ADVERTISEMENT
Tuesday, June 2, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ರಾಜ್ಯ

ಸರ್ಕಾರಿ ಬಸ್ ಇಂಜಿನ್ ಸೀಜ್ ಆಗಿದೆ ಅದಕ್ಕೆ ಸಿದ್ದರಾಮಯ್ಯ ಸದ್ದಿಲ್ಲದೆ ರಾಜೀನಾಮೆ ನೀಡಿದ್ದಾರೆ: ಆರ್ ಅಶೋಕ್

Shwetha by Shwetha
June 2, 2026
in ರಾಜ್ಯ, Newsbeat, Politics, State, ರಾಜಕೀಯ
Share on FacebookShare on TwitterShare on WhatsappShare on Telegram

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಸಿದ್ದರಾಮಯ್ಯ ಅವರ ರಾಜೀನಾಮೆ ಪರ್ವ ತೀವ್ರ ಸಂಚಲನ ಮೂಡಿಸಿದ್ದು, ಇದೀಗ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಅವರು ಮುಖ್ಯಮಂತ್ರಿಯ ನಿರ್ಗಮನದ ಬಗ್ಗೆ ಅತ್ಯಂತ ಲೇವಡಿ ಮತ್ತು ತೀಕ್ಷ್ಣ ಮಾತುಗಳಿಂದ ವಾಗ್ದಾಳಿ ನಡೆಸಿದ್ದಾರೆ. ರಾಜ್ಯ ಸರ್ಕಾರದ ಆರ್ಥಿಕ ಪರಿಸ್ಥಿತಿ ಸಂಪೂರ್ಣವಾಗಿ ದಿವಾಳಿಯಾಗಿದೆ, ಅಭಿವೃದ್ಧಿ ಕಾರ್ಯಗಳಿಗೆ ಹಣವಿಲ್ಲ ಎನ್ನುವುದು ಖಚಿತವಾದ ಹಿನ್ನೆಲೆಯಲ್ಲೇ ಸಿದ್ದರಾಮಯ್ಯ ಅವರು ಸದ್ದಿಲ್ಲದೆ ಕುರ್ಚಿಯಿಂದ ಕೆಳಗಿಳಿದಿದ್ದಾರೆ ಎಂದು ಅಶೋಕ್ ಗಂಭೀರ ಆರೋಪ ಮಾಡಿದ್ದಾರೆ.

ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಆರ್ ಅಶೋಕ್, ಸಿದ್ದರಾಮಯ್ಯ ಅವರು ಅಷ್ಟು ಸುಲಭವಾಗಿ ಅಧಿಕಾರ ಬಿಟ್ಟುಕೊಡುವ ವ್ಯಕ್ತಿಯಲ್ಲ. ಅವರು ಹಠವಾದಿ ಮತ್ತು ರಾಜಕೀಯವಾಗಿ ವೈಲೆಂಟ್ ಆಗಿರುವವರು. ಅಂತಹ ಸಿದ್ದರಾಮಯ್ಯ ಇಂದು ಸೈಲೆಂಟ್ ಆಗಿ ರಾಜೀನಾಮೆ ನೀಡಿದ್ದಾರೆ ಎಂದರೆ ಅದರ ಹಿಂದೆ ದೊಡ್ಡ ಕಾರಣವಿದೆ. ರಾಜ್ಯದ ಇಂಜಿನ್ ಸೀಜ್ ಆಗಿದೆ, ಸರ್ಕಾರ ನಡೆಸಲು ಬೊಕ್ಕಸದಲ್ಲಿ ಹಣವಿಲ್ಲ ಎಂಬ ಕಹಿ ಸತ್ಯ ಅವರಿಗೆ ಗೊತ್ತಾಗಿದೆ. ಹೀಗಾಗಿ ಗೌರವ ಉಳಿಸಿಕೊಳ್ಳಲು ಅವರು ಈ ಹಾದಿ ತುಳಿದಿದ್ದಾರೆ ಎಂದು ವಿಶ್ಲೇಷಿಸಿದರು.

Related posts

ಕರ್ನಾಟಕ ರಾಜಕೀಯದಲ್ಲಿ ಹೈವೋಲ್ಟೇಜ್ ಡ್ರಾಮಾ ಸಿದ್ದರಾಮಯ್ಯಗೆ ಪ್ರಿಯಾಂಕಾ ಗಾಂಧಿ ಶಾಕ್ ಸಿಎಂ ಪಟ್ಟಕ್ಕೆ ಡಿಕೆ ಶಿವಕುಮಾರ್ ಹೆಸರು ಪ್ರಸ್ತಾಪ!

ಕಾಂಗ್ರೆಸ್ ನಲ್ಲಿ ಹೊಸ ಮನ್ವಂತರ ಗೆಲ್ಲುವ ಕುದುರೆಗೆ ಮಾತ್ರ ಮಣೆ ಹಾಕಲಿದ್ದಾರೆ ರಾಹುಲ್ ಗಾಂಧಿ ಹಿರಿಯ ನಾಯಕರ ಆತಂಕಕ್ಕೆ ಕಾರಣವಾಯಿತೇ ಬದಲಾದ ತಂತ್ರಗಾರಿಕೆ

June 2, 2026
ನಮ್ಮ ಓಟಿನಿಂದ ಗೆದ್ದು ಈಗ ಸಿದ್ದರಾಮಯ್ಯರನ್ನೇ ತೆಗೆಯುತ್ತೀರಾ? ಅಹಿಂದ ಸಂಘಟನೆಯಿಂದ ಹೈಕಮಾಂಡ್ ಗೆ ಖಡಕ್ ವಾರ್ನಿಂಗ್

ರಾಹುಲ್ ಗಾಂಧಿ ಆಫರ್‌ಗೆ ಸಿದ್ದರಾಮಯ್ಯ ನಿರಾಕರಣೆ

June 2, 2026

ಮುಂದುವರಿದು ಡಿ ಕೆ ಶಿವಕುಮಾರ್ ಅವರಿಗೆ ನೇರ ಸವಾಲು ಹಾಕಿದ ಅಶೋಕ್, ಸಿದ್ದರಾಮಯ್ಯ ಅವರು ಮಾಡಿರುವ ಸಾವಿರಾರು ಕೋಟಿ ರೂಪಾಯಿ ಸಾಲದ ಹೊರೆಯನ್ನು ನೀವು ಹೇಗೆ ನಿಭಾಯಿಸುತ್ತೀರಿ? ಈಗ ಅಭಿವೃದ್ಧಿ ಮಾಡಲು ಹಣ ಎಲ್ಲಿದೆ? ಎಂದು ಪ್ರಶ್ನಿಸಿದರು. ಗ್ಯಾರಂಟಿ ಯೋಜನೆಗಳ ವೈಫಲ್ಯದ ಬಗ್ಗೆ ಕಿಡಿಕಾರಿದ ಅವರು, ಗೃಹಲಕ್ಷ್ಮಿ ಯೋಜನೆಯ ಬಾಕಿ ಇರುವ 5 ಸಾವಿರ ಕೋಟಿ ರೂಪಾಯಿಗಳನ್ನು ಕೂಡಲೇ ಬಿಡುಗಡೆ ಮಾಡಬೇಕು. ಹಾಗೆಯೇ ಅನ್ನಭಾಗ್ಯ ಯೋಜನೆಯಡಿ ಜನರಿಗೆ ನೀಡಬೇಕಾದ 700 ಕೋಟಿ ರೂಪಾಯಿಗಳನ್ನು ಕೊಡಲೇಬೇಕು ಎಂದು ಒತ್ತಾಯಿಸಿದರು.

ಒಂದು ವೇಳೆ ಬಾಕಿ ಇರುವ ಹಣವನ್ನು ಬಿಡುಗಡೆ ಮಾಡದಿದ್ದರೆ ಬಿಜೆಪಿ ಸುಮ್ಮನೆ ಕೂರುವುದಿಲ್ಲ. ಜನರ ಪರವಾಗಿ ನಾನು ಬೀದಿಗಿಳಿದು ಹೋರಾಟ ಮಾಡುತ್ತೇನೆ. ಯಾವುದೇ ಮಟ್ಟದ ಹೋರಾಟಕ್ಕೂ ನಾವು ಸಿದ್ಧರಿದ್ದೇವೆ. ಗ್ಯಾರಂಟಿ ಯೋಜನೆಗಳ ಹೆಸರಿನಲ್ಲಿ ಜನರಿಗೆ ಮೋಸ ಮಾಡುವುದನ್ನು ಬಿಜೆಪಿ ಸಹಿಸುವುದಿಲ್ಲ. ಇದನ್ನು ನಾವು ಸವಾಲಾಗಿ ಸ್ವೀಕರಿಸಿದ್ದೇವೆ ಎಂದು ಆರ್ ಅಶೋಕ್ ಎಚ್ಚರಿಕೆ ನೀಡಿದ್ದಾರೆ. ಈ ಮೂಲಕ ರಾಜ್ಯ ರಾಜಕಾರಣದಲ್ಲಿ ಮುಂದಿನ ದಿನಗಳಲ್ಲಿ ದೊಡ್ಡ ಮಟ್ಟದ ಹೋರಾಟದ ಮುನ್ಸೂಚನೆಯನ್ನು ಅವರು ನೀಡಿದ್ದಾರೆ.

ShareTweetSendShare
Join us on:

Related Posts

ಕರ್ನಾಟಕ ರಾಜಕೀಯದಲ್ಲಿ ಹೈವೋಲ್ಟೇಜ್ ಡ್ರಾಮಾ ಸಿದ್ದರಾಮಯ್ಯಗೆ ಪ್ರಿಯಾಂಕಾ ಗಾಂಧಿ ಶಾಕ್ ಸಿಎಂ ಪಟ್ಟಕ್ಕೆ ಡಿಕೆ ಶಿವಕುಮಾರ್ ಹೆಸರು ಪ್ರಸ್ತಾಪ!

ಕಾಂಗ್ರೆಸ್ ನಲ್ಲಿ ಹೊಸ ಮನ್ವಂತರ ಗೆಲ್ಲುವ ಕುದುರೆಗೆ ಮಾತ್ರ ಮಣೆ ಹಾಕಲಿದ್ದಾರೆ ರಾಹುಲ್ ಗಾಂಧಿ ಹಿರಿಯ ನಾಯಕರ ಆತಂಕಕ್ಕೆ ಕಾರಣವಾಯಿತೇ ಬದಲಾದ ತಂತ್ರಗಾರಿಕೆ

by Shwetha
June 2, 2026
0

ಕಾಂಗ್ರೆಸ್ ಪಕ್ಷದ ಆಂತರಿಕ ರಾಜಕಾರಣದಲ್ಲಿ ಈಗ ಮಹತ್ವದ ಬದಲಾವಣೆಯ ಗಾಳಿ ಬೀಸುತ್ತಿದೆ. ರಾಹುಲ್ ಗಾಂಧಿ ಅವರು ಹಳೆಯ ಸಂಪ್ರದಾಯಗಳಿಗೆ ತಿಲಾಂಜಲಿ ಇಟ್ಟು ಹೊಸ ಹಾದಿ ತುಳಿಯಲು ಸಿದ್ಧರಾಗಿದ್ದಾರೆ...

ನಮ್ಮ ಓಟಿನಿಂದ ಗೆದ್ದು ಈಗ ಸಿದ್ದರಾಮಯ್ಯರನ್ನೇ ತೆಗೆಯುತ್ತೀರಾ? ಅಹಿಂದ ಸಂಘಟನೆಯಿಂದ ಹೈಕಮಾಂಡ್ ಗೆ ಖಡಕ್ ವಾರ್ನಿಂಗ್

ರಾಹುಲ್ ಗಾಂಧಿ ಆಫರ್‌ಗೆ ಸಿದ್ದರಾಮಯ್ಯ ನಿರಾಕರಣೆ

by Shwetha
June 2, 2026
0

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ರಾಷ್ಟ್ರ ರಾಜಕಾರಣಕ್ಕೆ ಬರಬೇಕೆಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಸಿದ್ದರಾಮಯ್ಯ ಮೇಲೆ ಒತ್ತಡ ಹೇರಿದ್ದರು ಎನ್ನಲಾಗಿದೆ. ರಾಜ್ಯಸಭೆ ಮೂಲಕ...

ತಿಂಗಳಲ್ಲೇ ವಾಣಿಜ್ಯ LPG ಸಿಲಿಂಡರ್ ಬೆಲೆಯಲ್ಲಿ  ₹1,039 ಏರಿಕೆ

ತಿಂಗಳಲ್ಲೇ ವಾಣಿಜ್ಯ LPG ಸಿಲಿಂಡರ್ ಬೆಲೆಯಲ್ಲಿ ₹1,039 ಏರಿಕೆ

by Shwetha
June 2, 2026
0

ಕೇಂದ್ರ ಸರ್ಕಾರ ದೇಶಾದ್ಯಂತ ವಾಣಿಜ್ಯ ಬಳಕೆಯ LPG ಸಿಲಿಂಡರ್ ದರವನ್ನು ಮತ್ತೊಮ್ಮೆ ಹೆಚ್ಚಳ ಮಾಡಿದೆ. ಕಳೆದ ಒಂದು ತಿಂಗಳ ಅವಧಿಯಲ್ಲಿ ಇದು ಎರಡನೇ ಬಾರಿಗೆ ನಡೆದ ಬೆಲೆ...

ಕಮಲ ತೊರೆದು ಹೊಸ ಹಾದಿ ತುಳಿಯಲಿದ್ದಾರೆಯೇ ಸಿಂಗಂ? ಅಣ್ಣಾಮಲೈ ಮಾಸ್ಟರ್ ಪ್ಲಾನ್ ಗೆ ನಡುಗಿದ ಬಿಜೆಪಿ

ಕಮಲ ತೊರೆದು ಹೊಸ ಹಾದಿ ತುಳಿಯಲಿದ್ದಾರೆಯೇ ಸಿಂಗಂ? ಅಣ್ಣಾಮಲೈ ಮಾಸ್ಟರ್ ಪ್ಲಾನ್ ಗೆ ನಡುಗಿದ ಬಿಜೆಪಿ

by Shwetha
June 2, 2026
0

ತಮಿಳುನಾಡು ರಾಜಕೀಯದ ಫೈರ್ ಬ್ರಾಂಡ್ ಎಂದೇ ಗುರುತಿಸಿಕೊಂಡಿರುವ ರಾಜ್ಯ ಬಿಜೆಪಿಯ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಅವರು ಈಗ ಬಿಜೆಪಿಯಿಂದ ದೂರ ಸರಿಯುವ ಮುನ್ಸೂಚನೆ ನೀಡಿದ್ದಾರೆ. ಈ...

ಸಚಿವ ಸಂಪುಟ ಪುನಾರಚನೆ ಸದ್ದು: ದೆಹಲಿಗೆ ಧಾವಿಸಿದ ಸಚಿವಾಕಾಂಕ್ಷಿಗಳು

ಮೂವರಿಗೆ ಡಿಸಿಎಂ ಪಟ್ಟಕ್ಕೆ ಸಿದ್ದು ಬಣದ ಬ್ಯಾಟಿಂಗ್?

by Shwetha
June 2, 2026
0

ರಾಜ್ಯ ರಾಜಕೀಯದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಬೆನ್ನಲ್ಲೇ ಇದೀಗ ಹೆಚ್ಚುವರಿ ಡಿಸಿಎಂ ಹುದ್ದೆಗಳ ಚರ್ಚೆ ಜೋರಾಗಿದೆ. ಕಾಂಗ್ರೆಸ್ ಒಳವಲಯದಲ್ಲಿ ಸಿದ್ದರಾಮಯ್ಯ ಬಣವು ಮೂರು ಉಪಮುಖ್ಯಮಂತ್ರಿ ಹುದ್ದೆಗಳ ಸೃಷ್ಟಿಗೆ ತೀವ್ರ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram