ADVERTISEMENT
Thursday, September 17, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ವಿಷ್ಣು ಸೇನಾನಿಗಳಿಂದ ಅದ್ಧೂರಿ ಅಮೃತ ಮಹೋತ್ಸವ

admin by admin
September 17, 2026
in Cinema, Newsbeat, Uncategorized, ಮನರಂಜನೆ
dr-vishnuvardhan-amrutha-mahotsava-grand-rally-half-kilometer-flag-bengaluru

dr-vishnuvardhan-amrutha-mahotsava-grand-rally-half-kilometer-flag-bengaluru

Share on FacebookShare on TwitterShare on WhatsappShare on Telegram

ಅರ್ಧ ಕಿಲೋಮೀಟರ್ ಉದ್ದದ ಬೃಹತ್ ಧ್ವಜದೊಂದಿಗೆ ಮಹಾ ಮೆರವಣಿಗೆ

ಸೆಪ್ಟೆಂಬರ್ 27ರಂದು ಬೆಳಗ್ಗೆ 6ರಿಂದ ರಾತ್ರಿ 12ರವರೆಗೆ 18 ಗಂಟೆಗಳ ಸಂಭ್ರಮ

Related posts

dr-shivarajkumar-abhishan-jeevinth-picasso-movie-first-look-released

ಡಾ. ಶಿವರಾಜ್‌ಕುಮಾರ್ ಮತ್ತು ಅಭಿಶನ್ ಜೀವಿಂತ್ ಚಿತ್ರಕ್ಕೆ ‘ಪಿಕಾಸೊ’ ಟೈಟಲ್! ಫಸ್ಟ್ ಲುಕ್ ರಿಲೀಸ್‌ ಮಾಡಿದ ನಟ-ನಿರ್ದೇಶಕ ರಿಷಬ್ ಶೆಟ್ಟಿ

September 17, 2026
seetha-circle-sri-krishnan-mane-kalle-beeja-lyrical-song-released

ಗಮನ ಸೆಳೆಯುತ್ತಿರುವ ‘ಸೀತಾ ಸರ್ಕಲ್ ಶ್ರೀ ಕೃಷ್ಣನ್ ಮನೆ’: ‘ಕಳ್ಳೇ ಬೀಜ ಕಿತ್ತುಕೊಂಡ್ ಹೋದ್ಲು’ ಲಿರಿಕಲ್ ಹಾಡು ರಿಲೀಸ್‌!

September 17, 2026

ಬೆಂಗಳೂರು: ಕನ್ನಡ ಚಿತ್ರರಂಗದ ಮೇರುನಟ, ಅಭಿಮಾನಿಗಳ ಪ್ರೀತಿಯ ‘ಯಜಮಾನ’ ಡಾ. ವಿಷ್ಣುವರ್ಧನ್ ಅವರ ಅಮೃತ ಮಹೋತ್ಸವವನ್ನು ಐತಿಹಾಸಿಕವಾಗಿ ಆಚರಿಸಲು ವಿಷ್ಣು ಸೇನಾನಿಗಳು ಸಜ್ಜಾಗುತ್ತಿದ್ದಾರೆ.

ಸುಮಾರು ಒಂದು ಕೋಟಿಗೂ ಮಿಗಿಲಾದ ವೆಚ್ಚದಲ್ಲಿ, ಬರೋಬ್ಬರಿ 18 ಗಂಟೆಗಳ ಕಾಲ ನಡೆಯಲಿರುವ ಈ ಬೃಹತ್ ಮಹೋತ್ಸವಕ್ಕೆ ಈಗಾಗಲೇ ಸಿದ್ಧತೆಗಳು ಆರಂಭವಾಗಿವೆ. ನೂರಾರು ಜನರ ಶ್ರಮ, ಸಾವಿರಾರು ಅಭಿಮಾನಿಗಳ ಸಹಕಾರ ಹಾಗೂ ತಿಂಗಳುಗಳ ಪೂರ್ವತಯಾರಿಯೊಂದಿಗೆ ಈ ಮಹೋತ್ಸವವನ್ನು ಅತ್ಯಂತ ಅದ್ಧೂರಿಯಾಗಿ ರೂಪಿಸಲಾಗುತ್ತಿದೆ.

ಮಹೋತ್ಸವದ ಮೊದಲ ಪ್ರಮುಖ ಆಕರ್ಷಣೆಯಾಗಿ ಅರ್ಧ ಕಿಲೋಮೀಟರ್ ಉದ್ದದ ಬೃಹತ್ ಧ್ವಜದ ಮೆರವಣಿಗೆ ನಡೆಯಲಿದೆ.

ಸೆಪ್ಟೆಂಬರ್ 27ರಂದು ಬೆಳಗ್ಗೆ 6 ಗಂಟೆಗೆ ಬೆಂಗಳೂರಿನ ಟೌನ್ ಹಾಲ್‌ನಿಂದ ಆರಂಭವಾಗುವ ಮೆರವಣಿಗೆ ನಾಯಂಡಹಳ್ಳಿಯವರೆಗೆ ಸಾಗಲಿದೆ. ಅರ್ಧ ಕಿಲೋಮೀಟರ್ ಉದ್ದದ ಬೃಹತ್ ಧ್ವಜವನ್ನು ಸಾವಿರಾರು ವಿಷ್ಣುವರ್ಧನ್ ಅಭಿಮಾನಿಗಳು ಹೆಮ್ಮೆಯಿಂದ ಹೊತ್ತು ಸಾಗಲಿದ್ದಾರೆ. ಇದು ಅಮೃತ ಮಹೋತ್ಸವದ ಅತ್ಯಂತ ವಿಶೇಷ ಹಾಗೂ ಸ್ಮರಣೀಯ ಕ್ಷಣಗಳಲ್ಲಿ ಒಂದಾಗಲಿದೆ.

ಮೆರವಣಿಗೆಯ ನಂತರ ನಾಯಂಡಹಳ್ಳಿಯ ನಂದಿ ಲಿಂಕ್ ಗ್ರೌಂಡ್‌ನಲ್ಲಿ ದಿನವಿಡೀ ವಿವಿಧ ಕಾರ್ಯಕ್ರಮಗಳು ನಡೆಯಲಿದ್ದು, ಬೆಳಗ್ಗೆ 6 ಗಂಟೆಗೆ ಆರಂಭವಾಗುವ ಸಂಭ್ರಮ ರಾತ್ರಿ 12 ಗಂಟೆಯವರೆಗೂ ಮುಂದುವರಿಯಲಿದೆ.

“ಆ ದಿನ ವಿಷ್ಣು ಸೇನಾನಿಗಳು ಕೇವಲ ಒಂದು ಕಾರ್ಯಕ್ರಮವನ್ನು ಮಾಡುವುದಿಲ್ಲ. ಒಬ್ಬ ಮಹಾನ್ ಕಲಾವಿದನ ಮೇಲಿನ ಅಭಿಮಾನ ಹೇಗಿರುತ್ತದೆ ಎಂಬುದನ್ನು ಇಡೀ ನಾಡಿಗೆ ತೋರಿಸಲಿದ್ದಾರೆ. ಈ ಅಮೃತ ಮಹೋತ್ಸವ ಅಭಿಮಾನಿಗಳ ಪಾಲಿಗೆ ಒಂದು ಐತಿಹಾಸಿಕ ಕ್ಷಣವಾಗಬೇಕು ಎಂಬ ಕನಸಿನಿಂದ ಪ್ರತಿಯೊಂದು ಹೆಜ್ಜೆಯನ್ನೂ ರೂಪಿಸುತ್ತಿದ್ದೇವೆ” ಎಂದು ವೀರಕಪುತ್ರ ಶ್ರೀನಿವಾಸ್ ತಿಳಿಸಿದ್ದಾರೆ.

Tags: #Vishnuvardhan #DrVishnuvardhan #AmruthaMahotsava #VeeraputraSrinivas #VishnuSenanigalu #TownHallToNayandahalli #Sandalwood #SahasaSimha #saakshatv
ShareTweetSendShare
Join us on:

Related Posts

dr-shivarajkumar-abhishan-jeevinth-picasso-movie-first-look-released

ಡಾ. ಶಿವರಾಜ್‌ಕುಮಾರ್ ಮತ್ತು ಅಭಿಶನ್ ಜೀವಿಂತ್ ಚಿತ್ರಕ್ಕೆ ‘ಪಿಕಾಸೊ’ ಟೈಟಲ್! ಫಸ್ಟ್ ಲುಕ್ ರಿಲೀಸ್‌ ಮಾಡಿದ ನಟ-ನಿರ್ದೇಶಕ ರಿಷಬ್ ಶೆಟ್ಟಿ

by admin
September 17, 2026
0

ಚೆನ್ನೈ: ಕನ್ನಡ ಚಿತ್ರರಂಗದ ಸೂಪರ್‌ಸ್ಟಾರ್ ಡಾ. ಶಿವರಾಜ್‌ಕುಮಾರ್ ಮತ್ತು ಯೂಥ್‌ ಸೆನ್ಸೇಷನ್ ಅಭಿಶನ್ ಜೀವಿಂತ್ ಕಾಂಬಿನೇಷನ್‌ನ ಬಹುನಿರೀಕ್ಷಿತ ಸಿನಿಮಾದ ಶೀರ್ಷಿಕೆ ಹಾಗೂ ಫಸ್ಟ್ ಲುಕ್ ಅಧಿಕೃತವಾಗಿ ಬಿಡುಗಡೆಯಾಗಿದ್ದು,...

seetha-circle-sri-krishnan-mane-kalle-beeja-lyrical-song-released

ಗಮನ ಸೆಳೆಯುತ್ತಿರುವ ‘ಸೀತಾ ಸರ್ಕಲ್ ಶ್ರೀ ಕೃಷ್ಣನ್ ಮನೆ’: ‘ಕಳ್ಳೇ ಬೀಜ ಕಿತ್ತುಕೊಂಡ್ ಹೋದ್ಲು’ ಲಿರಿಕಲ್ ಹಾಡು ರಿಲೀಸ್‌!

by admin
September 17, 2026
0

ಗಮನ ಸೆಳೆಯುತ್ತಿರುವ ‘ಸೀತಾ ಸರ್ಕಲ್ ಶ್ರೀ ಕೃಷ್ಣನ್ ಮನೆ’: ‘ಕಳ್ಳೇ ಬೀಜ ಕಿತ್ತುಕೊಂಡ್ ಹೋದ್ಲು’ ಲಿರಿಕಲ್ ಹಾಡು ರಿಲೀಸ್‌! ಬೆಂಗಳೂರು: ಸ್ಯಾಂಡಲ್‌ವುಡ್‌ನಲ್ಲಿ ವಿಭಿನ್ನ ಶೀರ್ಷಿಕೆಯ ಮೂಲಕ ಪ್ರೇಕ್ಷಕರಲ್ಲಿ...

actress-roja-to-attend-dr-vishnuvardhan-amrutha-mahotsava-bengaluru

ಡಾ. ವಿಷ್ಣುವರ್ಧನ್ ಅಮೃತ ಮಹೋತ್ಸವಕ್ಕೆ ಬಹುಭಾಷಾ ತಾರೆ ರೋಜಾ ಆಗಮನ

by admin
September 17, 2026
0

‘ಯಜಮಾನ್ರ’ ಫೋಟೋ ನೋಡುತ್ತಿದ್ದಂತೆಯೇ ರೋಜಾ ಅವರ ಬಾಯಿಂದ ಬಂದ ಮೊದಲ ಪದ — “ಲೆಜೆಂಡ್” ಬೆಂಗಳೂರು: ಸಾಹಸಸಿಂಹ ಡಾ. ವಿಷ್ಣುವರ್ಧನ್ ಅವರ ಅಮೃತ ಮಹೋತ್ಸವಕ್ಕೆ ಬಹುಭಾಷಾ ಖ್ಯಾತ...

birbal-case-2-movie-announced-kvn-productions-shivarajkumar-mg-srinivas

ಕೆವಿಎನ್ ಪ್ರೊಡಕ್ಷನ್ಸ್‌ನಿಂದ ಮತ್ತೊಂದು ಸಿನಿಮಾ : ‘ಬೀರ್‌ಬಲ್ ಕೇಸ್ 2’ ಅನೌನ್ಸ್; ಶಿವಣ್ಣ ಅತಿಥಿ ಪಾತ್ರ, ಖುಷ್ಬೂ-ಡೈಸಿ ಬೋಪಣ್ಣ ಭರ್ಜರಿ ಕಮ್‌ಬ್ಯಾಕ್!*

by admin
September 17, 2026
0

ಬೆಂಗಳೂರು: ಭಾರತೀಯ ಚಿತ್ರರಂಗದ ಪ್ರಮುಖ ನಿರ್ಮಾಣ ಸಂಸ್ಥೆಯಾದ ಕೆವಿಎನ್ ಪ್ರೊಡಕ್ಷನ್ಸ್ ಸಿನಿಪ್ರಿಯರಿಗೆ ಭರ್ಜರಿ ಕೊಡುಗೆ ನೀಡಿದೆ. ಗುಣಮಟ್ಟದ ಹಾಗೂ ಬೃಹತ್ ಕ್ಯಾನ್ವಾಸ್‌ನ ಸಿನಿಮಾಗಳ ಮೂಲಕ ಗಮನಸೆಳೆದಿರುವ ನಿರ್ಮಾಪಕ...

zee5-ott-new-avatar-ai-technology-free-5-hollywood-movies

ಹೊಸ ರೂಪದಲ್ಲಿ ‘Zee5’ ಒಟಿಟಿ ಅನಾವರಣ: AI ಆಧಾರಿತ ತಂತ್ರಜ್ಞಾನ, ಉಚಿತ ಮನರಂಜನೆಯ ‘ಫ್ರೀ 5’ ಮತ್ತು ಹಾಲಿವುಡ್ ಸಿನಿಮಾಗಳ ಭರ್ಜರಿ ಎಂಟ್ರಿ!

by admin
September 17, 2026
0

  ನವದೆಹಲಿ: ಭಾರತದ ಪ್ರಮುಖ ಸ್ವದೇಶಿ ವಿಡಿಯೋ ಸ್ಟ್ರೀಮಿಂಗ್ ಪ್ಲಾಟ್‌ಫಾರ್ಮ್ ‘ಜೀ5’ (Zee5) ತನ್ನ ಬಳಕೆದಾರರಿಗೆ ಕಂಟೆಂಟ್ ಹುಡುಕಾಟ ಮತ್ತು ವೀಕ್ಷಣೆಯ ಅನುಭವವನ್ನು ಸಂಪೂರ್ಣವಾಗಿ ಹೊಸ ಎತ್ತರಕ್ಕೆ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram