ಜುಲೈ 24ರ ಬಳಿಕವೂ ಧಾರವಾಡದಲಿ ಲಾಕ್ ಡೌನ್ ವಿಸ್ತರಣೆಯಾಗಬೇಕೆಂಬ ಮಾತುಗಳು ವ್ಯಾಪಕವಾಗಿ ಕೇಳಿಬರ್ತಿದೆ. ಇದೀಗ ಈ ವಿಚಾರವಾಗಿ ಸಚಿವ ಜಗದೀಶ್ ಶೆಟ್ಟರ್ ಅವರು ಪ್ರತಿಕ್ರಿಯೆ ನೀಡಿದ್ದು, ಜಿಲ್ಲೆಯಲ್ಲಿ ಲಾಕ್ ಡೌನ್ ವಿಸ್ತರಣೆ ಬಗ್ಗೆ ಸಚಿವ ಸಂಪುಟದಲ್ಲಿ ಸಿಎಂ ಜೊತೆಗೆ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು. ಆದ್ರೆ ಲಾಕ್ ಡೌನ್ ವಿಸ್ತರಣೆಯೇ ಪರಿಹಾರವಲ್ಲ. ಹೀಗಾಗಿ 25 ರ ನಂತರ ಲಾಕ್ ಡೌನ್ ವಿಸ್ತರಣೆ ಬಹುತೇಕ ಡೌಟ್. ಆದ್ರೂ ಡಿಸಿ, ವೈದ್ಯರು, ತಜ್ಞರ ಜೊತೆಗೆ ಈ ಬಗ್ಗೆ ಮತ್ತೊಮ್ಮೆ ಚರ್ಚೆ ನಡೆಸಿ ಅಂತಿಮ ನಿರ್ದಾರ ಕೈಗೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.
ಇನ್ನೂ ಮುಂದುವರೆದು ಮಾತನಾಡಿರುವ ಸಚಿವರು ಕೊರೊನಾ ನಿಯಂತ್ರಣ ವಿಚಾರದಲ್ಲಿ ಸಚಿವರ ಮಧ್ಯೆ ಸಮನ್ವಯತೆ ಇಲ್ಲ ಎನ್ನುವುದು ಸುಳ್ಳು. ಸರ್ಕಾರ ಸೇರಿದಂತೆ ಎಲ್ಲಾ ಸಚಿವರು ಪ್ರಮಾಣಿಕವಾಗಿ ಒಗ್ಗೂಡಿ ಕೆಲಸ ಮಾಡುತ್ತಿದ್ದಾರೆ. ಇನ್ನೂ ಕೋವಿಡ್ ಸಾಮಗ್ರಿಗಳ ಖರೀದಿಯಲ್ಲಿ ಅವ್ಯವಹಾರವಾಗಿಲ್ಲ. ವಿಪಕ್ಷಗಳು ಏನೋ ಆರೋಪ ಮಾಡ್ಬೇಕು ಅಂತ ಮಾಡಬಾರದು. ರಚನಾತ್ಮಕವಾಗಿ ಟೀಕೆ ಮಾಡಬೇಕು. ವ್ಯರ್ಥ ಆರೋಪ ಸರಿಯಲ್ಲ ಎಂದು ವಿಪಕ್ಷರ ಆರೋಪಗಳಿಗೆ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.
ಯತ್ನಾಳ ಮತ್ತು ಈಶ್ವರಪ್ಪ ಇಲ್ಲದೆ ಬಿಜೆಪಿ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ: ಹಿರಿಯ ನಾಯಕರ ಪರ ನಿರಾಣಿ ಬ್ಯಾಟಿಂಗ್- ರಾಜ್ಯಾಧ್ಯಕ್ಷ ವಿಜಯೇಂದ್ರಗೆ ಮುರುಗೇಶ ನಿರಾಣಿ ಖಡಕ್ ಸಲಹೆ
ಬಾಗಲಕೋಟೆ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ರಾಜ್ಯದಲ್ಲಿ ಅಧಿಕಾರಕ್ಕೆ ಬರಬೇಕೆಂದರೆ ಪಕ್ಷದಿಂದ ದೂರವಾಗಿರುವ ಬಂಡಾಯ ನಾಯಕರನ್ನು ಮತ್ತೆ ಮನೆಗೆ ಕರೆತರುವುದು ಅನಿವಾರ್ಯ ಎಂದು ಮಾಜಿ ಸಚಿವ ಮುರುಗೇಶ...








