ಪಶ್ಚಿಮ ಬಂಗಾಳದ ರಾಜಕೀಯ ಕಣದಲ್ಲಿ ಈಗ ಬಿರುಗಾಳಿ ಎದ್ದಿದೆ ಬಿಜೆಪಿ ಅಭೂತಪೂರ್ವ ಗೆಲುವು ಸಾಧಿಸುತ್ತಿದ್ದಂತೆಯೇ ಮಮತಾ ಬ್ಯಾನರ್ಜಿ ಸರ್ಕಾರದ ಪ್ರಭಾವಿ ಅಧಿಕಾರಿಗಳ ಆಟಕ್ಕೆ ಬ್ರೇಕ್ ಬಿದ್ದಿದೆ ಮಮತಾ ಅವರ ಆಡಳಿತಾವಧಿಯಲ್ಲಿ ನಿಯಮ ಬಾಹಿರವಾಗಿ ಸೇವೆ ಸಲ್ಲಿಸುತ್ತಿದ್ದ ಅಧಿಕಾರಿಗಳಿಗೆ ತಕ್ಷಣವೇ ಗೇಟ್ ಪಾಸ್ ನೀಡಲಾಗಿದ್ದು ಆಡಳಿತ ಮಂಡಳಿಯಲ್ಲಿ ಶುದ್ಧೀಕರಣ ಪ್ರಕ್ರಿಯೆ ಆರಂಭವಾಗಿದೆ
ವಿಶೇಷವಾಗಿ ನಿವೃತ್ತಿಯ ನಂತರವೂ ಮಮತಾ ಬ್ಯಾನರ್ಜಿ ಅವರ ಕೃಪಾಕಟಾಕ್ಷದಿಂದ ಹುದ್ದೆಯಲ್ಲಿ ಮುಂದುವರಿದಿದ್ದ ಹಿರಿಯ ಅಧಿಕಾರಿಗಳಿಗೆ ಇಂದಿನಿಂದ ಕಚೇರಿಗೆ ಬರದಂತೆ ಸೂಚಿಸಲಾಗಿದೆ ಹೊಸ ಸರ್ಕಾರ ರಚನೆಯಾಗಿ ಮುಂದಿನ ತೀರ್ಮಾನ ಕೈಗೊಳ್ಳುವವರೆಗೂ ಈ ಅಧಿಕಾರಿಗಳು ಯಾವುದೇ ಅಧಿಕಾರ ಚಲಾಯಿಸುವಂತಿಲ್ಲ ಎಂದು ಆದೇಶಿಸಲಾಗಿದೆ ಇದು ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಬಿಜೆಪಿ ಮಾಡಲಿರುವ ಮೊದಲ ದೊಡ್ಡ ಬದಲಾವಣೆಯಾಗಿದೆ
ಮತ್ತೊಂದು ಪ್ರಮುಖ ಬೆಳವಣಿಗೆಯೆಂದರೆ ಮಮತಾ ಬ್ಯಾನರ್ಜಿ ಅವರ ನಿವಾಸಕ್ಕೆ ನೀಡಲಾಗಿದ್ದ ಹೈ ಪ್ರೊಫೈಲ್ ಭದ್ರತೆಯನ್ನು ವಾಪಸ್ ಪಡೆಯಲಾಗಿದೆ ಇಷ್ಟು ದಿನಗಳ ಕಾಲ ಮಮತಾ ನಿವಾಸದ ಮುಂಭಾಗದ ರಸ್ತೆ ಸಾರ್ವಜನಿಕರಿಗೆ ನಿರ್ಬಂಧಿತ ಪ್ರದೇಶವಾಗಿತ್ತು ಆದರೆ ಈಗ ಆ ರಸ್ತೆಯನ್ನು ಜನಸಾಮಾನ್ಯರ ಸಂಚಾರಕ್ಕೆ ಮುಕ್ತಗೊಳಿಸಲಾಗಿದ್ದು ಭದ್ರತಾ ಕೋಟೆ ಕುಸಿದಿದೆ ಮಮತಾ ಅವರ ಆಪ್ತ ವಲಯದಲ್ಲಿದ್ದ ಅಧಿಕಾರಿಗಳ ಮೇಲೆ ನಿಗಾ ಇಡಲಾಗಿದ್ದು ಸರ್ಕಾರದ ಕಡತಗಳ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ
ಇನ್ನು ಎರಡು ದಿನಗಳಲ್ಲಿ ಪಶ್ಚಿಮ ಬಂಗಾಳದ ಹೊಸ ಮುಖ್ಯಮಂತ್ರಿಯಾಗಿ ಬಿಜೆಪಿ ನಾಯಕರು ಅಧಿಕಾರ ಸ್ವೀಕರಿಸಲಿದ್ದಾರೆ ಸರ್ಕಾರ ರಚನೆಗೂ ಮೊದಲೇ ಅಧಿಕಾರಿಗಳ ವರ್ಗಾವಣೆ ಮತ್ತು ಶಿಸ್ತು ಕ್ರಮಗಳು ಆರಂಭವಾಗಿರುವುದು ದೀದಿ ಪಾಳಯಕ್ಕೆ ತೀವ್ರ ಆಘಾತ ತಂದಿದೆ ಅಧಿಕಾರ ಹಸ್ತಾಂತರದ ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು ಬಂಗಾಳದಲ್ಲಿ ಹೊಸ ರಾಜಕೀಯ ಪರ್ವಕ್ಕೆ ಮುನ್ನುಡಿ ಬರೆಯಲಾಗಿದೆ ಜನಸಾಮಾನ್ಯರು ಈಗ ಮಮತಾ ನಿವಾಸದ ಮುಂದಿನ ರಸ್ತೆಯಲ್ಲಿ ಮುಕ್ತವಾಗಿ ಸಂಚರಿಸುತ್ತಿದ್ದು ಬದಲಾವಣೆಯ ಗಾಳಿ ಸ್ಪಷ್ಟವಾಗಿ ಗೋಚರಿಸುತ್ತಿದೆ








