ADVERTISEMENT
Friday, May 15, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ರಾಜ್ಯ

ಎಲೆಕ್ಷನ್ ಮೂಡ್‌ನಲ್ಲಿ ಕೈ ನಾಯಕರು : ದಾವಣಗೆರೆ ಕಡೆ ಮುಖ ಮಾಡದ ಸಚಿವ ಜಮೀರ್ ಅಹ್ಮದ್ ಕೇರಳದಲ್ಲಿ ಮತ ಬೇಟೆ ; ಅಸ್ಸಾಂನಲ್ಲಿ ಡಿಕೆಶಿ ಅಬ್ಬರ. ಶುರು!

Shwetha by Shwetha
March 30, 2026
in ರಾಜ್ಯ, Newsbeat, Politics, State, ರಾಜಕೀಯ
Share on FacebookShare on TwitterShare on WhatsappShare on Telegram

ರಾಜ್ಯದಲ್ಲಿ ಬಜೆಟ್ ಅಧಿವೇಶನ ಮುಕ್ತಾಯಗೊಂಡ ಬೆನ್ನಲ್ಲೇ ಆಡಳಿತಾರೂಢ ಕಾಂಗ್ರೆಸ್ ಪಕ್ಷದ ಸಚಿವರು ಹಾಗೂ ಶಾಸಕರು ಸಂಪೂರ್ಣವಾಗಿ ಚುನಾವಣಾ ಮೂಡ್‌ಗೆ ಜಾರಿದ್ದಾರೆ. ವಿವಿಧ ರಾಜ್ಯಗಳಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆ ಹಾಗೂ ರಾಜ್ಯದಲ್ಲಿ ನಡೆಯಲಿರುವ ಎರಡು ಕ್ಷೇತ್ರಗಳ ಉಪಚುನಾವಣೆಯತ್ತ ನಾಯಕರು ತಮ್ಮ ಚಿತ್ತ ಹರಿಸಿದ್ದಾರೆ. ಹೈಕಮಾಂಡ್ ಹಾಗೂ ರಾಜ್ಯ ನಾಯಕತ್ವ ವಹಿಸಿರುವ ಮಹತ್ವದ ಜವಾಬ್ದಾರಿಗಳನ್ನು ಹೆಗಲಿಗೇರಿಸಿಕೊಂಡು ಪ್ರಮುಖ ನಾಯಕರು ತಮ್ಮ ತಮ್ಮ ಕಾರ್ಯಕ್ಷೇತ್ರಗಳತ್ತ ದೌಡಾಯಿಸಿದ್ದಾರೆ.

ದಾವಣಗೆರೆ ದಕ್ಷಿಣ ಕ್ಷೇತ್ರದಿಂದ ಅಂತರ ಕಾಯ್ದುಕೊಂಡ ಸಚಿವ ಜಮೀರ್ ಅಹ್ಮದ್

Related posts

ಕೇರಳ CM ಆಯ್ಕೆ: ಹೈಕಮಾಂಡ್ ನಿರ್ಧಾರವೇ ಅಂತಿಮ ಎಂದ ಕೆ.ಸಿ. ವೇಣುಗೋಪಾಲ್

ಕೇರಳ CM ಆಯ್ಕೆ: ಹೈಕಮಾಂಡ್ ನಿರ್ಧಾರವೇ ಅಂತಿಮ ಎಂದ ಕೆ.ಸಿ. ವೇಣುಗೋಪಾಲ್

May 15, 2026
ಸಾರ್ವಜನಿಕ ಕಾರ್ಯಕ್ರಮಗಳಿಗೆ ಅನುಮತಿ: ಸರ್ಕಾರಕ್ಕೆ ಹೈಕೋರ್ಟ್‌ನಲ್ಲಿ ಮತ್ತೊಮ್ಮೆ ಮುಖಭಂಗ.

ಜೀವನಾಂಶ ಪಾವತಿಸದ ಪತಿಗೆ ಜೈಲು ಗ್ಯಾರಂಟಿ: ಹೈಕೋರ್ಟ್‌ನಿಂದ ಗಂಭೀರ ಎಚ್ಚರಿಕೆ ಮತ್ತು ಮಹತ್ವದ ತೀರ್ಪು!

May 15, 2026

ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಕೆರಳಿಸಿರುವ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಪ್ರಚಾರ ಆರಂಭಿಸಿದೆ. ಆದರೆ ಈ ಪ್ರಚಾರ ಕಣದಲ್ಲಿ ಸಚಿವ ಜಮೀರ್ ಅಹ್ಮದ್ ಖಾನ್ ಅವರ ಗೈರುಹಾಜರಿ ಎದ್ದು ಕಾಣುತ್ತಿದೆ. ಕಳೆದ ಎರಡು ದಿನಗಳಿಂದ ನೆರೆಯ ಕೇರಳ ರಾಜ್ಯದಲ್ಲಿ ಬೀಡುಬಿಟ್ಟಿರುವ ಜಮೀರ್ ಅವರು ದಾವಣಗೆರೆಯತ್ತ ಸುಳಿಯದಿರುವುದು ಕಾಂಗ್ರೆಸ್ ಪಾಳಯದಲ್ಲಿ ಹೊಸ ಆತಂಕವನ್ನು ಹುಟ್ಟುಹಾಕಿದೆ.

ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಬರೋಬ್ಬರಿ ಎಂಭತ್ತು ಸಾವಿರಕ್ಕೂ ಅಧಿಕ ಅಲ್ಪಸಂಖ್ಯಾತ ಮತಗಳಿವೆ. ಈ ನಿರ್ಣಾಯಕ ಮತಗಳ ಆಧಾರದ ಮೇಲೆ, ಈ ಬಾರಿಯ ಟಿಕೆಟ್ ಅನ್ನು ತಮ್ಮ ಸಮುದಾಯದ ಅಲ್ಪಸಂಖ್ಯಾತ ನಾಯಕರಿಗೆ ನೀಡಲೇಬೇಕು ಎಂದು ಜಮೀರ್ ಅಹ್ಮದ್ ಹೈಕಮಾಂಡ್ ಮುಂದೆ ತೀವ್ರ ಪಟ್ಟು ಹಿಡಿದಿದ್ದರು. ಆದರೆ ಅವರ ಬೇಡಿಕೆಯನ್ನು ನಿರಾಕರಿಸಿ ಟಿಕೆಟ್ ಕೈತಪ್ಪಿದ ಕಾರಣ ತೀವ್ರ ಅಸಮಾಧಾನಗೊಂಡಿರುವ ಜಮೀರ್ ದಾವಣಗೆರೆಯ ಕಡೆಗೆ ಮುಖ ಮಾಡಿಲ್ಲ. ಆದಾಗ್ಯೂ, ಚುನಾವಣಾ ಪ್ರಚಾರಕ್ಕೆ ಇನ್ನೂ ಸಾಕಷ್ಟು ದಿನಗಳ ಕಾಲಾವಕಾಶ ಇರುವುದರಿಂದ ಮುಂದಿನ ದಿನಗಳಲ್ಲಿ ಅವರ ಕೋಪ ತಣ್ಣಗಾಗಿ ಪಕ್ಷದ ಅಭ್ಯರ್ಥಿ ಪರ ಮತಯಾಚನೆಗೆ ಬರಬಹುದು ಎಂಬ ದಟ್ಟ ವಿಶ್ವಾಸದಲ್ಲಿ ಕಾಂಗ್ರೆಸ್ ನಾಯಕರಿದ್ದಾರೆ.

ದಾವಣಗೆರೆಯಲ್ಲಿ ಇತರ ನಾಯಕರ ಬಿರುಸಿನ ಪ್ರಚಾರ

ಜಮೀರ್ ಅಹ್ಮದ್ ಗೈರಿನ ನಡುವೆಯೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪ್ರಚಾರದ ಅಬ್ಬರ ಜೋರಾಗಿಯೇ ಇದೆ. ಸಚಿವರಾದ ಬೈರತಿ ಸುರೇಶ್ ಹಾಗೂ ಎಸ್ ಎಸ್ ಮಲ್ಲಿಕಾರ್ಜುನ್ ಅವರುಗಳು ಕ್ಷೇತ್ರದಲ್ಲಿ ಬಿರುಸಿನ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಇವರಿಗೆ ಯುವ ಶಾಸಕರು ಹಾಗೂ ಹಿರಿಯ ನಾಯಕರು ಸಾಥ್ ನೀಡಿದ್ದಾರೆ. ಪ್ರಮುಖವಾಗಿ ಶಾಸಕ ಪ್ರದೀಪ್ ಈಶ್ವರ್, ಜಿ ಎಸ್ ಶ್ರೀನಿವಾಸ, ರಿಜ್ವಾನ್ ಅರ್ಷದ್, ಸಲೀಂ ಅಹ್ಮದ್ ಸೇರಿದಂತೆ ಹಲವು ನಾಯಕರು ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಮಲ್ಲಿಕಾರ್ಜುನ್ ಪರವಾಗಿ ಅಬ್ಬರದ ಮತಯಾಚನೆ ಮಾಡುತ್ತಿದ್ದಾರೆ.

ಕೇರಳದಲ್ಲಿ ಜಮೀರ್ ಹಾಗೂ ಈಶ್ವರ್ ಖಂಡ್ರೆ ಪ್ರಚಾರದ ಅಬ್ಬರ

ರಾಜ್ಯದಲ್ಲಿ ಅಸಮಾಧಾನಗೊಂಡಿರುವ ಸಚಿವ ಜಮೀರ್ ಅಹ್ಮದ್ ಅವರು ಕೇರಳ ರಾಜ್ಯದಲ್ಲಿ ಬಿಡುವಿಲ್ಲದ ಪ್ರಚಾರದಲ್ಲಿ ನಿರತರಾಗಿದ್ದಾರೆ. ವಯನಾಡು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರವಾಗಿ ಮತ ಬೇಟೆ ಮಾಡುತ್ತಿರುವ ಅವರು, ಅಲ್ಲಿನ ಪ್ರಮುಖ ಮುಸ್ಲಿಂ ಧರ್ಮಗುರುಗಳನ್ನು ಭೇಟಿಯಾಗಿ ಸಭೆಗಳನ್ನು ನಡೆಸುತ್ತಿದ್ದಾರೆ. ಅಲ್ಪಸಂಖ್ಯಾತ ಸಮುದಾಯದ ಒಲವು ಗಳಿಸುವಲ್ಲಿ ಅವರು ಪ್ರಮುಖ ಪಾತ್ರ ವಹಿಸುತ್ತಿದ್ದಾರೆ. ಇವರ ಜೊತೆಗೆ ಸಚಿವ ಈಶ್ವರ್ ಖಂಡ್ರೆ ಅವರು ಕೂಡ ಕೇರಳವನ್ನು ತಲುಪಿದ್ದು, ಅಳಪ್ಪುಳ ಜಿಲ್ಲೆಯ ವಿವಿಧೆಡೆ ಬಿರುಸಿನ ಪ್ರಚಾರ ನಡೆಸುತ್ತಿದ್ದಾರೆ.

ಅಸ್ಸಾಂನಲ್ಲಿ ಭಾರೀ ಬದಲಾವಣೆ ಖಚಿತ, ಡಿಸಿಎಂ ಡಿಕೆ ಶಿವಕುಮಾರ್ ಭವಿಷ್ಯ

ಇತ್ತ ಅಸ್ಸಾಂ ವಿಧಾನಸಭಾ ಚುನಾವಣೆಯ ವೀಕ್ಷಕರಾಗಿ ನೇಮಕಗೊಂಡಿರುವ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಶನಿವಾರ ಬೆಂಗಳೂರಿನಿಂದ ಅಸ್ಸಾಂನತ್ತ ಪ್ರಯಾಣ ಬೆಳೆಸಿದ್ದಾರೆ. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಅಸ್ಸಾಂನಲ್ಲಿ ಈ ಬಾರಿ ಕಾಂಗ್ರೆಸ್ ಜಯಭೇರಿ ಬಾರಿಸುವ ವಿಶ್ವಾಸ ವ್ಯಕ್ತಪಡಿಸಿದರು.

ನಾನು ಅಸ್ಸಾಂ ಚುನಾವಣಾ ಪ್ರಚಾರಕ್ಕೆ ತೆರಳುತ್ತಿದ್ದು, ಬಳಿಕ ಕೇರಳಕ್ಕೂ ಹೋಗಬೇಕಿದೆ. ಜೊತೆಗೆ ಕರ್ನಾಟಕದ ಉಪಚುನಾವಣೆಗಳ ಸಂಪೂರ್ಣ ಜವಾಬ್ದಾರಿಯನ್ನೂ ನಿಭಾಯಿಸಬೇಕಿದೆ. ಅಸ್ಸಾಂ ರಾಜ್ಯದಲ್ಲಿ ಆಡಳಿತ ಸಂಪೂರ್ಣವಾಗಿ ಕುಸಿದಿದೆ. ಭ್ರಷ್ಟಾಚಾರ ಮಿತಿಮೀರಿದ್ದು ಸಾಮಾನ್ಯ ಜನರು ತೀವ್ರವಾಗಿ ನರಳುತ್ತಿದ್ದಾರೆ. ಕಳೆದ ಚುನಾವಣೆಯಲ್ಲಿ ಬಿಜೆಪಿ ನೀಡಿದ್ದ ಯಾವುದೇ ಭರವಸೆಗಳು ಈಡೇರಿಲ್ಲ. ಕಳೆದ ಹತ್ತು ವರ್ಷಗಳಲ್ಲಿ ಜನರ ಪ್ರಗತಿ ಶೂನ್ಯವಾಗಿದೆ. ಈ ಕಾರಣಕ್ಕಾಗಿ ಅಲ್ಲಿನ ಜನರು ಭಾರೀ ಬದಲಾವಣೆಯನ್ನು ಬಯಸಿದ್ದಾರೆ ಎಂದು ಡಿ ಕೆ ಶಿವಕುಮಾರ್ ಭವಿಷ್ಯ ನುಡಿದರು.

ಇತ್ತೀಚೆಗೆ ನಡೆದ ಸಚಿವ ಸಂಪುಟ ಪುನಾರಚನೆಯ ಬಳಿಕ ಅಸ್ಸಾಂ ಬಿಜೆಪಿಯಲ್ಲಿ ಆಂತರಿಕ ಕಲಹ ಭುಗಿಲೆದ್ದಿದೆ. ಸ್ವತಃ ಬಿಜೆಪಿ ನಾಯಕರೇ ತಮ್ಮ ಪಕ್ಷದಲ್ಲಿ ತಮಗೆ ಸೂಕ್ತ ಅವಕಾಶಗಳಿಲ್ಲ ಎಂದು ತೀವ್ರ ಬೇಸರಗೊಂಡಿದ್ದಾರೆ. ಅವರ ಪಕ್ಷದಲ್ಲಿ ಯಾರೊಬ್ಬರೂ ಸಂತೋಷವಾಗಿಲ್ಲ, ಇದು ನಮಗೆ ದೊಡ್ಡ ಪ್ಲಸ್ ಪಾಯಿಂಟ್ ಆಗಲಿದೆ ಎಂದು ಅವರು ವಿಶ್ಲೇಷಿಸಿದರು. ಒಟ್ಟಾರೆಯಾಗಿ ಕಾಂಗ್ರೆಸ್ ನಾಯಕರು ಅತ್ತ ಹೊರರಾಜ್ಯಗಳಲ್ಲೂ, ಇತ್ತ ತವರು ರಾಜ್ಯದಲ್ಲೂ ಚುನಾವಣಾ ಗೆಲುವಿಗಾಗಿ ರಣತಂತ್ರ ಹೆಣೆಯುತ್ತಿದ್ದಾರೆ.

ShareTweetSendShare
Join us on:

Related Posts

ಕೇರಳ CM ಆಯ್ಕೆ: ಹೈಕಮಾಂಡ್ ನಿರ್ಧಾರವೇ ಅಂತಿಮ ಎಂದ ಕೆ.ಸಿ. ವೇಣುಗೋಪಾಲ್

ಕೇರಳ CM ಆಯ್ಕೆ: ಹೈಕಮಾಂಡ್ ನಿರ್ಧಾರವೇ ಅಂತಿಮ ಎಂದ ಕೆ.ಸಿ. ವೇಣುಗೋಪಾಲ್

by Shwetha
May 15, 2026
0

ಕೆ.ಸಿ. ವೇಣುಗೋಪಾಲ್ ಅವರು ಕೇರಳ ಮುಖ್ಯಮಂತ್ರಿ ಆಯ್ಕೆ ಕುರಿತು ಮೊದಲ ಪ್ರತಿಕ್ರಿಯೆ ನೀಡಿದ್ದು, ವಿ.ಡಿ ಸತೀಶನ್ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಆಯ್ಕೆ ಮಾಡಿರುವುದಕ್ಕೆ ಯಾವುದೇ ಅಸಮಾಧಾನ ಇಲ್ಲ...

ಸಾರ್ವಜನಿಕ ಕಾರ್ಯಕ್ರಮಗಳಿಗೆ ಅನುಮತಿ: ಸರ್ಕಾರಕ್ಕೆ ಹೈಕೋರ್ಟ್‌ನಲ್ಲಿ ಮತ್ತೊಮ್ಮೆ ಮುಖಭಂಗ.

ಜೀವನಾಂಶ ಪಾವತಿಸದ ಪತಿಗೆ ಜೈಲು ಗ್ಯಾರಂಟಿ: ಹೈಕೋರ್ಟ್‌ನಿಂದ ಗಂಭೀರ ಎಚ್ಚರಿಕೆ ಮತ್ತು ಮಹತ್ವದ ತೀರ್ಪು!

by Shwetha
May 15, 2026
0

ಪತ್ನಿಯ ಜೀವನ ನಿರ್ವಹಣೆಗೆ ನ್ಯಾಯಾಲಯ ನಿಗದಿಪಡಿಸಿದ ಹಣವನ್ನು ನೀಡದೆ ಸಬೂಬು ಹೇಳುವ ಪತಿಯಂದಿರಿಗೆ ಕರ್ನಾಟಕ ಹೈಕೋರ್ಟ್ ಈಗ ಬಿಸಿ ಮುಟ್ಟಿಸಿದೆ. ನ್ಯಾಯಾಲಯದ ಆದೇಶವಿದ್ದರೂ ಜೀವನಾಂಶ ನೀಡದಿದ್ದರೆ ಅಂತಹವರ...

ಕೇರಳಕ್ಕೆ ಹೊಸ ಮುಖ್ಯಮಂತ್ರಿ..! ವಿ.ಡಿ. ಸತೀಶನ್‌ಗೆ ಕಾಂಗ್ರೆಸ್ ಹೈಕಮಾಂಡ್ ಗ್ರೀನ್ ಸಿಗ್ನಲ್

ಕೇರಳಕ್ಕೆ ಹೊಸ ಮುಖ್ಯಮಂತ್ರಿ..! ವಿ.ಡಿ. ಸತೀಶನ್‌ಗೆ ಕಾಂಗ್ರೆಸ್ ಹೈಕಮಾಂಡ್ ಗ್ರೀನ್ ಸಿಗ್ನಲ್

by Shwetha
May 15, 2026
0

ಕೇರಳ ರಾಜಕೀಯದಲ್ಲಿ ಕಳೆದ ಕೆಲವು ದಿನಗಳಿಂದ ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಮುಖ್ಯಮಂತ್ರಿ ಆಯ್ಕೆ ಪ್ರಕ್ರಿಯೆಗೆ ಇದೀಗ ತೆರೆ ಬಿದ್ದಿದೆ. ವಿ.ಡಿ. ಸತೀಶನ್‌ ಅವರನ್ನು ಕೇರಳದ ಹೊಸ ಮುಖ್ಯಮಂತ್ರಿಯಾಗಿ...

ಹಿಂದುತ್ವ ಎಂದರೆ ಬದುಕುವ ಹಾದಿ ಮನೆಯಲ್ಲಿ ದೀಪ ಹಚ್ಚಿದರೂ ನೀವು ಹಿಂದೂಗಳೇ ದೇವಸ್ಥಾನಕ್ಕೆ ಹೋಗುವುದು ಕಡ್ಡಾಯವಲ್ಲ ಎಂದ ಸುಪ್ರೀಂ ಕೋರ್ಟ್

ಹಿಂದುತ್ವ ಎಂದರೆ ಬದುಕುವ ಹಾದಿ ಮನೆಯಲ್ಲಿ ದೀಪ ಹಚ್ಚಿದರೂ ನೀವು ಹಿಂದೂಗಳೇ ದೇವಸ್ಥಾನಕ್ಕೆ ಹೋಗುವುದು ಕಡ್ಡಾಯವಲ್ಲ ಎಂದ ಸುಪ್ರೀಂ ಕೋರ್ಟ್

by Shwetha
May 15, 2026
0

ನವದೆಹಲಿ: ಹಿಂದುತ್ವ ಎನ್ನುವುದು ಕೇವಲ ಒಂದು ಧರ್ಮವಲ್ಲ, ಅದು ಜೀವನದ ಒಂದು ಅತ್ಯುನ್ನತ ಮತ್ತು ವಿಶಾಲವಾದ ಮಾರ್ಗ ಎಂದು ಸುಪ್ರೀಂ ಕೋರ್ಟ್ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ. ಒಬ್ಬ...

ಇಂದಿರಾ ಗಾಂಧಿ ಬಳಿಕ ಮೋದಿಯೇ ಅಪ್ರತಿಮ ನಾಯಕ: ವಾಸ್ತವ ಒಪ್ಪಿಕೊಳ್ಳಿ ಎಂದ ಶಾಸಕ ಕೆ.ಎನ್. ರಾಜಣ್ಣ

ಇಂದಿರಾ ಗಾಂಧಿ ಬಳಿಕ ಮೋದಿಯೇ ಅಪ್ರತಿಮ ನಾಯಕ: ವಾಸ್ತವ ಒಪ್ಪಿಕೊಳ್ಳಿ ಎಂದ ಶಾಸಕ ಕೆ.ಎನ್. ರಾಜಣ್ಣ

by Shwetha
May 15, 2026
0

ರಾಜ್ಯ ರಾಜಕಾರಣದಲ್ಲಿ ಹಿರಿಯ ಕಾಂಗ್ರೆಸ್ ಮುಖಂಡ ಮತ್ತು ಶಾಸಕ ಕೆ.ಎನ್. ರಾಜಣ್ಣ ಅವರು ನೀಡಿರುವ ಹೇಳಿಕೆಯೊಂದು ಈಗ ಹೊಸ ಚರ್ಚೆಗೆ ನಾಂದಿ ಹಾಡಿದೆ. ದೇಶ ಕಂಡ ದಿವಂಗತ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram