ಕೋಲಾರ : ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಇದು ಚಿನ್ನದನಾಡಿನ ಜನರ ಆತಂಕಕ್ಕೆ ಕಾರಣವಾಗಿದೆ. ಇದರ ಮಧ್ಯೆ ಇಂದು ಜಮೀನು ಸರ್ವೇ ಮಾಡುವ ಅಧಿಕಾರಿಗೆ ಕೊರೊನಾ ಸೋಂಕು ಇರುವುದು ದೃಢವಾಗಿದೆ. ಇದು ಕೋಲಾರ ತಾಲೂಕು ರೈತರಲ್ಲಿ ಆತಂಕ ಹೆಚ್ಚಾಗಿದೆ.
32 ವರ್ಷ ವಯಸ್ಸಿನ ಸರ್ವೇಯರ್ ಕಳೆದ ಒಂದು ವಾರದಿಂದ ಹಲವು ರೈತರ ಜಮೀನುಗಳಿಗೆ ತೆರಳಿ ಸರ್ವೇ ಕಾರ್ಯ, ನಕ್ಷೆ ತಯಾರಿ, ಹದ್ದುಬಸ್ತು ಮಾಡಿಕೊಟ್ಟಿದ್ದರು. ಈಗ ಅವರಿಗೆ ಸೋಂಕು ದೃಢಪಟ್ಟಿರುವುದು ಜನರ ಆತಂಕಕ್ಕೆ ಕಾರಣವಾಗಿದೆ. ಇತ್ತ ಅವರು ಕೆಲಸ ಮಾಡುತ್ತಿದ್ದ ತಾಲೂಕು ಕಚೇರಿಯನ್ನು ಎರಡು ದಿನಗಳ ಕಾಲ ಸೀಲ್ ಡೌನ್ ಮಾಡಲಾಗಿದೆ. ಸದ್ಯ ಇವರ ಪ್ರಾಥಮಿಕ ಸಂಪರ್ಕ ಹೊಂದಿದ್ದ ವ್ಯಕ್ತಿಗಳನ್ನು ಕ್ವಾರಂಟೈನ್ ಮಾಡಲಾಗಿದೆ ಹಾಗೂ ಕಚೇರಿಯನ್ನು ಸ್ಯಾನಿಟೈಸ್ ಮಾಡಲಾಗಿದೆ.








