ADVERTISEMENT
Monday, June 29, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ರಾಜ್ಯ

ಆರ್‌ಎಸ್‌ಎಸ್ ನೋಂದಣಿ ಮಾಡಿಸಲು ಹಣ ಇಲ್ಲದಿದ್ದರೆ ನಾವೇ ಫೀಸ್ ಕಟ್ಟುತ್ತೇವೆ: ಸಮನ್ಸ್ ಗೆ ಹೆದರುವ ಮಗ ನಾನಲ್ಲ ಸಚಿವ ಪ್ರಿಯಾಂಕ್ ಖರ್ಗೆ ಟಾಂಗ್

Shwetha by Shwetha
June 29, 2026
in ರಾಜ್ಯ, Newsbeat, Politics, State, ರಾಜಕೀಯ
Share on FacebookShare on TwitterShare on WhatsappShare on Telegram

ಬೆಂಗಳೂರು: ಆರ್ ಎಸ್ ಎಸ್ ಹೂಡಿರುವ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ನ್ಯಾಯಾಲಯ ನೀಡಿರುವ ಸಮನ್ಸ್ ಗೆ ಐಟಿ ಬಿಟಿ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಕಡಕ್ ಪ್ರತಿಕ್ರಿಯೆ ನೀಡಿದ್ದಾರೆ. ನಾವು ಕಾನೂನು ಮತ್ತು ಸಂವಿಧಾನಕ್ಕೆ ಗೌರವ ನೀಡುವವರು, ಹೀಗಾಗಿ ನ್ಯಾಯಾಲಯದ ಸಮನ್ಸ್ ಅನ್ನು ಕಾನೂನಾತ್ಮಕವಾಗಿಯೇ ಎದುರಿಸುತ್ತೇವೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು ಸಂಘ ಪರಿವಾರದ ವಿರುದ್ಧ ವಾಗ್ದಾಳಿ ಮುಂದುವರಿಸಿದರು. ಸಂಘದವರು ನಮ್ಮ ಮಾತು ಅಥವಾ ಸಂವಿಧಾನದ ಮಾತು ಕೇಳದಿದ್ದರೂ ಪರವಾಗಿಲ್ಲ, ಕನಿಷ್ಠ ಪಕ್ಷ ಪೇಜಾವರ ಶ್ರೀಗಳ ಮಾತನ್ನಾದರೂ ಕೇಳಲಿ. ಖುದ್ದು ಪೇಜಾವರ ಶ್ರೀಗಳೇ ಆರ್‌ಎಸ್‌ಎಸ್ ನೋಂದಣಿ ಆಗಬೇಕು ಎಂದು ಹೇಳಿದ್ದಾರೆ. ವಿಶ್ವದ ಅತಿ ದೊಡ್ಡ ಸಂಸ್ಥೆ ಎಂದು ಕರೆಸಿಕೊಳ್ಳುವ ಆರ್‌ಎಸ್‌ಎಸ್ ಕಚೇರಿ ಎಲ್ಲಿದೆ ಮತ್ತು ಅದರ ನೋಂದಣಿ ಆಗಿದೆಯಾ ಎಂಬ ಬಗ್ಗೆ ಯಾರಿಗೂ ಮಾಹಿತಿಯಿಲ್ಲ. ಅದರ ಲೆಕ್ಕಪತ್ರಗಳನ್ನು ಯಾರು ನೋಡಿಕೊಳ್ಳುತ್ತಾರೆ? ಒಂದು ವೇಳೆ ಅವರಿಗೆ ನೋಂದಣಿ ಮಾಡಿಸಿಕೊಳ್ಳಲು ಸಾಧ್ಯವಾಗದಿದ್ದರೆ ನಾವೇ ಮುಂದೆ ನಿಂತು ನೋಂದಣಿ ಮಾಡಿಸಿ ಅದಕ್ಕೆ ಬೇಕಾದ ಶುಲ್ಕವನ್ನು ಪಾವತಿಸುತ್ತೇವೆ ಎಂದು ಲೇವಡಿ ಮಾಡಿದರು.

Related posts

ಕುಮಾರಸ್ವಾಮಿ ಎರಡು ಬಾರಿ ಸಿಎಂ ಆಗಿದ್ದು ನನ್ನ ಬೆಂಬಲದಿಂದಲೇ: ಎಚ್ಡಿಕೆ ಕಾಲೆಳೆದ ಶಾಸಕ ಜಿಟಿ ದೇವೇಗೌಡ

ಕುಮಾರಸ್ವಾಮಿ ಎರಡು ಬಾರಿ ಸಿಎಂ ಆಗಿದ್ದು ನನ್ನ ಬೆಂಬಲದಿಂದಲೇ: ಎಚ್ಡಿಕೆ ಕಾಲೆಳೆದ ಶಾಸಕ ಜಿಟಿ ದೇವೇಗೌಡ

June 29, 2026
ಪೊಲೀಸ್ ಕಸ್ಟಡಿಯಲ್ಲೂ ಬಿಯರ್ ಬೇಕೆಂದು ಹಠ ಹಿಡಿದ ಹಂತಕಿ ಸಿಯಾ ಗೋಯಲ್: ಸಿಯಾ ಗೋಯಲ್ ಕುಡಿತದ ಚಟ ಮುಚ್ಚಿಟ್ಟಿದ್ದ ಪೋಷಕರು ಉದ್ಯಮಿ ಕೊಲೆಗಾರ್ತಿಯ ವಿಚಿತ್ರ ಬೇಡಿಕೆಗೆ ಪೊಲೀಸರೇ ಶಾಕ್

ಪೊಲೀಸ್ ಕಸ್ಟಡಿಯಲ್ಲೂ ಬಿಯರ್ ಬೇಕೆಂದು ಹಠ ಹಿಡಿದ ಹಂತಕಿ ಸಿಯಾ ಗೋಯಲ್: ಸಿಯಾ ಗೋಯಲ್ ಕುಡಿತದ ಚಟ ಮುಚ್ಚಿಟ್ಟಿದ್ದ ಪೋಷಕರು ಉದ್ಯಮಿ ಕೊಲೆಗಾರ್ತಿಯ ವಿಚಿತ್ರ ಬೇಡಿಕೆಗೆ ಪೊಲೀಸರೇ ಶಾಕ್

June 29, 2026

ಸಿಎಜಿ ವರದಿಯಲ್ಲಿ ಗ್ಯಾರಂಟಿ ಯೋಜನೆಗಳ ಅಕ್ರಮದ ಬಗ್ಗೆ ಪ್ರಸ್ತಾಪವಾಗಿರುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಚಿವರು, ವರದಿಯಲ್ಲಿ ಎಲ್ಲಿಯೂ ದೊಡ್ಡ ಹಗರಣ ನಡೆದಿದೆ ಎಂದು ಹೇಳಿಲ್ಲ. ಇದೊಂದು ತಾಂತ್ರಿಕ ಡಿಬಿಟಿ ವ್ಯವಸ್ಥೆಯಾಗಿದ್ದು ತಾಂತ್ರಿಕ ದೋಷದಿಂದ ಕೆಲವರ ಖಾತೆಗೆ ಒಂದಕ್ಕಿಂತ ಹೆಚ್ಚು ಬಾರಿ ಹಣ ಸಂದಾಯವಾಗಿರಬಹುದು. ಇದೇ ಕಾರಣಕ್ಕೆ ಅರ್ಹ ಫಲಾನುಭವಿಗಳನ್ನು ಗುರುತಿಸಲು ಗೃಹಲಕ್ಷ್ಮಿ ಯೋಜನೆಯ ಪರಿಷ್ಕರಣೆ ನಡೆಯುತ್ತಿದೆ. ಸರ್ಕಾರಿ ನೌಕರರು ಇಂತಹ ಸೌಲಭ್ಯಗಳನ್ನು ಪಡೆಯುವುದು ಸರಿಯಲ್ಲ, ಅವರು ಸ್ವಯಂಪ್ರೇರಿತರಾಗಿ ಸೌಲಭ್ಯ ಬಿಟ್ಟುಕೊಡಬೇಕು. ಸದ್ಯಕ್ಕೆ ಯಾವುದೇ ಗಿವ್ ಇಟ್ ಅಪ್ ಅಭಿಯಾನ ಮಾಡುವ ಉದ್ದೇಶ ಸರ್ಕಾರಕ್ಕಿಲ್ಲ ಎಂದು ತಿಳಿಸಿದರು.

ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿಯೊಳಗೆ ನಡೆದ ಅಡ್ಡ ಮತದಾನಕ್ಕೆ ಅವರ ಪಕ್ಷದ ನಾಯಕರ ನಿರ್ಲಕ್ಷ್ಯವೇ ಕಾರಣ ಎಂದು ಅವರದ್ದೇ ವರದಿ ಹೇಳುತ್ತಿದೆ. ಹಾಗಿದ್ದಲ್ಲಿ ಆ ನಾಯಕರು ನೈತಿಕ ಹೊಣೆ ಹೊತ್ತು ರಾಜಿನಾಮೆ ನೀಡಲಿ ಎಂದು ಸವಾಲು ಹಾಕಿದರು. ಇನ್ನು ಜೆಡಿಎಸ್ ನಾಯಕರು ಅಸ್ತಿತ್ವದ ಭೀತಿಯಿಂದ ನಮ್ಮವರ ಮೇಲೆ ಟೀಕೆ ಮಾಡುತ್ತಿದ್ದಾರೆ. ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಾಳಿಗೆ ಪ್ರಚೋದನೆ ನೀಡುವುದು ತಪ್ಪು. ಯಾರೇ ಆಗಲಿ ಕಾನೂನಿನ ಚೌಕಟ್ಟಿನಲ್ಲಿ ವರ್ತಿಸಬೇಕು ಎಂದು ಎಚ್ಚರಿಸಿದರು.

ರಾಜ್ಯದಲ್ಲಿ ಇತ್ತೀಚೆಗೆ ನಡೆಯುತ್ತಿರುವ ಕೌಟುಂಬಿಕ ಕೊಲೆಗಳ ಬಗ್ಗೆ ಕಳವಳ ವ್ಯಕ್ತಪಡಿಸಿದ ಸಚಿವರು, ಮಗಳೇ ಕುಟುಂಬದವರನ್ನು ಕೊಂದ ಘಟನೆ ಹಾಗೂ ಶಿರಾ ಪ್ರಕರಣಗಳು ಆತಂಕಕಾರಿಯಾಗಿವೆ. ಈ ಬಗ್ಗೆ ಇಲಾಖೆಯಿಂದ ಜಾಗೃತಿ ಮೂಡಿಸಲಾಗುತ್ತಿದೆ ಎಂದರು. ಇನ್ನು ಸಂಪುಟ ವಿಸ್ತರಣೆ ಬಗ್ಗೆ ಮಾತನಾಡಿದ ಅವರು, ಹೊಸಬರು ಮತ್ತು ಹಳಬರು ಎಲ್ಲರೂ ಸಚಿವ ಸ್ಥಾನ ಕೇಳುತ್ತಿದ್ದಾರೆ. ಹೈಕಮಾಂಡ್ ದೆಹಲಿಯಲ್ಲಿ ಎಲ್ಲವನ್ನೂ ಚರ್ಚಿಸಿ ಶೀಘ್ರದಲ್ಲೇ ಸೂಕ್ತ ತೀರ್ಮಾನ ಕೈಗೊಳ್ಳಲಿದೆ ಎಂದು ಮಾಹಿತಿ ನೀಡಿದರು.

ShareTweetSendShare
Join us on:

Related Posts

ಕುಮಾರಸ್ವಾಮಿ ಎರಡು ಬಾರಿ ಸಿಎಂ ಆಗಿದ್ದು ನನ್ನ ಬೆಂಬಲದಿಂದಲೇ: ಎಚ್ಡಿಕೆ ಕಾಲೆಳೆದ ಶಾಸಕ ಜಿಟಿ ದೇವೇಗೌಡ

ಕುಮಾರಸ್ವಾಮಿ ಎರಡು ಬಾರಿ ಸಿಎಂ ಆಗಿದ್ದು ನನ್ನ ಬೆಂಬಲದಿಂದಲೇ: ಎಚ್ಡಿಕೆ ಕಾಲೆಳೆದ ಶಾಸಕ ಜಿಟಿ ದೇವೇಗೌಡ

by Shwetha
June 29, 2026
0

ಮೈಸೂರು: ಜೆಡಿಎಸ್ ಹಿರಿಯ ನಾಯಕ ಹಾಗೂ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ ಟಿ ದೇವೇಗೌಡ ಅವರು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ವಿರುದ್ಧ ನೇರ ವಾಗ್ದಾಳಿ...

ಪೊಲೀಸ್ ಕಸ್ಟಡಿಯಲ್ಲೂ ಬಿಯರ್ ಬೇಕೆಂದು ಹಠ ಹಿಡಿದ ಹಂತಕಿ ಸಿಯಾ ಗೋಯಲ್: ಸಿಯಾ ಗೋಯಲ್ ಕುಡಿತದ ಚಟ ಮುಚ್ಚಿಟ್ಟಿದ್ದ ಪೋಷಕರು ಉದ್ಯಮಿ ಕೊಲೆಗಾರ್ತಿಯ ವಿಚಿತ್ರ ಬೇಡಿಕೆಗೆ ಪೊಲೀಸರೇ ಶಾಕ್

ಪೊಲೀಸ್ ಕಸ್ಟಡಿಯಲ್ಲೂ ಬಿಯರ್ ಬೇಕೆಂದು ಹಠ ಹಿಡಿದ ಹಂತಕಿ ಸಿಯಾ ಗೋಯಲ್: ಸಿಯಾ ಗೋಯಲ್ ಕುಡಿತದ ಚಟ ಮುಚ್ಚಿಟ್ಟಿದ್ದ ಪೋಷಕರು ಉದ್ಯಮಿ ಕೊಲೆಗಾರ್ತಿಯ ವಿಚಿತ್ರ ಬೇಡಿಕೆಗೆ ಪೊಲೀಸರೇ ಶಾಕ್

by Shwetha
June 29, 2026
0

ಪುಣೆ: ಮಹಾರಾಷ್ಟ್ರದ ಲೋಹಗಢ ಕೋಟೆಯಲ್ಲಿ ನಡೆದ ಉದ್ಯಮಿ ಕೇತನ್ ಅಗರ್ವಾಲ್ ಕೊಲೆ ಪ್ರಕರಣದ ತನಿಖೆ ತೀವ್ರಗೊಂಡಂತೆ ಹಂತಕಿ ಹಾಗೂ ಭಾವಿ ಪತ್ನಿ ಸಿಯಾ ಗೋಯಲ್ ಕುರಿತಾದ ಅಚ್ಚರಿಯ...

ಗದ್ದಲದ ನಡುವೆ ಶಾಸಕ ಪ್ರದೀಪ್ ಈಶ್ವರ್ ಏಕಾಂಗಿ: ಕಾಂಗ್ರೆಸ್ ಮುಖಂಡರಿಂದಲೇ ಅಂತರ, ಬಯಲಾಯಿತೇ ಒಳಜಗಳ?-ಕೆಂಪೇಗೌಡ ಜಯಂತಿ ಕಾರ್ಯಕ್ರಮದ ಅಸಲಿ ಕಥೆ

ಗದ್ದಲದ ನಡುವೆ ಶಾಸಕ ಪ್ರದೀಪ್ ಈಶ್ವರ್ ಏಕಾಂಗಿ: ಕಾಂಗ್ರೆಸ್ ಮುಖಂಡರಿಂದಲೇ ಅಂತರ, ಬಯಲಾಯಿತೇ ಒಳಜಗಳ?-ಕೆಂಪೇಗೌಡ ಜಯಂತಿ ಕಾರ್ಯಕ್ರಮದ ಅಸಲಿ ಕಥೆ

by Shwetha
June 29, 2026
0

ಚಿಕ್ಕಬಳ್ಳಾಪುರ: ನಗರದ ಕನ್ನಡ ಭವನದಲ್ಲಿ ಆಯೋಜಿಸಲಾಗಿದ್ದ ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಕಿಡಿಗೇಡಿಗಳು ಆಕ್ರೋಶ ವ್ಯಕ್ತಪಡಿಸಿದ ಘಟನೆ ಹೊಸ ತಿರುವು ಪಡೆದಿದೆ. ಶಾಸಕರು...

ಸಂವಿಧಾನ ಉಳಿಸಲು ಈಗಲೇ ಎಚ್ಚೆತ್ತುಕೊಳ್ಳಿ – ಪ್ರಜಾಪ್ರಭುತ್ವ ಹೋದರೆ ಗುಲಾಮಗಿರಿ ಗ್ಯಾರಂಟಿ: ಮತದಾರರ ಪಟ್ಟಿ ಪರಿಷ್ಕರಣೆ ಹೆಸರಲ್ಲಿ ಬಿಜೆಪಿಯ ಮತ ದ್ರೋಹದ ವಿರುದ್ಧ ಸಿದ್ದರಾಮಯ್ಯ ಗುಡುಗು

ಸಂವಿಧಾನ ಉಳಿಸಲು ಈಗಲೇ ಎಚ್ಚೆತ್ತುಕೊಳ್ಳಿ – ಪ್ರಜಾಪ್ರಭುತ್ವ ಹೋದರೆ ಗುಲಾಮಗಿರಿ ಗ್ಯಾರಂಟಿ: ಮತದಾರರ ಪಟ್ಟಿ ಪರಿಷ್ಕರಣೆ ಹೆಸರಲ್ಲಿ ಬಿಜೆಪಿಯ ಮತ ದ್ರೋಹದ ವಿರುದ್ಧ ಸಿದ್ದರಾಮಯ್ಯ ಗುಡುಗು

by Shwetha
June 29, 2026
0

ಮೈಸೂರು: ದೇಶದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಮರೆಯಾದರೆ ಮತ್ತೆ ಗುಲಾಮಗಿರಿ ಕಾಲಿಡುವುದು ನಿಶ್ಚಿತ. ಸಂವಿಧಾನ ಮತ್ತು ಪ್ರಜಾಪ್ರಭುತ್ವವನ್ನು ಉಳಿಸಿಕೊಳ್ಳಲು ಪ್ರತಿಯೊಬ್ಬರೂ ಈಗಲೇ ಎಚ್ಚೆತ್ತುಕೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ...

ದಿನ ಭವಿಷ್ಯ (15-06-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (29-06-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
June 29, 2026
0

ದಿನ ಭವಿಷ್ಯ : 29-06-2026 ಮೇಷ ರಾಶಿ. ಇಂದು ನಿಮಗೆ ಉತ್ಸಾಹಭರಿತ ದಿನವಾಗಲಿದೆ. ವೃತ್ತಿ ಕ್ಷೇತ್ರದಲ್ಲಿ ನಿಮ್ಮ ನಾಯಕತ್ವದ ಗುಣಗಳಿಗೆ ಉತ್ತಮ ಮನ್ನಣೆ ದೊರೆಯುತ್ತದೆ. ಬಹುದಿನಗಳಿಂದ ಬಾಕಿ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram