ಆಡಳಿತಾತ್ಮಕ ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ ಕಂದಾಯ ಇಲಾಖೆಯ ಗ್ರೇಡ್-1 ಮತ್ತು ಗ್ರೇಡ್-2 ವೃಂದದ 18 ತಹಶೀಲ್ದಾರ್ಗಳನ್ನು ರಾಜ್ಯ ಸರ್ಕಾರ ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಹಾಗೂ ಸ್ಥಳನಿಯುಕ್ತಿಗೊಳಿಸಿ ಆದೇಶ ಹೊರಡಿಸಿದೆ.
ಕಂದಾಯ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಜಿ.ಕೆ. ನರಸಿಂಹಮೂರ್ತಿ ಅವರು ಅಧಿಸೂಚನೆ ಹೊರಡಿಸಿದ್ದು, ಸ್ಥಳ ನಿರೀಕ್ಷೆಯಲ್ಲಿದ್ದ ಅಧಿಕಾರಿಗಳಿಗೆ ಹುದ್ದೆ ನೀಡುವುದರ ಜೊತೆಗೆ ಹಲವು ತಾಲೂಕುಗಳು ಹಾಗೂ ನಿಗಮ-ಮಂಡಳಿಗಳಲ್ಲಿನ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ.
ಸಂಗಮೇಶ ಜಿಡಗ (ಗ್ರೇಡ್-2): ಬಳ್ಳಾರಿ ನಗರಾಭಿವೃದ್ಧಿ ಕೋಶದಿಂದ ಯಾದಗಿರಿ ಜಿಲ್ಲಾ ನಗರಾಭಿವೃದ್ಧಿ ಕೋಶದ ಪುರಸಭಾ ತಹಶೀಲ್ದಾರ್.
ಎಂ.ಆರ್. ಷಣ್ಮುಖ (ಗ್ರೇಡ್-2): ಕಾರಟಗಿಯಿಂದ ರಾಯಚೂರು ಜಿಲ್ಲಾಧಿಕಾರಿ ಕಚೇರಿಯ ಸಹಾಯಕ ಹುದ್ದೆಗೆ.
ಶಾರದಾ ಬಿರಾದಾರ (ಗ್ರೇಡ್-2): ಸ್ಥಳ ನಿರೀಕ್ಷೆಯಲ್ಲಿದ್ದ ಇವರನ್ನು ಕಲಬುರಗಿಯ KKRDB ಆಪ್ತ ಕಾರ್ಯದರ್ಶಿಯಾಗಿ ನಿಯುಕ್ತಿ.
ಹೆಚ್.ಸಿ. ಸುಜಾತ (ಗ್ರೇಡ್-2): ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್. ಪುರ ತಹಶೀಲ್ದಾರ್.
ರುಕಿಯಾ ಬೇಗಂ (ಗ್ರೇಡ್-1): ಹಿಂದಿನ ವರ್ಗಾವಣೆ ಆದೇಶ ರದ್ದು; ಸಾಲಿಗ್ರಾಮದಲ್ಲೇ ಮುಂದುವರಿಕೆ.
ರೂಪಾ ಡಿ. (ಗ್ರೇಡ್-2): ಕರ್ನಾಟಕ ರಾಜ್ಯ ಹಣಕಾಸು ನಿಗಮದ (KSFC) ವಿಶೇಷ ತಹಶೀಲ್ದಾರ್.
ನೀಲಬಾಯಿ ಲಮಾಣಿ (ಗ್ರೇಡ್-2): ಬೆಂಗಳೂರಿನ ಕಿದ್ವಾಯಿ ಸಂಸ್ಥೆಯ ಆಡಳಿತಾಧಿಕಾರಿ.
ಎಸ್.ಬಿ. ಕಾಯಲಿ (ಗ್ರೇಡ್-2): ಬೀಳಗಿಯಿಂದ ಜಮಖಂಡಿ ತಾಲೂಕು ತಹಶೀಲ್ದಾರ್.
ಎಂ.ವಿ. ಬಿರಾದರ ಪಾಟೀಲ (ಗ್ರೇಡ್-2): ರಾಮದುರ್ಗದಿಂದ ಅಥಣಿ ತಾಲೂಕಿಗೆ.
ಆರ್.ಎಸ್. ವಳಸಂಗ (ಗ್ರೇಡ್-2): ಅಥಣಿಯಿಂದ ರಾಮದುರ್ಗ ತಾಲೂಕಿಗೆ.
ಜಯಲಕ್ಷ್ಮಿ ವಸ್ತ್ರದ (ಗ್ರೇಡ್-1): ಗದಗ ಜಿಲ್ಲಾಧಿಕಾರಿ ಕಚೇರಿಯ ಸಹಾಯಕ ಹುದ್ದೆಗೆ.
ಜಿ.ಕೆ. ಮಂಜುನಾಂದ (ಗ್ರೇಡ್-2): ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕು ತಹಶೀಲ್ದಾರ್.
ವಿ.ಎಸ್. ರವೀಂದ್ರ (ಗ್ರೇಡ್-2): ಬೆಂಗಳೂರು ಮಹಾನಗರ ಕಾರ್ಯಪಡೆ (BMTF) ತಹಶೀಲ್ದಾರ್.
ಟಿ. ವಿನೋದ (ಗ್ರೇಡ್-1): ಮೈಸೂರಿನ UPOR ತಹಶೀಲ್ದಾರ್.
ನರಸಿಂಹಮೂರ್ತಿ ಟಿ.ಎನ್. (ಗ್ರೇಡ್-1): ಬೆಂಗಳೂರು ದಕ್ಷಿಣ ಜಿಲ್ಲಾಧಿಕಾರಿ ಕಚೇರಿಯ ಸಹಾಯಕ ಹುದ್ದೆಗೆ.
ಡಿ.ಜೆ. ಕೋರಿ (ಗ್ರೇಡ್-2): ಬೆಳಗಾವಿ ವಿಶೇಷ ಜಿಲ್ಲಾಧಿಕಾರಿಗಳ ಕಚೇರಿಯ ವಿಶೇಷ ತಹಶೀಲ್ದಾರ್.
ಜೆ.ವಿ. ತುಳಸಿ (ಗ್ರೇಡ್-2): ಗುಡಿಬಂಡೆಯಿಂದ ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮಕ್ಕೆ (KRDCL) ವರ್ಗಾವಣೆ.
ಕಾವ್ಯಶ್ರೀ ಹೆಚ್. (ಗ್ರೇಡ್-1): ಬೆಂಗಳೂರಿನ IMA ವಿಶೇಷಾಧಿಕಾರಿ ಮತ್ತು ಸಕ್ಷಮ ಪ್ರಾಧಿಕಾರ ಕಚೇರಿಯ ತಹಶೀಲ್ದಾರ್.
ವರ್ಗಾವಣೆಗೊಂಡಿರುವ ಎಲ್ಲಾ ಅಧಿಕಾರಿಗಳು ನಿಯೋಜಿತ ಸ್ಥಳಗಳಲ್ಲಿ ತಕ್ಷಣ ಕರ್ತವ್ಯಕ್ಕೆ ಹಾಜರಾಗಿ, ಚಾರ್ಜ್ ರಿಪೋರ್ಟ್ (CTC) ಅನ್ನು ಸರ್ಕಾರಕ್ಕೆ ಸಲ್ಲಿಸುವಂತೆ ಸೂಚಿಸಲಾಗಿದೆ.







