ಕೆಲ ದಿನಗಳ ಹಿಂದೆ ಕೊರೊನಾ ಪಾಸಿಟಿವ್ ಪತ್ತೆಯಾಗಿ ಆಸ್ಪತ್ರೆ ಸೇರಿದ್ದ ಅರ್ಜುನ್ ಸರ್ಜಾ ಪುತ್ರಿ ನಟಿ ಐಶ್ವರ್ಯ ಈಗ ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ ಎನ್ನಲಾಗ್ತಿದೆ. ಜುಲೈ 20ರಂದು ಸಾಮಾಜಿಕ ಜಾಲತಾಣದ ಮೂಲಕ ಈ ಬಗ್ಗೆ ಮಾಹಿತಿ ಹಂಚಿಕೊಂಡಿದ್ದ ಪ್ರೇಮಬರಹದ ನಾಯಕಿ ಕೋವಿಡ್ ಧೃಡಪಟ್ಟಿರುವುದಾಗಿ ಸ್ಪಷ್ಟಪಡಿಸಿದ್ದರು. ಇದೀಗ ಅವರು ಚೇತರಿಸಿಕೊಂಡಿದ್ದು, ಪುನಃ ಮಾಡಿರುವ ಪರೀಕ್ಷೆಯ ವರದಿಯಲ್ಲಿ ನೆಗೆಟಿವ್ ಬಂದಿದೆ ಎಂಬ ಖುಷಿಯನ್ನು ಹಂಚಿಕೊಂಡಿದ್ದಾರೆ. ‘ನನ್ನ ಎಲ್ಲ ಹಿತೈಷಿಗಳಿಗೆ ಹೇಳಲು ಬಯಸುವುದೇನೆಂದರೆ ದೇವರ ದಯೆಯಿಂದ ನಾನು ಈಗ ಕೊರೊನಾ ವೈರಸ್ತಪಾಸಣೆಯಲ್ಲಿ ನೆಗೆಟಿವ್ ವರದಿ ಪಡೆದಿದ್ದೇನೆ. ನನ್ನ ಕುರಿತು ಯೋಚಿಸಿದ, ಪ್ರಾರ್ಥಿಸಿದ ಎಲ್ಲರಿಗೂ ಧನ್ಯವಾದಗಳು. ಈ ಪಿಡುಗು ಇನ್ನೂ ದೂರವಾಗಿಲ್ಲ. ಹೀಗಾಗಿ ಪ್ರತಿಯೊಬ್ಬರ ಬಗ್ಗೆ ಕಾಳಜಿ ವಹಿಸಿ. ಸುರಕ್ಷಿತರಾಗಿರಿ’ ಎಂದು ಐಶ್ವರ್ಯಾ ಹೇಳಿದ್ದಾರೆ.
ಒಳ್ಳೆಯ ಆಡಳಿತ ಕೊಡದಿದ್ದರೆ ಜನರೇ ಪಾಠ ಕಲಿಸುತ್ತಾರೆ: ಸಿಎಂಗೆ ಸಚಿವ ರಾಜಣ್ಣ ನೇರ ಎಚ್ಚರಿಕೆ.
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಈಗಿನಿಂದಲೇ ಮುಂದಿನ ವಿಧಾನಸಭಾ ಚುನಾವಣೆಯ ತಯಾರಿ ಹಾಗೂ ಆಡಳಿತ ವೈಖರಿಯ ಬಗ್ಗೆ ಚರ್ಚೆಗಳು ಆರಂಭವಾಗಿವೆ. ಸಚಿವ ಕೆ.ಎನ್. ರಾಜಣ್ಣ ಅವರು ಮುಖ್ಯಮಂತ್ರಿ ಡಿ.ಕೆ....








