರೇ ಮಂಡಿಸುತ್ತಾರೆ ಎಂದರೆ, ಪೂರ್ಣಾವಧಿಗೆ (2028ರ ವರೆಗೆ) ಅವರೇ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ ಎಂಬ ಸ್ಪಷ್ಟ ಸಂದೇಶವನ್ನು ಸಿದ್ದರಾಮಯ್ಯ ಬಣದ ಪ್ರಮುಖ ನಾಯಕರಾದ ಜಮೀರ್ ರವಾನಿಸಿದ್ದಾರೆ.

ಈ ಮಾತಿನ ಚಕಾಮಕಿಯ ನಡುವೆ ಎದ್ದು ನಿಂತ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ, ಕೇವಲ 2028 ಅಲ್ಲ, 2033ರವರೆಗೂ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವೇ ಅಧಿಕಾರದಲ್ಲಿರುತ್ತದೆ ಎಂದು ವಿಪಕ್ಷಗಳಿಗೆ ತಿರುಗೇಟು ನೀಡಿದರು.

ಬಜೆಟ್ ಮೇಲಿನ ಚರ್ಚೆಯು ಅಂತಿಮವಾಗಿ ಕಾಂಗ್ರೆಸ್ ನಾಯಕತ್ವದ ಸ್ಥಿರತೆಯ ಪ್ರದರ್ಶನವಾಗಿ ಮಾರ್ಪಟ್ಟಿತು. ಜಮೀರ್ ಅವರ ಈ ಹೇಳಿಕೆ ಮುಂಬರುವ ದಿನಗಳಲ್ಲಿ ಕಾಂಗ್ರೆಸ್ ಆಂತರಿಕ ವಲಯದಲ್ಲಿ ಯಾವ ರೀತಿಯ ಚರ್ಚೆಗೆ ಗ್ರಾಸವಾಗಲಿದೆ ಎಂಬುದನ್ನು ಕಾದು ನೋಡಬೇಕಿದೆ.

ShareTweetSendShare
Join us on:

Related Posts

ಚಿನ್ನದ ಮೇಲೆ ಹೂಡಿಕೆ ಮಾಡುವವರೇ ಎಚ್ಚರ! ಚಿನ್ನದ ಮೌಲ್ಯ ಪಾತಾಳಕ್ಕೆ!ಹಳದಿ ಲೋಹದ ದಿಢೀರ್ ಪತನಕ್ಕೆ ಅಸಲಿ ಕಾರಣವೇನು?

ಚಿನ್ನದ ಮೇಲೆ ಹೂಡಿಕೆ ಮಾಡುವವರೇ ಎಚ್ಚರ! ಚಿನ್ನದ ಮೌಲ್ಯ ಪಾತಾಳಕ್ಕೆ!ಹಳದಿ ಲೋಹದ ದಿಢೀರ್ ಪತನಕ್ಕೆ ಅಸಲಿ ಕಾರಣವೇನು?

by Shwetha
March 24, 2026
0

ಜಾಗತಿಕ ಹಣಕಾಸು ಮಾರುಕಟ್ಟೆಯಲ್ಲಿ ಸುರಕ್ಷಿತ ಹೂಡಿಕೆ ಎಂದೇ ಕರೆಯಲ್ಪಡುವ ಚಿನ್ನದ ಸಾಮ್ರಾಜ್ಯದಲ್ಲಿ ಬಲವಾದ ಭೂಕಂಪ ಸಂಭವಿಸಿದೆ. ಯುದ್ಧದ ಭೀತಿ ಇದ್ದಾಗ ಸಾಮಾನ್ಯವಾಗಿ ಚಿನ್ನದ ಬೆಲೆ ಗಗನಕ್ಕೇರುವುದು ವಾಡಿಕೆ....

ಒಂದೇ ತಿಂಗಳಲ್ಲಿ ತೆಂಗಿನಕಾಯಿ ಬೆಲೆ ಭಾರೀ ಕುಸಿತ ವಿದೇಶಗಳಿಗೆ ರಫ್ತು ಸ್ಥಗಿತಗೊಂಡಿರುವ ಹಿನ್ನೆಲೆ

ಒಂದೇ ತಿಂಗಳಲ್ಲಿ ತೆಂಗಿನಕಾಯಿ ಬೆಲೆ ಭಾರೀ ಕುಸಿತ ವಿದೇಶಗಳಿಗೆ ರಫ್ತು ಸ್ಥಗಿತಗೊಂಡಿರುವ ಹಿನ್ನೆಲೆ

by Shwetha
March 24, 2026
0

ತೆಂಗಿನಕಾಯಿ ಬೆಲೆಯಲ್ಲಿ ಭಾರೀ ಕುಸಿತ ಕಂಡಿದೆ. ಒಂದು ತಿಂಗಳ ಹಿಂದೆ 1,000 ತೆಂಗಿನಕಾಯಿಗಳ ಬೆಲೆ ಸುಮಾರು ₹22,000 ಇದ್ದರೆ, ಈಗ ಅದು ₹12,000-₹13,000ಕ್ಕೆ ಇಳಿದಿದೆ. ಕೇವಲ 30...

ಹೋಟೆಲ್ ಮಾಲೀಕರಿಗೆ ಗುಡ್‌ನ್ಯೂಸ್: ಹೆಚ್ಚುವರಿ ಕಮರ್ಷಿಯಲ್ ಸಿಲಿಂಡರ್ ಪೂರೈಕೆ

ಹೋಟೆಲ್ ಮಾಲೀಕರಿಗೆ ಗುಡ್‌ನ್ಯೂಸ್: ಹೆಚ್ಚುವರಿ ಕಮರ್ಷಿಯಲ್ ಸಿಲಿಂಡರ್ ಪೂರೈಕೆ

by Shwetha
March 24, 2026
0

ರಾಜ್ಯದಲ್ಲಿ ಗ್ಯಾಸ್ ಕೊರತೆಯಿಂದ ಸಂಕಷ್ಟ ಎದುರಿಸುತ್ತಿದ್ದ ಹೋಟೆಲ್ ಉದ್ಯಮಕ್ಕೆ ಈಗ ಸ್ವಲ್ಪ ಮಟ್ಟಿನ ನೆಮ್ಮದಿ ಸಿಗುವ ಸಾಧ್ಯತೆ ಇದೆ. ಕೆ. ಎಚ್. ಮುನಿಯಪ್ಪ ಮಹತ್ವದ ಘೋಷಣೆ ಮಾಡಿದ್ದು,...

ಜಗತ್ತೇ ಹೊತ್ತಿ ಉರಿಯುತ್ತಿದ್ದರೂ ಭಾರತ ಸೇಫ್ : ಅಡುಗೆ ಮನೆ ಒಲೆ ಆರುವುದಿಲ್ಲ ವಾಹನಗಳ ಚಕ್ರ ನಿಲ್ಲುವುದಿಲ್ಲ  – ಮೋದಿ ಕೊಟ್ಟರು ಬಿಗ್ ಗ್ಯಾರಂಟಿ

ಜಗತ್ತೇ ಹೊತ್ತಿ ಉರಿಯುತ್ತಿದ್ದರೂ ಭಾರತ ಸೇಫ್ : ಅಡುಗೆ ಮನೆ ಒಲೆ ಆರುವುದಿಲ್ಲ ವಾಹನಗಳ ಚಕ್ರ ನಿಲ್ಲುವುದಿಲ್ಲ – ಮೋದಿ ಕೊಟ್ಟರು ಬಿಗ್ ಗ್ಯಾರಂಟಿ

by Shwetha
March 24, 2026
0

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ ಕವಿದಿದೆ, ಕ್ಷಿಪಣಿಗಳ ಆರ್ಭಟ ಮುಗಿಲು ಮುಟ್ಟಿದೆ. ಹಾರ್ಮುಜ್ ಜಲಸಂಧಿಯಂತಹ ಪ್ರಮುಖ ವ್ಯಾಪಾರ ಮಾರ್ಗಗಳಲ್ಲಿ ಉದ್ವಿಗ್ನತೆ ಹೆಚ್ಚಾಗಿದೆ. ಇಂತಹ ಸಂಕಷ್ಟದ ಸಮಯದಲ್ಲಿ...

ದಾವಣಗೆರೆ ದಕ್ಷಿಣದಲ್ಲಿ ಹೈಡ್ರಾಮಾ; ಸಮರ್ಥ್ ನಾಮಪತ್ರ ಸಲ್ಲಿಕೆ ವೇಳೆ ಜಮೀರ್ ಡುಮ್ಕಿ, ಕಾಂಗ್ರೆಸ್ ನಿದ್ದೆಗೆಡಿಸಿದ ಸಾದಿಕ್ ಪೈಲ್ವಾನ್ ಬಂಡಾಯ

ದಾವಣಗೆರೆ ದಕ್ಷಿಣದಲ್ಲಿ ಹೈಡ್ರಾಮಾ; ಸಮರ್ಥ್ ನಾಮಪತ್ರ ಸಲ್ಲಿಕೆ ವೇಳೆ ಜಮೀರ್ ಡುಮ್ಕಿ, ಕಾಂಗ್ರೆಸ್ ನಿದ್ದೆಗೆಡಿಸಿದ ಸಾದಿಕ್ ಪೈಲ್ವಾನ್ ಬಂಡಾಯ

by Shwetha
March 24, 2026
0

ದಾವಣಗೆರೆ: ಬೆಣ್ಣೆ ನಗರಿ ದಾವಣಗೆರೆಯ ರಾಜಕೀಯ ಅಖಾಡ ಹೈವೋಲ್ಟೇಜ್ ಕದನಕ್ಕೆ ಸಾಕ್ಷಿಯಾಗುತ್ತಿದೆ. ಕಾಂಗ್ರೆಸ್ ಪಕ್ಷದ ಅತಿ ದೊಡ್ಡ ಭದ್ರಕೋಟೆ ಎಂದೇ ಬಿಂಬಿತವಾಗಿರುವ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram