ನ್ಯಾಯಾಲಯದ ಸೂಚನೆ ಬಳಿಕ ದೆಹಲಿಯ ಲೋಹಿ ಎಸ್ಟೇಟ್ ನಲ್ಲಿನ ಸರ್ಕಾರಿ ಬಂಗಲೆ ಖಾಲಿ ಮಾಡಲು ನಿರ್ಧರಿಸಿರುವ ಪ್ರಿಯಾಂಕಾ ಗಾಂಧಿಯವರು, ಅವರ ಬಳಿಕ ಆ ಬಂಗಲೆಯಲ್ಲಿ ವಾಸ್ತವ್ಯ ಹೂಡಲಿರುವ ಬಿಜೆಪಿ ಮುಖಂಡ ಅನಿಲ್ ಬಲೂನಿ ಅವರನ್ನು ಬಂಗಲೆ ಖಾಲಿ ಮಾಡುವ ಮುನ್ನ ಚಹಾ ಕೂಟಕ್ಕೆ ಆಹ್ವಾನಿಸಿದ್ದರು. ಆದ್ರೆ ಅನಿಲ್ ಬಲೂನಿ ಅವರು ಆಹ್ವಾನವನ್ನು ತಿರಸ್ಕರಿಸಿದ್ದರು. ಆದರೆ ಚಹಾಕೂಟದ ಆಹ್ವಾನ ತಿರಸ್ಕರಿಸಿದ್ದ ಅನಿಲ್ ಬಲೂನಿ ಅವರು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರನ್ನೇ ಭೋಜನ ಕೂಟಕ್ಕೆ ಆಹ್ವಾನಿಸಿದ್ದಾರೆ. ಅಲ್ಲದೇ ನೀವು ಆಯೋಜಿಸಿದ್ದ ಚಹಾ ಕೂಟಕ್ಕೆ ಬರಲು ಸಾಧ್ಯವಾಗಲಿಲ್ಲ. ಆದರೆ ನೀವು ಭೋಜನ ಕೂಟಕ್ಕೆ ಬರಬೇಕು. ನಿಮಾಗಾಗಿ ಉತ್ತರಖಂಡ್ ಶೈಲಿಯ ಎಲ್ಲಾ ಸಾಂಪ್ರದಾಯಿಕ ಆಹಾರ ವ್ಯವಸ್ತೆ ಮಾಡಿಸಲಾಗುತ್ತೆ ಎಂದು ತಿಳಿಸಿದ್ದಾರೆ.
ತಮಿಳುನಾಡು ಸದನದಲ್ಲಿ ಶೂಟೌಟ್ ಧಗಧಗ:ಕರ್ನಾಟಕ ಸರ್ಕಾರಕ್ಕಿಂತ ಹೆಚ್ಚಿನ ಪರಿಹಾರ ಘೋಷಿಸಿದ ತಮಿಳುನಾಡು ಸಿಎಂ ವಿಜಯ್!
ಗಡಿ ಜಿಲ್ಲೆ ಚಾಮರಾಜನಗರದ ಹನೂರು ತಾಲೂಕಿನಲ್ಲಿ ನಡೆದ ಮೂವರ ಶೂಟೌಟ್ ಪ್ರಕರಣ ಇದೀಗ ಎರಡು ರಾಜ್ಯಗಳ ನಡುವೆ ತೀವ್ರ ರಾಜಕೀಯ ಹಾಗೂ ಆಡಳಿತಾತ್ಮಕ ಸಂಚಲನ ಮೂಡಿಸಿದೆ. ಸ್ವಾತಂತ್ರ್ಯ...








