ADVERTISEMENT
Thursday, August 13, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ರಾಜ್ಯ

ಕರ್ನಾಟಕದಿಂದ ಜಾಗ ಖಾಲಿ ಮಾಡಿಸ್ತೀವಿ- ಗಂಡುಮಕ್ಕಳಿಗೆ ಮರ್ಯಾದೆ ಇದ್ದರೆ ಚಂದ ಕಂದ: ಟಾಕ್ಸಿಕ್ ಟ್ರೇಲರ್ ನೋಡಿ ಯಶ್‌ಗೆ ಬಹಿರಂಗ ಟಕ್ಕರ್ ಕೊಟ್ರಾ ನಟಿ ರಿಷಿಕಾ ಸಿಂಗ್?

Shwetha by Shwetha
August 13, 2026
in ರಾಜ್ಯ, Cinema, Newsbeat, State, ಮನರಂಜನೆ
Share on FacebookShare on TwitterShare on WhatsappShare on Telegram

ಬೆಂಗಳೂರು: ಕನ್ನಡ ಚಿತ್ರರಂಗದ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಟಾಕ್ಸಿಕ್ ಸಿನಿಮಾದ ಟ್ರೇಲರ್ ಬಿಡುಗಡೆಯಾಗಿ ಜಾಗತಿಕ ಮಟ್ಟದಲ್ಲಿ ಭಾರಿ ಸದ್ದು ಮಾಡುತ್ತಿದೆ. ಹಾಲಿವುಡ್ ಶೈಲಿಯ ಅದ್ಧೂರಿ ಮೇಕಿಂಗ್ ಮತ್ತು ಯಶ್ ಅವರ ವಿಭಿನ್ನ ಲುಕ್ ಕಂಡು ಅಭಿಮಾನಿಗಳು ಸಂಭ್ರಮಿಸುತ್ತಿದ್ದರೆ, ಇತ್ತ ಸ್ಯಾಂಡಲ್‌ವುಡ್‌ನಲ್ಲಿ ಹೊಸ ವಿವಾದವೊಂದು ಸೃಷ್ಟಿಯಾಗಿದೆ. ನಟಿ ರಿಷಿಕಾ ಸಿಂಗ್ ಅವರು ಯಶ್ ಮತ್ತು ಟಾಕ್ಸಿಕ್ ಟ್ರೇಲರ್ ವಿರುದ್ಧ ಹರಿಹಾಯ್ದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ದೊಡ್ಡ ಮಟ್ಟದ ಕಂಟ್ರೋವರ್ಸಿಗೆ ಕಾರಣವಾಗಿದೆ.

ಯಶ್‌ಗೆ ನೇರವಾಗಿ ಸವಾಲು ಹಾಕಿದ ರಿಷಿಕಾ ಸಿಂಗ್

Related posts

ಪರಪ್ಪನ ಅಗ್ರಹಾರ ಜೈಲಿನ ಮೇಲಿನ ಸಿಸಿಬಿ ದಾಳಿ ನನ್ನದೇ ಪ್ಲಾನ್: ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಸಿಕ್ಕ ಬೆನ್ನಲ್ಲೇ ರೇಡ್ ಮಾಡಿಸಿದ್ದು ನಾನೇ ಎಂದ ಪ್ರಿಯಾಂಕ್ ಖರ್ಗೆ

ಪರಪ್ಪನ ಅಗ್ರಹಾರ ಜೈಲಿನ ಮೇಲಿನ ಸಿಸಿಬಿ ದಾಳಿ ನನ್ನದೇ ಪ್ಲಾನ್: ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಸಿಕ್ಕ ಬೆನ್ನಲ್ಲೇ ರೇಡ್ ಮಾಡಿಸಿದ್ದು ನಾನೇ ಎಂದ ಪ್ರಿಯಾಂಕ್ ಖರ್ಗೆ

August 13, 2026
ಕಾವೇರಿ ವಿಚಾರದಲ್ಲಿ ರಾಜ್ಯ ಸರ್ಕಾರಕ್ಕೆ ಸ್ವಪಕ್ಷ ಶಾಸಕನ ಶಾಕ್: ತಮಿಳುನಾಡಿಗೆ ನೀರು ಹರಿಸಿದರೆ ಉಗ್ರ ಹೋರಾಟದ ಎಚ್ಚರಿಕೆ

ಕಾವೇರಿ ವಿಚಾರದಲ್ಲಿ ರಾಜ್ಯ ಸರ್ಕಾರಕ್ಕೆ ಸ್ವಪಕ್ಷ ಶಾಸಕನ ಶಾಕ್: ತಮಿಳುನಾಡಿಗೆ ನೀರು ಹರಿಸಿದರೆ ಉಗ್ರ ಹೋರಾಟದ ಎಚ್ಚರಿಕೆ

August 13, 2026

ಹಿರಿಯ ನಿರ್ದೇಶಕ ಎಸ್. ವಿ. ರಾಜೇಂದ್ರ ಸಿಂಗ್ ಬಾಬು ಅವರ ಪುತ್ರಿ ಹಾಗೂ ನಟ ಆದಿತ್ಯ ಅವರ ಸಹೋದರಿಯಾಗಿರುವ ನಟಿ ರಿಷಿಕಾ ಸಿಂಗ್, ತಮ್ಮ ಸಾಮಾಜಿಕ ಜಾಲತಾಣದ ಖಾತೆಯಲ್ಲಿ ವಿಡಿಯೋ ಒಂದನ್ನು ಹಂಚಿಕೊಂಡಿದ್ದಾರೆ. ಐ ಆಮ್ ಟಾಕ್ಸಿಕ್ ಶೀರ್ಷಿಕೆಯಡಿ ವಿಡಿಯೋ ಮಾಡಿ ಯಶ್ ಅವರನ್ನು ತೀವ್ರವಾಗಿ ಟೀಕಿಸಿದ್ದಾರೆ. ಟ್ರೇಲರ್‌ನಲ್ಲಿ ಯಶ್ ಅವರು ನಗ್ನವಾಗಿ ಹಾಗೂ ಹಸಿಬಿಸಿ ದೃಶ್ಯಗಳಲ್ಲಿ ಕಾಣಿಸಿಕೊಂಡಿದ್ದಾರೆ ಎಂದು ಲೇವಡಿ ಮಾಡಿರುವ ಅವರು, ಯಶ್‌ಗೆ ಕರ್ನಾಟಕದಿಂದ ಜಾಗ ಖಾಲಿ ಮಾಡಿಸುವುದಾಗಿ ನೇರ ಎಚ್ಚರಿಕೆ ನೀಡಿದ್ದಾರೆ.

ವಿಡಿಯೋದಲ್ಲಿ ಅತ್ಯಂತ ತೀಕ್ಷ್ಣವಾಗಿ ಮತ್ತು ಪಂಚಿಂಗ್ ಶೈಲಿಯಲ್ಲಿ ಮಾತನಾಡಿರುವ ರಿಷಿಕಾ, ಹೆಣ್ಣುಮಕ್ಕಳಿಗೆ ಅಂದ ಇದ್ದರೆ ಚಂದ, ಗಂಡುಮಕ್ಕಳಿಗೆ ಮರ್ಯಾದೆ ಇದ್ದರೆ ಚಂದ ಕಂದ. ಇದೇನು ಪ್ಯಾಂಟ್ ಬಿಟ್ಟುಕೊಂಡು ಆಗಿಬಿಟ್ಟಿದ್ದೀಯಾ ಮಂಗ? ಮನೆಯಲ್ಲಿ ಹೆಂಡತಿ ಇದ್ದಾಳೆ, ಇದೇನು ಹೀರೋಯಿನ್‌ಗಳ ಜೊತೆ ನಿನ್ನ ಚಕ್ಕಂದ ಕಂದ? ನನಗಂತೂ ಇಷ್ಟ ಆಗಲಿಲ್ಲ ನಿನ್ನ ಹೊಸ ಗಂಧ. ನಿನಗೂ ಹೆಣ್ಣುಮಗಳಿದ್ದಾಳೆ, ದೊಡ್ಡದಾಗಿ ಡೈಲಾಗ್ ಹೊಡೆಯೋಕೆ ಬಂದ? ಹೆಣ್ಮಕ್ಕಳಿಗೆ ರೆಸ್ಪೆಕ್ಟ್ ಇರ್ಲಿ, ಇಲ್ಲಾಂದ್ರ ಜಾಗ ಖಾಲಿ ಮಾಡ್ಸಿಬಿಡ್ತೀವಿ ಕರ್ನಾಟಕದಿಂದ ಎಂದು ಆಕ್ರೋಶ ಹೊರಹಾಕಿದ್ದಾರೆ.

ನೆಟ್ಟಿಗರ ಹಾಗೂ ಯಶ್ ಅಭಿಮಾನಿಗಳ ತೀವ್ರ ಆಕ್ರೋಶ

ರಿಷಿಕಾ ಸಿಂಗ್ ಅವರ ಈ ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ರಾಕಿಂಗ್ ಸ್ಟಾರ್ ಯಶ್ ಅಭಿಮಾನಿಗಳು ಹಾಗೂ ನೆಟ್ಟಿಗರು ಅವರ ವಿರುದ್ಧ ತೀವ್ರವಾಗಿ ತಿರುಗಿಬಿದ್ದಿದ್ದಾರೆ. ಸಿನಿಮಾದಲ್ಲಿ ಅಭಿನಯಿಸಿದ ನಟಿಯರಿಗೇ ಇಲ್ಲದ ಅಭ್ಯಂತರ ನಿಮಗೇಕೆ ಎಂದು ಪ್ರಶ್ನಿಸುತ್ತಿದ್ದಾರೆ. ನಟಿಯರು ವೃತ್ತಿಪರವಾಗಿ, ಸಂಭಾವನೆ ಪಡೆದು ತಮ್ಮ ಮಿತಿಗೆ ಒಳಪಟ್ಟು ನಟಿಸಿದ್ದಾರೆ. ಸ್ವತಃ ಆ ನಟಿಯರೇ ವೇದಿಕೆ ಮೇಲೆ ಬಂದು ಯಶ್ ಜೊತೆ ನಟಿಸಿದ್ದು ಖುಷಿ ನೀಡಿದೆ ಎಂದು ಹೇಳಿರುವಾಗ, ಇವರೇಕೆ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ ಎಂದು ಫ್ಯಾನ್ಸ್ ತರಾಟೆಗೆ ತೆಗೆದುಕೊಂಡಿದ್ದಾರೆ.

ಅಷ್ಟೇ ಅಲ್ಲದೆ, ರಿಷಿಕಾ ಸಿಂಗ್ ಅವರು ಈ ಹಿಂದೆ ಸಿನಿಮಾಗಳಲ್ಲಿ ನಟಿಸಿದ್ದಾಗ ಧರಿಸಿದ್ದ ಬಿಕಿನಿ ದೃಶ್ಯಗಳು, ಗ್ಲಾಮರಸ್ ಫೋಟೋಗಳು ಹಾಗೂ ಬೋಲ್ಡ್ ದೃಶ್ಯಗಳ ಸ್ಕ್ರೀನ್‌ಶಾಟ್‌ಗಳನ್ನು ನೆಟ್ಟಿಗರು ಹಂಚಿಕೊಳ್ಳುತ್ತಿದ್ದಾರೆ. ದುನಿಯಾ ವಿಜಯ್ ಜೊತೆ ಕಂಠೀರವ, ಕಳ್ಳ ಮಳ್ಳ ಸುಳ್ಳ, ಬೆಂಕಿ ಬಿರುಗಾಳಿ, ತುಂಟರು ಮುಂತಾದ ಸಿನಿಮಾಗಳಲ್ಲಿ ನೀವು ನಟಿಸಿದ ದೃಶ್ಯಗಳು ನೆನಪಿಲ್ಲವೇ? ಇದು ನಿಮ್ಮ ಸಂಸ್ಕಾರವೇ ಎಂದು ಫ್ಯಾನ್ಸ್ ಮರುಪ್ರಶ್ನೆ ಹಾಕಿ ಟ್ರೋಲ್ ಮಾಡುತ್ತಿದ್ದಾರೆ.

ಸ್ಯಾಂಡಲ್‌ವುಡ್‌ನ ಪ್ರಭಾವಿ ಸಿನಿಮಾ ಕುಟುಂಬದಿಂದ ಬಂದ ರಿಷಿಕಾ ಸಿಂಗ್, ‘ಕಂಠೀರವ’ ಚಿತ್ರದ ಮೂಲಕ ನಾಯಕಿಯಾಗಿ ಚಿತ್ರರಂಗ ಪ್ರವೇಶಿಸಿದ್ದರು. ನಂತರ ‘ಕಳ್ಳ ಮಳ್ಳ ಸುಳ್ಳ’ ಸಿನಿಮಾದ ಹಾಡೊಂದರಲ್ಲಿ ಬೋಲ್ಡ್ ಆಗಿ ಅಭಿನಯಿಸಿ ಗಮನ ಸೆಳೆದಿದ್ದರು. ಜೊತೆಗೆ ಕನ್ನಡದ ಮೊದಲ ‘ಬಿಗ್ ಬಾಸ್’ ರಿಯಾಲಿಟಿ ಶೋನಲ್ಲೂ ಸ್ಪರ್ಧಿಯಾಗಿದ್ದರು. ಪ್ರಸ್ತುತ ಚಿತ್ರರಂಗದಿಂದ ಕೊಂಚ ದೂರವಿರುವ ಅವರು, ಯಶ್ ವಿರುದ್ಧ ನೀಡಿರುವ ಈ ಹೇಳಿಕೆಯಿಂದಾಗಿ ಮತ್ತೆ ವಿವಾದದ ಕೇಂದ್ರಬಿಂದುವಾಗಿದ್ದಾರೆ.

ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಯಶ್ ಅಭಿಮಾನಿಗಳು ಹಾಗೂ ನೆಟ್ಟಿಗರ ನಡುವೆ ಈ ವಿಷಯವಾಗಿ ದೊಡ್ಡ ಮಟ್ಟದ ಚರ್ಚೆ ನಡೆಯುತ್ತಿದ್ದು, ಈ ವಿವಾದಕ್ಕೆ ನಟ ಯಶ್ ಅಥವಾ ಟಾಕ್ಸಿಕ್ ಚಿತ್ರತಂಡ ಹೇಗೆ ಪ್ರತಿಕ್ರಿಯಿಸಲಿದೆ ಎಂಬುದನ್ನು ಕಾದು ನೋಡಬೇಕಿದೆ.

ShareTweetSendShare
Join us on:

Related Posts

ಪರಪ್ಪನ ಅಗ್ರಹಾರ ಜೈಲಿನ ಮೇಲಿನ ಸಿಸಿಬಿ ದಾಳಿ ನನ್ನದೇ ಪ್ಲಾನ್: ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಸಿಕ್ಕ ಬೆನ್ನಲ್ಲೇ ರೇಡ್ ಮಾಡಿಸಿದ್ದು ನಾನೇ ಎಂದ ಪ್ರಿಯಾಂಕ್ ಖರ್ಗೆ

ಪರಪ್ಪನ ಅಗ್ರಹಾರ ಜೈಲಿನ ಮೇಲಿನ ಸಿಸಿಬಿ ದಾಳಿ ನನ್ನದೇ ಪ್ಲಾನ್: ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಸಿಕ್ಕ ಬೆನ್ನಲ್ಲೇ ರೇಡ್ ಮಾಡಿಸಿದ್ದು ನಾನೇ ಎಂದ ಪ್ರಿಯಾಂಕ್ ಖರ್ಗೆ

by Shwetha
August 13, 2026
0

ಬೆಂಗಳೂರು: ರಾಜಧಾನಿಯ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ ಸಿಸಿಬಿ ಪೊಲೀಸರು ನಡೆಸಿದ ದಿಢೀರ್ ದಾಳಿ ರಾಜ್ಯಾದ್ಯಂತ ಭಾರಿ ಸಂಚಲನ ಮೂಡಿಸಿದೆ. ಈ ಕಾರ್ಯಾಚರಣೆ ವೇಳೆ ಜೈಲಿನಲ್ಲಿದ್ದ...

ಕಾವೇರಿ ವಿಚಾರದಲ್ಲಿ ರಾಜ್ಯ ಸರ್ಕಾರಕ್ಕೆ ಸ್ವಪಕ್ಷ ಶಾಸಕನ ಶಾಕ್: ತಮಿಳುನಾಡಿಗೆ ನೀರು ಹರಿಸಿದರೆ ಉಗ್ರ ಹೋರಾಟದ ಎಚ್ಚರಿಕೆ

ಕಾವೇರಿ ವಿಚಾರದಲ್ಲಿ ರಾಜ್ಯ ಸರ್ಕಾರಕ್ಕೆ ಸ್ವಪಕ್ಷ ಶಾಸಕನ ಶಾಕ್: ತಮಿಳುನಾಡಿಗೆ ನೀರು ಹರಿಸಿದರೆ ಉಗ್ರ ಹೋರಾಟದ ಎಚ್ಚರಿಕೆ

by Shwetha
August 13, 2026
0

ಮಂಡ್ಯ: ಕಾವೇರಿ ನೀರು ಹಂಚಿಕೆ ವಿಚಾರವಾಗಿ ರಾಜ್ಯದಲ್ಲಿ ಮತ್ತೆ ರಾಜಕೀಯ ಕಾವು ಏರತೊಡಗಿದೆ. ಯಾವುದೇ ಕಾರಣಕ್ಕೂ ತಮಿಳುನಾಡಿಗೆ ಕಾವೇರಿ ನೀರನ್ನು ಹರಿಸಬಾರದು, ಒಂದು ವೇಳೆ ರಾಜ್ಯ ಸರ್ಕಾರ...

ಆಗಸ್ಟ್ 13ರ ಕಾವೇರಿ ಹೋರಾಟದ ಬಂದ್‌ಗೆ ವಿಘ್ನ:  ಸಂಘಟನೆಗಳ  ಒಡಕಿನಿಂದ ಅತಂತ್ರವಾಯ್ತು ಕಾವೇರಿ ಹೋರಾಟ

ಕಾವೇರಿ ನೀರು ವಿಚಾರ; ಇಂದು ಕರ್ನಾಟಕ ಬಂದ್‌ಗೆ ವಾಟಾಳ್ ನಾಗರಾಜ್ ಕರೆ

by Shwetha
August 13, 2026
0

ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ವಿರೋಧಿಸಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರು ಇಂದು ಅಖಂಡ ಕರ್ನಾಟಕ ಬಂದ್‌ಗೆ ಕರೆ ನೀಡಿದ್ದಾರೆ. ಕಾವೇರಿ ನೀರು ಬಿಡುಗಡೆಗೆ ಸಂಬಂಧಿಸಿದಂತೆ...

ವಿದ್ಯಾರ್ಥಿ ಪ್ರತಿಭಟನೆ ವಿಚಾರ: 24 ಗಂಟೆಗಳ ಚರ್ಚೆಗೆ ಅಮಿತ್ ಶಾ ಸವಾಲು; ರಾಹುಲ್ ಗಾಂಧಿ ತಿರುಗೇಟು

ವಿದ್ಯಾರ್ಥಿ ಪ್ರತಿಭಟನೆ ವಿಚಾರ: 24 ಗಂಟೆಗಳ ಚರ್ಚೆಗೆ ಅಮಿತ್ ಶಾ ಸವಾಲು; ರಾಹುಲ್ ಗಾಂಧಿ ತಿರುಗೇಟು

by Shwetha
August 13, 2026
0

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ, ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ ನಡೆದ ಪೊಲೀಸ್ ಕ್ರಮ ಹಾಗೂ ರಾಮಮಂದಿರದ ದೇಣಿಗೆಗೆ ಸಂಬಂಧಿಸಿದ ಆರೋಪಗಳ ಕುರಿತು ಸಂಸತ್ತಿನಲ್ಲಿ ಉಂಟಾಗಿರುವ ಗದ್ದಲದ ನಡುವೆ ಕೇಂದ್ರ...

ದಿನ ಭವಿಷ್ಯ (12-08-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (13-08-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
August 13, 2026
0

ದಿನ ಭವಿಷ್ಯ: 13-08-2026. ಮೇಷ ರಾಶಿ ಇಂದು ನಿಮಗೆ ಉತ್ಸಾಹಭರಿತ ದಿನವಾಗಿರುತ್ತದೆ. ನಿಮ್ಮ ಆತ್ಮವಿಶ್ವಾಸ ಹೆಚ್ಚಾಗಲಿದ್ದು ಅಂದುಕೊಂಡ ಕಾರ್ಯಗಳನ್ನು ಸುಲಭವಾಗಿ ಮುಗಿಸುವಿರಿ. ಉದ್ಯೋಗ ಮತ್ತು ಹಣಕಾಸು: ಕಚೇರಿಯಲ್ಲಿ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram