ADVERTISEMENT
Friday, September 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ರಾಜ್ಯ

ಮರಿ ಖರ್ಗೆ ಎಂದು ಅಣಕಿಸಿದ ಆರ್ ಅಶೋಕ್ ಗೆ ಪ್ರಿಯಾಂಕ್ ತಿರುಗೇಟು: ಮರಿ ಅಶೋಕ್ ಯಾಕೆ ಇನ್ನೂ ಗಣವೇಶ ಧರಿಸಿಲ್ಲ ಎಂದು ಪ್ರಶ್ನೆ

Shwetha by Shwetha
September 4, 2026
in ರಾಜ್ಯ, Newsbeat, Politics, State, ರಾಜಕೀಯ
Share on FacebookShare on TwitterShare on WhatsappShare on Telegram

ಬೆಂಗಳೂರು: ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಮತ್ತು ಸಚಿವ ಪ್ರಿಯಾಂಕ್ ಖರ್ಗೆ ನಡುವಿನ ವಾಕ್ಸಮರ ಈಗ ಮರಿ ಹಾಗೂ ಹಿರಿ ಮಟ್ಟಕ್ಕೆ ತಲುಪಿದೆ. ಪ್ರಿಯಾಂಕ್ ಖರ್ಗೆ ಅವರನ್ನು ಪದೇ ಪದೇ ಮರಿ ಖರ್ಗೆ ಎಂದು ವ್ಯಂಗ್ಯವಾಡುತ್ತಿದ್ದ ಆರ್ ಅಶೋಕ್ ಅವರಿಗೆ ಸಚಿವರು ತಮ್ಮದೇ ಶೈಲಿಯಲ್ಲಿ ಖಡಕ್ ಕೌಂಟರ್ ನೀಡಿದ್ದಾರೆ. ಅಶೋಕ್ ಅವರ ಮಗನನ್ನೇ ಗುರಿಯಾಗಿಸಿಕೊಂಡು ಪ್ರಿಯಾಂಕ್ ಖರ್ಗೆ ಸರಣಿ ಪ್ರಶ್ನೆಗಳನ್ನು ಕೇಳುವ ಮೂಲಕ ತಿರುಗೇಟು ನೀಡಿದ್ದಾರೆ.

ಅಶೋಕ್ ಅಣ್ಣಾ ಮರಿ ಅಶೋಕ್ ಬಗ್ಗೆ ಯಾವಾಗ ಉತ್ತರಿಸುತ್ತೀರಿ

Related posts

ಸಿಎಂ ಆಗಿದ್ದಾಗ ಕುಮಾರಸ್ವಾಮಿ 2 ದಿನ ನಾಪತ್ತೆಯಾಗಿದ್ದರು: ಮಗನನ್ನು ಹುಡುಕಿಕೊಡು ಎಂದು ದೇವೇಗೌಡರೇ ನನಗೆ ಟಾಸ್ಕ್ ಕೊಟ್ಟಿದ್ದರು; ಕುಮಾರಸ್ವಾಮಿ ವಿರುದ್ಧ ಸಚಿವ ಚೆಲುವರಾಯಸ್ವಾಮಿ ಆಕ್ರೋಶ

ಸಿಎಂ ಆಗಿದ್ದಾಗ ಕುಮಾರಸ್ವಾಮಿ 2 ದಿನ ನಾಪತ್ತೆಯಾಗಿದ್ದರು: ಮಗನನ್ನು ಹುಡುಕಿಕೊಡು ಎಂದು ದೇವೇಗೌಡರೇ ನನಗೆ ಟಾಸ್ಕ್ ಕೊಟ್ಟಿದ್ದರು; ಕುಮಾರಸ್ವಾಮಿ ವಿರುದ್ಧ ಸಚಿವ ಚೆಲುವರಾಯಸ್ವಾಮಿ ಆಕ್ರೋಶ

September 4, 2026
KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಆರೋಪಿ ಮನೆ ಮೇಲೆ ದಾಳಿ, 15 ಗ್ರೂಪ್‌-ಬಿ ಹಾಲ್ ಟಿಕೆಟ್‌ಗಳು ಪತ್ತೆ

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಆರೋಪಿ ಮನೆ ಮೇಲೆ ದಾಳಿ, 15 ಗ್ರೂಪ್‌-ಬಿ ಹಾಲ್ ಟಿಕೆಟ್‌ಗಳು ಪತ್ತೆ

September 4, 2026

ಸಾಮಾಜಿಕ ಜಾಲತಾಣದಲ್ಲಿ ಆರ್ ಅಶೋಕ್ ಅವರಿಗೆ ನೇರ ಸವಾಲು ಹಾಕಿರುವ ಪ್ರಿಯಾಂಕ್ ಖರ್ಗೆ, ಅಶೋಕ್ ಅಣ್ಣಾ ಆರ್‌ಎಸ್ಎಸ್ ಕುರಿತು ನಾನು ಕೇಳಿದ ಪ್ರಶ್ನೆಗಳ ಬಗ್ಗೆ ನೀವು ತುಂಬಾ ಚಿಂತಿತರಾದಂತಿದೆ. ಆದರೆ ನೀವು ಮೊದಲು ಉತ್ತರಿಸಬೇಕಾದ ಕೆಲವು ಪ್ರಮುಖ ಪ್ರಶ್ನೆಗಳಿವೆ. ನಿಮ್ಮ ಮಗ ಮರಿ ಅಶೋಕ್ ಏಕೆ ಇನ್ನೂ ಆರ್‌ಎಸ್ಎಸ್ ಗಣವೇಶ ಧರಿಸಿಲ್ಲ? ಮರಿ ಅಶೋಕ್ ಏಕೆ ಗೋಶಾಲೆಯಲ್ಲಿ ಗೋಮೂತ್ರ ಸೇವಿಸುತ್ತಿಲ್ಲ? ನಿಮ್ಮ ಮಗ ಇನ್ನೂ ಧರ್ಮರಕ್ಷಕನಾಗಿ ಯಾಕೆ ಬದಲಾಗಿಲ್ಲ? ಈ ಪ್ರಶ್ನೆಗಳಿಗೆ ಹಿರಿ ಅಶೋಕ್ ಅವರು ಯಾವಾಗ ಉತ್ತರ ಕೊಡುತ್ತಾರೆ ಎಂದು ವ್ಯಂಗ್ಯವಾಗಿ ಪ್ರಶ್ನಿಸಿದ್ದಾರೆ.

ಬಿಜೆಪಿ ಅವಧಿಯ ಹಗರಣಗಳ ಬಗ್ಗೆ ಪ್ರಶ್ನೆಗಳ ಸುರಿಮಳೆ

ಕೇವಲ ವೈಯಕ್ತಿಕ ಟೀಕೆಗಳಿಗೆ ಸೀಮಿತವಾಗದ ಪ್ರಿಯಾಂಕ್ ಖರ್ಗೆ, ಬಿಜೆಪಿ ಆಡಳಿತಾವಧಿಯ ಹಗರಣಗಳ ಬಗ್ಗೆಯೂ ಆರ್ ಅಶೋಕ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಶಿವಶಂಕರಪ್ಪ ಸಾಹುಕಾರ್ ಬಗ್ಗೆ ನೀವು ಯಾವಾಗ ಮಾತನಾಡುತ್ತೀರಿ? ಬಸವರಾಜ ಕನ್ನಾಳೆ ಪ್ರಕರಣದ ಬಗ್ಗೆ ನಿಮ್ಮ ಮೌನ ಯಾವಾಗ ಮುರಿಯುತ್ತದೆ? ಎಂದು ಪ್ರಶ್ನಿಸಿರುವ ಅವರು, ಕೆಪಿಎಸ್‌ಸಿ ಸದಸ್ಯರು ಮತ್ತು ಅಧ್ಯಕ್ಷರ ನೇಮಕಾತಿಗಾಗಿ ಬಿಜೆಪಿ ನಾಯಕರಿಗೆ ಎಷ್ಟು ಕೋಟಿ ಹಣ ಸಂದಾಯವಾಗಿದೆ ಎಂಬ ಸತ್ಯವನ್ನು ಯಾವಾಗ ಬಿಚ್ಚಿಡುತ್ತೀರಿ ಎಂದು ಕೇಳಿದ್ದಾರೆ.

ನಿಮ್ಮ ಪಕ್ಷದವರ ಚಿತ್ರಗಳ ಬಗ್ಗೆ ಮಾತನಾಡಿ

ಬಿಜೆಪಿ ನಾಯಕರ ಕೆಲವು ವಿವಾದಿತ ಚಿತ್ರಗಳ ಬಗ್ಗೆ ಪ್ರಸ್ತಾಪಿಸಿರುವ ಸಚಿವರು, ನಿಮ್ಮದೇ ಪಕ್ಷಕ್ಕೆ ಸೇರಿದವರ ವಿವಾದಿತ ಚಿತ್ರಗಳ ಬಗ್ಗೆ ನೀವು ಯಾವಾಗ ಪ್ರತಿಕ್ರಿಯೆ ನೀಡುತ್ತೀರಿ? ನನ್ನನ್ನು ಮರಿ ಖರ್ಗೆ ಎಂದು ಕರೆಯುವ ಮೂಲಕ ಸಾರ್ವಜನಿಕರ ಗಮನ ಬೇರೆಡೆ ಸೆಳೆಯಲು ಪ್ರಯತ್ನಿಸುತ್ತಿದ್ದೀರಿ. ಆದರೆ ಜನರ ಮುಂದಿರುವ ಈ ಗಂಭೀರ ಪ್ರಶ್ನೆಗಳಿಗೆ ಉತ್ತರಿಸುವ ಧೈರ್ಯ ತೋರಿಸಿ ಎಂದು ಆರ್ ಅಶೋಕ್ ಅವರಿಗೆ ಸವಾಲು ಹಾಕಿದ್ದಾರೆ. ಈ ವಾಕ್ಸಮರವು ಈಗ ರಾಜ್ಯ ರಾಜಕಾರಣದಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿದೆ.

ShareTweetSendShare
Join us on:

Related Posts

ಸಿಎಂ ಆಗಿದ್ದಾಗ ಕುಮಾರಸ್ವಾಮಿ 2 ದಿನ ನಾಪತ್ತೆಯಾಗಿದ್ದರು: ಮಗನನ್ನು ಹುಡುಕಿಕೊಡು ಎಂದು ದೇವೇಗೌಡರೇ ನನಗೆ ಟಾಸ್ಕ್ ಕೊಟ್ಟಿದ್ದರು; ಕುಮಾರಸ್ವಾಮಿ ವಿರುದ್ಧ ಸಚಿವ ಚೆಲುವರಾಯಸ್ವಾಮಿ ಆಕ್ರೋಶ

ಸಿಎಂ ಆಗಿದ್ದಾಗ ಕುಮಾರಸ್ವಾಮಿ 2 ದಿನ ನಾಪತ್ತೆಯಾಗಿದ್ದರು: ಮಗನನ್ನು ಹುಡುಕಿಕೊಡು ಎಂದು ದೇವೇಗೌಡರೇ ನನಗೆ ಟಾಸ್ಕ್ ಕೊಟ್ಟಿದ್ದರು; ಕುಮಾರಸ್ವಾಮಿ ವಿರುದ್ಧ ಸಚಿವ ಚೆಲುವರಾಯಸ್ವಾಮಿ ಆಕ್ರೋಶ

by Shwetha
September 4, 2026
0

ಬೆಂಗಳೂರು: ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಹಾಗೂ ಸಚಿವ ಚಲುವರಾಯಸ್ವಾಮಿ ನಡುವಿನ ವಾಕ್ಸಮರ ಈಗ ಸ್ಫೋಟಕ ಹಂತಕ್ಕೆ ತಲುಪಿದೆ. ಎಚ್ ಡಿ ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದ...

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಆರೋಪಿ ಮನೆ ಮೇಲೆ ದಾಳಿ, 15 ಗ್ರೂಪ್‌-ಬಿ ಹಾಲ್ ಟಿಕೆಟ್‌ಗಳು ಪತ್ತೆ

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಆರೋಪಿ ಮನೆ ಮೇಲೆ ದಾಳಿ, 15 ಗ್ರೂಪ್‌-ಬಿ ಹಾಲ್ ಟಿಕೆಟ್‌ಗಳು ಪತ್ತೆ

by Shwetha
September 4, 2026
0

KPSC ಪಶುವೈದ್ಯಾಧಿಕಾರಿಗಳ ನೇಮಕಾತಿ ಹಗರಣದ ತನಿಖೆ ನಡೆಸುತ್ತಿರುವ CID ಅಧಿಕಾರಿಗಳಿಗೆ ಮತ್ತಷ್ಟು ಮಹತ್ವದ ದಾಖಲೆಗಳು ಸಿಕ್ಕಿವೆ. ಪ್ರಕರಣದಲ್ಲಿ ಬಂಧಿತನಾಗಿರುವ ಆರೋಪಿ ಬಸವರಾಜ್ ಕನ್ನಾಳೆ ಅವರ ಬೆಂಗಳೂರಿನ ಸಂಜಯನಗರದಲ್ಲಿರುವ...

ಕೃಷ್ಣ ಜನ್ಮಾಷ್ಟಮಿ ಹಿನ್ನೆಲೆ: ಸೆ. 4ರಂದು GBA ವ್ಯಾಪ್ತಿಯಲ್ಲಿ ಮಾಂಸ ಮಾರಾಟ, ಪ್ರಾಣಿ ವಧೆ ನಿಷೇಧ

ಕೃಷ್ಣ ಜನ್ಮಾಷ್ಟಮಿ ಹಿನ್ನೆಲೆ: ಸೆ. 4ರಂದು GBA ವ್ಯಾಪ್ತಿಯಲ್ಲಿ ಮಾಂಸ ಮಾರಾಟ, ಪ್ರಾಣಿ ವಧೆ ನಿಷೇಧ

by Shwetha
September 4, 2026
0

ಶ್ರೀಕೃಷ್ಣ ಜನ್ಮಾಷ್ಟಮಿ ಹಬ್ಬದ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 4ರಂದು ಗ್ರೇಟರ್ ಬೆಂಗಳೂರು ಅಥಾರಿಟಿ (GBA) ವ್ಯಾಪ್ತಿಯಲ್ಲಿ ಪ್ರಾಣಿ ವಧೆ ಹಾಗೂ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಈ ಕುರಿತು...

ರಾಹುಲ್ ಗಾಂಧಿ ಬಗ್ಗೆ ನಾಲಿಗೆ ಹರಿಬಿಟ್ಟರೆ ಹುಷಾರ್:ನೀನು ಯಾವನೋ ಎಂದು ಕೇಳಬೇಕಾಗುತ್ತದೆ ಶ್ರೀರಾಮುಲುಗೆ  ಪ್ರದೀಪ್ ಈಶ್ವರ್ ಎಚ್ಚರಿಕೆ

ರಾಹುಲ್ ಗಾಂಧಿ ಬಗ್ಗೆ ನಾಲಿಗೆ ಹರಿಬಿಟ್ಟರೆ ಹುಷಾರ್:ನೀನು ಯಾವನೋ ಎಂದು ಕೇಳಬೇಕಾಗುತ್ತದೆ ಶ್ರೀರಾಮುಲುಗೆ ಪ್ರದೀಪ್ ಈಶ್ವರ್ ಎಚ್ಚರಿಕೆ

by Shwetha
September 4, 2026
0

ಬೆಂಗಳೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಏಕವಚನದಲ್ಲಿ ಮಾತನಾಡುತ್ತಿರುವ ಬಿಜೆಪಿ ಮುಖಂಡ ಶ್ರೀರಾಮುಲು ವಿರುದ್ಧ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ತೀವ್ರ ಆಕ್ರೋಶ ಹೊರಹಾಕಿದ್ದಾರೆ. ವಿಧಾನಸೌಧದಲ್ಲಿ...

ದಿನ ಭವಿಷ್ಯ (02-09-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (04-09-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
September 4, 2026
0

ದಿನ ಭವಿಷ್ಯ: 04-09-2026 ಮೇಷ ರಾಶಿ ಇಂದು ನಿಮಗೆ ಅತ್ಯಂತ ಉತ್ಸಾಹದಾಯಕವಾದ ದಿನವಾಗಿದೆ. ವೃತ್ತಿ ಕ್ಷೇತ್ರದಲ್ಲಿ ನಿಮ್ಮ ಕಠಿಣ ಶ್ರಮಕ್ಕೆ ತಕ್ಕ ಮನ್ನಣೆ ಸಿಗಲಿದೆ. ಮೇಲಧಿಕಾರಿಗಳು ನಿಮ್ಮ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram