ಶಿವಮೊಗ್ಗ : ಕೊರೊನಾ ವೈರಸ್ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಬೇಕಿದ್ದ ರಾಜಕೀಯ ನಾಯಕರೇ ಪದೇ ಪದೇ ಕೋವಿಡ್ ನಿಯಮಗಳನ್ನು ಉಲ್ಲಂಘಿಸಿ ಸುದ್ದಿ ಆಗುತ್ತಿದ್ದಾರೆ. ಅದೇ ರೀತಿ ಇಂದು ಸಂಸದ ಬಿ.ವೈ ರಾಘವೇಂದ್ರ ಅವರು ಪಕ್ಷ ಕಾರ್ಯಕ್ರಮದಲ್ಲಿ ಕೋವಿಡ್ ನಿಯಮಗಳನ್ನು ಉಲ್ಲಂಘಿಸಿ ಟೀಕೆಗೆ ಒಳಗಾಗಿದ್ದಾರೆ.
ಇಂದು ಶಿಕಾರಿಪುರ ಪುರಸಭೆಯ ಕಾಂಗ್ರೆಸ್ ಸದಸ್ಯರು ರಾಘವೇಂದ್ರ ಅವರ ನೇತೃತ್ವದಲ್ಲಿ ಬಿಜೆಪಿ ಸೇರಿದರು. ಈ ವೇಳೆ ಮೂವರು ಪಕ್ಷೇತರ ಸದಸ್ಯರು ಕೂಡ ಕಮಲ ಬಾವುಟ ಹಿಡಿದರು. ಆದ್ರೆ ಈ ಸಂದರ್ಭದಲ್ಲಿ ಅಲ್ಲಿ ಯಾವುದೇ ಸಾಮಾಜಿಕ ಅಂತರವನ್ನಾಗಿ ಕಾಪಿಟ್ಟುಕೊಂಡಿರಲಿಲ್ಲ. ಕಂಪ್ಲೀಟ್ ಆಗಿ ಕೊರೊನಾ ನಿಯಮಗಳನ್ನು ಗಾಳಿಗೆ ತೂರಿದ್ದರು.
ಇತ್ತೀಚೆಗೆ ಶಿಕಾರಿಪುರದಲ್ಲೂ ಸಹ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಹೀಗಿದ್ದರೂ ಸಾಮಾಜಿಕ ಅಂತರ ಕಾಯ್ದುಕೊಳ್ಳದೇ, ಮಾಸ್ಕ್ ಧರಿಸದೇ ಸಂಸದರು ಕಾರ್ಯಕ್ರಮದಲ್ಲಿ ಭಾಗಿಯಾಗಿದಿದ್ದು ಚರ್ಚೆಗೆ ಗ್ರಾಸವಾಗಿದೆ.








