ಮಂಡ್ಯ: ಫುಟ್ಪಾತ್ನಲ್ಲಿ ಮಲಗಿದ್ದ ಅಪರಿಚಿತ ಭಿಕ್ಷುಕಿಯ ಮೇಲೂ ಕಾಮುಕರ ಅಟ್ಟಹಾಸ ಮೆರೆದಿರುವ ಘಟನೆ ಮಂಡ್ಯದಲ್ಲಿ ನಡೆದಿದೆ.
ಮಂಡ್ಯ ನಗರದ ಬಾಟಾ ಶೋರೂಂ ಬಳಿ ಭಿಕ್ಷುಕಿಯ ಮೇಲೆ ಅತ್ಯಾಚಾರ ಎಸಗಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿ ದುರುಳರು ಪರಾರಿಯಾಗಿದ್ದಾರೆ.
ಶೋರೂಂ ಎದುರಿನ ಫುಟ್ಪಾತ್ನಲ್ಲಿ ಭಿಕ್ಷುಕಿ ಹಗಲು ಭಿಕ್ಷೆ ಬೇಡಿ ರಾತ್ರಿ ಮಲಗುತ್ತಿದ್ದರು. ಇದನ್ನೇ ಹೊಂಚು ಹಾಕಿದ್ದ ಕಾಮುಕರು ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ. ಅಷ್ಟಕ್ಕೂ ಸುಮ್ಮನಾಗದೆ ಆಕೆಯ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿದ್ದಾರೆ. ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ. ಮಂಡ್ಯದ ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹಳೆಯ ಬಟ್ಟೆಗಳನ್ನು ನೆಲ ಒರೆಸಲು ಬಳಸುತ್ತಿದ್ದೀರಾ? ಈ ಸಮಸ್ಯೆ ತಪ್ಪಿದ್ದಲ್ಲ!
ಹಳೆಯ ಬಟ್ಟೆಗಳನ್ನು ನೆಲ ಒರೆಸಲು ಬಳಸುತ್ತಿದ್ದೀರಾ? ಈ ಸಮಸ್ಯೆ ತಪ್ಪಿದ್ದಲ್ಲ! ಸಾಮಾನ್ಯವಾಗಿ ಸಾಕಷ್ಟು ಮನೆಗಳಲ್ಲಿ ಮನೆ ಒರೆಸಲು ಹಳೆಯ ಬಟ್ಟೆಗಳನ್ನು ಬಳಸುತ್ತಾರೆ. ಆದರೆ ಈರೀತಿಯ ಅಭ್ಯಾಸ ತಪ್ಪು...








