ADVERTISEMENT
Thursday, August 13, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಕ್ಯಾಂಪಸ್ ಪ್ಲೇಸ್‌ಮೆಂಟ್‌ನಲ್ಲಿ ಅಶೋಕ ವಿವಿ 100% ಸಾಧನೆ, ಗರಿಷ್ಠ 42.5 ಲಕ್ಷ ರೂ. ಪ್ಯಾಕೇಜ್ ಪಡೆದು ಬೀಗಿದ ವಿದ್ಯಾರ್ಥಿಗಳು!

admin by admin
August 13, 2026
in Newsbeat, State, Uncategorized, ರಾಜ್ಯ
ashoka-university-placements-100-percent-record-highest-package

ashoka-university-placements-100-percent-record-highest-package

Share on FacebookShare on TwitterShare on WhatsappShare on Telegram

ಕ್ಯಾಂಪಸ್ ಪ್ಲೇಸ್‌ಮೆಂಟ್‌ನಲ್ಲಿ ಅಶೋಕ ವಿವಿ 100% ಸಾಧನೆ, ಗರಿಷ್ಠ 42.5 ಲಕ್ಷ ರೂ. ಪ್ಯಾಕೇಜ್ ಪಡೆದು ಬೀಗಿದ ವಿದ್ಯಾರ್ಥಿಗಳು!

ದೆಹಲಿ – ಎನ್‌ಸಿಆರ್ ಮೂಲದ ಪ್ರಸಿದ್ಧ ಅಶೋಕ ವಿಶ್ವವಿದ್ಯಾಲಯವು 2025–26ನೇ ಸಾಲಿನ ಪ್ಲೇಸ್‌ಮೆಂಟ್‌ನಲ್ಲಿ ನೂರಕ್ಕೆ ನೂರರಷ್ಟು ಸಾಧನೆ ಮಾಡಿದೆ. ಉದ್ಯೋಗದ ನಿರೀಕ್ಷೆಯಲ್ಲಿದ್ದ ಎಲ್ಲ ವಿದ್ಯಾರ್ಥಿಗಳಿಗೂ ಭರ್ಜರಿ ಉದ್ಯೋಗಾವಕಾಶಗಳು ಒಲಿದುಬಂದಿದ್ದು, ವಿದ್ಯಾರ್ಥಿಯೊಬ್ಬರು ಬರೋಬ್ಬರಿ 42.5 ಲಕ್ಷ ರೂ.ಗಳ ವಾರ್ಷಿಕ ವೇತನದ ಪ್ಯಾಕೇಜ್ ಪಡೆದಿದ್ದಾರೆ.

Related posts

upendra-next-level-movie-launch-aradhana-ram-pair

ʻರಿಯಲ್ ಸ್ಟಾರ್ʼ ಉಪೇಂದ್ರ ಅಭಿನಯದ ಕನ್ನಡ – ತೆಲುಗಿನಲ್ಲಿ ನಿರ್ಮಾಣವಾಗುತ್ತಿರುವ ಬಿಗ್‌ ಬಜೆಟ್‌ ‘ನೆಕ್ಟ್ಸ್ ಲೆವೆಲ್’ ಚಿತ್ರಕ್ಕೆ ಅದ್ಧೂರಿ ಚಾಲನೆ: ಉಪ್ಪಿಗೆ ‘ಕಾಟೇರ’ ನಟಿ ಆರಾಧನಾ ರಾಮ್ ಜೋಡಿ!

August 13, 2026
shatkarma-kerala-mantravada-truth-psychology

Astro- ಈ_ಪ್ರಯೋಗಗಳು_ಕೇರಳದ_ಮಂತ್ರವಾದದ_ಅತ್ಯಂತ_ಹಳೆಯ_ಭಾಗ.

August 13, 2026

ಈ ಬಾರಿ ಒಟ್ಟು 163 ಪ್ರತಿಷ್ಠಿತ ಸಂಸ್ಥೆಗಳು ಕ್ಯಾಂಪಸ್ ಸಂದರ್ಶನ ನಡೆಸಿದ್ದು, ವಿದ್ಯಾರ್ಥಿಗಳಿಗೆ 450ಕ್ಕೂ ಹೆಚ್ಚು ಆಫರ್‌ಗಳನ್ನು ನೀಡಿವೆ. ವಿಶೇಷವೆಂದರೆ, 78 ಹೊಸ ಕಂಪನಿಗಳು ವಿವಿಗೆ ಭೇಟಿ ನೀಡಿ ವಿದ್ಯಾರ್ಥಿಗಳನ್ನು ತಮ್ಮ ಕಂಪನಿಗೆ ಆಯ್ಕೆ ಮಾಡಿಕೊಂಡಿವೆ.

ಕಂಪ್ಯೂಟರ್ ಸೈನ್ಸ್‌ಗೆ ಅತಿಹೆಚ್ಚು ಡಿಮ್ಯಾಂಡ್!

ಈ ವರ್ಷ ಎಲ್ಲಾ ವಲಯಗಳಲ್ಲೂ ವಿದ್ಯಾರ್ಥಿಗಳ ಆರಂಭಿಕ ವೇತನದಲ್ಲಿ (ಸಿಟಿಸಿ) ಭಾರಿ ಏರಿಕೆ ಕಂಡು ಬಂದಿದೆ. ಕಂಪ್ಯೂಟರ್ ಸೈನ್ಸ್ ವಿದ್ಯಾರ್ಥಿಯೊಬ್ಬರು ಅತಿ ಹೆಚ್ಚು, ಅಂದರೆ ವಾರ್ಷಿಕ 42.5 ಲಕ್ಷ ರೂ.ಗಳ ಆಫರ್ ಪಡೆದಿದ್ದಾರೆ.

ಇನ್ನು ವಿವಿಯ ಟಾಪ್ ಶೇ. 20ರಷ್ಟು ವಿದ್ಯಾರ್ಥಿಗಳ ಸರಾಸರಿ ವಾರ್ಷಿಕ ವೇತನ 22.5 ಲಕ್ಷ ರೂ.ಗಳಷ್ಟಿದ್ದರೆ, ಮಧ್ಯಮ ವೇತನ 22.0 ಲಕ್ಷ ರೂ. ಆಗಿದೆ.

ಯಾವ ಕ್ಷೇತ್ರಗಳಲ್ಲಿ ಹೆಚ್ಚು ಉದ್ಯೋಗ?

ಆಯ್ಕೆಯಾದ ಒಟ್ಟು ವಿದ್ಯಾರ್ಥಿಗಳಲ್ಲಿ ಶೇ.80ರಷ್ಟು ಮಂದಿ ಆರು ಪ್ರಮುಖ ವಲಯಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದಾರೆ. ಬ್ಯಾಂಕಿಂಗ್ ಮತ್ತು ಹಣಕಾಸು ವಲಯದಲ್ಲಿ ಶೇ. 20ರಷ್ಟು ವಿದ್ಯಾರ್ಥಿಗಳಿಗೆ ಉದ್ಯೋಗ ಸಿಕ್ಕಿದ್ದು, ಸರಾಸರಿ ವೇತನ 12.7 ಲಕ್ಷ ರೂ. ಆಗಿದೆ. ಇನ್ನು ಕನ್ಸಲ್ಟಿಂಗ್‌ ಕ್ಷೇತ್ರದಲ್ಲಿ ಎರಡನೇ ಗರಿಷ್ಠ ಶೇ. 18ರಷ್ಟು ವಿದ್ಯಾರ್ಥಿಗಳು ಉದ್ಯೋಗ ಗಿಟ್ಟಿಸಿಕೊಂಡಿದ್ದು, ಸರಾಸರಿ 16 ಲಕ್ಷ ರೂ. ವೇತನ ಪಡೆದುಕೊಂಡಿದ್ದಾರೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವಲಯದಲ್ಲಿ ಸಂಬಳ ಶೇ. 30ರಷ್ಟು ಭಾರೀ ಏರಿಕೆಯಾಗಿದೆ.

ಸಾಮಾಜಿಕ ಪ್ರಭಾವ ವಲಯದಲ್ಲಿ ಶೇ. 15ರಷ್ಟು ವಿದ್ಯಾರ್ಥಿಗಳಿಗೆ ಅವಕಾಶಗಳು ಸಿಕ್ಕಿದ್ದು, ಸರಾಸರಿ: 11.5 ಲಕ್ಷ ರೂ. ಆರಂಭಿಕ ವೇತನ ಗಳಿಸಲಿದ್ದಾರೆ. ಟೆಕ್ನಾಲಜಿ ವಿಭಾಗದಲ್ಲಿ ಶೇ. 9ರಷ್ಟು ವಿದ್ಯಾರ್ಥಿಗಳಿಗೆ ಉದ್ಯೋಗ ಲಭ್ಯವಾಗಿದ್ದು, ಸರಾಸರಿ 15.1 ಲಕ್ಷ ರೂ. ಸಂಬಳ ಲಭಿಸಿದೆ.

ಡೇಟಾ ಮತ್ತು ರಿಸರ್ಚ್ ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ಕ್ರಮವಾಗಿ ಶೇ. 9 ಹಾಗೂ ಶೇ. 7ರಷ್ಟು ವಿದ್ಯಾರ್ಥಿಗಳಿಗೆ ಉದ್ಯೋಗಾವಕಾಶಗಳನ್ನು ಪಡೆದುಕೊಂಡಿದ್ದು, ಕ್ರಮವಾಗಿ ಸರಾಸರಿ 13.5 ಲಕ್ಷ ರೂ. ಹಾಗೂ 11.9 ಲಕ್ಷ ರೂ. ವೇತನ ಪಡೆದುಕೊಂಡಿದ್ದಾರೆ.

ವಿದೇಶಿ ವಿವಿಗಳಲ್ಲೂ ಅಶೋಕ ವಿವಿ ವಿದ್ಯಾರ್ಥಿಗಳದ್ದೇ ಮೇಲುಗೈ

ಉನ್ನತ ಶಿಕ್ಷಣದ ವಿಚಾರದಲ್ಲೂ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿದ್ದಾರೆ. 135ಕ್ಕೂ ಹೆಚ್ಚು ವಿದ್ಯಾರ್ಥಿಗಳು ಜಾಗತಿಕ ಮಟ್ಟದ ಪ್ರತಿಷ್ಠಿತ ವಿಶ್ವವಿದ್ಯಾಲಯಗಳಿಂದ ಬರೋಬ್ಬರಿ 400ಕ್ಕೂ ಅಧಿಕ ಆಫರ್‌ಗಳನ್ನು ಪಡೆದಿದ್ದಾರೆ. ಆಕ್ಸ್‌ಫರ್ಡ್ – ಕೇಂಬ್ರಿಡ್ಜ್‌ನಿಂದ 24, ಹಾಗೂ ಐವಿ ಲೀಗ್ ವಿವಿಗಳಿಂದ 24 ಆಫರ್‌ಗಳು ಬಂದಿವೆ.

ಪ್ರತಿಷ್ಠಿತ ಸ್ಕಾಲರ್‌ಶಿಪ್‌ಗಳ ಸುರಿಮಳೆ

ರೋಡ್ಸ್, ಗೇಟ್ಸ್ ಕೇಂಬ್ರಿಡ್ಜ್, ಫುಲ್‌ಬ್ರೈಟ್ – ನೆಹರು ಸೇರಿದಂತೆ ವಿಶ್ವದ 19 ಅಂತಾರಾಷ್ಟ್ರೀಯ ಪ್ರತಿಷ್ಠಿತ ಸ್ಕಾಲರ್‌ಶಿಪ್‌ಗಳು ಈ ಬಾರಿ ವಿವಿಯ ವಿದ್ಯಾರ್ಥಿಗಳ ಪಾಲಾಗಿವೆ. 16 ವಿದ್ಯಾರ್ಥಿಗಳು ಪಿಎಚ್‌ಡಿ ಪ್ರವೇಶ ಪಡೆದಿದ್ದು, ಅದರಲ್ಲಿ 12 ಮಂದಿಗೆ ವಿದೇಶದಲ್ಲಿ ಸಂಪೂರ್ಣ ಉಚಿತ ಶಿಕ್ಷಣ ಲಭ್ಯವಾಗಿದೆ.

ಈ ಅಮೋಘ ಸಾಧನೆಯ ಬಗ್ಗೆ ಮಾತನಾಡಿದ ವಿವಿಯ ಕೆರಿಯರ್ ಅಡ್ವಾನ್ಸ್‌ಮೆಂಟ್ ವಿಭಾಗದ ಉಪಾಧ್ಯಕ್ಷೆ ಪ್ರಿಯಾಂಕಾ ಚಂಧೋಕ್, “ವಿದ್ಯಾರ್ಥಿಗಳ ಪ್ರತಿಭೆ ಹಾಗೂ ವಿವಿಧ ಕಂಪನಿಗಳ ಜೊತೆಗಿನ ನಮ್ಮ ದೀರ್ಘಕಾಲದ ಉತ್ತಮ ಬಾಂಧವ್ಯ ಈ ಶೇ. 100ರಷ್ಟು ಪ್ಲೇಸ್‌ಮೆಂಟ್‌ಗೆ ಕಾರಣವಾಗಿದೆ” ಎಂದು ಹರ್ಷ ವ್ಯಕ್ತಪಡಿಸಿದರು.

ಕುಲಪತಿ ಋಷಿಕೇಶ ಟಿ. ಕೃಷ್ಣನ್ ಅವರು, “ನಮ್ಮ ವಿವಿಯ ಬಹುಶಿಸ್ತೀಯ ಶಿಕ್ಷಣ ವ್ಯವಸ್ಥೆಯು ವಿದ್ಯಾರ್ಥಿಗಳನ್ನು ಜಾಗತಿಕ ಮಟ್ಟದ ಪೈಪೋಟಿಗೆ, ವೇಗವಾಗಿ ಬದಲಾಗುತ್ತಿರುವ ತಂತ್ರಜ್ಞಾನದ ಜಗತ್ತಿಗೆ ಸಮರ್ಥವಾಗಿ ಸಜ್ಜುಗೊಳಿಸುತ್ತಿದೆ ಎನ್ನುವುದಕ್ಕೆ ಈ ಸಾಧನೆಯೇ ಸಾಕ್ಷಿ” ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Tags: #AshokaUniversity #CampusPlacements #JobMarket #HighestPackage #ComputerScience #HigherEducation #Oxford #Cambridge #EducationNewsKannada #ಅಶೋಕವಿಶ್ವವಿದ್ಯಾಲಯ #ಉದ್ಯೋಗಸುದ್ದಿ
ShareTweetSendShare
Join us on:

Related Posts

upendra-next-level-movie-launch-aradhana-ram-pair

ʻರಿಯಲ್ ಸ್ಟಾರ್ʼ ಉಪೇಂದ್ರ ಅಭಿನಯದ ಕನ್ನಡ – ತೆಲುಗಿನಲ್ಲಿ ನಿರ್ಮಾಣವಾಗುತ್ತಿರುವ ಬಿಗ್‌ ಬಜೆಟ್‌ ‘ನೆಕ್ಟ್ಸ್ ಲೆವೆಲ್’ ಚಿತ್ರಕ್ಕೆ ಅದ್ಧೂರಿ ಚಾಲನೆ: ಉಪ್ಪಿಗೆ ‘ಕಾಟೇರ’ ನಟಿ ಆರಾಧನಾ ರಾಮ್ ಜೋಡಿ!

by admin
August 13, 2026
0

ಬೆಂಗಳೂರು: ರಿಯಲ್ ಸ್ಟಾರ್ ಉಪೇಂದ್ರ ಅಭಿನಯದ, ಕನ್ನಡ - ತೆಲುಗಿನಲ್ಲಿ ಏಕಕಾಲಕ್ಕೆ ನಿರ್ಮಾಣವಾಗುತ್ತಿರುವ ಬಹುನಿರೀಕ್ಷಿತ ಬಿಗ್ ಬಜೆಟ್ ಸಿನಿಮಾ ‘ನೆಕ್ಟ್ಸ್‌ ಲೆವೆಲ್’ (Next Level) ಅಧಿಕೃತವಾಗಿ ಆರಂಭವಾಗಿದೆ....

shatkarma-kerala-mantravada-truth-psychology

Astro- ಈ_ಪ್ರಯೋಗಗಳು_ಕೇರಳದ_ಮಂತ್ರವಾದದ_ಅತ್ಯಂತ_ಹಳೆಯ_ಭಾಗ.

by admin
August 13, 2026
0

ಇದನ್ನ ಷಟ್ಕರ್ಮ ಅಂತ ಕರೀತಾರೆ - ಅಂದ್ರೆ 6 ಕರ್ಮಗಳು. ಒಡಿಯನ್ ವಿದ್ಯೆಯೂ ಇದರಲ್ಲೇ ಬರುತ್ತೆ. ಇವು ಅಥರ್ವಣ ವೇದದಿಂದ ಬಂದಿವೆ ಅಂತ ಹೇಳ್ತಾರೆ. ಶ್ರೀ ಕ್ಷೇತ್ರ...

nagara-panchami-2026-date-muhurat-significance

ನಾಗ ಪಂಚಮಿ ಹಬ್ಬದ ಮಹತ್ವ ಮತ್ತು ಆಚರಣೆಯ ಮುಖ್ಯಾಂಶಗಳು

by admin
August 13, 2026
0

ನಾಗ ಪಂಚಮಿ ಸೋಮವಾರ, ಆಗಸ್ಟ್ 17, 2026 ನಾಗ ಪಂಚಮಿ ಪೂಜೆ ಮುಹೂರ್ತ - 05:51 AM ರಿಂದ 08:29 AM ಅವಧಿ - 02 ಗಂಟೆಗಳು...

ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾ  ಬ್ಯಾನ್: ಸರ್ಕಾರದಿಂದ ಮಹತ್ವದ ಆದೇಶ, ಅಡಿಕೆ ಬೆಳೆಗಾರರಲ್ಲಿ ಹೆಚ್ಚಿದ ಆತಂಕ

ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾ ಬ್ಯಾನ್: ಸರ್ಕಾರದಿಂದ ಮಹತ್ವದ ಆದೇಶ, ಅಡಿಕೆ ಬೆಳೆಗಾರರಲ್ಲಿ ಹೆಚ್ಚಿದ ಆತಂಕ

by Shwetha
August 13, 2026
0

ಬೆಂಗಳೂರು: ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ ಕರ್ನಾಟಕ ಸರ್ಕಾರ ಮಹತ್ವದ ನಿರ್ಧಾರ ಒಂದನ್ನು ಕೈಗೊಂಡಿದ್ದು, ರಾಜ್ಯಾದ್ಯಂತ ಎಲ್ಲ ರೀತಿಯ ಗುಟ್ಕಾ ಹಾಗೂ ಪಾನ್ ಮಸಾಲಾ ಉತ್ಪಾದನೆ ಮತ್ತು ಮಾರಾಟವನ್ನು...

ನೂತನ ಸಚಿವರಿಗೆ ಖಾತೆ ಹಂಚಿಕೆ;  ಯಾವ ಖಾತೆ?

ನೂತನ ಸಚಿವರಿಗೆ ಖಾತೆ ಹಂಚಿಕೆ; ಯಾವ ಖಾತೆ?

by Shwetha
August 13, 2026
0

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸಚಿವ ಸಂಪುಟಕ್ಕೆ ಆಗಸ್ಟ್ 3ರಂದು ಸೇರ್ಪಡೆಯಾಗಿದ್ದ ನೂತನ ಸಚಿವರಿಗೆ ಕೊನೆಗೂ ಖಾತೆ ಹಂಚಿಕೆ ಮಾಡಲಾಗಿದೆ. ಸಚಿವ ಸಂಪುಟ ವಿಸ್ತರಣೆಯ ಬಳಿಕ ಕಾಂಗ್ರೆಸ್‌ನಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram