ADVERTISEMENT
Wednesday, August 12, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Health

ಮೂಳೆ ಶಸ್ತ್ರಚಿಕಿತ್ಸಾ ವಲಯದಲ್ಲಿ ಹೊಸ ಮೈಲಿಗಲ್ಲು, ಬೆಂಗಳೂರಿನಲ್ಲಿ ತಲೆ ಎತ್ತಲಿದೆ ಅತ್ಯಾಧುನಿಕ ತರಬೇತಿ ಕೇಂದ್ರ

admin by admin
August 12, 2026
in Health, Newsbeat, ಆರೋಗ್ಯ
depuy-synthes-ralc-bangalore-orthopedic-training-center

depuy-synthes-ralc-bangalore-orthopedic-training-center

Share on FacebookShare on TwitterShare on WhatsappShare on Telegram

ಬೆಂಗಳೂರು: ಮೂಳೆ ಚಿಕಿತ್ಸಾ ತಂತ್ರಜ್ಞಾನದಲ್ಲಿ ಜಾಗತಿಕ ಮಟ್ಟದಲ್ಲಿ ಮುಂಚೂಣಿಯಲ್ಲಿರುವ ‘ಡಿಪ್ಯೂ ಸಿಂಥೆಸ್’ ಸಂಸ್ಥೆಯು, ಬೆಂಗಳೂರಿನ ಪ್ರತಿಷ್ಠಿತ ‘ರಾಮಯ್ಯ ಅಡ್ವಾನ್ಸ್ಡ್ ಲರ್ನಿಂಗ್ ಸೆಂಟರ್’ (ಆರ್‌ಎಎಲ್‌ಸಿ) ಜೊತೆ ಮಹತ್ವದ ಒಪ್ಪಂದ ಮಾಡಿಕೊಂಡಿದೆ. ಈ ಮೂಲಕ ಭಾರತದ ಮೂಳೆ ಶಸ್ತ್ರಚಿಕಿತ್ಸಕರಿಗೆ ವರ್ಷಪೂರ್ತಿ ಅತ್ಯಾಧುನಿಕ ಪ್ರಾಯೋಗಿಕ ತರಬೇತಿ ನೀಡಲು ಮುಂದಾಗಿದ್ದು, ದೇಶದ ಮೊಟ್ಟಮೊದಲ ವಿಶೇಷ ಕೇಂದ್ರವನ್ನು ಬೆಂಗಳೂರಿನಲ್ಲಿ ಸ್ಥಾಪಿಸಲಾಗುತ್ತಿದೆ.

ರೋಗಿಗಳಿಗೆ ಅತ್ಯುತ್ತಮ ಚಿಕಿತ್ಸೆ ಒದಗಿಸುವ ನಿಟ್ಟಿನಲ್ಲಿ, ವೈದ್ಯರು ತಮ್ಮ ಕೌಶಲ್ಯಗಳನ್ನು ಮತ್ತಷ್ಟು ಸುಧಾರಿಸಿಕೊಳ್ಳಲು ಈ ಕೇಂದ್ರ ನೆರವಾಗಲಿದೆ.

Related posts

varamahalakshmi-vrata-mantra-for-wealth-and-prosperity

ವರಮಹಾಲಕ್ಷ್ಮಿ ವ್ರತ ದಿನದಂದು ಒಂದು ಮನಇಚ್ಚಾ ಪದ 8 ಬಾರಿ ಹೇಳಿದರೆ ಅಷ್ಟ ಐಶ್ವರ್ಯ ನಿಮ್ಮ ಮನೆ ಬಾಗಿಲಿಗೆ ಬರುತ್ತದೆ.

August 12, 2026
nephroplus-q1-2026-net-profit-surges-41-percent-revenue-growth

ಏಷ್ಯಾದ ಅತಿದೊಡ್ಡ ಡಯಾಲಿಸಿಸ್ ನೆಟ್‌ವರ್ಕ್ ನೆಫ್ರೋಪ್ಲಸ್ ಭರ್ಜರಿ ಸಾಧನೆ, ನಿವ್ವಳ ಲಾಭದಲ್ಲಿ 41% ಭಾರೀ ಏರಿಕೆ!

August 12, 2026

ಏನು ಈ ಹೊಸ ಕೇಂದ್ರದ ಹೈಲೈಟ್ಸ್?

ಈ ಹಿಂದೆ ವರ್ಷಕ್ಕೆ ಕೇವಲ 30 ದಿನಗಳ ಕಾಲ ನಡೆಯುತ್ತಿದ್ದ ತರಬೇತಿ ದಿನಗಳನ್ನು ಈ ಹೊಸ ಕೇಂದ್ರದ ಮೂಲಕ 150ಕ್ಕೂ ಹೆಚ್ಚು ದಿನಗಳಿಗೆ ವಿಸ್ತರಿಸಲಾಗುತ್ತಿದೆ.

ಅಲ್ಲದೆ ಈವರೆಗೆ ವಾರ್ಷಿಕವಾಗಿ 300ಕ್ಕೂ ಹೆಚ್ಚು ವೈದ್ಯರಷ್ಟೇ ತರಬೇತಿ ಪಡೆಯುತ್ತಿದ್ದರು. ಆದರೆ ಈ ಹೊಸ ಸೌಲಭ್ಯದಿಂದಾಗಿ ಇನ್ನು ಮುಂದೆ ಪ್ರತಿ ವರ್ಷ 1,000ಕ್ಕೂ ಹೆಚ್ಚು ಮೂಳೆ ಶಸ್ತ್ರಚಿಕಿತ್ಸಕರಿಗೆ ತರಬೇತಿ ನೀಡುವ ಗುರಿ ಹೊಂದಲಾಗಿದೆ.

ಏನಿದು ಪ್ರಾಯೋಗಿಕ ತರಬೇತಿ? ಇದರಿಂದ ವೈದ್ಯರಿಗೇನು ಲಾಭ?

ನೇರವಾಗಿ ರೋಗಿಗಳಿಗೆ ಶಸ್ತ್ರಚಿಕಿತ್ಸೆ ನಡೆಸುವ ಮುನ್ನ, ವೈದ್ಯರು ನಿಯಂತ್ರಿತ ವಾತಾವರಣದಲ್ಲಿ ಅನಾಟಮಿಕಲ್ ಬಯೋಸ್ಕಿಲ್ಸ್ ತರಬೇತಿ ಪಡೆಯುವುದು ಬಹಳ ಮುಖ್ಯ. ಇದು ವೈದ್ಯರಿಗೆ ಮಾನವನ ಅಂಗರಚನೆಯ ಬಗ್ಗೆ ನಿಖರ ತಿಳುವಳಿಕೆಯನ್ನು ನೀಡುತ್ತದೆ ಮತ್ತು ಸರ್ಜರಿ ಮಾಡುವ ವಿಧಾನವನ್ನು ಮತ್ತಷ್ಟು ಕರಗತ ಮಾಡಿಕೊಳ್ಳಲು ಸಹಾಯ ಮಾಡುತ್ತದೆ.

ಈ ಹೊಸ ಕೇಂದ್ರದಲ್ಲಿ ಒಟ್ಟು 5 ಅತ್ಯಾಧುನಿಕ ವರ್ಕ್‌ಸ್ಟೇಷನ್‌ಗಳಿರಲಿವೆ. ಮೂಳೆ ಮುರಿತ (ಟ್ರಾಮಾ), ಸೊಂಟ ಮತ್ತು ಮಂಡಿ ಮರುಜೋಡಣೆ, ರೊಬೊಟಿಕ್ ಸರ್ಜರಿ, ಸ್ಪೋರ್ಟ್ಸ್ ಮೆಡಿಸಿನ್ ಮುಂತಾದ ವಿಭಾಗಗಳಲ್ಲಿ ಭಾರತದ ಮೂಳೆ ವೈದ್ಯರಿಗೆ ಇಲ್ಲಿ ಅತ್ಯುನ್ನತ ಮಟ್ಟದ ತರಬೇತಿ ಸಿಗಲಿದೆ.

ಈ ಒಪ್ಪಂದದ ಬಗ್ಗೆ ಇನ್ನೂ ಹೆಚ್ಚಿನ ವಿವರಗಳನ್ನು ಹಂಚಿಕೊಂಡಿರುವ ಡಿಪ್ಯೂ ಸಿಂಥೆಸ್‌ನ ಅಂತಾರಾಷ್ಟ್ರೀಯ ಅಧ್ಯಕ್ಷ ವಿಷ್ಣು ಕಾಲ್ರಾ, “ಭಾರತದಲ್ಲಿ ಶಸ್ತ್ರಚಿಕಿತ್ಸಾ ಶಿಕ್ಷಣವನ್ನು ಉನ್ನತೀಕರಿಸುವ ನಮ್ಮ ಬದ್ಧತೆಗೆ ಈ ಒಪ್ಪಂದ ಒಂದು ಪ್ರಮುಖ ಹೆಜ್ಜೆಯಾಗಿದೆ. ಈ ಹ್ಯಾಂಡ್ಸ್ – ಆನ್ ಪ್ರಾಯೋಗಿಕ ತರಬೇತಿಯು ವೈದ್ಯರಲ್ಲಿ ಆತ್ಮವಿಶ್ವಾಸ ಹೆಚ್ಚಿಸಲು, ಕೌಶಲ್ಯಗಳನ್ನು ಉತ್ತಮಪಡಿಸಿಕೊಳ್ಳಲು ಹಾಗೂ ಕಾಲಕ್ಕೆ ತಕ್ಕಂತೆ ಬದಲಾಗುವ ಹೊಸ ತಂತ್ರಜ್ಞಾನಗಳನ್ನು ಕಲಿಯಲು ನೆರವಾಗಲಿದೆ,” ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಪ್ರಸಿದ್ಧ ಜಾನ್ಸನ್ ಅಂಡ್ ಜಾನ್ಸನ್ ಒಡೆತನದ ಡಿಪ್ಯೂ ಸಿಂಥೆಸ್ ಮೂಳೆ ಚಿಕಿತ್ಸಾ ಉಪಕರಣಗಳು ಮತ್ತು ತಂತ್ರಜ್ಞಾನಗಳನ್ನು ಒದಗಿಸುವ ಜಗತ್ತಿನ ಅತಿ ದೊಡ್ಡ ಸಂಸ್ಥೆಯಾಗಿದೆ. ಕಳೆದೆ 130 ವರ್ಷಗಳಿಂದ ಜಗತ್ತಿನಾದ್ಯಂತ ಲಕ್ಷಾಂತರ ರೋಗಿಗಳ ಜೀವನದ ಗುಣಮಟ್ಟವನ್ನು ಸುಧಾರಿಸುವಲ್ಲಿ ಇದು ವೈದ್ಯರಿಗೆ ಬೆನ್ನೆಲುಬಾಗಿ ನಿಂತಿದೆ.

ಕೆಲ ದಿನಗಳ ಹಿಂದಷ್ಟೇ ಸಂಸ್ಥೆಯು ಬೆಂಗಳೂರಿನಲ್ಲಿ ಜಿಸಿಸಿ ಕಚೇರಿಯನ್ನು ತೆರೆಯುವುದಾಗಿ ಘೋಷಿಸಿತ್ತು. ಇದೀಗ ರಾಮಯ್ಯ ಅಡ್ವಾನ್ಸ್ಡ್ ಲರ್ನಿಂಗ್ ಸೆಂಟರ್ ಜೊತೆ ಒಪ್ಪಂದ ಮಾಡಿಕೊಳ್ಳುವ ಮೂಲಕ ಬೆಂಗಳೂರಿನಲ್ಲಿ ತನ್ನ ಉಪಸ್ಥಿತಿಯನ್ನು ಹೆಚ್ಚಿಸುತ್ತಿದೆ.

Tags: #DePuySynthes #RALCBangalore #OrthopedicTraining #HealthcareNews #BangaloreNews #KannadaNews #MedicalInnovation
ShareTweetSendShare
Join us on:

Related Posts

varamahalakshmi-vrata-mantra-for-wealth-and-prosperity

ವರಮಹಾಲಕ್ಷ್ಮಿ ವ್ರತ ದಿನದಂದು ಒಂದು ಮನಇಚ್ಚಾ ಪದ 8 ಬಾರಿ ಹೇಳಿದರೆ ಅಷ್ಟ ಐಶ್ವರ್ಯ ನಿಮ್ಮ ಮನೆ ಬಾಗಿಲಿಗೆ ಬರುತ್ತದೆ.

by admin
August 12, 2026
0

ಮನೆಗೆ ಅಷ್ಟ ಐಶ್ವರ್ಯ ತರುವ ಮಂತ್ರ ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ ಅನುಭವಿಕ ಶ್ರೇಷ್ಠ ವಿದ್ಯೆಗಳನ್ನು ಬೋಧಿಸುವ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ತಂತ್ರಿ ಜ್ಯೋತಿರ್ವಿದ್ವಾನ್ ನಿಮ್ಮ...

nephroplus-q1-2026-net-profit-surges-41-percent-revenue-growth

ಏಷ್ಯಾದ ಅತಿದೊಡ್ಡ ಡಯಾಲಿಸಿಸ್ ನೆಟ್‌ವರ್ಕ್ ನೆಫ್ರೋಪ್ಲಸ್ ಭರ್ಜರಿ ಸಾಧನೆ, ನಿವ್ವಳ ಲಾಭದಲ್ಲಿ 41% ಭಾರೀ ಏರಿಕೆ!

by admin
August 12, 2026
0

ಬೆಂಗಳೂರು: ಕಿಡ್ನಿ ವೈಫಲ್ಯಕ್ಕೆ ತುತ್ತಾದ ರೋಗಿಗಳಿಗೆ ಆಸರೆಯಾಗಿರುವ, ಏಷ್ಯಾದ ಅತಿದೊಡ್ಡ ಡಯಾಲಿಸಿಸ್ ಸೇವಾ ಜಾಲವಾದ ‘ನೆಫ್ರೋಪ್ಲಸ್’ ಪ್ರಸಕ್ತ ಹಣಕಾಸು ವರ್ಷದ ಮೊದಲ ತ್ರೈಮಾಸಿಕದಲ್ಲಿ ಭರ್ಜರಿ ಆರ್ಥಿಕ ಪ್ರಗತಿ...

PR Sreejesh Becomes First Owner of 2026 Yezdi Roadster Green Mamba in India

Bengaluru news – ಭಾರತದ ಮೊದಲ ‘2026 ಯೆಜ್ಡಿ ರೋಡ್‌ಸ್ಟರ್’ ಬೈಕ್ ಒಡೆಯನಾದ ಒಲಿಂಪಿಕ್ ಹೀರೋ ಪಿ.ಆರ್. ಶ್ರೀಜೇಶ್!

by admin
August 12, 2026
0

ಬೆಂಗಳೂರು: ಒಲಿಂಪಿಕ್ ಪದಕ ವಿಜೇತ ಹಾಗೂ ಭಾರತೀಯ ಹಾಕಿ ತಂಡದ ಮಾಜಿ ನಾಯಕ ಪಿ.ಆರ್. ಶ್ರೀಜೇಶ್ ಅವರು ಹೊಸದೊಂದು ಮೈಲಿಗಲ್ಲಿಗೆ ಸಾಕ್ಷಿಯಾಗಿದ್ದಾರೆ. ಜಾವಾ - ಯೆಜ್ಡಿ ಮೋಟಾರ್‌ಸೈಕಲ್ಸ್...

subramanya-swamy-vratam-pooja-vidhi-benefits-kuja-dosha-remedy

Astro- ೧೧ ವಾರಗಳ ಸುಬ್ರಹ್ಮಣ್ಯ ಸ್ವಾಮಿ ಪೂಜಾ ವಿಧಾನ..!

by admin
August 12, 2026
0

ಶ್ರೀ ಸುಬ್ರಹ್ಮಣ್ಯೇಶ್ವರ ಸ್ವಾಮಿ ವ್ರತವು ಅತ್ಯಂತ ವೈಭವದಿಂದ ತುಂಬಿರುವ ಮತ್ತು ಭಕ್ತರ ಆಸೆಗಳನ್ನು ಪೂರೈಸುವ ದೈವಿಕ ಸೃಷ್ಟಿ. ಈ ಉಪವಾಸವು ಪರಮಶಿವುನಿಯ ಪುತ್ರ, ಜ್ಞಾನದಾತ ಸುಬ್ರಹ್ಮಣ್ಯ ಸ್ವಾಮಿಯ...

ಸಿಎಂ ಮನೆಗೆ ಹೋಗಿದ್ದು ನನ್ನಿಂದಾದ ದೊಡ್ಡ ತಪ್ಪು!: ನಾನು ಭ್ರಷ್ಟಾಚಾರ ಮಾಡಿದ್ದೇನಾ? ಸಭಾಪತಿ ಸ್ಥಾನದಿಂದ ಕೆಳಗಿಳಿಸಿದ್ದಕ್ಕೆ ಹೊರಟ್ಟಿ ಕಣ್ಣೀರು!

ಸಿಎಂ ಮನೆಗೆ ಹೋಗಿದ್ದು ನನ್ನಿಂದಾದ ದೊಡ್ಡ ತಪ್ಪು!: ನಾನು ಭ್ರಷ್ಟಾಚಾರ ಮಾಡಿದ್ದೇನಾ? ಸಭಾಪತಿ ಸ್ಥಾನದಿಂದ ಕೆಳಗಿಳಿಸಿದ್ದಕ್ಕೆ ಹೊರಟ್ಟಿ ಕಣ್ಣೀರು!

by Shwetha
August 12, 2026
0

ವಿಧಾನ ಪರಿಷತ್ ಸಭಾಪತಿ ಹುದ್ದೆಯ ಗೌರವಕ್ಕೆ ಧಕ್ಕೆ ತಂದ ಸರ್ಕಾರದ ನಡೆಗೆ ಹಿರಿಯ ಸದಸ್ಯ ಬಸವರಾಜ ಹೊರಟ್ಟಿ ತೀವ್ರ ಆಕ್ರೋಶ. 1956ರ ನಂತರ ರಾಜ್ಯದ ಇತಿಹಾಸದಲ್ಲೇ ಇಂತಹ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram