ಬಳ್ಳಾರಿ: ಅರಣ್ಯ ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಆನಂದ್ಸಿಂಗ್ಗೆ ಕೊರೊನಾ ಪಾಸಿಟಿವ್ ಬಂದಿದೆ. ಕಳೆದ ಶುಕ್ರವಾರ ಆನಂದ್ಸಿಂಗ್ ಸ್ವಯಂಪ್ರೇರಿತರಾಗಿ ಕೊರೊನಾ ಪರೀಕ್ಷೆ ಮಾಡಿಸಿಕೊಂಡಿದ್ದರು.
ಪರೀಕ್ಷಾ ವರದಿ ಕಳೆದ ರಾತ್ರಿ ಬಂದಿದ್ದು, ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಆನಂದ್ಸಿಂಗ್ಗೆ ಕೊರೋನಾ ಸೋಂಕಿನ ಯಾವ ಲಕ್ಷಣಗಳೂ ಇಲ್ಲ. ಆದರೂ, ಗಂಟಲು ದ್ರವ ಮಾದರಿ ಪರೀಕ್ಷೆಯಲ್ಲಿ ಕೋವಿಡ್ ಪಾಸಿಟಿವ್ ಬಂದಿದೆ.
ಆನಂದ್ಸಿಂಗ್ ಅಸಿಂಪ್ಟಮ್ಯಾಟಿಕ್ ಲಕ್ಷಣಗಳು ಇರುವುದರಿಂದ ಬಳ್ಳಾರಿ ಜಿಲ್ಲೆಯ ಹೊಸಪೇಟೆಯ ಮನೆಯಲ್ಲೇ ಹೋಂ ಐಸೋಲೇಶನ್ಗೆ ಒಳಗಾಗಿದ್ದಾರೆ. ವೈದ್ಯರಿಂದ ಆನಂದ್ಸಿಂಗ್ ಚಿಕಿತ್ಸೆ ನೀಡಲಾಗುತ್ತಿದ್ದು, ಆರೋಗ್ಯವಾಗಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಇತ್ತೀಚೆಗೆ ಆನಂದ್ಸಿಂಗ್ ಕೊರೊನಾ ಸೋಂಕಿತರ ವಾರ್ಡ್ಗೆ ಭೇಟಿ ನೀಡಿದ್ದರು. ಜತೆಗೆ ಸಚಿವರ ಕಾರು ಚಾಲಕನಿಗೂ ಕೊರೊನಾ ಪಾಸಿಟಿವ್ ಬಂದಿತ್ತು. ಇವರ ಸಂಪರ್ಕದಿಂದ ಕೊರೊನಾ ಸೋಂಕು ಹರಡಿರುವ ಸಾಧ್ಯತೆ ಇದೆ.
ಕೇರಳ CM ಆಯ್ಕೆ: ಹೈಕಮಾಂಡ್ ನಿರ್ಧಾರವೇ ಅಂತಿಮ ಎಂದ ಕೆ.ಸಿ. ವೇಣುಗೋಪಾಲ್
ಕೆ.ಸಿ. ವೇಣುಗೋಪಾಲ್ ಅವರು ಕೇರಳ ಮುಖ್ಯಮಂತ್ರಿ ಆಯ್ಕೆ ಕುರಿತು ಮೊದಲ ಪ್ರತಿಕ್ರಿಯೆ ನೀಡಿದ್ದು, ವಿ.ಡಿ ಸತೀಶನ್ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಆಯ್ಕೆ ಮಾಡಿರುವುದಕ್ಕೆ ಯಾವುದೇ ಅಸಮಾಧಾನ ಇಲ್ಲ...








