ಕೊರೊನಾ ಸೋಂಕಿತರನ್ನು ಅಪರಾಧಿಗಳಂತೆ ಕಾಣೋದು ಸರಿಯಲ್ಲ : ಸುಮಲತಾ
ಕೊರೊನಾ ಸೋಂಕಿತರನ್ನ ಅಪರಾಧಿಗಳ ರೀತಿ ಕಾಣುವುದು, ಸಮಾಜದ ನಿಂದನೆಗೆ ಗುರಿ ಮಾಡುವುದು ಸರಿಯಲ್ಲ. ಇದು ಒಂದು ಯುದ್ಧ, ಕರೊನಾ ವಿರುದ್ಧ ಎಲ್ಲರೂ ಒಟ್ಟಾಗಿ ಹೋರಾಡಬೇಕಿದೆ, ಅದು ನಮ್ಮ ಜವಾಬ್ದಾರಿ ಎಂದು ಸಂಸದೆ ಸುಮಲತಾ ಟ್ವಿಟ್ಟರ್ ನಲ್ಲಿ ಬರೆದುಕೊಂಡಿದ್ದಾರೆ.
ಕೊರೊನಾ ಸೋಂಕಿಗೆ ಒಳಗಾಗಿರುವ ಸುಮಲತಾ ಈಗ ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ ಎಂಬ ಸುದ್ದಿಯ ಬಗ್ಗೆ ಟ್ವಿಟ್ಟರ್ ನಲ್ಲಿ ಅವರು ಸ್ಪಷ್ಟನೆ ನೀಡಿದ್ದಾರೆ.
“ನಾನು ಕೊರೊನಾ ದಿಂದ ಗುಣಮುಖ ಆಗಿದ್ದೇನೆ ಎನ್ನುವ ಒಂದು ಸುದ್ದಿ ಹರಿದಾಡುತ್ತಿದೆ. ಆದರೆ, ನಾನು ಸಂಪೂರ್ಣವಾಗಿ ಗುಣಮುಖವಾಗಿರುವುದು, ಕ್ವಾರಂಟೈನ್ ಅವಧಿ ಮುಗಿದು, ಪರೀಕ್ಷೆಯ ಬಳಿಕವೇ ತಿಳಿಯುವುದು. ಸದ್ಯಕ್ಕೆ ಔಷಧಿ ಹಾಗೂ ಸುಶ್ರುಷೆ ಮುಂದುವರೆದಿದೆ.
ನಾನು ಗುಣಮುಖ ಆಗಲೆಂದು ನೀವೆಲ್ಲರೂ ಮಾಡಿದ ಆಶೀರ್ವಾದ, ಹಾರೈಕೆಗಳಿಗೆ ಋಣಿ. ಇನ್ನು ಕೆಲವೇ ದಿನಗಳಲ್ಲಿ ಗುಣಮುಖ ಆಗುವ ಭರವಸೆ ಇದೆ’.
ಕೊರೊನಾ ಸೋಂಕಿತರನ್ನ ಅಪರಾಧಿಗಳ ರೀತಿ ಕಾಣುವುದು, ಸಮಾಜದ ನಿಂದನೆಗೆ ಗುರಿ ಮಾಡುವುದು
ಸರಿಯಲ್ಲ. ಇದು ಒಂದು ಯುದ್ಧ, ಕರೊನಾ ವಿರುದ್ಧ ಎಲ್ಲರೂ ಒಟ್ಟಾಗಿ ಹೋರಾಡಬೇಕಿದೆ. ಮುಖ್ಯವಾಗಿ, ಸೋಕಿತರು ಕ್ವಾರಂಟೈನ್ ಅವಧಿಯನ್ನು ಮತ್ತು ಸರ್ಕಾರದ ಎಲ್ಲಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದು ಅತ್ಯಗತ್ಯ ಹಾಗೂ ಅದು ನಮ್ಮ ಜವಾಬ್ದಾರಿ. ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ತಪ್ಪದೆ ಮುಖಕ್ಕೆ ಮಾಸ್ಕ್ ಧರಿಸುವುದನ್ನ ಮರಿಯಬೇಡಿ’ ಎಂದು ಮನವಿ ಮಾಡಿದ್ದಾರೆ.








