ಬೆಂಗಳೂರು: ಇಡೀ ವಿಶ್ವವನ್ನೇ ಬೆಚ್ಚಿಬೀಳಿಸಿರುವ ಕೊರೊನಾ ವೈರಸ್ ಇದೀಗ ಕನ್ನಡಿಗರ ನಿದ್ದೆಗೆಡಿಸಿದೆ. ಜನರು ಕೊರೊನಾಗೆ ಹೆದರಿ ಆರೋಗ್ಯ ಇಲಾಖೆಯ ಸಹಾಯವಾಣಿಗೆ ಕರೆಗಳ ಸುರಿಮಳೆಗೈದಿದ್ದಾರೆ. ಸಾರ್.. ನಂಗೆ ಎರಡು ದಿನದಿಂದ ಶೀತ, ಜ್ವರ, ಕೆಮ್ಮು. ನನಗೆ ಕೊರೊನಾ ಇದೆಯಾ?. ಇದೆಲ್ಲ ಕೊರೊನಾ ವೈರಸ್ ಲಕ್ಷಣಗಳಾ ಎಂದು ಆರೋಗ್ಯ ಇಲಾಖೆಯ ಸಹಾಯವಾಣಿಗೆ ಕರೆಗಳ ಮೇಲೆ ಕರೆಗಳು ಬರುತ್ತಿವೆ. ಸಹಾಯವಾಣಿಗೆ ಇದೂವರೆಗೆ ಆರೂವರೆ ಸಾವಿರ ಕರೆ ಬಂದಿದೆ ಎಂದು ಮೂಲಗಳು ತಿಳಿಸಿವೆ. ಕೇವಲ 3-4 ತಿಂಗಳಲ್ಲಿ ಇಷ್ಟೊಂದು ಕರೆ ಬಂದಿದ್ದು, 104 ಸಹಾಯವಾಣಿಯ ಸಿಬ್ಬಂದಿಗೆ ಈಗ ಕೊರೊನಾ ಬಗ್ಗೆ ಮಾಹಿತಿ ಕೊಡೋದೆ ಕೆಲಸವಾಗಿದೆ.
ದೇವೇಗೌಡರ ವಿಚಾರದಲ್ಲಿ ಕಾಂಗ್ರೆಸ್ಸಿಗರಿಂದ ಮೊಸಳೆ ಕಣ್ಣೀರು: ಬಿ ವೈ ವಿಜಯೇಂದ್ರ ತೀವ್ರ ವಾಗ್ದಾಳಿ, ಬ್ರ್ಯಾಂಡ್ ಬೆಂಗಳೂರು ಅಲ್ಲ ಇದು ಬ್ರೋಕನ್ ಬೆಂಗಳೂರು ಎಂದ ಆರ್ ಅಶೋಕ್
ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರಿಗೆ ಈ ಬಾರಿ ರಾಜ್ಯಸಭೆ ಟಿಕೆಟ್ ಕೈತಪ್ಪಿದ ವಿಚಾರವಾಗಿ ಕರ್ನಾಟಕ ರಾಜಕಾರಣದಲ್ಲಿ ಭಾರಿ ವಾಕ್ಸಮರ ಏರ್ಪಟ್ಟಿದೆ. ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಯ...








