ADVERTISEMENT
Tuesday, August 18, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ರಾಜ್ಯ

ಸೊಳ್ಳೆ ಕಾಟಕ್ಕೆ ಕಂಗಾಲಾದ ದರ್ಶನ್: ನಿಯಮ ಮೀರಿ ಏನೂ ಮಾಡಲ್ಲ ಎಂದು ಮುಖಕ್ಕೆ ಹೊಡೆದಂತೆ ಹೇಳಿದ ಡಿಜಿಪಿ ಅಲೋಕ್ ಕುಮಾರ್!

Shwetha by Shwetha
August 18, 2026
in ರಾಜ್ಯ, Newsbeat, State
Share on FacebookShare on TwitterShare on WhatsappShare on Telegram

ಬೆಂಗಳೂರು: ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದ ಪ್ರಮುಖ ಆರೋಪಿಯಾಗಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಸೇರಿರುವ ಸ್ಯಾಂಡಲ್‌ವುಡ್ ನಟ ದರ್ಶನ್ ತೂಗುದೀಪ ಅವರಿಗೆ ಈಗ ಜೈಲಿನಲ್ಲಿ ಹೊಸದೊಂದು ದೊಡ್ಡ ಸಮಸ್ಯೆ ಎದುರಾಗಿದೆ. ಜೈಲಿನಲ್ಲಿ ಸೊಳ್ಳೆಗಳ ಕಾಟ ವಿಪರೀತವಾಗಿದ್ದು, ರಾತ್ರಿಯಿಡೀ ಕಣ್ಣು ಮುಚ್ಚಲು ಸಾಧ್ಯವಾಗುತ್ತಿಲ್ಲ ಎಂದು ದರ್ಶನ್ ಪರದಾಡುತ್ತಿದ್ದಾರೆ. ಆದರೆ, ಈ ಕುರಿತು ರಾಜ್ಯ ಜೈಲುಗಳ ಮಹಾನಿರ್ದೇಶಕರಾದ ಡಿಜಿಪಿ ಅಲೋಕ್ ಕುಮಾರ್ ಅವರು ನೀಡಿದ ಖಡಕ್ ಪ್ರತಿಕ್ರಿಯೆ ಈಗ ಭಾರೀ ಚರ್ಚೆಗೆ ಗ್ರಾಸವಾಗಿದೆ.

ಇತ್ತೀಚೆಗೆ ಪರಪ್ಪನ ಅಗ್ರಹಾರ ಜೈಲಿಗೆ ದಿಢೀರ್ ಭೇಟಿ ನೀಡಿದ್ದ ಡಿಜಿಪಿ ಅಲೋಕ್ ಕುಮಾರ್ ಅವರು ಕಾರಾಗೃಹದ ವ್ಯವಸ್ಥೆ ಹಾಗೂ ಭದ್ರತೆಯನ್ನು ಪರಿಶೀಲಿಸಿದರು. ಈ ಸಂದರ್ಭದಲ್ಲಿ ಅಧಿಕಾರಿಗಳೊಂದಿಗೆ ಪರಿಶೀಲನೆ ನಡೆಸುತ್ತಿದ್ದಾಗ, ನಟ ದರ್ಶನ್ ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ. ಜೈಲಿನಲ್ಲಿ ಸೊಳ್ಳೆಗಳ ಕಾಟ ತಡೆಯಲಾರದೆ ಪ್ರತಿದಿನ ನಿದ್ದೆಗೆಡುತ್ತಿದ್ದೇನೆ. ಇದರಿಂದ ಆರೋಗ್ಯದ ಮೇಲೆಯೂ ತೀವ್ರ ಪರಿಣಾಮ ಬೀರುತ್ತಿದೆ. ಸೊಳ್ಳೆಗಳ ಕಾಟದಿಂದ ಮುಕ್ತಿ ನೀಡಲು ಜೈಲು ಆಡಳಿತ ತಕ್ಷಣವೇ ಸೂಕ್ತ ಕ್ರಮ ಕೈಗೊಳ್ಳಬೇಕು ಅಥವಾ ಪರ್ಯಾಯ ವ್ಯವಸ್ಥೆ ಮಾಡಬೇಕು ಎಂದು ಮನವಿ ಮಾಡಿಕೊಂಡಿದ್ದರು ಎನ್ನಲಾಗಿದೆ.

Related posts

ಅಲ್ಲಾಹನ ಹೊರತು ಯಾರನ್ನೂ ಪೂಜಿಸಲ್ಲ, ಎದ್ದು ನಿಲ್ಲುತ್ತೇನೆ ಆದರೆ ವಂದೇ ಮಾತರಂ ಹಾಡುವುದಿಲ್ಲ, ಕಾಂಗ್ರೆಸ್ ಸಂಸದ ಇಮ್ರಾನ್ ಮಸೂದ್ ವಿವಾದಾತ್ಮಕ ಹೇಳಿಕೆ

ಅಲ್ಲಾಹನ ಹೊರತು ಯಾರನ್ನೂ ಪೂಜಿಸಲ್ಲ, ಎದ್ದು ನಿಲ್ಲುತ್ತೇನೆ ಆದರೆ ವಂದೇ ಮಾತರಂ ಹಾಡುವುದಿಲ್ಲ, ಕಾಂಗ್ರೆಸ್ ಸಂಸದ ಇಮ್ರಾನ್ ಮಸೂದ್ ವಿವಾದಾತ್ಮಕ ಹೇಳಿಕೆ

August 18, 2026
ಹನೂರು ಶೂಟೌಟ್ ಪ್ರಕರಣ ವಿಧಾನಸಭೆಯಲ್ಲಿ ಸದ್ದು; ‘ನಕಲಿ ಎನ್‌ಕೌಂಟರ್’ ಆರೋಪ

ಹನೂರು ಶೂಟೌಟ್ ಪ್ರಕರಣ ವಿಧಾನಸಭೆಯಲ್ಲಿ ಸದ್ದು; ‘ನಕಲಿ ಎನ್‌ಕೌಂಟರ್’ ಆರೋಪ

August 18, 2026

ದರ್ಶನ್ ಅವರ ಈ ಮನವಿಗೆ ಸ್ಥಳದಲ್ಲೇ ಖಡಕ್ ಆಗಿ ಪ್ರತಿಕ್ರಿಯಿಸಿದ ಡಿಜಿಪಿ ಅಲೋಕ್ ಕುಮಾರ್, ಜೈಲಿನಲ್ಲಿ ಯಾವುದೇ ಕೈದಿಗೆ ವಿಶೇಷ ಸೌಲಭ್ಯ ನೀಡಲು ಬರುವುದಿಲ್ಲ ಎಂದು ನೇರವಾಗಿ ತಿಳಿಸಿದ್ದಾರೆ. ಜೈಲು ಮ್ಯಾನ್ಯುವಲ್ ಪ್ರಕಾರ ಬಂದಿಗಳಿಗೆ ಯಾವೆಲ್ಲಾ ಮೂಲಭೂತ ಸೌಲಭ್ಯಗಳನ್ನು ನೀಡಬೇಕೋ ಅವುಗಳನ್ನು ಮಾತ್ರ ಒದಗಿಸಲಾಗುತ್ತದೆ. ಕಾನೂನಿನ ಮುಂದೆ ಎಲ್ಲರೂ ಒಂದೇ, ಮ್ಯಾನ್ಯುವಲ್ ಹೊರತಾಗಿ ಪ್ರತ್ಯೇಕವಾಗಿ ಸೊಳ್ಳೆ ಪರದೆ ಅಥವಾ ಬೇರೆ ಯಾವುದೇ ಹೆಚ್ಚುವರಿ ಸೌಲಭ್ಯ ನೀಡಲು ನಾನೇನು ಮಾಡಲು ಸಾಧ್ಯವಿಲ್ಲ ಎಂದು ಮುಖಕ್ಕೆ ಹೊಡೆದಂತೆ ಹೇಳಿದ್ದಾರೆ.

ಜೈಲಿನಲ್ಲಿ ನಿಯಮಾವಳಿಗಳ ಪ್ರಕಾರ ಸಾಮಾನ್ಯ ಬಂದಿಗಳಿಗೆ ಸಿಗುವ ಸೌಲಭ್ಯಗಳ ವ್ಯಾಪ್ತಿಯಲ್ಲಿ ವ್ಯವಸ್ಥಿತ ಸಮಸ್ಯೆಗಳಿದ್ದರೆ ಬಗೆಹರಿಸಲಾಗುವುದು. ಒಟ್ಟಾರೆಯಾಗಿ ಜೈಲು ಆವರಣದಲ್ಲಿ ಫಾಗಿಂಗ್ ಮಾಡಿಸುವುದು ಅಥವಾ ಕ್ರಿಮಿನಾಶಕ ಸಿಂಪಡಿಸುವುದು ಆಡಳಿತಾತ್ಮಕ ಕೆಲಸ. ಆದರೆ ಒಬ್ಬನೇ ಬಂದಿಗಾಗಿ ವಿಶೇಷ ಸೌಕರ್ಯ ಒದಗಿಸಲು ಜೈಲು ನಿಯಮಗಳಲ್ಲಿ ಅವಕಾಶವಿಲ್ಲ. ನಿಯಮ ಮೀರಿ ಯಾವುದೇ ಅಧಿಕಾರಿಗಳು ನಡೆದುಕೊಂಡರೆ ಅವರ ಮೇಲೆಯೇ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ಅಲೋಕ್ ಕುಮಾರ್ ಎಚ್ಚರಿಸಿದ್ದಾರೆ.

ಇತ್ತೀಚೆಗೆ ಜೈಲಿನಲ್ಲಿ ನಟ ದರ್ಶನ್ ಸಿಗರೇಟ್ ಹಿಡಿದು ರಾಜಾತಿಥ್ಯ ಪಡೆಯುತ್ತಿದ್ದ ಫೋಟೋ ವೈರಲ್ ಆಗಿ ದೊಡ್ಡ ಚರ್ಚೆ ಎದ್ದಿತ್ತು. ಈ ಘಟನೆಯ ಬೆನ್ನಲ್ಲೇ ಜೈಲು ಆಡಳಿತ ಮಂಡಳಿ ಪ್ರತಿಯೊಂದು ಚಟುವಟಿಕೆಯ ಮೇಲೆಯೂ ಹದ್ದಿನ ಕಣ್ಣಿಟ್ಟಿದೆ. ಪ್ರಸ್ತುತ ದರ್ಶನ್ ಸಾಮಾನ್ಯ ಖೈದಿಯಂತೆ ಕಾಲ ಕಳೆಯಬೇಕಾಗಿದ್ದು, ಸೊಳ್ಳೆಗಳ ಕಾಟದ ನಡುವೆಯೇ ರಾತ್ರಿ ಕಳೆಯುವಂತಾಗಿದೆ. ಡಿಜಿಪಿ ಅವರ ಈ ನಿಯಮಬದ್ಧ ಮತ್ತು ಖಡಕ್ ನಿರ್ಧಾರಕ್ಕೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದ್ದು, ಕಾರಾಗೃಹದಲ್ಲಿ ಎಲ್ಲರಿಗೂ ಒಂದೇ ಕಾನೂನು ಇರಬೇಕು ಎಂಬ ಮಾತುಗಳು ಕೇಳಿಬರುತ್ತಿವೆ.

ShareTweetSendShare
Join us on:

Related Posts

ಅಲ್ಲಾಹನ ಹೊರತು ಯಾರನ್ನೂ ಪೂಜಿಸಲ್ಲ, ಎದ್ದು ನಿಲ್ಲುತ್ತೇನೆ ಆದರೆ ವಂದೇ ಮಾತರಂ ಹಾಡುವುದಿಲ್ಲ, ಕಾಂಗ್ರೆಸ್ ಸಂಸದ ಇಮ್ರಾನ್ ಮಸೂದ್ ವಿವಾದಾತ್ಮಕ ಹೇಳಿಕೆ

ಅಲ್ಲಾಹನ ಹೊರತು ಯಾರನ್ನೂ ಪೂಜಿಸಲ್ಲ, ಎದ್ದು ನಿಲ್ಲುತ್ತೇನೆ ಆದರೆ ವಂದೇ ಮಾತರಂ ಹಾಡುವುದಿಲ್ಲ, ಕಾಂಗ್ರೆಸ್ ಸಂಸದ ಇಮ್ರಾನ್ ಮಸೂದ್ ವಿವಾದಾತ್ಮಕ ಹೇಳಿಕೆ

by Shwetha
August 18, 2026
0

ನವದೆಹಲಿ: ಸ್ವಾತಂತ್ರ್ಯ ದಿನೋತ್ಸವದಂದು ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ರಾಷ್ಟ್ರೀಯ ಗೀತೆ ವಂದೇ ಮಾತರಂಗೆ ಸೋನಿಯಾ ಗಾಂಧಿ ಅಡ್ಡಿಪಡಿಸಿದ್ದಾರೆ ಎಂಬ ಬಿಜೆಪಿ ಆರೋಪದ ಬೆನ್ನಲ್ಲೇ, ಕಾಂಗ್ರೆಸ್ ಸಂಸದ ಇಮ್ರಾನ್...

ಹನೂರು ಶೂಟೌಟ್ ಪ್ರಕರಣ ವಿಧಾನಸಭೆಯಲ್ಲಿ ಸದ್ದು; ‘ನಕಲಿ ಎನ್‌ಕೌಂಟರ್’ ಆರೋಪ

ಹನೂರು ಶೂಟೌಟ್ ಪ್ರಕರಣ ವಿಧಾನಸಭೆಯಲ್ಲಿ ಸದ್ದು; ‘ನಕಲಿ ಎನ್‌ಕೌಂಟರ್’ ಆರೋಪ

by Shwetha
August 18, 2026
0

ವಿಧಾನಸಭೆಯ ಸೋಮವಾರದ ಕಲಾಪ ಆರಂಭವಾಗುತ್ತಿದ್ದಂತೆ ಚಾಮರಾಜನಗರ ಜಿಲ್ಲೆಯ ಹನೂರು ಶೂಟೌಟ್ ಪ್ರಕರಣ ಪ್ರಮುಖ ಚರ್ಚೆಯ ವಿಷಯವಾಯಿತು. ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಸರ್ಕಾರದ ವಿರುದ್ಧ ಗಂಭೀರ...

ಜೈಲಿನಲ್ಲಿ ಮೊಬೈಲ್ ಬಳಕೆ ಆರೋಪ; ಪ್ರಜ್ವಲ್ ರೇವಣ್ಣಗೆ ಡಿಜಿಪಿ ಅಲೋಕ್ ಕುಮಾರ್ ತರಾಟೆ?

ಜೈಲಿನಲ್ಲಿ ಮೊಬೈಲ್ ಬಳಕೆ ಆರೋಪ; ಪ್ರಜ್ವಲ್ ರೇವಣ್ಣಗೆ ಡಿಜಿಪಿ ಅಲೋಕ್ ಕುಮಾರ್ ತರಾಟೆ?

by Shwetha
August 18, 2026
0

ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಮಾಜಿ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ, ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾಗ ಮೊಬೈಲ್ ಬಳಸುತ್ತಿರುವ ವಿಡಿಯೋ ವೈರಲ್ ಆದ ಬಳಿಕ ಜೈಲು...

ಮಾಡುವುದು ಅನಾಚಾರ ಮನೆ ಮುಂದೆ ಬೃಂದಾವನ: ಹಿರಿಯ ನಾಯಕ ಖರ್ಗೆಗೆ ಗೌರವ ಕೊಡಿ ಎಂದು ಬಿಎಲ್ ಸಂತೋಷ್‌ಗೆ ಪ್ರದೀಪ್ ಈಶ್ವರ್ ಬುದ್ಧಿಮಾತು!

ಮಾಡುವುದು ಅನಾಚಾರ ಮನೆ ಮುಂದೆ ಬೃಂದಾವನ: ಹಿರಿಯ ನಾಯಕ ಖರ್ಗೆಗೆ ಗೌರವ ಕೊಡಿ ಎಂದು ಬಿಎಲ್ ಸಂತೋಷ್‌ಗೆ ಪ್ರದೀಪ್ ಈಶ್ವರ್ ಬುದ್ಧಿಮಾತು!

by Shwetha
August 18, 2026
0

ಬೆಂಗಳೂರು: ಎಐಸಿಸಿ ರಾಷ್ಟ್ರೀಯ ಅಧ್ಯಕ್ಷ ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ವಿರುದ್ಧ ಏಕವಚನ ಬಳಸಿ ಅನುಚಿತವಾಗಿ ಮಾತನಾಡಿದ್ದಾರೆ ಎಂದು ಆರೋಪಿಸಿ ಬಿಜೆಪಿ...

ದಿನ ಭವಿಷ್ಯ (12-08-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (18-08-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
August 18, 2026
0

ದಿನ ಭವಿಷ್ಯ: 18-08-2026. ಮೇಷ ರಾಶಿ ರಾಶ್ಯಾಧಿಪತಿಯಾದ ಕುಜನ ದಿನವಾದ್ದರಿಂದ ಇಂದು ನಿಮಗೆ ಅತ್ಯಂತ ಉತ್ಸಾಹದ ದಿನವಾಗಿರುತ್ತದೆ. ವೃತ್ತಿ ಮತ್ತು ಹಣಕಾಸು: ಉದ್ಯೋಗ ಸ್ಥಳದಲ್ಲಿ ನಿಮ್ಮ ನಿರ್ಧಾರಗಳಿಗೆ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram