ಬೆಂಗಳೂರು: ಕೊರೊನಾ ತಡೆಗೆ ದೇಶಾದ್ಯಂತ ಮಾಡಲಾಗಿದ್ದ ಲಾಕ್ಡೌನ್ ಹಾಗೂ ಅನ್ಲಾಕ್ ಅಗಿ ಬಹಳ ದಿನಗಳ ನಂತರ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ರಾಜಭವನಕ್ಕೆ ಭೇಟಿ ನೀಡಿದ್ದರು.
ಬೆಳಿಗ್ಗೆ 11.30ಕ್ಕೆ ರಾಜ್ಯಪಾಲ ವಜುಭಾಯ್ ವಾಲಾ ಅವರನ್ನು ಭೇಟಿ ಮಾಡಿದ ಸಿಎಂ ಯಡಿಯೂರಪ್ಪ ರಾಜ್ಯದ ಸದ್ಯದ ಬೆಳವಣಿಗೆಗಳ ಬಗ್ಗೆ ಚರ್ಚೆ ನಡೆಸಿದರು.
ಕೊರೊನಾ ನಿಯಂತ್ರಣಕ್ಕೆ ಮಾಡಲಾಗಿದ್ದ ಲಾಕ್ಡೌನ್ ತೆರವು ಮಾಡಲಾಗಿದೆ. ಇನ್ನು ಮುಂದೆ ರಾಜ್ಯದಲ್ಲಿ ಲಾಕ್ಡೌನ್ ಮಾಡುವುದಿಲ್ಲ ಎಂದು ಬಿಎಸ್ವೈ ನಿನ್ನೆ ಘೋಷಣೆ ಮಾಡಿದ ಬೆನ್ನಲ್ಲೇ ಇಂದು ರಾಜ್ಯಪಾಲರನ್ನು ಭೇಟಿ ಮಾಡಿದ್ದಾರೆ. ರಾಜ್ಯದಲ್ಲಿ ಕೊರೊನಾ ಸೋಂಕು ಹರಡುವುದನ್ನು ಕಡಿಮೆ ಮಾಡಲು ರಾಜ್ಯ ಸರ್ಕಾರ ಕೈಗೊಂಡಿರುವ ಕ್ರಮಗಳು, ಆಸ್ಪತ್ರೆಗಳಲ್ಲಿ ಸೋಂಕಿತರಿಗೆ ನೀಡುತ್ತಿರುವ ಚಿಕಿತ್ಸೆ ಹಾಗೂ ಲಾಕ್ಡೌನ್ ತೆರವಾದ ನಂತರ ಸರ್ಕಾರ ಪ್ರಕಟಿಸಿದ ಪರಿಹಾರ ಪ್ಯಾಕೇಜ್ಗಳ ಬಗ್ಗೆ ರಾಜ್ಯಪಾಲರಿಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ
fifawordcup-2026: ಈತ ಬರೀ ಫುಟ್ಬಾಲ್ ಆಟಗಾರನಲ್ಲ.. ಸಾವಿರಾರು ಬಡ ಪ್ರತಿಭೆಗಳಿಗೆ ಬೆಳಕು ನೀಡೋ ನಂದಾದೀಪ..!
ಬಡತನ ಅವನ ಕಾಲಿಗೆ ಬೂಟ್ಗಳನ್ನು ಕೊಡಲಿಲ್ಲ. ಆದ್ರೆ ಹೃದಯಕ್ಕೆ ಧೈರ್ಯ ಕೊಟ್ಟಿತ್ತು. ಹಸಿವು ಆತನ ಹೊಟ್ಟೆಯನ್ನು ಸುಡುವಂತೆ ಮಾಡಿತ್ತು. ಆದ್ರೆ ಕಂಡ ಕನಸುಗಳನ್ನು ಸುಡಲಿಲ್ಲ. ಹೊಟ್ಟೆ ತುಂಬಾ...








