ಕೊರೊನಾ ಬಿಕ್ಕಟ್ಟಿನ ನಡುವೆ ಎಲ್ಲಾ ಸ್ನಾತಕ ಕೋರ್ಸ್ಗಳಿಗೆ, ಪದವಿ ಪರೀಕ್ಷೆಗಳು, ಕಾಂಪಿಟೇಟಿವ್ ಎಕ್ಸಾಮ್ ಗಳನ್ನು ರದ್ದು ಮಾಡಲಾಗಿತ್ತು. ಇದೀಗ ಕೊರೊನಾ ಆತಂಕದ ನಡುವೆಯೇ ಮೈಸೂರಿನ ಕರ್ನಾಟಕ ರಾಜ್ಯ ಮುಖ್ಯ ವಿವಿಯಲ್ಲಿ 2014-15ನೇ ಶೈಕ್ಷಣಿಕ ಸಾಲಿನ ಸ್ನಾತಕ ಕೋರ್ಸ್ಗಂಳಾದ ಪ್ರಥಮ ವರ್ಷದ ಬಿಎ, ಬಿ.ಕಾಂ, ಪದವಿಗಳಿಗೆ ಪ್ರವೇಶಾತಿ ಪಡೆದು ಪ್ರಸ್ತುತ ತೃತೀಯ/ಅಂತಿಮ ವರ್ಷದ ಬಿ.ಎ, ಬಿಕಾಂ ಪದವಿಗಳಿಗೆ ಪ್ರವೇಶಾತಿ ಪಡೆದು ಪ್ರಸ್ತುತ ತೃತೀಯ /ಅಂತಿಮ ವರ್ಷದ ಬಿಎ.ಎ/ಬಿ.ಕಾಂ ವಿದ್ಯಾರ್ಥಿಗಳು ಹಾಗೂ 2010-20 ಶೈಕ್ಷಣಿಕ ಸಾಲಿನಲ್ಲಿ ಸ್ನಾತಕೋತ್ತರ ಕೋರ್ಸ್ಗಪಳಾದ ಎಂಎ/ಎಂಸಿಜೆ/ಎಂಕಾಂ ಪ್ರವೇಶಾತಿ ಪಡೆದು ಅಂತಿಮ ವರ್ಷದ ವಿದ್ಯಾರ್ಥಿಗಳು ಪರೋಕ್ಷ ಶುಲ್ಕ ಪಾವತಿಸಲು ಅಧಿಸೂಚನೆ ಹೊರಡಿಸಲಾಗಿದೆ. ವಿದ್ಯಾರ್ಥಿಗಳು ವಿವಿಯ ಅಧಿಕೃತ ವೆಬ್ಸೈಟ್ www.ksoumysuru.ac.in ನಲ್ಲಿ ಪರೀಕ್ಷಾ ಅರ್ಜಿ ಮತ್ತು ಪರೀಕ್ಷಾ ಶುಲ್ಕವನ್ನು ಕಡ್ಡಾಯವಾಗಿ ಅಂತರ್ಜಾಲದ ಮೂಲಕವೇ ಸಲ್ಲಿಸಬೇಕೆಂದು ತಿಳಿಸಲಾಗಿದೆ. ಪರೀಕ್ಷಾ ಶುಲ್ಕ ಪಾವತಿಸಲು ದಂಡ ಶುಲ್ಕವಿಲ್ಲದೆ ಆ.10ರ ಹಾಗೂ 200 ರೂ. ದಂಡ ಶುಲ್ಕದೊಂದಿಗೆ ಆ.24 ಕಡೆಯ ದಿನಾಂಕವಾಗಿರುತ್ತದೆ ಎಂದು ಪ್ರಾದೇಶಿಕ ನಿರ್ದೇಶಕರಾದ ಡಾ.ಲೋಕೇಶ್.ಆರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೈಕಮಾಂಡ್ ಅಂಗಳದಲ್ಲಿ ಸಮರ್ಥ್ ಗೆಲುವಿನ ನಗು: ಅಲ್ಪಸಂಖ್ಯಾತರ ಮನವೊಲಿಸಿ ದಾವಣಗೆರೆ ಟಿಕೆಟ್ ಗಿಟ್ಟಿಸಿದ ಯುವ ನಾಯಕ
ಬಹು ದಿನಗಳ ತೀವ್ರ ಕುತೂಹಲ ಹಾಗೂ ಒಳಮನೆ ಜಟಾಪಟಿಗೆ ಕೊನೆಗೂ ತೆರೆಬಿದ್ದಿದೆ. ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಕಾಂಗ್ರೆಸ್ ಅಧಿಕೃತ ಅಭ್ಯರ್ಥಿಯಾಗಿ ಹಿರಿಯ ನಾಯಕ,...








