ADVERTISEMENT
Tuesday, September 8, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ರಾಜ್ಯ

ಕಾಂಗ್ರೆಸ್ ನಲ್ಲಿ ಅಹಿಂದ ವಾರ್ -ಸತೀಶ್ ಜಾರಕಿಹೊಳಿ ಜಮೀರ್ ಅಹ್ಮದ್ ಸೈಡ್ ಲೈನ್ ಹಿಂದಿದೆಯೇ ಸಿದ್ದರಾಮಯ್ಯ ತಂತ್ರಗಾರಿಕೆ!ಭವಿಷ್ಯದ ಅಹಿಂದ ನಾಯಕತ್ವಕ್ಕಾಗಿ ಶುರುವಾಯ್ತಾ ಜಂಗೀ ಕುಸ್ತಿ?

Shwetha by Shwetha
September 8, 2026
in ರಾಜ್ಯ, Newsbeat, Politics, State, ರಾಜಕೀಯ
Share on FacebookShare on TwitterShare on WhatsappShare on Telegram

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಅಹಿಂದ ವರ್ಗದ ಏಕೈಕ ಧ್ರುವತಾರೆ ಎಂದು ಬಿಂಬಿತವಾಗಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಾಯಕತ್ವದ ಕೋಟೆಯಲ್ಲಿ ಈಗ ದೊಡ್ಡ ಬಿರುಕು ಕಾಣಿಸಿಕೊಂಡಿದೆ. ಭವಿಷ್ಯದ ಅಹಿಂದ ನಾಯಕ ಎಂದೇ ಗುರುತಿಸಿಕೊಂಡಿದ್ದ ಸಚಿವ ಸತೀಶ್ ಜಾರಕಿಹೊಳಿ ಮತ್ತು ಸಿದ್ದರಾಮಯ್ಯ ಅವರ ನೆರಳಿನಂತಿದ್ದ ಜಮೀರ್ ಅಹ್ಮದ್ ಖಾನ್ ಅವರನ್ನು ವ್ಯವಸ್ಥಿತವಾಗಿ ಸೈಡ್ ಲೈನ್ ಮಾಡಲಾಗಿದೆಯೇ ಎಂಬ ಪ್ರಶ್ನೆ ಈಗ ರಾಜಕೀಯ ಪಡಸಾಲೆಯಲ್ಲಿ ಸಂಚಲನ ಮೂಡಿಸಿದೆ.

ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಹಿಂದುಳಿದ ವರ್ಗಗಳ ಮಹಾ ಒಕ್ಕೂಟದ ಸಮಾವೇಶ ಈ ಅನುಮಾನಗಳಿಗೆ ಈಗ ಪುಷ್ಟಿ ನೀಡಿದೆ. ಈ ಬೃಹತ್ ಸಮಾವೇಶದಲ್ಲಿ ಸಿದ್ದರಾಮಯ್ಯ ಅವರು ರಾರಾಜಿಸಿದರೆ, ಅವರ ಅತ್ಯಾಪ್ತರಾಗಿದ್ದ ಸತೀಶ್ ಜಾರಕಿಹೊಳಿ, ಜಮೀರ್ ಅಹ್ಮದ್ ಖಾನ್ ಮತ್ತು ಎಚ್ ಸಿ ಮಹದೇವಪ್ಪ ಅವರಿಗೆ ವೇದಿಕೆಯ ಮೇಲೆ ಜಾಗವಿರಲಿ, ಕನಿಷ್ಠ ಆಹ್ವಾನವೂ ಸಿಕ್ಕಿರಲಿಲ್ಲ ಎನ್ನುವುದು ಈಗ ಅಸಲಿ ಚರ್ಚೆಗೆ ಕಾರಣವಾಗಿದೆ.

Related posts

ಅಂಬೇಡ್ಕರ್ ಬಗ್ಗೆ ನೀಚ ಮಾತು ಸಂವಿಧಾನ ಬರೆಯುವಾಗ ಮದ್ಯ ಸೇವಿಸಿದ್ದಿರಾ ಎಂದು ಪ್ರಶ್ನಿಸಿದ ವ್ಯಕ್ತಿಯ ವಿರುದ್ಧ ಜ‌ನಾಕ್ರೋಶ

ಅಂಬೇಡ್ಕರ್ ಬಗ್ಗೆ ನೀಚ ಮಾತು ಸಂವಿಧಾನ ಬರೆಯುವಾಗ ಮದ್ಯ ಸೇವಿಸಿದ್ದಿರಾ ಎಂದು ಪ್ರಶ್ನಿಸಿದ ವ್ಯಕ್ತಿಯ ವಿರುದ್ಧ ಜ‌ನಾಕ್ರೋಶ

September 8, 2026
ಬೆಂಗಳೂರಿನಲ್ಲಿ ಕಾಫಿ-ಟೀ ಬೆಲೆ ಏರಿಕೆ: ಗ್ರಾಹಕರ ಜೇಬಿಗೆ ಮತ್ತಷ್ಟು ಹೊರೆ

ಬೆಂಗಳೂರಿನಲ್ಲಿ ಕಾಫಿ-ಟೀ ಬೆಲೆ ಏರಿಕೆ: ಗ್ರಾಹಕರ ಜೇಬಿಗೆ ಮತ್ತಷ್ಟು ಹೊರೆ

September 8, 2026

ಬದಲಾದ ಸಮೀಕರಣ ಸಿದ್ದರಾಮಯ್ಯ ಸಿಟ್ಟಿಗೆ ಕಾರಣವಾಯಿತೇ ಆಪ್ತರ ನಡೆ

ಒಂದು ಕಾಲದಲ್ಲಿ ಸಿದ್ದರಾಮಯ್ಯ ಅವರ ಪರಮಾಪ್ತರಾಗಿದ್ದ ಸತೀಶ್ ಜಾರಕಿಹೊಳಿ ಅವರು ಮುಂದಿನ ಮುಖ್ಯಮಂತ್ರಿ ಸ್ಥಾನದ ಪ್ರಬಲ ಆಕಾಂಕ್ಷಿ ಎಂದು ಸ್ವತಃ ಯತೀಂದ್ರ ಸಿದ್ದರಾಮಯ್ಯ ಅವರೇ ಹೊಗಳಿದ್ದರು. ಆದರೆ ಇತ್ತೀಚಿನ ದಿನಗಳಲ್ಲಿ ಸತೀಶ್ ಜಾರಕಿಹೊಳಿ ಅವರು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರ ಜೊತೆಗೆ ಹೆಚ್ಚು ಆಪ್ತತೆ ಬೆಳೆಸಿಕೊಂಡಿರುವುದು ಸಿದ್ದರಾಮಯ್ಯ ಅವರ ಕೆಂಗಣ್ಣಿಗೆ ಗುರಿಯಾಗಿದೆ ಎನ್ನಲಾಗುತ್ತಿದೆ. ತಮ್ಮ ಕ್ಯಾಂಪ್ ನಲ್ಲಿದ್ದುಕೊಂಡೇ ವಿರೋಧಿ ಬಣದ ಜೊತೆಗೆ ಕೈಜೋಡಿಸಿದ ನಾಯಕರಿಗೆ ಪಾಠ ಕಲಿಸಲು ಸಿದ್ದರಾಮಯ್ಯ ತಂತ್ರ ರೂಪಿಸಿದ್ದಾರೆಯೇ ಎಂಬ ಮಾತುಗಳು ಕೇಳಿಬರುತ್ತಿವೆ.

ಆಹ್ವಾನವೇ ಇಲ್ಲ ಅಂದಮೇಲೆ ಹೋಗುವುದು ಹೇಗೆ ಸತೀಶ್ ಜಾರಕಿಹೊಳಿ

ತಮ್ಮನ್ನು ಉದ್ದೇಶಪೂರ್ವಕವಾಗಿ ಕಡೆಗಣಿಸಿರುವ ಬಗ್ಗೆ ಸಚಿವ ಸತೀಶ್ ಜಾರಕಿಹೊಳಿ ತೀವ್ರ ಅಸಮಾಧಾನ ಹೊರಹಾಕಿದ್ದಾರೆ. ಈ ಕಾರ್ಯಕ್ರಮಕ್ಕೂ ನನಗೂ ಸಂಬಂಧವಿಲ್ಲ, ಆಹ್ವಾನ ನೀಡದ ಜಾಗಕ್ಕೆ ನಾನು ಹೋಗುವುದಿಲ್ಲ ಎಂದು ನೇರವಾಗಿಯೇ ಹೇಳಿದ್ದಾರೆ. ಅಹಿಂದ ಒಡೆಯಲು ನಮ್ಮ ಸುತ್ತಮುತ್ತಲೇ ಕೆಲವು ಜನರಿದ್ದಾರೆ, ಇದು ಎಷ್ಟು ಪರಿಣಾಮ ಬೀರಲಿದೆ ಎಂಬುದನ್ನು ಕಾದು ನೋಡೋಣ ಎಂದು ಹೇಳುವ ಮೂಲಕ ಹೊಸ ಸ್ಟ್ರ್ಯಾಟಜಿ ರೂಪಿಸುವ ಸೂಚನೆಯನ್ನು ಜಾರಕಿಹೊಳಿ ನೀಡಿದ್ದಾರೆ.

ಒಡಕು ಮೂಡಿಸುವವರ ಬಗ್ಗೆ ಎಚ್ಚರಿಕೆ

ಯತೀಂದ್ರ ಸಿದ್ದರಾಮಯ್ಯ ಅವರು ನನ್ನ ಪರವಾಗಿ ಮಾತನಾಡಿದ್ದಾರೆ ಎಂಬ ಸತ್ಯವನ್ನು ನೆನಪಿಸಿರುವ ಸತೀಶ್ ಜಾರಕಿಹೊಳಿ, ಪಕ್ಷದ ಒಳಗೆ ಒಡಕು ಮೂಡಿಸಲು ಶಕ್ತಿಗಳು ಕೆಲಸ ಮಾಡುತ್ತಿವೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಹಿರಿಯ ನಾಯಕರ ನಡುವಿನ ಈ ಶೀತಲ ಸಮರ ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷದ ಅಹಿಂದ ವೋಟ್ ಬ್ಯಾಂಕ್ ಮೇಲೆ ಗಂಭೀರ ಪರಿಣಾಮ ಬೀರಬಹುದು ಎಂದು ವಿಶ್ಲೇಷಿಸಲಾಗುತ್ತಿದೆ.

ShareTweetSendShare
Join us on:

Related Posts

ಅಂಬೇಡ್ಕರ್ ಬಗ್ಗೆ ನೀಚ ಮಾತು ಸಂವಿಧಾನ ಬರೆಯುವಾಗ ಮದ್ಯ ಸೇವಿಸಿದ್ದಿರಾ ಎಂದು ಪ್ರಶ್ನಿಸಿದ ವ್ಯಕ್ತಿಯ ವಿರುದ್ಧ ಜ‌ನಾಕ್ರೋಶ

ಅಂಬೇಡ್ಕರ್ ಬಗ್ಗೆ ನೀಚ ಮಾತು ಸಂವಿಧಾನ ಬರೆಯುವಾಗ ಮದ್ಯ ಸೇವಿಸಿದ್ದಿರಾ ಎಂದು ಪ್ರಶ್ನಿಸಿದ ವ್ಯಕ್ತಿಯ ವಿರುದ್ಧ ಜ‌ನಾಕ್ರೋಶ

by Shwetha
September 8, 2026
0

ಮಂಡ್ಯ: ಭಾರತ ಸಂವಿಧಾನದ ಶಿಲ್ಪಿ ಡಾ ಬಿಆರ್ ಅಂಬೇಡ್ಕರ್ ಅವರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅತ್ಯಂತ ಕೀಳಾಗಿ ಮಾತನಾಡಿರುವ ವಿಡಿಯೋವೊಂದು ಈಗ ರಾಜ್ಯಾದ್ಯಂತ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ....

ಬೆಂಗಳೂರಿನಲ್ಲಿ ಕಾಫಿ-ಟೀ ಬೆಲೆ ಏರಿಕೆ: ಗ್ರಾಹಕರ ಜೇಬಿಗೆ ಮತ್ತಷ್ಟು ಹೊರೆ

ಬೆಂಗಳೂರಿನಲ್ಲಿ ಕಾಫಿ-ಟೀ ಬೆಲೆ ಏರಿಕೆ: ಗ್ರಾಹಕರ ಜೇಬಿಗೆ ಮತ್ತಷ್ಟು ಹೊರೆ

by Shwetha
September 8, 2026
0

ದಿನನಿತ್ಯದ ಜೀವನದ ಅವಿಭಾಜ್ಯ ಭಾಗವಾಗಿರುವ ಕಾಫಿ ಮತ್ತು ಟೀ ಪ್ರಿಯರಿಗೆ ಇದೀಗ ಬೆಲೆ ಏರಿಕೆಯ ಬಿಸಿ ತಟ್ಟುತ್ತಿದೆ. ಸಕ್ಕರೆ ಮತ್ತು ಬೆಲ್ಲದ ಬೆಲೆಯಲ್ಲಿ ಇತ್ತೀಚೆಗೆ ಏರಿಳಿತ ಕಂಡುಬಂದ...

ಟಾಕ್ಸಿಕ್ : ಸಾಲು ಸಾಲು ಫ್ಲಾಪ್ ಕಂಡರೂ ಕೆವಿಎನ್ ಸಂಸ್ಥೆಗೆ 700 ಕೋಟಿ ಬಂದಿದ್ದು ಎಲ್ಲಿಂದ?ಯಶ್  ಮತ್ತು ಗೀತು ನಿರ್ದೇಶನದ ನಡುವೆ ಈಗೋ ಕ್ಲಾಶ್! ಟಾಕ್ಸಿಕ್ ಹಳಿ ತಪ್ಪಿದ ಕಥೆ ಬಿಚ್ಚಿಟ್ಟ ಸಮೀರ್

ಟಾಕ್ಸಿಕ್ : ಸಾಲು ಸಾಲು ಫ್ಲಾಪ್ ಕಂಡರೂ ಕೆವಿಎನ್ ಸಂಸ್ಥೆಗೆ 700 ಕೋಟಿ ಬಂದಿದ್ದು ಎಲ್ಲಿಂದ?ಯಶ್ ಮತ್ತು ಗೀತು ನಿರ್ದೇಶನದ ನಡುವೆ ಈಗೋ ಕ್ಲಾಶ್! ಟಾಕ್ಸಿಕ್ ಹಳಿ ತಪ್ಪಿದ ಕಥೆ ಬಿಚ್ಚಿಟ್ಟ ಸಮೀರ್

by Shwetha
September 8, 2026
0

ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಟಾಕ್ಸಿಕ್ ಚಿತ್ರದ ಸುತ್ತ ಈಗ ವಿವಾದದ ಹುತ್ತವೇ ಬೆಳೆಯುತ್ತಿದೆ. ಜನಪ್ರಿಯ ಯುಟ್ಯೂಬರ್ ಸಮೀರ್ ಎಂಡಿ ತಮ್ಮ ದೂತ ಚಾನೆಲ್...

ಬೆಂಗಳೂರಿನಲ್ಲಿ ಕ್ಯಾಬ್ ದರಕ್ಕೆ ಬ್ರೇಕ್: ಎಲ್ಲಾ ಹಳದಿ ಬೋರ್ಡ್ ಟ್ಯಾಕ್ಸಿಗಳಿಗೆ ಫೇರ್ ಮೀಟರ್ ಕಡ್ಡಾಯ

ಬೆಂಗಳೂರಿನಲ್ಲಿ ಕ್ಯಾಬ್ ದರಕ್ಕೆ ಬ್ರೇಕ್: ಎಲ್ಲಾ ಹಳದಿ ಬೋರ್ಡ್ ಟ್ಯಾಕ್ಸಿಗಳಿಗೆ ಫೇರ್ ಮೀಟರ್ ಕಡ್ಡಾಯ

by Shwetha
September 8, 2026
0

ರಾಜಧಾನಿ ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಭಾಗಗಳಲ್ಲಿ ಕ್ಯಾಬ್ ಅಗ್ರಿಗೇಟರ್ ಕಂಪನಿಗಳು ಹಾಗೂ ಕೆಲವು ಟ್ಯಾಕ್ಸಿ ಮಾಲೀಕರು ಪ್ರಯಾಣಿಕರಿಂದ ಮನಸೋಇಚ್ಛೆ ದರ ವಸೂಲಿ ಮಾಡುತ್ತಿರುವ ಆರೋಪಗಳಿಗೆ ಕಡಿವಾಣ...

ದಿನ ಭವಿಷ್ಯ (02-09-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (08-09-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
September 8, 2026
0

ದಿನ ಭವಿಷ್ಯ: 08-09-2026 ಮೇಷ ರಾಶಿ ಇಂದು ನಿಮ್ಮ ರಾಶ್ಯಾಧಿಪತಿ ಕುಜನ ಪ್ರಭಾವದಿಂದ ನಿಮ್ಮಲ್ಲಿ ಅದ್ಭುತವಾದ ಉತ್ಸಾಹ ಮತ್ತು ಶಕ್ತಿ ಮನೆಮಾಡಿರುತ್ತದೆ. ಉದ್ಯೋಗದಲ್ಲಿ ನೀವು ತೆಗೆದುಕೊಳ್ಳುವ ದಿಟ್ಟ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram