ತಮಿಳಿನ ಸೂಪರ್ ಸ್ಟಾರ್ ರಜನಿಕಾಂತ್ ನಟನೆಯ ‘ಅನ್ನಾತೆ’ ಚಿತ್ರ ಮುಂದಿನ ವರ್ಷದ ಸಂಕ್ರಾಂತಿ ಹಬ್ಬದ ಸಂದರ್ಭದಲ್ಲಿ ತೆರೆಗೆ ಬರಲಿದೆ ಎಂದು ಹೇಳಲಾಗಿತ್ತು. ಆದರೆ, ಈಗಿನ ಪರಿಸ್ಥಿತಿಯಲ್ಲಿ ಅದು ಮತ್ತಷ್ಟು ವಿಳಂಬವಾಗಲಿದೆ ಎನ್ನಲಾಗುತ್ತಿದೆ. ಇದರ ನಡುವೆ ಬಹುನಿರೀಕ್ಷಿತ ಚಿತ್ರಕ್ಕೆ ಪಡೆದಿರುವ ಸಂಭಾವನೆಯನ್ನು ರಜನಿಕಾಂತ್ ಅವರು ಚಿತ್ರದ ನಿರ್ಮಾಪಕರಿಗೆ ವಾಪಸ್ ಮಾಡಿದ್ದಾಎಂಬ ಸುದ್ದಿ ಹರಿದಾಡ್ತಿದ್ದು, ಸಾಕಷ್ಟು ಚರ್ಚೆಗೆ ಎಡೆಮಾಡಿಕೊಟ್ಟಿದೆ. ಶಿವ ನಿರ್ದೇಶನದ ಈ ಚಿತ್ರ, ರಜನಿಕಾಂತ್ ಅಭಿಮಾನಿಗಳಲ್ಲಿ ಅಪಾರ ನಿರೀಕ್ಷೆಗಳನ್ನು ಹುಟ್ಟುಹಾಕಿದೆ. ಕಳೆದ ವರ್ಷದ ಡಿಸೆಂಬರ್ನಲ್ಲಿ ಚಿತ್ರೀಕರಣ ಆರಂಭವಾಗಿತ್ತು. ಬಹುಬಜೆಟ್ ಚಿತ್ರವಾಗಿರುವುದರಿಂದ ಚಿತ್ರೀಕರಣ ಚಟುವಟಿಕೆಗಳು ವಿಳಂಬವಾದಷ್ಟೂ ನಿರ್ಮಾಪಕರಿಗೆ ನಷ್ಟ ಎದುರಾಗಿದೆ. ಕೊರೊನಾ ಭೀತಿಯಲ್ಲಿ ನಷ್ಟದಲ್ಲಿರುವ ನಿರ್ಮಾಪರು ಸಂಭಾವನೆಯನ್ನು ಶೇ 50ರಷ್ಟು ಇಳಿಸಿಕೊಳ್ಳುವಂತೆ ರಜನಿ ಬಳಿ ಮನವಿ ಮಾಡಿಕೊಂಡಿದ್ದರು ಎನ್ನಲಾಗಿದೆ.
ಇನ್ನೊಂದೆಡೆ ‘ಅನ್ನಾತೆ’ ಚಿತ್ರವನ್ನೇ ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗಿದ್ದು, ತಮಗೆ ನೀಡಲಾಗಿದ್ದ ಸಂಭಾವನೆಯ ಪೂರ್ತಿ ಮೊತ್ತವನ್ನು ನಿರ್ಮಾಪಕರಿಗೆ ರಜನಿಕಾಂತ್ ವಾಪಸ್ ನೀಡಿದ್ದಾರೆ. ಹೀಗಾಗಿ ಬಹುನಿರೀಕ್ಷಿತ ಚಿತ್ರ ‘ಅನ್ನಾತೆ’ ಪೂರ್ಣಗೊಳ್ಳುವುದಿಲ್ಲ ಎಂಬ ಸುದ್ದಿ ಹರಿದಾಡುತ್ತಿದೆ. ಮತ್ತೊಂದೆಡೆ ಪರಿಸ್ಥಿತಿ ಸುಧಾರಿಸಿದ ನಂತರ ಚಿತ್ರೀಕರಣ ಆರಂಭ ಮಾಡೋಣ ಎಂದು ಮಾತುಕತೆ ನಡೆಸಲಾಗಿದೆ ಎಂದೂ ಹೇಳಲಾಗುತ್ತಿದೆ.
ಸೆಕ್ಸ್ ವರ್ಕರ್ಗಳ ವಿರುದ್ಧ ಕ್ರಿಮಿನಲ್ ಕೇಸ್ಗಳು ಕಾನೂನುಬಾಹಿರ: ಸುಪ್ರೀಂ ಕೋರ್ಟ್
ಸ್ವಯಂಪ್ರೇರಿತವಾಗಿ ಲೈಂಗಿಕ ವೃತ್ತಿಯಲ್ಲಿ ತೊಡಗಿಸಿಕೊಳ್ಳುವ ವಯಸ್ಕ ಮಹಿಳೆಯರ ವಿರುದ್ಧ ದಾಳಿ ನಡೆಸುವುದು ಅಥವಾ ಕ್ರಿಮಿನಲ್ ಪ್ರಕರಣ ದಾಖಲಿಸುವುದು ಕಾನೂನುಬಾಹಿರ ಎಂದು ಸುಪ್ರೀಂ ಕೋರ್ಟ್ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ....







