ADVERTISEMENT
Tuesday, July 21, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ರಾಜ್ಯ

ಅಕ್ರಮ ವಲಸಿಗರಿಗೆ ದಾಖಲೆ ಸೃಷ್ಟಿಸುವ ಹುನ್ನಾರವೇ ಮನೆ ಬಾಗಿಲಿಗೆ ಪ್ರಮಾಣಪತ್ರ ನೀಡುವ ಸರ್ಕಾರದ ಆತುರವೇಕೆ :ರಾಜ್ಯದ ಭದ್ರತೆ ಮತ್ತು ಕನ್ನಡಿಗರ ಹಿತಾಸಕ್ತಿ ಬಲಿ ಕೊಡಬೇಡಿ-ಆರ್ ಅಶೋಕ್

Shwetha by Shwetha
July 21, 2026
in ರಾಜ್ಯ, Newsbeat, Politics, State, ರಾಜಕೀಯ
Share on FacebookShare on TwitterShare on WhatsappShare on Telegram

ರಾಜ್ಯ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಮನೆ ಬಾಗಿಲಿಗೆ ಜಾತಿ ಪ್ರಮಾಣ ಪತ್ರ ಹಾಗೂ ಶಾಶ್ವತ ನಿವಾಸಿ ಪ್ರಮಾಣಪತ್ರ ವಿತರಣೆ ಯೋಜನೆಯು ಸಂವಿಧಾನ ವಿರೋಧಿ ಎಂದು ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಕಿಡಿಕಾರಿದ್ದಾರೆ. ಸರ್ಕಾರದ ಈ ನಡೆ ಅಧಿಕಾರದ ಮಿತಿಯನ್ನು ಮೀರಿ ನಡೆದುಕೊಳ್ಳುವ ಪ್ರಯತ್ನವಾಗಿದ್ದು ಒಕ್ಕೂಟ ವ್ಯವಸ್ಥೆಗೆ ಧಕ್ಕೆ ತರುತ್ತಿದೆ ಎಂದು ಅವರು ಗಂಭೀರ ಆರೋಪ ಮಾಡಿದ್ದಾರೆ.

ಕೇಂದ್ರದ ವ್ಯಾಪ್ತಿಯಲ್ಲಿ ರಾಜ್ಯದ ಹಸ್ತಕ್ಷೇಪವೇಕೆ

Related posts

spain captain rodri with 2025 fifa world cup trophy

fifa world cup 2026- ಅಂದು ಹಾಸ್ಟೆಲ್ ರೂಮ್‍ನಲ್ಲಿದ್ದ ಬಾಲಕ ಇಂದು ಫಿಫಾ ವಿಶ್ವ ಚಾಂಪಿಯನ್ ತಂಡದ ನಾಯಕ..! ರೋಡ್ರಿ ಎಂಬ ಸರಳತೆಯ ಸಾಕಾರಮೂರ್ತಿಯ ಹೆಜ್ಜೆ ಗುರುತು.!

July 21, 2026
ಕನ್ನಡದಲ್ಲೇ ತೀರ್ಪು ಪ್ರಕಟಿಸಿದ ಹೈಕೋರ್ಟ್

ಬಿಡದಿ ಟೌನ್‌ಶಿಪ್ ವಿರುದ್ಧದ ಪಿಐಎಲ್ ವಜಾ ಮಾಡಿದ ಹೈಕೋರ್ಟ್

July 21, 2026

ಭಾರತದ ಸಂವಿಧಾನದ ಪ್ರಕಾರ ಪೌರತ್ವ ವಿದೇಶಿಯರ ಗುರುತಿಸುವಿಕೆ ಮತ್ತು ವಲಸೆಗೆ ಸಂಬಂಧಿಸಿದ ವಿಷಯಗಳು ಸಂಪೂರ್ಣವಾಗಿ ಕೇಂದ್ರ ಸರ್ಕಾರದ ವ್ಯಾಪ್ತಿಗೆ ಬರುತ್ತವೆ. ಇಂತಹ ಸಂದರ್ಭದಲ್ಲಿ ಶಾಶ್ವತ ನಿವಾಸಿ ಪ್ರಮಾಣಪತ್ರ ನೀಡುವ ಅಧಿಕಾರ ರಾಜ್ಯ ಸರ್ಕಾರಕ್ಕೆ ಕೊಟ್ಟವರು ಯಾರು ಎಂದು ಅಶೋಕ್ ಪ್ರಶ್ನಿಸಿದ್ದಾರೆ. ಅಧಿವೇಶನದ ಈ ಸಮಯದಲ್ಲಿ ಇಂತಹ ಪ್ರಮಾಣಪತ್ರಗಳನ್ನು ಮನೆ ಮನೆಗೆ ವಿತರಿಸುವ ಆತುರವೇಕೆ ಇದರ ಹಿಂದೆ ಅಕ್ರಮ ವಲಸಿಗರಿಗೆ ದಾಖಲೆ ಸೃಷ್ಟಿಸುವ ಹುನ್ನಾರವಿದೆಯೇ ಎಂಬ ಅನುಮಾನ ಮೂಡುತ್ತಿದೆ ಎಂದು ಅವರು ಸಂಶಯ ವ್ಯಕ್ತಪಡಿಸಿದ್ದಾರೆ.

ಅಕ್ರಮ ವಲಸಿಗರಿಗೆ ಮಣೆ ಹಾಕುವ ಯತ್ನ

ದೇಶಾದ್ಯಂತ ಮತದಾರರ ಪಟ್ಟಿ ಪರಿಷ್ಕರಣೆ ನಡೆಯುತ್ತಿರುವಾಗ ಈ ಯೋಜನೆಯನ್ನು ಜಾರಿಗೆ ತರುತ್ತಿರುವುದು ವೋಟ್ ಬ್ಯಾಂಕ್ ರಾಜಕೀಯದ ಭಾಗವಾಗಿದೆ. ಅಕ್ರಮವಾಗಿ ನೆಲೆಸಿರುವ ಬಾಂಗ್ಲಾದೇಶಿ ವಲಸಿಗರಿಗೆ ನಕಲಿ ದಾಖಲೆ ಸೃಷ್ಟಿಸಲು ಈ ಸರ್ಕಾರ ಬಾಗಿಲು ತೆರೆಯುತ್ತಿದೆ. ರಾಜ್ಯದ ಭದ್ರತೆ ಮತ್ತು ಚುನಾವಣಾ ವ್ಯವಸ್ಥೆಯ ವಿಶ್ವಾಸಾರ್ಹತೆಗೆ ಧಕ್ಕೆ ತರುವ ಇಂತಹ ಕ್ರಮಗಳನ್ನು ಬಿಜೆಪಿ ಸಹಿಸುವುದಿಲ್ಲ. ಕನ್ನಡಿಗರ ಶಿಕ್ಷಣ ಉದ್ಯೋಗ ಮತ್ತು ಹಕ್ಕುಗಳ ಮೇಲೆ ಇದು ನೇರ ಪರಿಣಾಮ ಬೀರಲಿದೆ ಎಂದು ಅಶೋಕ್ ಎಚ್ಚರಿಸಿದ್ದಾರೆ.

ಗೃಹ ಇಲಾಖೆಯ ವೈಫಲ್ಯದ ಬಗ್ಗೆ ಟೀಕೆ

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿದಿದೆ. ಅಕ್ರಮ ಬಾಂಗ್ಲಾದೇಶಿ ವಲಸಿಗರಿಂದ ಕೆಲವು ಪೊಲೀಸ್ ಅಧಿಕಾರಿಗಳೇ ಲಂಚ ಪಡೆಯುತ್ತಿದ್ದಾರೆ ಎನ್ನುವ ಆರೋಪ ಕೇಳಿಬರುತ್ತಿದೆ. ಗೃಹ ಸಚಿವ ಪರಮೇಶ್ವರ್ ಮತ್ತು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ರಾಜ್ಯದ ಭದ್ರತೆಯ ವಿಚಾರದಲ್ಲಿ ರಾಜಿ ಮಾಡಿಕೊಳ್ಳುತ್ತಿದ್ದಾರೆ. ಕನ್ನಡಿಗರ ಸುರಕ್ಷತೆಯನ್ನು ಕಡೆಗಣಿಸಿ ವಲಸಿಗರಿಗೆ ರಕ್ಷಣೆ ನೀಡಲಾಗುತ್ತಿದೆಯೇ ಎಂದು ಅವರು ಪ್ರಶ್ನಿಸಿದ್ದಾರೆ.

ಜನಾಂದೋಲನದ ಎಚ್ಚರಿಕೆ

ಈ ಕೂಡಲೇ ಶಾಶ್ವತ ನಿವಾಸಿ ಪ್ರಮಾಣಪತ್ರ ವಿತರಿಸುವ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಬೇಕು ಎಂದು ಅಶೋಕ್ ಆಗ್ರಹಿಸಿದ್ದಾರೆ. ಒಂದು ವೇಳೆ ಸರ್ಕಾರ ಹಠಕ್ಕೆ ಬಿದ್ದು ಮುಂದುವರಿದರೆ ಈ ಸಂವಿಧಾನಬಾಹಿರ ನಡೆಯ ವಿರುದ್ಧ ಬಿಜೆಪಿ ಕಾನೂನಾತ್ಮಕವಾಗಿ ಮತ್ತು ರಾಜಕೀಯವಾಗಿ ಹೋರಾಟ ನಡೆಸಲಿದೆ. ರಾಷ್ಟ್ರೀಯ ಭದ್ರತೆಗೆ ಮಾರಕವಾಗಿರುವ ಈ ಯೋಜನೆಯ ವಿರುದ್ಧ ಸಾರ್ವಜನಿಕರಲ್ಲಿ ಅರಿವು ಮೂಡಿಸಿ ದೊಡ್ಡ ಮಟ್ಟದ ಜನಾಂದೋಲನ ರೂಪಿಸಲಾಗುವುದು ಎಂದು ಅವರು ಗುಡುಗಿದ್ದಾರೆ.

ShareTweetSendShare
Join us on:

Related Posts

spain captain rodri with 2025 fifa world cup trophy

fifa world cup 2026- ಅಂದು ಹಾಸ್ಟೆಲ್ ರೂಮ್‍ನಲ್ಲಿದ್ದ ಬಾಲಕ ಇಂದು ಫಿಫಾ ವಿಶ್ವ ಚಾಂಪಿಯನ್ ತಂಡದ ನಾಯಕ..! ರೋಡ್ರಿ ಎಂಬ ಸರಳತೆಯ ಸಾಕಾರಮೂರ್ತಿಯ ಹೆಜ್ಜೆ ಗುರುತು.!

by admin
July 21, 2026
0

ಅಂದು ಹಾಸ್ಟೆಲ್ ರೂಮ್‍ನಲ್ಲಿದ್ದ ಬಾಲಕ ಇಂದು ಫಿಫಾ ವಿಶ್ವ ಚಾಂಪಿಯನ್ ತಂಡದ ನಾಯಕ..! ರೋಡ್ರಿ ಎಂಬ ಸರಳತೆಯ ಸಾಕಾರಮೂರ್ತಿಯ ಹೆಜ್ಜೆ ಗುರುತು.! ಆಟ..ಪಾಠ..ಶಿಸ್ತು...! ಇದು ಆತ ತನ್ನ...

ಕನ್ನಡದಲ್ಲೇ ತೀರ್ಪು ಪ್ರಕಟಿಸಿದ ಹೈಕೋರ್ಟ್

ಬಿಡದಿ ಟೌನ್‌ಶಿಪ್ ವಿರುದ್ಧದ ಪಿಐಎಲ್ ವಜಾ ಮಾಡಿದ ಹೈಕೋರ್ಟ್

by Shwetha
July 21, 2026
0

ಬಿಡದಿ ಟೌನ್‌ಶಿಪ್ ಯೋಜನೆಯನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ (PIL)ಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ. ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ನೇತೃತ್ವದ ವಿಭಾಗೀಯ ಪೀಠ ಈ...

ಪ್ರತಿಭಟನೆಯಿಂದ ಏನು ಸಾಧಿಸುತ್ತೀರಾ ಸಂಸತ್ ಚಲೋ ಹೆಸರಲ್ಲಿ ಗಲಾಟೆ ಮಾಡುತ್ತಿರುವವರಿಗೆ ಹೇಮಾ ಮಾಲಿನಿ ಪ್ರಶ್ನೆ

ಪ್ರತಿಭಟನೆಯಿಂದ ಏನು ಸಾಧಿಸುತ್ತೀರಾ ಸಂಸತ್ ಚಲೋ ಹೆಸರಲ್ಲಿ ಗಲಾಟೆ ಮಾಡುತ್ತಿರುವವರಿಗೆ ಹೇಮಾ ಮಾಲಿನಿ ಪ್ರಶ್ನೆ

by Shwetha
July 21, 2026
0

ಸಂಸತ್ತಿನ ಮುಂಗಾರು ಅಧಿವೇಶನ ಆರಂಭವಾಗುತ್ತಿದ್ದಂತೆಯೇ ದೆಹಲಿಯ ಬೀದಿಗಳಲ್ಲಿ ಪ್ರತಿಭಟನೆಯ ಕಾವು ಜೋರಾಗಿದೆ. ಕಾಕ್ರೋಚ್ ಜನತಾ ಪಾರ್ಟಿ ಹಮ್ಮಿಕೊಂಡಿದ್ದ ಸಂಸದ್ ಚಲೋ ಪಾದಯಾತ್ರೆ ಉದ್ವಿಗ್ನ ಪರಿಸ್ಥಿತಿಗೆ ಕಾರಣವಾಗಿದೆ. ಪ್ರತಿಭಟನಾಕಾರರು...

ಹೋಂಸ್ಟೇ ನೋಂದಣಿ ಕಡ್ಡಾಯ; ನಿಯಮ ಉಲ್ಲಂಘಿಸಿದರೆ ಮಾನ್ಯತೆ ರದ್ದು

ಹೋಂಸ್ಟೇ ನೋಂದಣಿ ಕಡ್ಡಾಯ; ನಿಯಮ ಉಲ್ಲಂಘಿಸಿದರೆ ಮಾನ್ಯತೆ ರದ್ದು

by Shwetha
July 21, 2026
0

ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಹೋಂಸ್ಟೇಗಳು ಪ್ರವಾಸೋದ್ಯಮ ಇಲಾಖೆಯಲ್ಲಿ ಕಡ್ಡಾಯವಾಗಿ ನೋಂದಣಿ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ ಸೂಚಿಸಿದೆ. ಈವರೆಗೆ 500ಕ್ಕೂ ಹೆಚ್ಚು ಹೋಂಸ್ಟೇ ಮಾಲೀಕರು ನೋಂದಣಿಗಾಗಿ ಅರ್ಜಿ ಸಲ್ಲಿಸಿದ್ದು,...

ನಾನು ಮಾತನಾಡುತ್ತಿರುವುದು 28ರ ಹರೆಯದವರ ಬಗ್ಗೆ 56 ವರ್ಷದ ಯುವಕನ ಬಗ್ಗೆ ಅಲ್ಲ  ಸಂಸತ್ ಅಧಿವೇಶನಕ್ಕೂ ಮುನ್ನ ರಾಹುಲ್ ಗಾಂಧಿಗೆ ಪ್ರಧಾನಿ ಮೋದಿ ಪರೋಕ್ಷ ಟಾಂಗ್

ನಾನು ಮಾತನಾಡುತ್ತಿರುವುದು 28ರ ಹರೆಯದವರ ಬಗ್ಗೆ 56 ವರ್ಷದ ಯುವಕನ ಬಗ್ಗೆ ಅಲ್ಲ ಸಂಸತ್ ಅಧಿವೇಶನಕ್ಕೂ ಮುನ್ನ ರಾಹುಲ್ ಗಾಂಧಿಗೆ ಪ್ರಧಾನಿ ಮೋದಿ ಪರೋಕ್ಷ ಟಾಂಗ್

by Shwetha
July 21, 2026
0

ಭಾರತದ ಯುವ ವಿಜ್ಞಾನಿಗಳು ಮತ್ತು ಸ್ಟಾರ್ಟ್ ಅಪ್ ಸಾಧಕರನ್ನು ಕೊಂಡಾಡುವ ಭರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram