ಕಡಬ: ಸ್ನೇಹಿತರ ಜೊತೆ ಸ್ನಾನಕ್ಕೆ ತೆರಳಿದ್ದ ಯುವಕ ನೀರು ಪಾಲಾದ ಘಟನೆ ಕಡಬದ ಕುಮಾರಧಾರ ನದಿಯಲ್ಲಿ ನಡೆದಿದೆ. ನೀರುಪಾಲಾಗಿ ಮೃತಪಟ್ಟ ಯುವಕನನ್ನು ಕೊಯಿಲ ಜನತಾ ಕಾಲೋನಿ ನಿವಾಸಿ ಅರ್ಫಾದ್ ಎಂದು ಗುರುತಿಸಲಾಗಿದೆ. ಅರ್ಫಾದ್ ತನ್ನ ಸ್ನೇಹಿತರೊಂದಿಗೆ ಸ್ನಾನಕ್ಕೆಂದು ಕೊಯಿಲ ಗ್ರಾಮದ ಸುದೆಂಗಳ ಸಮೀಪದ ಕುಮಾರಧಾರ ನದಿಗಿಳಿದಿದ್ದ. ಈ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ಕಣ್ಮರೆಯಾಗಿದ್ದ. ವಿಷಯ ತಿಳಿದು ಸ್ಥಳಕ್ಕೆ ಬಂದ ಸ್ಥಳೀಯ ಈಜುಗಾರರು, ಕಡಬ ಅಗ್ನಿಶಾಮಕ ದಳ ಹಾಗೂ ಕಡಬ ಪೊಲೀಸರ ನಿರಂತರ ಕಾರ್ಯಾಚರಣೆ ಬಳಿಕ ಯುವಕನ ಮೃತದೇಹ ಪತ್ತೆಯಾಗಿದೆ. ಈ ಬಗ್ಗೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಚೆನ್ನೈನಲ್ಲಿ ಹೈಸ್ಪೀಡ್ ಕೆಟಿಎಂ ಬೈಕ್ ಸವಾರಿ ಮಾಡಿದ ಧೋನಿ
ಟೀಮ್ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರು, ಮದ್ರಾಸ್ ಇಂಟರ್ ನ್ಯಾಷನಲ್ ಸಕ್ರ್ಯೂಟ್ನಲ್ಲಿ ಕೆಟಿಎಂ 390 ಡ್ಯೂಕ್ ಬೈಕ್ ಸವಾರಿ ಮಾಡುವ ಮೂಲಕ ಗಮನ...








