ಧಾರವಾಡ: ಕಂಪನಿಯಲ್ಲಿ ಕೆಲಸ ಕಳೆದುಕೊಳ್ಳುವ ಭೀತಿಯಿಂದ ಪತ್ನಿ-ಪುತ್ರಿಗೆ ವಿಷ ನೀಡಿದ ವ್ಯಕ್ತಿ ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ಧಾರವಾಡದಲ್ಲಿ ನಡೆದಿದೆ.
ಧಾರವಾಡದ ಮೆಹಬೂಬ್ ನಗರದ ಮನೆಯೊಂದರಲ್ಲಿ ಮೌನೇಶ್ ಪತ್ತಾರ(36), ಆತನ ಪತ್ನಿ ಹಾಗೂ ಎರಡು ವರ್ಷದ ಪುತ್ರಿ ಇಂದು ಬೆಳಿಗ್ಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮೂಲತಃ ಗದಗ್ ಜಿಲ್ಲೆ ರೋಣ ತಾಲೂಕಿನ ಅಸೂಟಿ ಗ್ರಾಮದವರಾದ ಮೌನೇಶ್ ಪತ್ತಾರ, ಧಾರವಾಡದ ಮಾರ್ಕೋಪೋಲೋ ಕಂಪನಿಯಲ್ಲಿ ಉದ್ಯೋಗಿಯಾಗಿದ್ದರು. ಕಂಪನಿಯಲ್ಲಿ 50ಕ್ಕೂ ಹೆಚ್ಚು ಮಂದಿಗೆ ಕೊರೊನಾ ಪಾಸಿಟಿವ್ ಬಂದಿತ್ತು. ಹೀಗಾಗಿ ಎಲ್ಲಿ ತನಗೂ ಕೊರೊನಾ ಬಂದು ಉದ್ಯೋಗ ಕಳೆದುಕೊಳ್ಳುತ್ತೇನೋ ಎಂಬ ಭೀತಿಯಿಂದ ಪತ್ನಿ ಹಾಗೂ ಮಗಳಿಗೆ ವಿಷ ನೀಡಿ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.
ಸ್ಥಳಕ್ಕೆ ಧಾರವಾಡ ಉಪನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.Á
ತಮಿಳುನಾಡು ಸದನದಲ್ಲಿ ಶೂಟೌಟ್ ಧಗಧಗ:ಕರ್ನಾಟಕ ಸರ್ಕಾರಕ್ಕಿಂತ ಹೆಚ್ಚಿನ ಪರಿಹಾರ ಘೋಷಿಸಿದ ತಮಿಳುನಾಡು ಸಿಎಂ ವಿಜಯ್!
ಗಡಿ ಜಿಲ್ಲೆ ಚಾಮರಾಜನಗರದ ಹನೂರು ತಾಲೂಕಿನಲ್ಲಿ ನಡೆದ ಮೂವರ ಶೂಟೌಟ್ ಪ್ರಕರಣ ಇದೀಗ ಎರಡು ರಾಜ್ಯಗಳ ನಡುವೆ ತೀವ್ರ ರಾಜಕೀಯ ಹಾಗೂ ಆಡಳಿತಾತ್ಮಕ ಸಂಚಲನ ಮೂಡಿಸಿದೆ. ಸ್ವಾತಂತ್ರ್ಯ...








