ಅನಧಿಕೃತ ಪ್ರಾಣಿವಧೆಗೆ ಬ್ರೇಕ್ ಹಾಕುವ ಸಲುವಾಗಿ ಬಿಬಿಎಂಪಿ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ. ಜಾತ್ರೆ, ಬಕ್ರೀದ್, ಹಬ್ಬ ಹರದಿನಗಳಲ್ಲಿ ಅನಧಿಕೃತ ಪ್ರಾಣಿವಧೆ ಮಾಡುವ ಪ್ರಕ್ರಿಯೆಗೆ ಸಂಬಂಧಿಸಿದಂತೆ ಪ್ರಕಟನೆಯೊಂದನ್ನು ಹೊರಡಿಸಿರುವ ಪಾಲಿಕೆ ಕೆಳಕಂಡ ಸ್ಥಳಗಳಲ್ಲಿ ಪ್ರಾಣಿವಧೆಗೆ ನಿರ್ಬಂಧ ಹೇರಿದೆ.
1. ರಸ್ತೆಗಳು , ಪಾದಚಾರಿ ಮಾರ್ಗಗಳು.
2. ಎಲ್ಲಾ ರೀತಿಯ ಆಸ್ಪತ್ರೆ ಆವರಣಗಳು, ನರ್ಸಿಂಗ್ ಹೋಮ್ಗಳ ಒಳ ಮತ್ತು ಹೊರ ಆವರಣಗಳು.
3. ಶಾಲೆ, ಕಾಲೇಜುಗಳ ಒಳ ಮತ್ತು ಹೊರ ಆವರಣಗಳಲ್ಲಿ, ಆಟದ ಮೈದಾನಗಳಲ್ಲಿ.
4. ದೇವಸ್ಥಾನಗಳ / ಮಸೀದಿಗಳ ಹಾಗೂ ಇತರೆ ಧಾರ್ಮಿಕ ಸ್ಥಳದ ಆವರಣಗಳಲ್ಲಿ.
5. ಉದ್ಯಾನವನಗಳ ಒಳಗೆ ಮತ್ತು ಹೊರಗೆ
6. ಅಥವಾ ಇನ್ಯಾವುದೇ ಸಾರ್ವಜನಿಕ ಪ್ರದೇಶಗಳಲ್ಲಿ.
ಇನ್ನೂ 1976 ರ ಕರ್ನಾಟಕ ಮುನಿಸಿಪಲ್ ಕಾರ್ಪೋರೇಷನ್ ಕಾಯ್ದೆ ಪ್ರಕಾರ ಪ್ರಾಣಿವಧೆ ಮಾಡುವುದರ ಬಗ್ಗೆ ಸ್ಪಷ್ಟಪಡಿಸಲಾಗಿದ್ದು, ಕಾನೂನು ಉಲ್ಲಂಘಿಸುವವರ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಬಿಬಿಎಂಪಿ ಎಚ್ಚರಿಸಿದೆ. ಅಲ್ಲದೇ ಕರ್ನಾಟಕ ರಾಜ್ಯ ಪ್ರಾಣಿವಧಾ ನಿಯಂತ್ರಣ ನಿಯಮ 1959 ರ ಸೆಕ್ಷನ್ 3 ರ ಪ್ರಕಾರ ಹಾಗೂ ತಿದ್ದುಪಡಿ ಕಾಯ್ದೆ 1975 ರ ಪ್ರಕಾರ ಅನಧಿಕೃತ ಪ್ರಾಣಿವಧೆ ಶಿಕ್ಷಾರ್ಹ ಅಪರಾಧವಾಗಿದ್ದು , ಅಂಥಹವರಿಗೆ 6 ತಿಂಗಳ ಸಜೆ ಅಥವಾ ರೂ. 1000/-ಗಳ ದಂಡ ಅಥವಾ ಎರಡೂ ವಿಧಿಸಬಹುದಾಗಿದೆ ಎಂದು ಬಿಬಿಎಂಪಿ ಪ್ರಕಟನೆಯಲ್ಲಿ ಉಲ್ಲೇಖವಾಗಿದೆ. ಜೊತೆಗೆ ಸಾರ್ವಜನಿಕರು ಪ್ರಾಣಿವಧೆ ಕಾಯ್ದೆಯ ಪ್ರಕಾರ ವಧೆಗೆ ಅರ್ಹವಾದ, ಆಹಾರಕ್ಕೆ ಯೋಗ್ಯವಾದ ಪ್ರಾಣಿಗಳನ್ನು ಅಧಿಕೃತ ಕಸಾಯಿಖಾನೆಗಳಲ್ಲಿ ಮಾತ್ರ ವಧೆ ಮಾಡಲು ಅವಕಾಶವಿರುತ್ತದೆ. ಸಾರ್ವಜನಿಕರು ಈ ಬಗ್ಗೆ ಎಲ್ಲಾ ರೀತಿಯ ಸಹಕಾರ ನೀಡುವಂತೆ ಬಿಬಿಎಂಪಿ ಕೋರಿದೆ. 
ನ್ಯಾಯಾಲಯದ ಕಣ್ಣಿಗೆ ಮಣ್ಣೆರಚಿ ನಾಗೇಂದ್ರ ದೆಹಲಿ ಪ್ರವಾಸ: ಇಡಿ ಕಣ್ಣು ತಪ್ಪಿಸಿ ಓಡಾಡುತ್ತಿರುವ ನಾಗೇಂದ್ರ ವಿರುದ್ಧ ಅಶೋಕ್ ಕಿಡಿ
ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣದ ತನಿಖೆ ಎದುರಿಸುತ್ತಿರುವ ಸಚಿವ ಬಿ ನಾಗೇಂದ್ರ ಅವರು ನ್ಯಾಯಾಲಯದ ಜಾಮೀನು ಷರತ್ತುಗಳನ್ನು ಗಾಳಿಗೆ ತೂರಿ...








