ADVERTISEMENT
Thursday, September 17, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಮಾಲಾಶ್ರೀ – ರುಕ್ಮಿಣಿ ವಸಂತ್ ಕಾಂಬಿನೇಷನ್‌ನಲ್ಲಿ ‘ಮಂಗಳ ಗೌರಿ’ ಚಿತ್ರ ಘೋಷಣೆ: ಕೆವಿಎನ್ ಪ್ರೊಡಕ್ಷನ್ಸ್ ಮತ್ತು ದಾಕ್ಷಾಯಣಿ ಟಾಕೀಸ್ ಜಂಟಿ ನಿರ್ಮಾಣ!

admin by admin
September 17, 2026
in Cinema, Newsbeat, Uncategorized, ಮನರಂಜನೆ
mangala-gowri-movie-announcement-malashree-rukmini-vasanth-kvn-productions

mangala-gowri-movie-announcement-malashree-rukmini-vasanth-kvn-productions

Share on FacebookShare on TwitterShare on WhatsappShare on Telegram

ಬೆಂಗಳೂರು: ಕನ್ನಡ ಚಿತ್ರರಂಗದ ಕನಸಿನ ರಾಣಿ ಮಾಲಾಶ್ರೀ ಹಾಗೂ ಬಹುಬೇಡಿಕೆಯ ನಟಿ ರುಕ್ಮಿಣಿ ವಸಂತ್ ಒಟ್ಟಿಗೆ ತೆರೆ ಹಂಚಿಕೊಳ್ಳಲು ಸಜ್ಜಾಗಿದ್ದಾರೆ. ಸ್ಯಾಂಡಲ್‌ವುಡ್‌ನ ಎರಡು ತಲೆಮಾರಿನ ಖ್ಯಾತ ನಟಿಯರನ್ನು ಒಂದೇ ಫ್ರೇಮ್‌ನಲ್ಲಿ ಒಗ್ಗೂಡಿಸಿರುವ ‘ಮಂಗಳ ಗೌರಿ’ ಎಂಬ ಬಹುನಿರೀಕ್ಷಿತ ಚಿತ್ರ ಅಧಿಕೃತವಾಗಿ ಘೋಷಣೆಯಾಗಿದ್ದು, ಸದ್ಯ ಭರದಿಂದ ಚಿತ್ರೀಕರಣ ಸಾಗುತ್ತಿದೆ. ರಾಹುಲ್ ಪಿಕೆ ನಿರ್ದೇಶನ ಮಾಡುತ್ತಿರುವ ಈ ಚಿತ್ರವನ್ನು ಕಂಟೆಂಟ್ ಆಧಾರಿತ ಹಾಗೂ ಅದ್ಧೂರಿ ಚಿತ್ರಗಳಿಗೆ ಹೆಸರಾದ ಎರಡು ಪ್ರತಿಷ್ಠಿತ ಸಂಸ್ಥೆಗಳಾದ ‘ಕೆವಿಎನ್ ಪ್ರೊಡಕ್ಷನ್ಸ್’ ಮತ್ತು ‘ದಾಕ್ಷಾಯಣಿ ಟಾಕೀಸ್’ ಜಂಟಿಯಾಗಿ ನಿರ್ಮಿಸುತ್ತಿವೆ.

ವೆಂಕಟ್ ಕೆ. ನಾರಾಯಣ ನೇತೃತ್ವದ ಕೆವಿಎನ್ ಪ್ರೊಡಕ್ಷನ್ಸ್, ಭಾರತೀಯ ಚಿತ್ರರಂಗದಲ್ಲಿ ಬೃಹತ್ ಬಜೆಟ್‌ನ ಪ್ಯಾನ್-ಇಂಡಿಯಾ ಚಿತ್ರಗಳ ಮೂಲಕ ಮುಂಚೂಣಿಯಲ್ಲಿದ್ದು, ‘ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್’, ‘ಜನ ನಾಯಗನ್’, ವಿಮರ್ಶಕರ ಪ್ರಶಂಸೆಗೆ ಪಾತ್ರವಾದ ‘ಬಾಲನ್ – ದಿ ಬಾಯ್’ ಮತ್ತು ಮೆಗಾಸ್ಟಾರ್ ಚಿರಂಜೀವಿ ಅವರ ಮುಂಬರುವ ‘ಕಾಕ’ ಸಿನಿಮಾಗಳೊಂದಿಗೆ ಗುರುತಿಸಿಕೊಂಡಿದೆ. ಇತ್ತ ಖ್ಯಾತ ಬರಹಗಾರ-ನಿರ್ದೇಶಕ ಹೇಮಂತ್ ಎಂ. ರಾವ್ ಅವರು ಬಾಲ್ಯದಲ್ಲೇ ತಮಗೆ ಕಥಾಲೋಕವನ್ನು ಪರಿಚಯಿಸಿದ ತಾಯಿಯ ಹೆಸರಿನಲ್ಲಿ ಸ್ಥಾಪಿಸಿದ ದಾಕ್ಷಾಯಣಿ ಟಾಕೀಸ್, ಈಗಾಗಲೇ ‘ಅಜ್ಞಾತವಾಸಿ’ ಸೇರಿದಂತೆ ಹಲವು ವಿಶಿಷ್ಟ ಕಥಾಹಂದರದ ಚಿತ್ರಗಳನ್ನು ನಿರ್ಮಿಸಿದೆ. ಕೆವಿಎನ್ ಸಂಸ್ಥೆಯ ಅದ್ದೂರಿತನ ಮತ್ತು ದಾಕ್ಷಾಯಣಿ ಟಾಕೀಸ್‌ನ ಗಟ್ಟಿಯಾದ ಕಂಟೆಂಟ್ ಆಧಾರಿತ ನಿಲುವು ಒಂದಾಗಿ, ಹೊಸ ಪ್ರತಿಭೆಗಳು ಹಾಗೂ ವಿಶಿಷ್ಟ ಕಥೆಗಳನ್ನು ಪ್ರೋತ್ಸಾಹಿಸುವ ಸದುದ್ದೇಶದಿಂದ ‘ಮಂಗಳ ಗೌರಿ’ ಚಿತ್ರದ ಮೂಲಕ ಈ ಚೊಚ್ಚಲ ಜಂಟಿ ಪಾಲುದಾರಿಕೆಗೆ ಮುನ್ನುಡಿ ಬರೆದಿವೆ.

Related posts

ವಿಜಯ್ ದೇವರಕೊಂಡ-ರಶ್ಮಿಕಾ ಮಂದಣ್ಣ ಕಾಂಬಿನೇಷನ್‌ನ ‘ರಣಬಾಲಿ’ ಟೀಸರ್ ರಿಲೀಸ್: ದಸರಾ ಹಬ್ಬಕ್ಕೆ ಪ್ಯಾನ್-ಇಂಡಿಯಾ ಮಟ್ಟದಲ್ಲಿ ಅದ್ಧೂರಿ ಬಿಡುಗಡೆ!

ವಿಜಯ್ ದೇವರಕೊಂಡ-ರಶ್ಮಿಕಾ ಮಂದಣ್ಣ ಕಾಂಬಿನೇಷನ್‌ನ ‘ರಣಬಾಲಿ’ ಟೀಸರ್ ರಿಲೀಸ್: ದಸರಾ ಹಬ್ಬಕ್ಕೆ ಪ್ಯಾನ್-ಇಂಡಿಯಾ ಮಟ್ಟದಲ್ಲಿ ಅದ್ಧೂರಿ ಬಿಡುಗಡೆ!

September 17, 2026
bail-movie-kumari-special-song-released-niveditha-gowda-shivarajkumar

‘ಬೇಲ್’ ಚಿತ್ರದ ‘ಕುಮಾರಿ’ ಸ್ಪೆಷಲ್ ಸಾಂಗ್ ಔಟ್: ಭರ್ಜರಿಯಾಗಿ ಹೆಜ್ಜೆ ಹಾಕಿ ಪಡ್ಡೆಹೈಕ್ಳ ನಿದ್ದೆಗೆಡಿಸಿದ ನಿವೇದಿತಾ ಗೌಡ!

September 17, 2026

ಈ ಚಿತ್ರದಲ್ಲಿ ನಟಿ ಮಾಲಾಶ್ರೀ ಅವರು ಇದುವರೆಗೂ ಕಂಡಿರದ ಹೊಚ್ಚ ಹೊಸ ಅವತಾರದಲ್ಲಿ ಪ್ರೇಕ್ಷಕರ ಎದುರು ಬರಲಿದ್ದು, ಇಂದಿನ ಯುವ ಪೀಳಿಗೆಯ ಪ್ರೇಕ್ಷಕರಿಗೆ ಅವರ ಹೊಸ ಆಯಾಮದ ನಟನಾ ಕೌಶಲ ಅನಾವರಣಗೊಳ್ಳಲಿದೆ. ಮತ್ತೊಂದೆಡೆ ಸಹಜ ಅಭಿನಯದ ಮೂಲಕ ಪ್ಯಾನ್-ಇಂಡಿಯಾ ಮಟ್ಟದಲ್ಲಿ ಸದ್ದು ಮಾಡುತ್ತಿರುವ ರುಕ್ಮಿಣಿ ವಸಂತ್, ಮಾಲಾಶ್ರೀ ಜೊತೆ ಸಮಬಲದ ಪಾತ್ರದಲ್ಲಿ ಮಿಂಚಲಿದ್ದಾರೆ. ‘ಸಪ್ತ ಸಾಗರದಾಚೆ ಎಲ್ಲೋ’ ನಂತರ ಹೇಮಂತ್ ಎಂ. ರಾವ್ ಅವರೊಂದಿಗೆ ಹಾಗೂ ‘ಟಾಕ್ಸಿಕ್’ ಚಿತ್ರದ ನಂತರ ಕೆವಿಎನ್ ಪ್ರೊಡಕ್ಷನ್ಸ್ ಜೊತೆಗೆ ರುಕ್ಮಿಣಿ ವಸಂತ್ ಅವರ ಎರಡನೇ ಸಿನಿಮಾವಾಗಿದೆ.

ಚಿತ್ರಕ್ಕೆ ತಾಂತ್ರಿಕವಾಗಿಯೂ ಬಲಿಷ್ಠ ತಂಡ ಸಾಥ್ ನೀಡಿದ್ದು, ಮಿಧುನ್ ಮುಕುಂದನ್ ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ. ಇಬ್ಬರು ಬಲಿಷ್ಠ ಮಹಿಳಾ ಪಾತ್ರಗಳ ನಡುವಿನ ರೋಚಕ ಪಯಣವನ್ನು ಒಳಗೊಂಡ ಈ ಚಿತ್ರಕ್ಕೆ ‘ತುಳಸಿ’ ಮ್ಯೂಸಿಕ್ ವಿಡಿಯೋ ಖ್ಯಾತಿಯ ಶ್ರೀವತ್ಸನ್ ಸೆಲ್ವರಾಜನ್ ಛಾಯಾಗ್ರಹಣ ನಿರ್ವಹಿಸುತ್ತಿದ್ದು, ಖ್ಯಾತ ಸಾಹಸ ನಿರ್ದೇಶಕ ವಿಕ್ರಮ್ ಮೋರ್ ಆ್ಯಕ್ಷನ್ ದೃಶ್ಯಗಳಿಗೆ ನಿರ್ದೇಶನ ಮಾಡುತ್ತಿದಾರೆ. ಸದ್ಯ ಬಿರುಸಿನಿಂದ ಸಾಗುತ್ತಿರುವ ಶೂಟಿಂಗ್ ಮುಕ್ತಾಯದ ಹಂತಕ್ಕೆ ತಲುಪಿದ್ದು, ಚಿತ್ರತಂಡ ಶೀಘ್ರದಲ್ಲೇ ತೆರೆಗೆ ತರಲು ಸಿದ್ಧತೆ ನಡೆಸುತ್ತಿದೆ.

Tags: #MangalaGowri #Malashree #RukminiVasanth #KVNProductions #DakshaayaniTalkies #RahulPK #HemanthMRao #Sandalwood #saakshatv
ShareTweetSendShare
Join us on:

Related Posts

ವಿಜಯ್ ದೇವರಕೊಂಡ-ರಶ್ಮಿಕಾ ಮಂದಣ್ಣ ಕಾಂಬಿನೇಷನ್‌ನ ‘ರಣಬಾಲಿ’ ಟೀಸರ್ ರಿಲೀಸ್: ದಸರಾ ಹಬ್ಬಕ್ಕೆ ಪ್ಯಾನ್-ಇಂಡಿಯಾ ಮಟ್ಟದಲ್ಲಿ ಅದ್ಧೂರಿ ಬಿಡುಗಡೆ!

ವಿಜಯ್ ದೇವರಕೊಂಡ-ರಶ್ಮಿಕಾ ಮಂದಣ್ಣ ಕಾಂಬಿನೇಷನ್‌ನ ‘ರಣಬಾಲಿ’ ಟೀಸರ್ ರಿಲೀಸ್: ದಸರಾ ಹಬ್ಬಕ್ಕೆ ಪ್ಯಾನ್-ಇಂಡಿಯಾ ಮಟ್ಟದಲ್ಲಿ ಅದ್ಧೂರಿ ಬಿಡುಗಡೆ!

by admin
September 17, 2026
0

ಹೈದರಾಬಾದ್: ತೆಲುಗು ಚಿತ್ರರಂಗದ ಸ್ಟಾರ್ ನಟ ವಿಜಯ್ ದೇವರಕೊಂಡ ಹಾಗೂ ನಿರ್ದೇಶಕ ರಾಹುಲ್ ಸಂಕೃತ್ಯನ್ ಕಾಂಬಿನೇಷನ್‌ನಲ್ಲಿ ಅತ್ಯಂತ ಅದ್ಧೂರಿಯಾಗಿ ಮೂಡಿಬರುತ್ತಿರುವ ಪ್ಯಾನ್-ಇಂಡಿಯಾ ಆ್ಯಕ್ಷನ್ ಎಪಿಕ್ ‘ರಣಬಾಲಿ’ ಚಿತ್ರದ...

bail-movie-kumari-special-song-released-niveditha-gowda-shivarajkumar

‘ಬೇಲ್’ ಚಿತ್ರದ ‘ಕುಮಾರಿ’ ಸ್ಪೆಷಲ್ ಸಾಂಗ್ ಔಟ್: ಭರ್ಜರಿಯಾಗಿ ಹೆಜ್ಜೆ ಹಾಕಿ ಪಡ್ಡೆಹೈಕ್ಳ ನಿದ್ದೆಗೆಡಿಸಿದ ನಿವೇದಿತಾ ಗೌಡ!

by admin
September 17, 2026
0

ಬೆಂಗಳೂರು: ಸ್ಯಾಂಡಲ್‌ವುಡ್‌ನಲ್ಲಿ ಭಾರಿ ಕುತೂಹಲ ಮೂಡಿಸಿರುವ, ಬಹುತಾರಾಗಣದ ಬಹುನಿರೀಕ್ಷಿತ ಚಿತ್ರ ‘ಬೇಲ್’ ಸಿನಿಮಾದಿಂದ ಬಹುನಿರೀಕ್ಷಿತ ಸ್ಪೆಷಲ್ ಹಾಡು ‘ಕುಮಾರಿ’ ಬಿಡುಗಡೆಯಾಗಿದ್ದು, ಸೋಷಿಯಲ್ ಮೀಡಿಯಾದಲ್ಲಿ ಧೂಳೆಬ್ಬಿಸುತ್ತಿದೆ. ಈ ಸಾಂಗ್‌ನಲ್ಲಿ...

ವೈಟ್‌ಫೀಲ್ಡ್‌ನಲ್ಲಿ ಕಲರ್ಸ್ ಹೆಲ್ತ್ ಕೇರ್ ಇಂಡಿಯಾದ ನೂತನ ಶಾಖೆ ಆರಂಭ: ನಟ ಡಾರ್ಲಿಂಗ್ ಕೃಷ್ಣ – ಮಿಲನಾ ನಾಗರಾಜ್ ದಂಪತಿಯಿಂದ ಅದ್ಧೂರಿ ಉದ್ಘಾಟನೆ!

ವೈಟ್‌ಫೀಲ್ಡ್‌ನಲ್ಲಿ ಕಲರ್ಸ್ ಹೆಲ್ತ್ ಕೇರ್ ಇಂಡಿಯಾದ ನೂತನ ಶಾಖೆ ಆರಂಭ: ನಟ ಡಾರ್ಲಿಂಗ್ ಕೃಷ್ಣ – ಮಿಲನಾ ನಾಗರಾಜ್ ದಂಪತಿಯಿಂದ ಅದ್ಧೂರಿ ಉದ್ಘಾಟನೆ!

by admin
September 17, 2026
0

ಬೆಂಗಳೂರು: ದೇಶದ ಪ್ರಮುಖ ಆರೋಗ್ಯ ಮತ್ತು ಸೌಂದರ್ಯವರ್ಧಕ ಸಂಸ್ಥೆಗಳಲ್ಲಿ ಒಂದಾದ ಕಲರ್ಸ್ ಹೆಲ್ತ್ ಕೇರ್ ಇಂಡಿಯಾ (Kolors Health Care India) ಸಂಸ್ಥೆಯ ನೂತನ ವೆಲ್‌ನೆಸ್‌ ಮತ್ತು...

ganapati-bappa-morya-kannada-movie-title-first-look-poster-unveiled

ಗಣಪತಿ ಬಪ್ಪ ಮೋರಿಯಾ’ ಚಿತ್ರದ ಟೈಟಲ್, ಫಸ್ಟ್ ಲುಕ್ ಪೋಸ್ಟರ್ ಅನಾವರಣ

by admin
September 17, 2026
0

ಕನ್ನಡ ಚಿತ್ರರಂಗದಲ್ಲಿ ಹೊಸ ಬಗೆಯ ಕಥೆಗಳ ಅಲೆ ಜೋರಾಗಿದ್ದು, ಇದೀಗ ಮತ್ತೊಂದು ವಿಭಿನ್ನ ಹಾಗೂ ಭರವಸೆಯ ಹೊಸ ಚಿತ್ರ ಸೆಟ್ಟೇರಿದೆ. ಚಿತ್ರಕ್ಕೆ ‘ಗಣಪತಿ ಬಪ್ಪ ಮೋರಿಯಾ’ ಎಂದು...

naaku-tanti-kannada-movie-four-actresses-khushi-ravi-roshini-prakash-sangeetha-bhat-sindhu-srinivasa-murthy |

‘ನಾಕು ತಂತಿ’ ಚಿತ್ರಕ್ಕಾಗಿ ಒಂದಾದ ನಾಲ್ವರು ಪ್ರತಿಭಾವಂತ ನಟಿಯರು: ಖುಷಿ ರವಿ, ರೋಷಿನಿ ಪ್ರಕಾಶ್, ಸಂಗೀತಾ ಭಟ್ ಹಾಗೂ ಸಿಂಧು ಶ್ರೀನಿವಾಸ ಮೂರ್ತಿ ಜುಗಲ್‌ಬಂದಿ!

by admin
September 17, 2026
0

ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ತಮ್ಮ ನೈಜ ಹಾಗೂ ವಿಶಿಷ್ಟ ಅಭಿನಯದ ಮೂಲಕ ಪ್ರೇಕ್ಷಕರ ಮನಗೆದ್ದಿರುವ ಖುಷಿ ರವಿ, ರೋಷಿನಿ ಪ್ರಕಾಶ್, ಸಂಗೀತಾ ಭಟ್ ಮತ್ತು ಸಿಂಧು ಶ್ರೀನಿವಾಸ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram