ADVERTISEMENT
Wednesday, February 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ನಾನು ವಿಧಿಯಾಟವನ್ನು ನಂಬುತ್ತೇನೆ… ಹಣೆಬರೆಹದಲ್ಲಿ ಏನಾಗುತ್ತೋ ಅದೇ ಆಗುತ್ತೆ -ಮಹಮ್ಮದ್ ಅಜರುದ್ದೀನ್

admin by admin
July 30, 2020
in Newsbeat, Sports, ಕ್ರೀಡೆ
Share on FacebookShare on TwitterShare on WhatsappShare on Telegram

ನಾನು ವಿಧಿಯಾಟವನ್ನು ನಂಬುತ್ತೇನೆ… ಹಣೆಬರೆಹದಲ್ಲಿ ಏನಾಗುತ್ತೋ ಅದೇ ಆಗುತ್ತೆ -ಮಹಮ್ಮದ್ ಅಜರುದ್ದೀನ್

ಮಹಮ್ಮದ್ ಅಜರುದ್ದೀನ್.. ಭಾರತ ಕ್ರಿಕೆಟ್ ತಂಡವನ್ನು ಸುಮಾರು ಒಂದು ದಶಕಗಳ ಕಾಲ ಮುನ್ನಡೆಸಿದ್ದ ನಾಯಕ. ಅಷ್ಟೇ ಅಲ್ಲ, ಮೂರು ವಿಶ್ವಕಪ್ ಟೂರ್ನಿಗಳಿಗೆ ಭಾರತ ಕ್ರಿಕೆಟ್ ತಂಡದ ಸಾರಥಿಯಾಗಿದ್ದರು. ಸ್ಟೈಲೀಶ್ ಆಟದ ಮೂಲಕ ಗಮನ ಸೆಳೆದಿರುವ ಮಹಮ್ಮದ್ ಅಜರುದ್ದೀನ್ ಅದ್ಭುತ ಬ್ಯಾಟ್ಸ್ ಮೆನ್ ಹಾಗೂ ಚುರುಕಿನ ಫೀಲ್ಡರ್ ಕೂಡ ಹೌದು. ಆದ್ರೆ ಮ್ಯಾಚ್ ಫಿಕ್ಸಿಂಗ್ ಕಳಂಕ ಮಹಮ್ಮದ್ ಅಜರುದ್ದೀನ್ ಅವರ ಕ್ರಿಕೆಟ್ ಬದುಕಿಗೆ ಕಪ್ಪುಚುಕ್ಕೆಯಾಗಿ ಪರಿಣಮಿಸಿತ್ತು.
ಮ್ಯಾಚ್ ಫಿಕ್ಸಿಂಗ್ ಆರೋಪದ ಬಳಿಕ ಕ್ರಿಕೆಟ್ ನಿಂದ ದೂರ ಉಳಿದಿದ್ದ ಮಹಮ್ಮದ್ ಅಜರುದ್ದೀನ್ ಸಂಸದರಾಗಿದ್ದರು. ಸದ್ಯ ಹೈದ್ರಬಾದ್ ಕ್ರಿಕೆಟ್ ಸಂಸ್ಥೆಯ ಅಧ್ಯಕ್ಷರಾಗಿದ್ದಾರೆ. ತನ್ನ ಮೇಲಿನ ಆರೋಪದ ವಿರುದ್ಧ ಕಾನೂನು ಹೋರಾಟ ನಡೆಸಿದ್ದ ಅಜರುದ್ದೀನ್‍ಗೆ 2012ರಲ್ಲಿ ನ್ಯಾಯ ಸಿಕ್ಕಿದ್ರೂ ಆ ಕಳಂಕ ಮಾತ್ರ ಇನ್ನೂ ಹೋಗಿಲ್ಲ.
ಈ ಬಗ್ಗೆ ಮಾತನಾಡಿರುವ ಮಹಮ್ಮದ್ ಅಜರುದ್ದೀನ್, ನಾನು ಯಾರನ್ನು ದೂಷಣೆ ಮಾಡುವುದಿಲ್ಲ… ನನಗೆ ಯಾಕೆ ನಿಷೇಧ ಹೇರಿದ್ರೂ ಎಂಬುದು ಸಹ ನನಗೆ ಗೊತ್ತಿಲ್ಲ. ನಾನು ವಿಧಿಯಾಟವನ್ನು ನಂಬುತ್ತೇನೆ. ಹಣೆಬರೆಹದಲ್ಲಿ ಏನು ಆಗಬೇಕೋ ಅದೇ ಆಗುತ್ತೆ ಎಂದು ಬೇಸರದಿಂದಲೇ ಹೇಳಿಕೊಂಡಿದ್ದಾರೆ.
ಆದ್ರೆ ನಾನು ನನ್ನ ಆರೋಪ ಮೇಲೆ ಕಾನೂನು ಹೋರಾಟ ನಡೆಸಲು ನಿರ್ಧರಿಸಿದ್ದೆ. 12ವರ್ಷಗಳ ಬಳಿಕ ನನಗೆ ನ್ಯಾಯ ಸಿಕ್ಕಿದೆ. ನಾನು ಆರೋಪದಿಂದ ಮುಕ್ತನಾಗಿದ್ದೇನೆ. ನನಗೆ ಈ ಬಗ್ಗೆ ಸಮಾಧಾನವಿದೆ. ನಾನು ಹೈದ್ರಬಾದ್ ಕ್ರಿಕೆಟ್ ಸಂಸ್ಥೆಯ ಅಧ್ಯಕ್ಷನಾದ ಬಳಿಕ ನಾನು ಬಿಸಿಸಿಐ ಸಭೆಯಲ್ಲಿ ಭಾಗವಹಿಸುತ್ತಿದ್ದೇನೆ ಎಂದು ಹೇಳಿದ್ದಾರೆ. ಇದಕ್ಕು ಮೊದಲು ಮಹಮ್ಮದ್ ಅಜರುದ್ದೀನ್ ಅವರಿಗೆ ಬಿಸಿಸಿಐ ನಿಷೇಧ ಹೇರಿತ್ತು. ಬಿಸಿಸಿಐ ಮಹಮ್ಮದ್ ಅಜರುದ್ದೀನ್ ಅವರನ್ನು ಲೆಕ್ಕಕ್ಕೆ ತೆಗೆದುಕೊಂಡಿರಲಿಲ್ಲ. ಯಾವುದೇ ಕಾರ್ಯಕ್ರಮ, ಸಭೆಗೂ ಆಹ್ವಾನಿಸಿರಲಿಲ್ಲ.
ನಾನು ಭಾರತದ ಪರ ಸುಮಾರು 16ರಿಂದ 17 ವರ್ಷ ಆಡಿದ್ದೇನೆ. ಹತ್ತು ವರ್ಷಗಳ ಕಾಲ ನಾಯಕನಾಗಿದ್ದೆ. ಇದಕ್ಕಿಂತ ಹೆಚ್ಚು ನಾನು ಏನು ಕೇಳಲಿ ? ಎಂದು ಮಹಮ್ಮದ್ ಅಜರುದ್ದೀನ್ ಹೇಳ್ತಾರೆ. ಮಹಮ್ಮದ್ ಅಜರುದ್ದೀನ್ ಅವರು 99 ಟೆಸ್ಟ್ ಪಂದ್ಯಗಳನ್ನು ಆಡಿದ್ದು, 6125 ರನ್ ಗಳಿಸಿದ್ದಾರೆ. ಹಾಗೇ 334 ಏಕದಿನ ಪಂದ್ಯಗಳಲ್ಲಿ 9378 ರನ್ ಪೇರಿಸಿದ್ದಾರೆ. ಕ್ರಿಕೆಟ್ ಬದುಕಿನ ಆರಂಭದಲ್ಲೇ ಮೂರು ಶತಕಗಳನ್ನು ಸಿಡಿಸಿ ಮಿಂಚು ಹರಿಸಿದ್ರು.
ಇದೇ ವೇಳೆ, ಮಹಮ್ಮದ್ ಅಜರುದ್ದೀನ್ ಅವರು ಪಾಕಿಸ್ತಾನದ ಜಹೀರ್ ಅಬ್ಬಾಸ್ ಅವರನ್ನು ನೆನಪು ಮಾಡಿಕೊಂಡಿದ್ದಾರೆ. ನಾನು 1989ರಲ್ಲಿ ಪಾಕ್ ಸರಣಿಗೆ ಆಯ್ಕೆಯಾಗುತ್ತೇನೆ ಎಂದು ಅಂದುಕೊಂಡಿರಲಿಲ್ಲ. ಆಗ ನಾನು ಕೆಟ್ಟ ಫಾರ್ಮ್‍ನಲ್ಲಿದ್ದೆ. ನನಗೆ ಇನ್ನೂ ನೆನಪಿದೆ. ಕರಾಚಿಯಲ್ಲಿ ಜಹೀರ್ ಅಬ್ಬಾಸ್ ಅವರು ನಾವು ಅಭ್ಯಾಸ ಮಾಡುವುದನ್ನು ನೋಡುತ್ತಿದ್ದರು. ಆಗ ಅವರು ನನ್ನ ಬಳಿ ಕೇಳಿದ್ದರು .. ನೀನು ಯಾಕೆ ಬೇಗ ಔಟಾಗುತ್ತಿದ್ದೀಯಾ ಅಂತ. ಆಗ ಅವರ ಬಳಿ ನನ್ನ ಸಮಸ್ಯೆಯನ್ನು ಹೇಳಿಕೊಂಡಿದ್ದೆ. ಆಗ ಅವರು ನನಗೆ ಸಲಹೆ ಕೊಟ್ರು. ಬ್ಯಾಟ್ ಹಿಡಿತವನ್ನು ಬದಲಾವಣೆ ಮಾಡಿಕೊ ಎಂದು ಹೇಳಿದ್ದರು. ಅವರು ಹೇಳಿದ್ದ ಹಾಗೇ ನಾನು ನನ್ನ ಬ್ಯಾಟಿಂಗ್ ನಲ್ಲಿ ಬದಲಾವಣೆ ಮಾಡಿಕೊಂಡೆ. ಇದು ನನಗೆ ವರದಾನವಾಯ್ತು. ಆಕ್ರಮಣಕಾರಿ ಆಡಲು ಸಾಧ್ಯವಾಯ್ತು ಎಂದು ಹೇಳಿದ್ದಾರೆ.
ಇನ್ನು ಭಾರತ ಮತ್ತು ಪಾಕಿಸ್ತಾನ ನಡುವಿನ ದ್ವಿಪಕ್ಷೀಯ ಸರಣಿಯ ಬಗ್ಗೆ ಮಾತನಾಡಿದ ಅಜರು, ನಾನು ಈ ಬಗ್ಗೆ ಏನು ಮಾತನಾಡುವುದಿಲ್ಲ. ಯಾಕಂದ್ರೆ ಅದು ನಮ್ಮ ಕೈಯಲ್ಲಿ ಇಲ್ಲ. ಕೇಂದ್ರ ಸರ್ಕಾರ ನಿರ್ಧಾರ ಮಾಡಬೇಕು. ರಾಜಕೀಯ ಬಿಕ್ಕಟ್ಟು ಮುಗಿದ ನಂತರ ಕ್ರಿಕೆಟ್ ಆಟ ಶುರುವಾಗಬಹುದು ಎಂದು ಹೇಳಿದ್ರು.

Related posts

ಗುತ್ತಿಗೆದಾರರ ಸಂಘದಲ್ಲೇ ಭ್ರಷ್ಟಾಚಾರ ಆರೋಪ: 3% ಕಮಿಷನ್ ಬೇಡಿಕೆಯ ಆಡಿಯೋ ವೈರಲ್

ಗುತ್ತಿಗೆದಾರರ ಸಂಘದಲ್ಲೇ ಭ್ರಷ್ಟಾಚಾರ ಆರೋಪ: 3% ಕಮಿಷನ್ ಬೇಡಿಕೆಯ ಆಡಿಯೋ ವೈರಲ್

February 4, 2026
ತೆರಿಗೆ ಬಾಕಿ ಕಟ್ಟದವರಿಗೆ ಬಿಗ್ ಶಾಕ್: 7 ಸಾವಿರಕ್ಕೂ ಹೆಚ್ಚು ಆಸ್ತಿಗಳ ಹರಾಜಿಗೆ ಮುಂದಾದ GBA

ತೆರಿಗೆ ಬಾಕಿ ಕಟ್ಟದವರಿಗೆ ಬಿಗ್ ಶಾಕ್: 7 ಸಾವಿರಕ್ಕೂ ಹೆಚ್ಚು ಆಸ್ತಿಗಳ ಹರಾಜಿಗೆ ಮುಂದಾದ GBA

February 4, 2026
Tags: Andhra Pradesh High Court rbcciHyderabad cricket associationindian cricket teammatch fixingMohammad Azharuddinpakisthanteam india
ShareTweetSendShare
Join us on:

Related Posts

ಗುತ್ತಿಗೆದಾರರ ಸಂಘದಲ್ಲೇ ಭ್ರಷ್ಟಾಚಾರ ಆರೋಪ: 3% ಕಮಿಷನ್ ಬೇಡಿಕೆಯ ಆಡಿಯೋ ವೈರಲ್

ಗುತ್ತಿಗೆದಾರರ ಸಂಘದಲ್ಲೇ ಭ್ರಷ್ಟಾಚಾರ ಆರೋಪ: 3% ಕಮಿಷನ್ ಬೇಡಿಕೆಯ ಆಡಿಯೋ ವೈರಲ್

by Shwetha
February 4, 2026
0

ರಾಜ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರ ಆರೋಪಗಳನ್ನು ಮಾಡುತ್ತಿದ್ದ ಗುತ್ತಿಗೆದಾರರ ಸಂಘವೇ ಈಗ ಭಾರೀ ವಿವಾದದ ಕೇಂದ್ರಬಿಂದುವಾಗಿದೆ. ಸಂಘದೊಳಗೇ ಭ್ರಷ್ಟಾಚಾರಕ್ಕೆ ಕುಮ್ಮಕ್ಕು ನೀಡಲಾಗಿದೆ ಎಂಬ ಗಂಭೀರ ಆರೋಪಕ್ಕೆ ಸಂಬಂಧಿಸಿದ...

ತೆರಿಗೆ ಬಾಕಿ ಕಟ್ಟದವರಿಗೆ ಬಿಗ್ ಶಾಕ್: 7 ಸಾವಿರಕ್ಕೂ ಹೆಚ್ಚು ಆಸ್ತಿಗಳ ಹರಾಜಿಗೆ ಮುಂದಾದ GBA

ತೆರಿಗೆ ಬಾಕಿ ಕಟ್ಟದವರಿಗೆ ಬಿಗ್ ಶಾಕ್: 7 ಸಾವಿರಕ್ಕೂ ಹೆಚ್ಚು ಆಸ್ತಿಗಳ ಹರಾಜಿಗೆ ಮುಂದಾದ GBA

by Shwetha
February 4, 2026
0

ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಬಾಕಿ ಪಾವತಿಸದ ಮಾಲೀಕರ ವಿರುದ್ಧ ಕಠಿಣ ಕ್ರಮಕ್ಕೆ ಅಧಿಕಾರಿಗಳು ಮುಂದಾಗಿದ್ದಾರೆ. GBA ಅಧೀನದಲ್ಲಿರುವ 5 ನಗರ ಪಾಲಿಕೆ...

SBI ಗ್ರಾಹಕರೇ ಎಚ್ಚರ ರಿವಾರ್ಡ್ ಪಾಯಿಂಟ್ಸ್ ಹೆಸರಿನಲ್ಲಿ ಬಂದ ಈ ಮೆಸೇಜ್ ಕ್ಲಿಕ್ ಮಾಡಿದರೆ ನಿಮ್ಮ ಬ್ಯಾಂಕ್ ಅಕೌಂಟ್ ಖಾಲಿ

SBI ಗ್ರಾಹಕರೇ ಎಚ್ಚರ ರಿವಾರ್ಡ್ ಪಾಯಿಂಟ್ಸ್ ಹೆಸರಿನಲ್ಲಿ ಬಂದ ಈ ಮೆಸೇಜ್ ಕ್ಲಿಕ್ ಮಾಡಿದರೆ ನಿಮ್ಮ ಬ್ಯಾಂಕ್ ಅಕೌಂಟ್ ಖಾಲಿ

by Shwetha
February 4, 2026
0

ಬೆಂಗಳೂರು: ದೇಶದ ಅತಿದೊಡ್ಡ ಬ್ಯಾಂಕ್ ಆಗಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ತನ್ನ ಕೋಟ್ಯಂತರ ಗ್ರಾಹಕರಿಗೆ ತುರ್ತು ಎಚ್ಚರಿಕೆಯೊಂದನ್ನು ರವಾನಿಸಿದೆ. ಡಿಜಿಟಲ್ ಯುಗದಲ್ಲಿ ಬ್ಯಾಂಕಿಂಗ್ ವ್ಯವಹಾರಗಳು...

ರೇಷನ್ ಕಾರ್ಡ್ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್: ಈ ದಾಖಲೆಗಳನ್ನು ನೀಡಿದರೆ ಮನೆ ಬಾಗಿಲಿಗೆ ಬರಲಿದೆ ಬಿಪಿಎಲ್ ಕಾರ್ಡ್

ರೇಷನ್ ಕಾರ್ಡ್ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್: ಈ ದಾಖಲೆಗಳನ್ನು ನೀಡಿದರೆ ಮನೆ ಬಾಗಿಲಿಗೆ ಬರಲಿದೆ ಬಿಪಿಎಲ್ ಕಾರ್ಡ್

by Shwetha
February 4, 2026
0

ಬೆಂಗಳೂರು: ಕರ್ನಾಟಕದಲ್ಲಿ ಪಡಿತರ ಚೀಟಿಗಾಗಿ ಕಾಯುತ್ತಿರುವ ಲಕ್ಷಾಂತರ ಕುಟುಂಬಗಳಿಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ಮಹತ್ವದ ಮಾಹಿತಿಯೊಂದನ್ನು ನೀಡಿದೆ. ರಾಜ್ಯದಲ್ಲಿ ಬಡತನ ರೇಖೆಗಿಂತ ಕೆಳಗಿರುವ ಬಿಪಿಎಲ್...

ನವರಾತ್ರಿಗಿಲ್ಲದ ವಿನಾಯಿತಿ ರಂಜಾನ್ ಗೆ ಏಕೆ? ಕಾಂಗ್ರೆಸ್ ತುಷ್ಟೀಕರಣ ನೀತಿ: ಉರ್ದು ಶಾಲೆಗಳ ಸಮಯ ಬದಲಾವಣೆಗೆ ಬಿಜೆಪಿ ಕೆಂಡಾಮಂಡಲ

ನವರಾತ್ರಿಗಿಲ್ಲದ ವಿನಾಯಿತಿ ರಂಜಾನ್ ಗೆ ಏಕೆ? ಕಾಂಗ್ರೆಸ್ ತುಷ್ಟೀಕರಣ ನೀತಿ: ಉರ್ದು ಶಾಲೆಗಳ ಸಮಯ ಬದಲಾವಣೆಗೆ ಬಿಜೆಪಿ ಕೆಂಡಾಮಂಡಲ

by Shwetha
February 4, 2026
0

ಬೆಂಗಳೂರು: ರಂಜಾನ್ ಹಬ್ಬದ ಹಿನ್ನೆಲೆಯಲ್ಲಿ ರಾಜ್ಯದ ಸರ್ಕಾರಿ ಉರ್ದು ಶಾಲೆಗಳ ಕಾರ್ಯನಿರ್ವಹಣಾ ಅವಧಿಯನ್ನು ಬದಲಾವಣೆ ಮಾಡಿ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶ ಇದೀಗ ರಾಜಕೀಯ ವಲಯದಲ್ಲಿ ಭಾರೀ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram