ಶಿಥಿಲಗೊಂಡಿದ್ದ ದೇವಾಲಯವನ್ನು ಜೀರ್ಣೋದ್ಧಾರ ಮಾಡುವಾಗ ಚಿನ್ನದ ನಾಣ್ಯಗಳು ಪತ್ತೆಯಾದ ಘಟನೆ ತಮಿಳುನಾಡಿನ ತಿರುಚಿರಾಪಲ್ಲಿ ಜಿಲ್ಲೆಯ ತಿರುವಣ್ಣೈಕಾವಲ್ ತಾಲೂಕಿನ ಅಖಿಲಾಂಡೇಶ್ವರಿ ದೇವಾಲಯದಲ್ಲಿ ನಡೆದಿದೆ. ಅಖಿಲಾಂಡೇಶ್ವರಿ ದೇವಾಲಯದಲ್ಲಿ ಸದ್ಯ ನವೀಕರಣ ಕಾರ್ಯ ನಡೆಯುತ್ತಿದ್ದು, ಭೂಮಿ ಅಗೆಯುವ ವೇಳೆ ತಾಮ್ರದ ಪಾತ್ರೆಯೊಂದು ಪತ್ತೆಯಾಗಿದೆ. ಇದರಿಂದ ಅಚ್ಚರಿಗೊಂಡ ಸ್ಥಳೀಯರು ಪಾತ್ರೆಯನ್ನು ತೆಗೆದು ನೋಡಿದಾಗ ಅದರಲ್ಲಿ ಚಿನ್ನದ ನಾಣ್ಯಗಳಿರುವುದು ಕಂಡುಬಂದಿದೆ. ಕೂಡಲೇ ಸ್ಥಳೀಯ ಮುಖಂಡರು ಅಧಿಕಾರಿಗಳಿಗೆ ಈ ವಿಷಯ ತಿಳಿಸಿದ್ದು, ಪೊಲೀಸರೊಂದಿಗೆ ಸ್ಥಳಕ್ಕೆ ಬಂದ ಅಧಿಕಾರಿಗಳು ಚಿನ್ನದ ನಾಣ್ಯಗಳನ್ನು ವಶಕ್ಕೆ ಪಡೆದಿದ್ದಾರೆ.
ಇನ್ನು ಸಿಕ್ಕಿರುವ ತಾಮ್ರದ ಪಾತ್ರೆಯಲ್ಲಿ ಒಟ್ಟು 505 ಚಿನ್ನದ ನಾಣ್ಯಗಳಿದ್ದು, ಇವು ಸುಮಾರು ಕ್ರಿ.ಶ.12 ನೇ ಶತಮಾನದ್ದಿರಬಹುದು ಎಂದು ಇತಿಹಾಸ ತಜ್ಞರು ಅಂದಾಜಿಸಿದ್ದಾರೆ.
ರಾಹುಲ್ ಗಾಂಧಿ ಓಡಬೇಡಿ, ತಾಕತ್ತಿದ್ದರೆ ಬಂದು ಚರ್ಚೆ ಮಾಡಿ! ವಿಪಕ್ಷ ನಾಯಕನ ವಿರುದ್ಧ ಕಿಡಿಖಾರಿದ ಸಂಸದೆ ಕಂಗನಾ ರಣಾವತ್!
ಹೊಸ ದೆಹಲಿ: ಪ್ರಸ್ತುತ ನಡೆಯುತ್ತಿರುವ ಸಂಸತ್ತಿನ ಮಳೆಗಾಲದ ಅಧಿವೇಶನದಲ್ಲಿ ವಿರೋಧ ಪಕ್ಷಗಳು ಪ್ರತಿದಿನವೂ ಕಲಾಪಕ್ಕೆ ಅಡ್ಡಿಪಡಿಸುತ್ತಿವೆ ಎಂದು ಬಾಲಿವುಡ್ ನಟಿ ಹಾಗೂ ಮಂಡಿ ಕ್ಷೇತ್ರದ ಬಿಜೆಪಿ ಸಂಸದೆ...








