ರಾಯಚೂರು: ಕೊರೊನಾ ಮಹಾಮಾರಿ ಬಡವರು ಶ್ರೀಮಂತರು, ಸಾಮಾನ್ಯ ಜನರು ಸೆಲೆಬ್ರಿಟಿಗಳು, ಜನಪ್ರತಿನಿಧಿಗಳು ಹೀಗೆ ಯಾರನ್ನು ಬಿಟ್ಟಿಲ್ಲ. ಇದೀಗ ಈ ಮಹಾಮಾರಿಯಿಂದÉ ರಾಯಚೂರಿನ ರೌಡಕುಂದ ಗ್ರಾಮ ಸಂಸ್ಥಾನದ ಹಿರೇಮಠದ (44) ಮರಿಸಿದ್ದಲಿಂಗ ಸ್ವಮೀಜಿಗಳು ನಿಧನರಾಗಿದ್ದಾರೆ. ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಸ್ವಾಮೀಜಿಗಳು ಬಳ್ಲಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಶ್ರೀಗಳಿಗೆ ಕೊರೊನಾ ಪಾಸಿಟಿವ್ ಧೃಡಪಟ್ಟಿದ್ದು, ಚಿಕಿತ್ಸೆ ಫಲಕಾರೆಯಾಗದೆ ವಿಧಿವಶರಾಗಿದ್ದಾರೆ. ಇನ್ನೂ ರೌಡಕುಂದ ಮಠದ ಆವರಣದಲ್ಲಿ ಕೊರೊನಾ ನಿಯಮಾನುಸಾರ ಶ್ರೀಗಳ ಅಂತ್ಯಕ್ರಿಯೆ ನೆರವೇರಿದೆ. ರಾಯಚೂರು, ಬಳ್ಳಾರಿ ಸೇರಿ ನೆರೆಯ ಆಂದ್ರದಲ್ಲಿ ಸಾವಿರಾರು ಭಕ್ತರನ್ನು ಹೊಂದಿರುವ ಶ್ರೀಗಳು ವೀರಶೈವ ಸಮಾಜ ಮತ್ತು ಪರಂಪರೆಯನ್ನು ಉಳಿಸಲು ಸಾಕಷ್ಟು ಶ್ರಮಿಸಿದ್ದಾರೆ.
ಚಂದನವನದ ಅಜರಾಮರ ಪ್ರೇಮಕಾವ್ಯಕ್ಕೆ ಮತ್ತೆ ಜೀವ: ರವಿ-ಹಂಸ ಜೋಡಿಯ ಐತಿಹಾಸಿಕ ಕ್ರೇಜಿ ಬ್ರಹ್ಮ ಮಹಾಸಂಗಮಕ್ಕೆ ಮುಹೂರ್ತ ಫಿಕ್ಸ್!
ಬೆಂಗಳೂರು: ಕನ್ನಡ ಚಿತ್ರರಂಗದ ಇತಿಹಾಸದಲ್ಲೇ ಸುವರ್ಣಾಕ್ಷರಗಳಲ್ಲಿ ಬರೆದಿಡಬೇಕಾದ ಹೆಸರುಗಳೆಂದರೆ ಅದು ಈಶ್ವರಿಯ ರವಿಚಂದ್ರನ್ ಮತ್ತು ನಾದಬ್ರಹ್ಮ ಹಂಸಲೇಖ. ಪ್ರೇಮಲೋಕದ ಮೂಲಕ ಕನ್ನಡಿಗರ ಎದೆಯಲ್ಲಿ ಪ್ರೇಮದ ಪರಾಕಾಷ್ಠೆಯನ್ನು ಬಿತ್ತಿದ...








