ADVERTISEMENT
Tuesday, September 1, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಬಿಜೆಪಿಯ ಹೋರಾಟ ನಿಲ್ಲುವುದಿಲ್ಲ, ಇನ್ನಷ್ಟು ಸಚಿವರು ರಾಜೀನಾಮೆ ನೀಡಬೇಕಾಗುತ್ತದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

admin by admin
September 1, 2026
in Newsbeat, State, Uncategorized, ರಾಜ್ಯ
r-ashoka-bjp-protest-will-not-stop-drought-kpsc-scam-bidadi-township

r-ashoka-bjp-protest-will-not-stop-drought-kpsc-scam-bidadi-township

Share on FacebookShare on TwitterShare on WhatsappShare on Telegram

ಲಿಂಗಸಗೂರು, ಬಿ.ನಾಗೇಂದ್ರ ರಾಜೀನಾಮೆ ನೀಡಿದ ಕೂಡಲೇ ಬಿಜೆಪಿಯ ಹೋರಾಟ ನಿಲ್ಲುವುದಿಲ್ಲ. ಬರಗಾಲ, ಕೆಪಿಎಸ್‌ಸಿ ಹಗರಣ, ಬಿಡದಿ ಟೌನ್‌ಶಿಪ್‌ ಮೊದಲಾದ ಸಮಸ್ಯೆಗಳನ್ನು ಇಟ್ಟುಕೊಂಡು ಹೋರಾಟ ಮಾಡುತ್ತಿದ್ದೇವೆ. ನಮ್ಮ ಹೋರಾಟದಿಂದಾಗಿ ಇನ್ನಷ್ಟು ಸಚಿವರು ರಾಜೀನಾಮೆ ನೀಡಬೇಕಾಗುತ್ತದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು.

ಬಿಜೆಪಿ ವತಿಯಿಂದ ಹಮ್ಮಿಕೊಂಡ ಬಳ್ಳಾರಿ ಚಲೋ ಪಾದಯಾತ್ರೆಯ ಚಾಲನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹೋದೆಯಾ ಪಿಶಾಚಿ ಎಂದರೆ ಬಂದೆಯಾ ಗವಾಕ್ಷೀಲಿ ಎಂದಂತೆ ಸಿದ್ದರಾಮಯ್ಯನವರ ಸರ್ಕಾರ ಹೋಗಿ ಡಿ.ಕೆ.ಶಿವಕುಮಾರ್‌ ಸರ್ಕಾರ ಬಂದಿದೆ. ಸಿದ್ದರಾಮಯ್ಯನವರ ಸರ್ಕಾರದಲ್ಲಿ ದರೋಡೆ ಮಾಡುತ್ತಿದ್ದರೆ, ಡಿಕೆಶಿ ಸರ್ಕಾರ ಪಿಕ್‌ ಪಾಕೆಟ್‌ ಮಾಡುತ್ತಿದೆ. ಹಾಲು, ಆಲ್ಕೋಹಾಲ್‌, ಯೂರಿಯಾ ಮೊದಲಾದವುಗಳ ಮೇಲೆ ತೆರುಗೆ ಹಾಕಿ ಪಿಕ್‌ ಪಾಕೆಟ್‌ ಮಾಡಲಾಗುತ್ತಿದೆ. 175 ತಾಲೂಕುಗಳಲ್ಲಿ ಬರಗಾಲವಿದ್ದರೂ ಹಣವಿಲ್ಲದೆ 74 ತಾಲೂಕುಗಳಲ್ಲಿ ಬರ ಘೋಷಣೆ ಮಾಡಿಲ್ಲ. ಒಂದೋ ಘೋಷಣೆ ಮಾಡಬೇಕು, ಇಲ್ಲವಾದರೆ ಪಾಪರ್‌ ಆಗಿದ್ದೇವೆಂದು ಒಪ್ಪಿಕೊಳ್ಳಬೇಕು. ಸೂರ್ಯಕಾಂತಿ, ಜೋಳ, ತೊಗರಿ ಮೊದಲಾದ ಬೆಳೆಗಳು ಅರ್ಧ ಮಾತ್ರ ಬೆಳೆದು ಫಲಸು ನೀಡದೆ ಹಾಳಾಗಿವೆ. ಮಾನ ಮರ್ಯಾದೆ ಇದ್ದಿದ್ದರೆ ಈಗಾಗಲೇ ರೈತರಿಗೆ ಪರಿಹಾರ ನೀಡಬೇಕಿತ್ತು ಎಂದರು.

Related posts

karnataka-apartment-ownership-and-management-bill-2026-krishna-byre-gowda-vidhana-soudha

* “ಬೆಂಗಳೂರು ಸುಧಾರಣೆಯಾಗಬೇಕೆಂದು ನೀವು ಕೆಲಸ ಮಾಡುತ್ತಿಲ್ಲ, ಹಾಳು ಮಾಡಲೆಂದೇ ಕೆಲಸ ಮಾಡುತ್ತಿದ್ದೀರಾ?”

September 1, 2026
ತಾಯಿಯ ಸ್ಮರಣಾರ್ಥ ಮಾದರಿ ಕಾರ್ಯ: ಸಂಕಷ್ಟದಲ್ಲಿದ್ದ ನಾಲ್ಕು ಕುಟುಂಬಗಳಿಗೆ ಉಚಿತ ಆಟೋ ರಿಕ್ಷಾ ವಿತರಿಸಿದ ಕಿಚ್ಚ ಸುದೀಪ್

ತಾಯಿಯ ಸ್ಮರಣಾರ್ಥ ಮಾದರಿ ಕಾರ್ಯ: ಸಂಕಷ್ಟದಲ್ಲಿದ್ದ ನಾಲ್ಕು ಕುಟುಂಬಗಳಿಗೆ ಉಚಿತ ಆಟೋ ರಿಕ್ಷಾ ವಿತರಿಸಿದ ಕಿಚ್ಚ ಸುದೀಪ್

September 1, 2026

ಕಾಂಗ್ರೆಸ್‌ ಸರ್ಕಾರ ಈವರೆಗೂ ಒಂದು ರೂಪಾಯಿ ಪರಿಹಾರ ನೀಡಿಲ್ಲ. ಗ್ರಾಮಗಳಲ್ಲಿ ಜನರು ಇನ್ನೂ ಕುಡಿಯುವ ನೀರಿಗೆ ಪರದಾಡುತ್ತಿದ್ದಾರೆ. ಇದರ ನಡುವೆ ಸಿಎಂ ಡಿ.ಕೆ.ಶಿವಕುಮಾರ್‌ ಅಧ್ಯಯನ ಮಾಡಲು ಪ್ರವಾಸ ಮಾಡುತ್ತಿದ್ದಾರೆ. ಅಧಿಕಾರ ಕೈಯಲ್ಲಿ ಇರುವಾಗ ಅಧ್ಯಯನ ಏಕೆ ಮಾಡಬೇಕು? ಹೊಸ ಮುಖ್ಯಮಂತ್ರಿ ಮೂರು ತಿಂಗಳಾದರೂ ಒಂದೇ ಒಂದು ಉತ್ತಮ ಕೆಲಸ ಮಾಡಿಲ್ಲ. ನಮ್ಮ ಹೋರಾಟದಿಂದಾಗಿ ಬಿ.ನಾಗೇಂದ್ರ ಅವರಿಗೆ ಗೇಟ್‌ ಪಾಸ್‌ ನೀಡಲಾಗಿದೆ. ಆದರೆ ಇಲ್ಲಿ ನಾಗೇಂದ್ರ ಕೇವಲ ಬಲಿಪಶು. ವಾಲ್ಮೀಕಿ ನಿಗಮದ 187 ಕೋಟಿ ರೂ. ಕಾಂಗ್ರೆಸ್‌ ಹೈಕಮಾಂಡ್‌ಗೆ ತಲುಪಿದೆ. ತೆಲಂಗಾಣ ಚುನಾವಣೆ, ಬಳ್ಳಾರಿ ಚುನಾವಣೆಗೆ ಈ ಹಣ ಬಳಕೆಯಾಗಿದೆ. ನಾಗೇಂದ್ರ ಕದ್ದಿದ್ದು ಮಾತ್ರ, ಅದನ್ನು ಬಳಸಿದ್ದು ಇಡೀ ಕಾಂಗ್ರೆಸ್‌ ಪಕ್ಷ ಎಂಬುದನ್ನು ಮರೆಯಬಾರದು ಎಂದರು.

ಕಾಂಗ್ರೆಸ್‌ ಸರ್ಕಾರದಲ್ಲಿ ಒಂದು ವಿಕೆಟ್‌ ಬಿದ್ದಿದೆ. ಈಗ ಮರಿ ಖರ್ಗೆ ಎಂದು ಹೆಸರಾದ ಪ್ರಿಯಾಂಕ್‌ ಖರ್ಗೆ ಅವರ ವಿಕೆಟ್‌ ಬೀಳಬೇಕಿದೆ. ಪ್ರತಿ ದಿನ ಆರ್‌ಎಸ್‌ಎಸ್‌ ನೋಂದಣಿ ಬಗ್ಗೆ ಅವರು ಪ್ರಶ್ನೆ ಮಾಡುತ್ತಾರೆ. ಕೆಪಿಎಸ್‌ಸಿ ಹಗರಣದಲ್ಲಿ ಹುದ್ದೆಗಳು ಒಂದೆರಡು ಕೋಟಿ ರೂ. ಗೆ ಮಾರಾಟವಾಗಿದೆ. ವೈದ್ಯಾಧಿಕಾರಿ, ಶಿಕ್ಷಕ, ಜಿಲ್ಲಾಧಿಕಾರಿ ಹೀಗೆ ಎಲ್ಲಕ್ಕೂ ದರ ನಿಗದಿಯಾಗಿದೆ. ಈ ಮೂರು ವರ್ಷದಲ್ಲಿ ಎರಡೂವರೆ ಸಾವಿರ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಯಾವುದೇ ಜನವರ್ಗಕ್ಕೂ ಇವರಿಂದ ನೆರವಾಗಿಲ್ಲ. ಎಲ್ಲರಿಗೂ ಉಚಿತ ಎಂದು ಹೇಳಿ, ಈಗ ಪಿಂಚಣಿ ಕೂಡ ಕೈಗೆ ಸಿಗುತ್ತಿಲ್ಲ. ಗೃಹಲಕ್ಷ್ಮಿಯ 5,000 ಕೋಟಿ ರೂ. ಇನ್ನೂ ಕೊಟ್ಟಿಲ್ಲ ಎಂದರು.

ಸಿಎಂ ಡಿ.ಕೆ.ಶಿವಕುಮಾರ್‌ಗೆ ಬಡವರ, ಮಹಿಳೆಯರ ಕಷ್ಟ ಗೊತ್ತಿಲ್ಲ. ಅವರಿಗೆ ರಿಯಲ್‌ ಎಸ್ಟೇಟ್‌ ವ್ಯವಹಾರ ಮಾತ್ರ ಗೊತ್ತಿದೆ. ರಾಜ್ಯಕ್ಕೆ ಅವರಿಂದ ಎಂದಿಗೂ ಒಳ್ಳೆಯದಾಗುವುದಿಲ್ಲ. ಡಿ.ಕೆ.ಶಿ ದೇವಾಲಯಗಳಿಗೆ ಹೋಗಿ ನಾಮ ಎಳೆದುಕೊಳ್ಳುತ್ತಾರೆ. ಆದರೆ ಅವರದ್ದೇ ಸಚಿವರಾದ ಬಸವರಜ ರಾಯರೆಡ್ಡಿ ಇಸ್ಲಾಂ ಧರ್ಮ ಅತ್ಯುತ್ತಮ ಎನ್ನುತ್ತಾರೆ. ಹಿಂದೂ ಧರ್ಮದಲ್ಲಿ ಹುಟ್ಟಿ, ಲಿಂಗಾಯತರಿಂದ ಮತ ಪಡೆದು ಇಸ್ಲಾಂ ಧರ್ಮವೇ ಉತ್ತಮ ಎನ್ನುತ್ತಾರೆ. ಸಿಎಂ ಡಿ.ಕೆ.ಶಿವಕುಮಾರ್‌ ನಿಜವಾದ ಹಿಂದೂ ಆಗಿದ್ದರೆ ಅವರನ್ನು ಸಂಪುಟದಿಂದ ವಜಾ ಮಾಡಬೇಕು. ಹಿಂದೂಗಳನ್ನು ಅವಹೇಳನ ಮಾಡಿದರೆ ಮಾತ್ರ ಮತ ಸಿಗುವುದು ಎಂದುಕೊಂಡಿದ್ದಾರೆ. ಇದು ಮುಂದುವರಿದರೆ, ಮುಂದಿನ ಚುನಾವಣೆಯಲ್ಲಿ ಇವರ ಠೇವಣಿ ಕೂಡ ಉಳಿಯುವುದಿಲ್ಲ ಎಂದರು.

ಬಿ.ನಾಗೇಂದ್ರ ಅವರ ರಾಜೀನಾಮೆ ಆದ ಕೂಡಲೇ ನಮ್ಮ ಹೋರಾಟ ನಿಲ್ಲುವುದಿಲ್ಲ. ಬರಗಾಲ ಪರಿಹಾರ, ಕೆಪಿಎಸ್‌ಸಿ ಹಗರಣ, ಪಿಂಚಣಿ ಬಾಕಿ, ರೇಷನ್‌ ಕಾರ್ಡ್‌ ರದ್ದು, ಕಸದ ಟೆಂಡರ್‌ ಹಗರಣ, ಸುರಂಗ ರಸ್ತೆ, ಬಿಡದಿ ಟೌನ್‌ಶಿಪ್‌ ಮೊದಲಾದ ವಿಷಯಗಳನ್ನು ಇಟ್ಟುಕೊಂಡು ನಾವು ಹೋರಾಟ ಮಾಡುತ್ತೇವೆ. ನಮ್ಮ ಹೋರಾಟ ನಿಲ್ಲುವುದಿಲ್ಲ ಎಂದರು.

ಪರೀಕ್ಷಾ ಅಕ್ರಮದಲ್ಲಿ ಸಚಿವ ಪ್ರಿಯಾಂಕ್‌ ಖರ್ಗೆ ಹೆಸರು

ಇದಕ್ಕೂ ಮುನ್ನ ಹೊಸಪೇಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಧಾರವಾಡದ ಜೆನ್‌ ಜೀ ಹೋರಾಟಕ್ಕೆ ನಾನು ಸಂಪೂರ್ಣ ಬೆಂಬಲ ನೀಡುತ್ತೇನೆ ಹಾಗೂ ನಾನು ಕೂಡ ಅದರಲ್ಲಿ ಭಾಗವಹಿಸುತ್ತೇನೆ. ಈ ಹಿಂದೆಯೂ ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳಿಂದ ಹೋರಾಟ ನಡೆದಾಗ ಅಲ್ಲಿಗೂ ಹೋಗಿ ಭಾಗವಹಿಸಿದ್ದೆ. ಕೆಪಿಎಸ್‌ಸಿಯಲ್ಲಿ ಅಕ್ರಮ ನಡೆಸಿದ ಎಲ್ಲರನ್ನೂ ಬಂಧಿಸಿ ಶಿಕ್ಷೆ ನೀಡಬೇಕು. ಈ ಬಗ್ಗೆ ಮುಂದಿನ ವಿಧಾನಸಭಾ ಅಧಿವೇಶನದಲ್ಲಿ ಚರ್ಚೆ ಮಾಡುತ್ತೇವೆ. ಇಡೀ ವ್ಯವಸ್ಥೆಯಲ್ಲಿ ಸುಧಾರಣೆ ತರಬೇಕಿದೆ ಎಂದರು.

ಪರೀಕ್ಷಾ ಅಕ್ರಮದಲ್ಲಿ ಸಚಿವ ಪ್ರಿಯಾಂಕ್‌ ಖರ್ಗೆ ಅವರ ಹೆಸರು ಕೇಳಿಬಂದಿದೆ. ಈಗಾಗಲೇ ನಮ್ಮ ಹೋರಾಟದಿಂದಾಗಿ ಬಿ.ನಾಗೇಂದ್ರ ರಾಜೀನಾಮೆ ನೀಡಿದ್ದಾರೆ. ಇನ್ನೂ ಒಬ್ಬ ಸಚಿವರ ರಾಜೀನಾಮೆಯಾಗಲಿದೆ. ಬಿ.ನಾಗೇಂದ್ರ ಹಗರಣ ಮಾಡಿದ್ದರಿಂದಲೇ ಸಿದ್ದರಾಮಯ್ಯನವರ ಅವಧಿಯಲ್ಲಿ ರಾಜೀನಾಮೆ ನೀಡಿದ್ದರು. ದಲಿತರಿಗೆ ಸೇರಿದ 187 ಕೋಟಿ ರೂ. ಅಕ್ರಮವನ್ನು ಅವರು ಮಾಡಿದ್ದು, ಅದನ್ನು ಕೋರ್ಟ್‌ ತೀರ್ಮಾನಿಸಲಿದೆ. ಈ ಹಣ ಆಂಧ್ರಕ್ಕೂ ಹೋಗಿತ್ತು ಹಾಗೂ ಅವರ ವೈಯಕ್ತಿಕ ಖಾತೆಗೂ ಹೋಗಿತ್ತು. ಇದು ಸಾಬೀತಾಗಿದ್ದರಿಂದಲೇ ಅವರು ರಾಜೀನಾಮೆ ನೀಡಿದ್ದಾರೆ ಎಂದರು.

175 ತಾಲೂಕುಗಳಲ್ಲಿ ಬರಗಾಲ ಘೋಷಣೆ ಮಾಡಿ ಎಂದು ನಾನು ಸರ್ಕಾರಕ್ಕೆ ಆಗ್ರಹಿಸಿದ್ದೇನೆ. ಪ್ರತಿ ರೈತರಿಗೆ ಎಕರೆಗೆ 50,000 ರೂ. ಪರಿಹಾರ ನೀಡಬೇಕು, ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದ್ದೇನೆ. ಆದರೆ ಸರ್ಕಾರದಲ್ಲಿ ಹಣವಿಲ್ಲದೆ ನಾಟಕ ಮಾಡುತ್ತಿದ್ದಾರೆ. ಬಿಜೆಪಿ ಅವಧಿಯಲ್ಲಿ ಎನ್‌ಡಿಆರ್‌ಎಫ್‌ ಮಾರ್ಗಸೂಚಿಗೆ ಹೋಲಿಸಿದರೆ ದುಪ್ಪಟ್ಟು ಪರಿಹಾರವನ್ನು ನೀಡಲಾಗಿತ್ತು. ಕಾಂಗ್ರೆಸ್‌ ಸರ್ಕಾರ ಕೂಡ ಇದೇ ರೀತಿ ಪರಿಹಾರ ನೀಡಬೇಕು ಎಂದರು.

ಸಚಿವ ರಾಯರೆಡ್ಡಿ ರಾಜೀನಾಮೆಗೆ ಆಗ್ರಹ

ಸಚಿವ ಬಸವರಾಜ ರಾಯರೆಡ್ಡಿ ಅವರಿಗೆ ಹಿಂದೂ ಧರ್ಮ ತಾಯಿ ಇದ್ದಂತೆ. ಅಂತಹ ತಾಯಿಗೆ ದ್ರೋಹ ಬಗೆದು ಇಸ್ಲಾಂ ಶ್ರೇಷ್ಠ ಎಂದಿದ್ದಾರೆ. ಚುನಾವಣೆಯಲ್ಲಿ ಲಿಂಗಾಯತ ಎಂದು ಹೇಳಿಕೊಂಡು ನಂತರ ಇಸ್ಲಾಂ ಧರ್ಮವನ್ನು ಹೊಗಳುತ್ತಿದ್ದಾರೆ. ಮಠಗಳಿಗೆ ಹೋಗಲ್ಲ ಎಂದು ಧರ್ಮಕ್ಕೆ ಅಪಮಾನ ಮಾಡಿದ್ದಾರೆ. ಕಾಂಗ್ರೆಸ್‌ ಪಕ್ಷ ಅವರ ವಿರುದ್ಧ ಕ್ರಮ ಕೈಗೊಂಡು ಸಚಿವ ಸ್ಥಾನದಿಂದ ವಜಾ ಮಾಡಬೇಕು ಅಥವಾ ಹಿಂದೂ ವಿರೋಧಿ ಎಂದು ಒಪ್ಪಿಕೊಳ್ಳಬೇಕು. ಅವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ ಎಂದರು

ShareTweetSendShare
Join us on:

Related Posts

karnataka-apartment-ownership-and-management-bill-2026-krishna-byre-gowda-vidhana-soudha

* “ಬೆಂಗಳೂರು ಸುಧಾರಣೆಯಾಗಬೇಕೆಂದು ನೀವು ಕೆಲಸ ಮಾಡುತ್ತಿಲ್ಲ, ಹಾಳು ಮಾಡಲೆಂದೇ ಕೆಲಸ ಮಾಡುತ್ತಿದ್ದೀರಾ?”

by admin
September 1, 2026
0

  ಬೆಂಗಳೂರು, ಜಿಬಿಎ ವ್ಯಾಪ್ತಿಯ ಎಲ್ಲಾ 5 ನಗರ ಪಾಲಿಕೆಗಳ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಮುಖಚರ್ಯೆ ಆಧಾರಿತ ಹಾಜರಾತಿ ವ್ಯವಸ್ಥೆ ಜಾರಿಗೊಳಿಸುವಂತೆ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವರಾದ ಕೃಷ್ಣ...

ತಾಯಿಯ ಸ್ಮರಣಾರ್ಥ ಮಾದರಿ ಕಾರ್ಯ: ಸಂಕಷ್ಟದಲ್ಲಿದ್ದ ನಾಲ್ಕು ಕುಟುಂಬಗಳಿಗೆ ಉಚಿತ ಆಟೋ ರಿಕ್ಷಾ ವಿತರಿಸಿದ ಕಿಚ್ಚ ಸುದೀಪ್

ತಾಯಿಯ ಸ್ಮರಣಾರ್ಥ ಮಾದರಿ ಕಾರ್ಯ: ಸಂಕಷ್ಟದಲ್ಲಿದ್ದ ನಾಲ್ಕು ಕುಟುಂಬಗಳಿಗೆ ಉಚಿತ ಆಟೋ ರಿಕ್ಷಾ ವಿತರಿಸಿದ ಕಿಚ್ಚ ಸುದೀಪ್

by admin
September 1, 2026
0

ಬೆಂಗಳೂರು: ‘ಅಭಿನಯ ಚಕ್ರವರ್ತಿ’ ಕಿಚ್ಚ ಸುದೀಪ್ ಅವರು ಬೆಳ್ಳಿಪರದೆಯ ಮೇಲಷ್ಟೇ ಅಲ್ಲದೆ, ನಿಜ ಜೀವನದಲ್ಲೂ ಸಮಾಜಮುಖಿ ಕಾರ್ಯಗಳ ಮೂಲಕ ಸದಾ ಜನರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ತಮ್ಮ ಪ್ರೀತಿಯ...

people-media-factory-supriyanvi-picture-studio-new-movie-announcement-september-2

ಪೀಪಲ್ ಮೀಡಿಯಾ ಫ್ಯಾಕ್ಟರಿ & ಸುಪ್ರಿಯಾನ್ವಿ ಪಿಕ್ಚರ್ ಸ್ಟುಡಿಯೋ ಜುಗಲ್‌ಬಂದಿ: ಸೆಪ್ಟೆಂಬರ್ 2ಕ್ಕೆ ಹೊಸ ಸಿನಿಮಾ ಅನೌನ್ಸ್!

by admin
September 1, 2026
0

ಪ್ರಿಯಾ ಸುದೀಪ್ ನೇತೃತ್ವದ ಸುಪ್ರಿಯಾನ್ವಿ ಪಿಕ್ಚರ್ ಸ್ಟುಡಿಯೋ ಸಂಸ್ಥೆ ಮಾರ್ಕ್ ಮತ್ತು ಮ್ಯಾಂಗೋ ಪಚ್ಚ ಸಿನಿಮಾಗಳ ಮೂಲಕ ಸದ್ದು ಮಾಡಿದೆ. ಈಗ ಮತ್ತೊಂದು ಹೊಸ ಪ್ರಾಜೆಕ್ಟ್ಗೆ ಕೈ...

shivarajkumar-starrer-koormavatara-movie-teaser-launched-in-hyderabad-dil-raju-sai-kumar-news-in-kannada-

ಹ್ಯಾಟ್ರಿಕ್ ಹೀರೋʼ ಶಿವರಾಜ್‌ಕುಮಾರ್ ಅಭಿನಯದ ‘ಕೂರ್ಮಾವತಾರ’ ಚಿತ್ರದ ಭರ್ಜರಿ ಟೀಸರ್ ಬಿಡುಗಡೆ

by admin
September 1, 2026
0

ಹ್ಯಾಟ್ರಿಕ್ ಹೀರೋʼ ಶಿವರಾಜ್‌ಕುಮಾರ್ ಅಭಿನಯದ ‘ಕೂರ್ಮಾವತಾರ’ ಚಿತ್ರದ ಭರ್ಜರಿ ಟೀಸರ್ ಬಿಡುಗಡೆ 'ಹ್ಯಾಟ್ರಿಕ್ ಹೀರೋ' ಶಿವರಾಜ್‌ಕುಮಾರ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವ ಬಹುನಿರೀಕ್ಷಿತ ಬಹುಭಾಷಾ ಚಿತ್ರ ‘ಕೂರ್ಮಾವತಾರ’ದ ಟೀಸರ್...

darshan-puttanayya-meets-dk-shivakumar-in-delhi-karnataka-2-0-digital-governance

ದೆಹಲಿಯಲ್ಲಿ ಸಿಎಂ ಡಿ.ಕೆ.ಶಿವಕುಮಾರ್‌ ಜೊತೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಮಹತ್ವದ ಸಭೆ

by admin
September 1, 2026
0

ದೆಹಲಿ/ಬೆಂಗಳೂರು: ಜನಸಾಮಾನ್ಯರ ಕುಂದುಕೊರತೆಗಳಿಗೆ ತಕ್ಷಣವೇ ಸ್ಪಂದಿಸಲು ಹಾಗೂ ಆಡಳಿತದಲ್ಲಿ ಸಂಪೂರ್ಣ ಪಾರದರ್ಶಕತೆ ತರಲು ರಾಜ್ಯ ಸರ್ಕಾರ ಮಹತ್ವದ ಹೆಜ್ಜೆಯಿರಿಸುವಂತೆ ಮೇಲುಕೋಟೆ ಶಾಸಕ ದರ್ಶನ್‌ ಪುಟ್ಟಣ್ಣಯ್ಯ ಮಹತ್ವದ ಹೆಜ್ಜೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram