ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಕುಟುಂಬಕ್ಕೆ ಮತ್ತೊಮ್ಮೆ ಕಾನೂನು ಸಂಕಷ್ಟ ಎದುರಾಗಿದೆ.
ಈ ಪ್ರಕರಣದಲ್ಲಿ ಲೋಕಾಯುಕ್ತ ಸಲ್ಲಿಸಿದ್ದ B-ರಿಪೋರ್ಟ್ಗೆ ವಿರುದ್ಧವಾಗಿ ಈಗ ಇಡಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದೆ. ಈ ಅರ್ಜಿಯಲ್ಲಿ ಸಿಎಂ ಹಾಗೂ ಅವರ ಕುಟುಂಬದ ಸದಸ್ಯರ ಮೇಲಿನ ಆರೋಪಗಳಿಗೆ ಪ್ರಾಥಮಿಕ ಸಾಕ್ಷ್ಯಗಳಿವೆ ಎಂದು ಇಡಿ ಹೇಳಿಕೊಂಡಿದೆ.
ಲೋಕಾಯುಕ್ತದ B-ರಿಪೋರ್ಟ್ನಿಂದ ತಾತ್ಕಾಲಿಕವಾಗಿ ಸಿಎಂ ಕುಟುಂಬಕ್ಕೆ ರಿಲೀಫ್ ಸಿಕ್ಕಿದ್ದರೂ, ಪ್ರಕರಣ ಸಂಪೂರ್ಣವಾಗಿ ಮುಕ್ತಾಯವಾಗಿಲ್ಲ ಎಂಬುದು ಇದೀಗ ಸ್ಪಷ್ಟವಾಗುತ್ತಿದೆ. ಇಡಿ ಹಸ್ತಕ್ಷೇಪದಿಂದ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ.
ಈ ಕುರಿತು ಪ್ರತಿಕ್ರಿಯಿಸಿದ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ, ಇದು ಕೇವಲ ತಾತ್ಕಾಲಿಕ ರಿಲೀಫ್ ಮಾತ್ರ. ಮುಡಾ ಪ್ರಕರಣದಲ್ಲಿ ಸಾಕ್ಷ್ಯಗಳು ಬಲವಾಗಿವೆ. ಅಂತಿಮವಾಗಿ CM ಕುಟುಂಬಕ್ಕೆ ಶಿಕ್ಷೆ ಆಗುವ ಸಾಧ್ಯತೆ ಇದೆ, ಎಂದು ಹೇಳಿದ್ದಾರೆ.
ಈ ಬೆಳವಣಿಗೆ ರಾಜ್ಯ ರಾಜಕೀಯದಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿದ್ದು, ಮುಂದಿನ ದಿನಗಳಲ್ಲಿ ಹೈಕೋರ್ಟ್ನ ನಿರ್ಧಾರ ಬಹಳ ಮಹತ್ವ ಪಡೆದುಕೊಳ್ಳಲಿದೆ.







