ADVERTISEMENT
Saturday, August 29, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಸದನದ ಒಳಗೆ ಹಾಗೂ ಹೊರಗೆ ನಿರಂತರ ಹೋರಾಟದಿಂದಾಗಿ ರಾಜೀನಾಮೆ ನೀಡಿದ ನಾಗೇಂದ್ರ, ಇದು ದಲಿತ ಸಮುದಾಯಕ್ಕೆ ಸಂದ ಜಯ: ಪ್ರತಿಪಕ್ಷ ನಾಯಕ ಆರ್‌.ಅಶೋಕ

admin by admin
August 29, 2026
in Newsbeat, State, ರಾಜ್ಯ
ashoka-demands-drought-declaration-farmer-loan-waiver-nagendra-resignation

ashoka-demands-drought-declaration-farmer-loan-waiver-nagendra-resignation

Share on FacebookShare on TwitterShare on WhatsappShare on Telegram

ಇದು ಕೇವಲ ಬಿಜೆಪಿಗೆ ಸಿಕ್ಕಿರುವ ಜಯವಲ್ಲ, ಇದು ಇಡೀ ದಲಿತ ಸಮುದಾಯಕ್ಕೆ ಸಂದಿರುವ ಜಯ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಧಿವೇಶನ ಆರಂಭವಾದಾಗಿನಿಂದ ಎಂಟು ದಿನಗಳ ಕಾಲ ನಿರಂತರವಾಗಿ ನಾವು ಹೋರಾಟ ಮಾಡಿದ್ದೇವೆ. ದಲಿತರ ಹಣ ನುಂಗಿದರೆ ಉಳಿಗಾಲವಿಲ್ಲ ಎಂಬ ಪಾಠವನ್ನು ಕಾಂಗ್ರೆಸ್‌ಗೆ ಕಲಿಸಿದ್ದೇವೆ ಎಂದರು.

Related posts

ಪ್ರೇಮ ವೈಫಲ್ಯದಿಂದ ಬಯಲಾಯ್ತು MPSC ಪ್ರಶ್ನೆಪತ್ರಿಕೆ ಸೋರಿಕೆ ಜಾಲ; ಪ್ರಿಯತಮನ ಇ-ಮೇಲ್‌ನಿಂದ ತನಿಖೆ ಆರಂಭ

ಪ್ರೇಮ ವೈಫಲ್ಯದಿಂದ ಬಯಲಾಯ್ತು MPSC ಪ್ರಶ್ನೆಪತ್ರಿಕೆ ಸೋರಿಕೆ ಜಾಲ; ಪ್ರಿಯತಮನ ಇ-ಮೇಲ್‌ನಿಂದ ತನಿಖೆ ಆರಂಭ

August 29, 2026
KPSC ಹಗರಣದ ಆರೋಪ; ಕೇಂದ್ರ ಸಚಿವ HDK ಗಂಭೀರ ವಾಗ್ದಾಳಿ

KPSC ಹಗರಣದ ಆರೋಪ; ಕೇಂದ್ರ ಸಚಿವ HDK ಗಂಭೀರ ವಾಗ್ದಾಳಿ

August 29, 2026

ಬಿಜೆಪಿ-ಜೆಡಿಎಸ್‌ ಒಗ್ಗಟ್ಟಿನಿಂದ ಹೋರಾಟ ಮಾಡಿ ನಾಗೇಂದ್ರ ಅವರ ರಾಜೀನಾಮೆ ಪ್ರಕರಣವನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ದಿವೆ. ಇದೇ ಮೊದಲ ಬಾರಿಗೆ ಇಂತಹ ಅಪರೂಪದ ಘಟನೆ ನಡೆದಿದೆ. ನಮ್ಮ ಹೋರಾಟ ಹಾಗೂ ಗುರಿ ಸ್ಪಷ್ಟವಾಗಿತ್ತು ಎಂದು ವಿಶ್ಲೇಷಿಸಿದರು.

ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ನಾನು ವಿಧಾನಸಭೆಯಲ್ಲಿ ನಿಲುವಳಿ ಸೂಚನೆ ಮಂಡಿಸಿ, ನಂತರ ನಿಯಮ 69ರ ಅಡಿ ಎರಡೂವರೆ ಗಂಟೆಗಳ ಕಾಲ ಈ ಬಗ್ಗೆ ಮಾತಾಡಿದ್ದೆ. ಆ ಸಂದರ್ಭದಲ್ಲಿ ಮಧ್ಯ ಪ್ರವೇಶಿಸಿ ಮಾತನಾಡಿದ್ದ ಸಿದ್ದರಾಮಯ್ಯನವರು 89 ಕೋಟಿ ರೂ. ಹಗರಣ ನಡೆದಿದೆ ಎಂದು ಒಪ್ಪಿಕೊಂಡಿದ್ದರು ಎಂದು ಸ್ಪಷ್ಟಪಡಿಸಿದ್ದರು.

ಪಕ್ಷಕ್ಕಾಗಿ ಲೂಟಿ ಮಾಡಿದ್ದರಾ?

ಆ ನಂತರ ನಾಗೇಂದ್ರ ರಾಜೀನಾಮೆ ನೀಡಿದ್ದರು. ಈಗ ನಾಗೇಂದ್ರ ಅವರೇ ಪತ್ರಿಕಾಗೋಷ್ಠಿ ನಡೆಸಿ ಪಕ್ಷದ ಶಿಸ್ತಿನ ಸಿಪಾಯಿ, ಪಕ್ಷ ಮುಖ್ಯ ಎಂಬ ಕಾರಣಕ್ಕಾಗಿ ರಾಜೀನಾಮೆ ನೀಡಿದ್ದೇನೆ ಎಂದಿದ್ದಾರೆ. ಪಕ್ಷ ಮುಖ್ಯ ಎಂದ ಮೇಲೆ ದಲಿತರ ಹಣವನ್ನು ಹೇಗೆ ಲೂಟಿ ಮಾಡಿದರು? ದಲಿತರ ಹಣ ಲೂಟಿ ಮಾಡಿ ಎಂದು ಪಕ್ಷದಿಂದಲೇ ಸೂಚನೆ ಬಂದಿತ್ತೇ? ದಲಿತರ ಹಣ ತಿಂದ ನಂತರ ಅದು ಖಂಡಿತ ಮುಜುಗರ ಆಗಲೇಬೇಕು ಎಂದು ವ್ಯಂಗ್ಯವಾಡಿದರು.

ಲೂಟಿ ಮಾಡಿದ 187 ಕೋಟಿ ರೂ. ಹಣ ತೆಲಂಗಾಣಕ್ಕೆ ಹೋಗಿತ್ತು. ಸಿಬಿಐ ಹಾಗೂ ಜಾರಿ ನಿರ್ದೇಶನಾಲಯದ ಚಾರ್ಜ್‌ಶೀಟ್‌ನಲ್ಲಿ ಈ ಬಗ್ಗೆ ನಿಖರವಾದ ಮಾಹಿತಿ ಇದೆ. ಸಿಎಂ ಡಿ.ಕೆ.ಶಿವಕುಮಾರ್‌ ಪ್ರಕಾರ ನಾಗೇಂದ್ರ ಅಮಾಯಕರಾಗಿದ್ದರೆ, ಎಲ್ಲ ಚಾರ್ಜ್‌ಶೀಟ್‌ಗಳಲ್ಲೂ ಅವರು ಆರೋಪಿಯಾಗುತ್ತಿರಲಿಲ್ಲ. ಜೊತೆಗೆ ಇವರ ಬಲಗೈ ನೆಕ್ಕಂಟಿ ನಾಗರಾಜ್‌ ಮೇಲೆ ಕೂಡ ಆರೋಪ ಇದೆ. ಈ ಹಗರಣವನ್ನು ಮುಚ್ಚಿಹಾಕುವ ಪ್ರಯತ್ನ ಮಾಡಲಾಗಿತ್ತು. ನಾಗೇಂದ್ರ ಹೆಸರಲ್ಲಿ ನಾವು ಟಾರ್ಗೆಟ್‌ ಮಾಡುತ್ತಿದ್ದೇವೆ ಅನ್ನುತ್ತಿದ್ದಾರೆ, ಆತ್ಮಹತ್ಯೆ ಮಾಡಿಕೊಂಡ ಪಿ.ಚಂದ್ರಶೇಖರನ್‌ ಕೂಡ ದಲಿತರೇ ಆಗಿದ್ದರು ಎಂಬುದನ್ನು ಮರೆಯಬಾರದು. ಆ ದಲಿತ ಅಧಿಕಾರಿಗೆ ನ್ಯಾಯವಿಲ್ಲ, ಅವರ ಕುಟುಂಬದವರಿಗೆ ನ್ಯಾಯ ಸಿಕ್ಕಿಲ್ಲ. ಅಂತಹ ಅಧಿಕಾರಿಯ ಮನೆಗೆ ಹೋಗಿ ಕಾಂಗ್ರೆಸ್‌ನವರು ಸಾಂತ್ವನ ಹೇಳಿಲ್ಲ. ಈ ಪ್ರಕರಣದಲ್ಲಿ ಹಣದ ದುರ್ಬಳಕೆ ನಡೆದು ಬೇನಾಮಿ ಟೆಂಡರ್‌ ನೀಡಲಾಗಿತ್ತು. ಈ ಅಕ್ರಮಕ್ಕಾಗಿ ಒಬ್ಬ ದಲಿತ ಅಧಿಕಾರಿ ಸಾಯಬಹುದು. ಆದರೆ ಸಚಿವರ ರಾಜೀನಾಮೆ ಪಡೆಯಬಾರದು ಎಂಬುದು ಕಾಂಗ್ರೆಸ್‌ ನಿಲುವು ಎಂದು ಹರಿಹಾಯ್ದರು.

ಅಧಿಕಾರಿಗೆ ಅನ್ಯಾಯವಾದರೆ ನ್ಯಾಯ ಕೊಡಬೇಡಿ, ಸಚಿವನಿಗೆ ಅನ್ಯಾಯ ಎನ್ನಿಸಿದರೆ ನ್ಯಾಯ ಕೊಡಿ ಎಂದು ಬಾಬಾ ಸಾಹೇಬ್‌ ಅಂಬೇಡ್ಕರ್‌ ಹೇಳಿದ್ದಾರೆಯೇ? ಇದು ಯಾವ ರೀತಿಯ ದಲಿತ ನ್ಯಾಯ ಎಂದು ಪ್ರಶ್ನಿಸಿದರು.

ಪಿ.ಚಂದ್ರಶೇಖರನ್‌ ಕುಟುಂಬಕ್ಕೆ ಪಿಂಚಣಿ ಹಾಗೂ ಇತರೆ ಸೌಲಭ್ಯಗಳನ್ನು ಇನ್ನೂ ನೀಡಿಲ್ಲ. ಅವರ ಮಗನಿಗೆ ಉದ್ಯೋಗ ಕೊಡುತ್ತೇನೆಂದು ಘೋಷಣೆ ಮಾಡಿ, ಅದನ್ನೂ ಮಾಡಿಲ್ಲ. ಆದರೆ ನಾಗೇಂದ್ರಗೆ ಮಾತ್ರ ಅನ್ಯಾಯವಾಗಿದೆ. ಇಡೀ ಕರ್ನಾಟಕದಲ್ಲಿ ನಾಗೇಂದ್ರ ಒಬ್ಬರೇ ದಲಿತರಾ? ದಲಿತರ 187 ಕೋಟಿ ರೂ. ದಲಿತರ ಪ್ರದೇಶಾಭಿವೃದ್ಧಿಗೆ, ಅವರ ಮಕ್ಕಳ ಶಾಲೆಗೆ, ಉದ್ಯೋಗ ಯೋಜನೆಗಳಿಗೆ ಬಳಕೆಯಾಗಬೇಕಿತ್ತು. ನಾವು ಇದಕ್ಕಾಗಿ ಹೋರಾಟ ಮಾಡುತ್ತಿದ್ದೇವೆ ಎಂದ ಮೇಲೆ ಇದು ಹೇಗೆ ದಲಿತರ ವಿರೋಧಿ ನಿಲುವಾಗುತ್ತದೆ? ನಾನು ಅಧಿವೇಶನದಲ್ಲಿ ಸರಿಯಾದ ದಾಖಲೆಗಳನ್ನು ನೀಡಿದ್ದೇನೆ. ಸುಮ್ಮನೆ ಮಾತಾಡಲು ಇದು ಕಡಲೆಕಾಯಿ ವ್ಯಾಪಾರವಲ್ಲ. ಅಧಿಕಾರಿ ಆತ್ಮಹತ್ಯೆ ಪತ್ರದಲ್ಲಿ ಹಣದ ಮೊತ್ತ ನಮೂದಿಸಿರುವ ಬಗ್ಗೆ ನಾನು ದಾಖಲೆಗಳನ್ನು ನೀಡಿದ್ದೇನೆ. ಸಿಬಿಐ ಪ್ರಕಟಿಸಿದ್ದ ಅಂಶಗಳನ್ನು ಕೂಡ ದಾಖಲೆಯಾಗಿ ಸದನಕ್ಕೆ ನೀಡಿದ್ದೇನೆ. ಸಿಬಿಐ ಪ್ರಕಟಣೆಯಲ್ಲೇ ನಾಗೇಂದ್ರ ಅವರನ್ನು ʼಕಿಂಗ್‌ಪಿನ್‌ʼ ಎಂದು ಉಲ್ಲೇಖಿಸಸಲಾಗಿದೆ. ಇದು ತಪ್ಪಾಗಿದ್ದರೆ ಸಿಬಿಐ ಹಾಗೂ ಇಡಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಬೇಕಿತ್ತು ಎಂದು ಸವಾಲು ಹಾಕಿದರು.

5 ಕೋಟಿ ರೂ. ಗಿಂತ ಹೆಚ್ಚಿನ ಟೆಂಡರ್‌ ಅಥವಾ ವರ್ಗಾವಣೆಗೆ ಸಚಿವ ಸಂಪುಟದ ಅನಮೋದನೆ ಬೇಕಾಗುತ್ತದೆ. 50-60 ಕೋಟಿ ರೂ. ವರ್ಗಾವಣೆ ಮಾಡಿದ್ದು ಹೇಗೆ? ಸುಮಾರು 600 ಖಾತೆಗಳಿಗೆ ಒಬ್ಬ ಅಕೌಂಟೆಂಟ್‌ ಹಣ ವರ್ಗಾವಣೆ ಮಾಡಲು ಸಾಧ್ಯವೇ ಇಲ್ಲ. ಇದನ್ನು ಮಾಡಿದ್ದು ಸಚಿವರ ಮೌಖಿಕ ಸೂಚನೆ ಮೇರೆಗೆ ಎಂದು ಆತ್ಮಹತ್ಯೆ ಪತ್ರದಲ್ಲಿ ಬರೆಯಲಾಗಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದಿಂದ ಬ್ಯಾಂಕ್‌ಗಳಿಗೆ ಅಧಿಕೃತವಾಗಿ ಪತ್ರ ಬರೆಯಲಾಗಿದೆ. ಯೂನಿಯನ್‌ ಬ್ಯಾಂಕ್‌ನ ಎಂ.ಜಿ. ರಸ್ತೆ ಶಾಖೆಯಲ್ಲಿ ಹಣ ಠೇವಣಿ ಇಟ್ಟು, ಅದಕ್ಕೆ ಸಾಲ ನೀಡಿ ಎಂದು ಕೇಳಲಾಗಿದೆ. ಹಣ ಇರುವಾಗ ಸಾಲ ಯಾಕೆ ಪಡೆಯಬೇಕು? ಈ ಎಲ್ಲ ವಿಷಯಗಳ ಕುರಿತು 37 ದಾಖಲೆಗಳನ್ನು ನಾನು ಬಿಡುಗಡೆಗೊಳಿಸಿದ್ದೇನೆ. ವಿಧಿವಿಜ್ಞಾನ ಪರೀಕ್ಷೆಯ ಮೊಬೈಲ್ ಚಾಟ್ ವಿವರವನ್ನೂ ಸದನದಲ್ಲಿ ತೋರಿಸಿದ್ದೇನೆ ಎಂದರು.

31 ಪ್ರಕರಣ ಇದೆ

ಎಸ್‌ಐಟಿ ಮಾಡಿರುವ ಎಫ್‌ಎಸ್‌ಎಲ್‌ ವರದಿಯಲ್ಲೂ ನಾಗೇಂದ್ರ ಹಾಗೂ ಇತರರ ಚಾಟ್ ಮಾತುಕತೆ ವಿವರವಿದೆ. ನಾಗೇಂದ್ರ ಅಮಾಯಕರಾಗಿದ್ದರೆ ಅವರ ವಿರುದ್ಧ ಒಂದು ಕೇಸು ಇರಬೇಕಿತ್ತು. ಆದರೆ ಲೋಕಾಯುಕ್ತದಲ್ಲಿ ಅವರ ವಿರುದ್ಧ 12 ಸೇರಿದಂತೆ ಒಟ್ಟು 35 ಪ್ರಕರಣಗಳಿವೆ. ನಾನು ಅಧಿಕೃತ ದಾಖಲೆಗಳನ್ನು ನೀಡಿರುವುದಕ್ಕೆ ಇಕ್ಕಟ್ಟಿಗೆ ಸಿಲುಕಿ ರಾಜೀನಾಮೆ ನೀಡುವ ಪ್ರಸಂಗ ಬಂದಿದೆ. ತಪ್ಪು ಮಾಡಿಲ್ಲವೆಂದರೆ ಸಿದ್ದರಾಮಯ್ಯನವರ ಅವಧಿಯಲ್ಲಿ ರಾಜೀನಾಮೆ ಪಡೆದಿದ್ದೇಕೆ? ಸಿದ್ದರಾಮಯ್ಯನವರಿಗೆ ಹಾಗೂ ಆಗ ಡಿಸಿಎಂ ಆಗಿದ್ದ ಡಿ.ಕೆ.ಶಿವಕುಮಾರ್‌ಗೆ ಇವರು ದಲಿತರು ಎಂದು ಆಗ ಗೊತ್ತಿರಲಿಲ್ಲವೇ? ಯಾಕೆ ಅದನ್ನು ಸಿಎಂ ಡಿ.ಕೆ.ಶಿವಕುಮಾರ್‌ ಆಗ ತಡೆಯಲಿಲ್ಲ? ಆಗಲೇ ಡಿ.ಕೆ.ಶಿವಕುಮಾರ್‌ ದೆಹಲಿಗೆ ಹೋಗಿ ರಾಹುಲ್‌ ಗಾಂಧಿಗೆ ಮನವರಿಕೆ ಮಾಡಿ ರಾಜೀನಾಮೆ ನೀಡುವುದನ್ನು ತಪ್ಪಿಸಬೇಕಿತ್ತು ಎಂದು ತರಾಟೆ ತೆಗೆದುಕೊಂಡರು.

ಹಣ ವಶಪಡಿಸಿಕೊಂಡರೆ ಆರೋಪಿ ಬಿಟ್ಟುಬಿಡಬೇಕೆ

ಪೊಲೀಸರು ಕಳ್ಳನನ್ನು ಹಿಡಿದು ಹಣ ಮರಳಿಸಿದರೆ ಕಳ್ಳನನ್ನು ಬಿಟ್ಟು ಬಿಡುತ್ತಾರೆಯೇ? ಅದೇ ರೀತಿ ಹಣ ವಾಪಸ್‌ ಬಂದಿದೆ ಎನ್ನುತ್ತಿದ್ದಾರೆ. ಹಣ ಮರಳಿದ್ದರೆ ತಪ್ಪಿತಸ್ಥ ಯಾರೆಂದು ಕಾಂಗ್ರೆಸ್‌ ತಿಳಿಸಬೇಕು. ತಪ್ಪಿತಸ್ಥ ಯಾರೆಂದು ಸಾಬೀತಾಗುವುದು ಜನತಾ ನ್ಯಾಯಾಲಯವಲ್ಲ. ಅದನ್ನು ತನಿಖಾ ಸಂಸ್ಥೆಗಳು ಸಾಬೀತು ಮಾಡುತ್ತವೆ. ಅವರನ್ನು ಅಪರಾಧಿ ಎಂದೂ ಸಾಬೀತುಪಡಿಸಿ ಶಿಕ್ಷೆ ಕೊಡುವ ಅಧಿಕಾರ ನ್ಯಾಯಾಲಯಕ್ಕೆ ಮಾತ್ರ ಇದೆ. ಆದರೆ ನಾಗೇಂದ್ರ ಅವರಿಗೆ ಯಾವುದೇ ನ್ಯಾಯಾಲಯದಿಂದ ಕ್ಲೀನ್‌ ಚಿಟ್‌ ಸಿಕ್ಕಿಲ್ಲ. ಬಿಜೆಪಿ ಅವಧಿಯಲ್ಲಿ ಕೆ.ಎಸ್‌.ಈಶ್ವರಪ್ಪ ವಿರುದ್ಧ ಆರೋಪ ಬಂದಾಗ ವಿರೋಧ ಪಕ್ಷದಲ್ಲಿದ್ದ ಸಿದ್ದರಾಮಯ್ಯ ಮೊದಲಾದ ನಾಯಕರು ತೊಡೆ ತಟ್ಟಿ ಹಲ್ಲೆ ನಡೆಸುವಂತೆ ಮೇಲೆರಗಿ ಬಂದಿದ್ದರು. ಆಗ ಕಾಂಗ್ರೆಸ್‌ ನಾಯಕರು ಸದನಕ್ಕೆ ಗೌರವ ತೋರಿರಲಿಲ್ಲ. ನಾವು ಹಾಗೆ ಮಾಡದೆ ನ್ಯಾಯಯುತವಾಗಿ ಧರಣಿ ಮಾಡಿದ್ದೆವು. ನಂತರ ಹಗಲು ರಾತ್ರಿ ಧರಣಿ ಮಾಡುವುದಾಗಿ ಘೋಷಣೆ ಮಾಡಿದ ಕೂಡಲೇ ಸದನವನ್ನು ರದ್ದು ಮಾಡಿದ್ದರು. ಬಳಿಕ ರಾಜೀನಾಮೆ ಪಡೆಯಲಾಗಿದೆ ಎಂದರು.

ಮಾನನಷ್ಟ ಪ್ರಕರಣ ದಾಖಲಿಸಲಿ

ಸಿಬಿಐ, ಇಡಿಯಿಂದ ತನಿಖೆಗಾಗಿ ರಾಜ್ಯಪಾಲರಿಗೆ ಅನುಮತಿ ಕೇಳಲಾಗಿದೆ. ಆದರೂ ಸಚಿವ ಡಾ.ಜಿ.ಪರಮೇಶ್ವರ್‌ ಅವರು ಚಾರ್ಜ್‌ಶೀಟ್‌ನಲ್ಲಿ ಹೆಸರಿಲ್ಲ ಎಂದು ಕಾಮನ್‌ಸೆನ್ಸ್‌ ಇಲ್ಲದಂತೆ ಹೇಳುತ್ತಾರೆ. ಸಿಬಿಐ ನವರು ಸುಮ್ಮನೆ ಆರೋಪ ಮಾಡಿದ್ದರೆ ಪರಮೇಶ್ವರ್‌ ಅವರೇ ತನಿಖಾ ಸಂಸ್ಥೆಗಳ ವಿರುದ್ಧ ಮಾನನಷ್ಟ ಪ್ರಕರಣ ದಾಖಲಿಸಲಿ. ನಾಗೇಂದ್ರ ಹಣ ತಿಂದೆ ಎಂದು ಪ್ರಾಯಶ್ಚಿತ್ತದಿಂದ ಕಣ್ಣೀರು ಹಾಕಿದ್ದಾರೆ, ಇದೇ ಸತ್ಯ ಎಂದರು.

ಒಕ್ಕಲಿಗರು, ಲಿಂಗಾಯತರು ತಪ್ಪು ಮಾಡಿದರೆ ಅವರು ಜಾತಿ ಹೆಸರಲ್ಲಿ ರಕ್ಷಣೆ ಪಡೆಯುತ್ತಾರೆಯೇ? ದಲಿತರು ತಪ್ಪು ಮಾಡಿದರೆ ಆ ಜಾತಿ ಹೆಸರಲ್ಲಿ ರಕ್ಷಣೆ ಪಡೆಯುತ್ತಾರೆಯೇ? ಅಂತಹ ಅವಕಾಶ ಸಂವಿಧಾನದಲ್ಲಿ ಇದೆಯೇ? ನಾಗೇಂದ್ರ ಜಾತಿ ಹೆಸರಲ್ಲಿ ರಕ್ಷಣೆ ಪಡೆಯಲು ಮುಂದಾದರೂ ಅವರ ಸಮಾಜದ ಯಾರೂ ಸಹಾಯಕ್ಕೆ ಬಂದಿಲ್ಲ. ಇದು ನಮ್ಮ ಬಾಂಧವರ ಹಣ, ದಲಿತರ ಹಣ ಎಂದು ಲೂಟಿ ಮಾಡುವಾಗಲೇ ಯೋಚಿಸಬೇಕಿತ್ತು. ಲೂಟಿ ಮಾಡುವಾಗ ಇಲ್ಲದ ಆಲೋಚನೆಗಳು ರಾಜೀನಾಮೆ ನೀಡುವಾಗ ಬಂದಿದೆ. ನಾವು ದಲಿತರ ಪರವಾಗಿ ಹೋರಾಟ ಮಾಡಿದ್ದೇವೆ, ತಪ್ಪು ಯಾರದೆಂದು ನ್ಯಾಯಾಲಯದಲ್ಲಿ ಸಾಬೀತಾಗಬೇಕು. ಅಲ್ಲಿಯವರೆಗೆ ಕಾಯಬೇಕು. ರಾಜ್ಯಪಾಲರಿಂದ ಅನುಮತಿ ಸಿಕ್ಕಿದರೆ, ಸಚಿವರು ಮತ್ತೆ ಬಂಧನ ಆಗಿ ವಿಚಾರಣೆ ಎದುರಿಸಬೇಕಾಗುತ್ತದೆ. ಆಗ ಪ್ರತಿ ದಿನ ಮಾಧ್ಯಮಗಳಲ್ಲಿ ಸುದ್ದಿ ಬಂದು ಸರ್ಕಾರಕ್ಕೆ ಮುಜುಗರವಾಗುತ್ತದೆ. ಅದಕ್ಕಾಗಿ ರಾಜೀನಾಮೆ ನೀಡಿದ್ದಾರೆ. ಈ ಹೋರಾಟಕ್ಕೆ ಕೈ ಜೋಡಿಸಿದ ಎಲ್ಲ ಶಾಸಕರು, ಕಾರ್ಯಕರ್ತರಿಗೆ ಧನ್ಯವಾದ ತಿಳಿಸುತ್ತೇನೆ ಎಂದರು.

ಎಸ್‌ಸಿಎಸ್‌ಪಿ/ಟಿಎಸ್‌ಪಿ ಹಣವನ್ನು ಕಾಂಗ್ರೆಸ್‌ ಸರ್ಕಾರ ಗ್ಯಾರಂಟಿಗಳಿಗೆ ಬಳಸಿಕೊಂಡಿದೆ. ಇದು ಕೂಡ ಮುಂದಿನ ದಿನಗಳಲ್ಲಿ ದಲಿತರ ಆಕ್ರೋಶಕ್ಕೆ ಕಾರಣವಾಗಲಿದೆ. ಆದ್ದರಿಂದ ಈ ಬಗ್ಗೆ ಈಗಲೇ ಸರ್ಕಾರ ಎಚ್ಚೆತ್ತುಕೊಳ್ಳಲಿ ಎಂದರು.

ಸಮಸ್ಯೆಗಳ ಚರ್ಚೆ

ಬರಗಾಲ, ಕೆಪಿಎಸ್‌ಸಿ ಹಗರಣ, ನೀರಾವರಿ, ನೈಸ್‌ ಟೋಲ್‌, ಬಿಡದಿ ಮೊದಲಾದ ವಿಷಯಗಳ ಬಗ್ಗೆ ಮುಂದೆ ಚರ್ಚೆಯಾಗಲಿದೆ. ಹೊಸ ಮುಖ್ಯಮಂತ್ರಿ ಬಂದ ಮೂರೇ ತಿಂಗಳಲ್ಲಿ ಒಬ್ಬ ಸಚಿವರ ವಿಕೆಟ್‌ ಬಿದ್ದಿದೆ. ಈ ಕ್ರೆಡಿಟ್‌ ಹೋರಾಟ ಮಾಡಿದ ಎಲ್ಲರಿಗೂ ದೊರೆಯುತ್ತದೆ ಎಂದರು.

Tags: #RAshoka #NagendraResignation #ValmikiScam #KarnatakaPolitics #SaakshaTV #KarnatakaNews
ShareTweetSendShare
Join us on:

Related Posts

ಪ್ರೇಮ ವೈಫಲ್ಯದಿಂದ ಬಯಲಾಯ್ತು MPSC ಪ್ರಶ್ನೆಪತ್ರಿಕೆ ಸೋರಿಕೆ ಜಾಲ; ಪ್ರಿಯತಮನ ಇ-ಮೇಲ್‌ನಿಂದ ತನಿಖೆ ಆರಂಭ

ಪ್ರೇಮ ವೈಫಲ್ಯದಿಂದ ಬಯಲಾಯ್ತು MPSC ಪ್ರಶ್ನೆಪತ್ರಿಕೆ ಸೋರಿಕೆ ಜಾಲ; ಪ್ರಿಯತಮನ ಇ-ಮೇಲ್‌ನಿಂದ ತನಿಖೆ ಆರಂಭ

by Shwetha
August 29, 2026
0

ಮಹಾರಾಷ್ಟ್ರ ಲೋಕಸೇವಾ ಆಯೋಗದ (MPSC) ಡ್ರಗ್ ಇನ್ಸ್‌ಪೆಕ್ಟರ್ ಹುದ್ದೆಯ ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ ಇದೀಗ ಕುತೂಹಲಕಾರಿ ತಿರುವು ಪಡೆದುಕೊಂಡಿದೆ. ಈ ಭಾರಿ ಅಕ್ರಮದ ಹಿಂದೆ ಪ್ರೇಮ...

KPSC ಹಗರಣದ ಆರೋಪ; ಕೇಂದ್ರ ಸಚಿವ HDK ಗಂಭೀರ ವಾಗ್ದಾಳಿ

KPSC ಹಗರಣದ ಆರೋಪ; ಕೇಂದ್ರ ಸಚಿವ HDK ಗಂಭೀರ ವಾಗ್ದಾಳಿ

by Shwetha
August 29, 2026
0

ಕರ್ನಾಟಕ ಲೋಕಸೇವಾ ಆಯೋಗ (KPSC) ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿರುವ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ....

ಶಾಲೆಯಲ್ಲಷ್ಟೇ ಅಲ್ಲ ಮನೆ ಮುಂದೆಯೂ ಬಂತು ವಂದೇ ಮಾತರಂ:ಗೃಹಪ್ರವೇಶದ ಮನೆ ಮುಂದೆ ವಂದೇ ಮಾತರಂ ಸೆಲ್ಫಿ ಸ್ಪಾಟ್ ನಿರ್ಮಿಸಿದ ಶಿಕ್ಷಕಿ

ಶಾಲೆಯಲ್ಲಷ್ಟೇ ಅಲ್ಲ ಮನೆ ಮುಂದೆಯೂ ಬಂತು ವಂದೇ ಮಾತರಂ:ಗೃಹಪ್ರವೇಶದ ಮನೆ ಮುಂದೆ ವಂದೇ ಮಾತರಂ ಸೆಲ್ಫಿ ಸ್ಪಾಟ್ ನಿರ್ಮಿಸಿದ ಶಿಕ್ಷಕಿ

by Shwetha
August 29, 2026
0

ಸಾಮಾನ್ಯವಾಗಿ ಹೊಸ ಮನೆಯ ಗೃಹಪ್ರವೇಶ ಎಂದರೆ ಅಲ್ಲಿ ತಳಿರು ತೋರಣಗಳ ಶೃಂಗಾರ, ವಿದ್ಯುತ್ ದೀಪಗಳ ಅಲಂಕಾರ ಮತ್ತು ಮನೆಯ ಹೆಸರಿನ ಫಲಕಗಳು ರಾರಾಜಿಸುವುದು ಸಹಜ. ಆದರೆ ಇಲ್ಲೊಬ್ಬರು...

ಮಿಷನ್ 2028 ಕ್ಕೆ ಪ್ರಧಾನಿ ಮೋದಿ ಗ್ರೀನ್ ಸಿಗ್ನಲ್: ಕುಮಾರಸ್ವಾಮಿ ಮತ್ತು ನಿಖಿಲ್ ಹೆಗಲಿಗೆ ಬಿಗ್ ಟಾಸ್ಕ್ -ಜೆಡಿಎಸ್ ಪಾಳಯದಲ್ಲಿ ಜೆನ್ ಝೀ ಅಲೆ ಶುರು!

ಮಿಷನ್ 2028 ಕ್ಕೆ ಪ್ರಧಾನಿ ಮೋದಿ ಗ್ರೀನ್ ಸಿಗ್ನಲ್: ಕುಮಾರಸ್ವಾಮಿ ಮತ್ತು ನಿಖಿಲ್ ಹೆಗಲಿಗೆ ಬಿಗ್ ಟಾಸ್ಕ್ -ಜೆಡಿಎಸ್ ಪಾಳಯದಲ್ಲಿ ಜೆನ್ ಝೀ ಅಲೆ ಶುರು!

by Shwetha
August 29, 2026
0

ದೆಹಲಿ ಮತ್ತು ಬೆಂಗಳೂರು ನಡುವೆ ಈಗ ಹೊಸ ರಾಜಕೀಯ ಸಂಚಲನ ಶುರುವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಬಂದಿರುವ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ...

ಕಟ್ಕೊಂಡೋರು-ಇಟ್ಕೊಂಡೋರ ಖಾತೆಗೆ ಹಗರಣದ ಹಣ:ಯಾರು ಯಾರನ್ನ ಇಟ್ಕೊಂಡಿದ್ದಾರೆ ಅಂತ ಕೇಳಬೇಡಿ- ಸಚಿವ ನಾಗೇಂದ್ರ ವಿರುದ್ಧ ಸಿ.ಟಿ ರವಿ ವ್ಯಂಗ್ಯ.

ಕಟ್ಕೊಂಡೋರು-ಇಟ್ಕೊಂಡೋರ ಖಾತೆಗೆ ಹಗರಣದ ಹಣ:ಯಾರು ಯಾರನ್ನ ಇಟ್ಕೊಂಡಿದ್ದಾರೆ ಅಂತ ಕೇಳಬೇಡಿ- ಸಚಿವ ನಾಗೇಂದ್ರ ವಿರುದ್ಧ ಸಿ.ಟಿ ರವಿ ವ್ಯಂಗ್ಯ.

by Shwetha
August 29, 2026
0

ಚಿಕ್ಕಮಗಳೂರು: ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿರುವ ವಾಲ್ಮೀಕಿ ನಿಗಮದ ಹಣ ದುರುಪಯೋಗ ಪ್ರಕರಣ ಈಗ ಹೊಸ ತಿರುವು ಪಡೆದುಕೊಂಡಿದೆ. ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆಯ ಬೆನ್ನಲ್ಲೇ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram